Homeಮುಖಪುಟಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

ಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

- Advertisement -
- Advertisement -

‘ಡೇಟಾ ಪ್ರೊಟೆಕ್ಷನ್ ಮಸೂದೆ’ ಜಾರಿಗೆ ಬರುವ ತನಕ ತಾತ್ಕಾಲಿಕವಾಗಿ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ನಿರ್ಧರಿಸಿದೆ ಎಂದು ವಾಟ್ಸಪ್ ಶುಕ್ರವಾರ ತನ್ನ ಗೌಪ್ಯತಾ ನೀತಿಯ ಬಗ್ಗೆ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ವಾಟ್ಸಪ್‌ನ ಹೊಸ ಗೌಪ್ಯತಾ ನೀತಿಯು, ವಾಟ್ಸಪ್‌ನಲ್ಲಿ ನಾವು ನಡೆಸಿದ ಕೆಲವು ಸಂಭಾಷಣೆಗಳನ್ನು ಫೇಸ್‌ಬುಕ್‌ನಲ್ಲಿ ಜಾಹಿರಾತಿಗೆ ಬಳಸಲು ಅನುಮತಿ ನೀಡುತ್ತದೆ.

ಏಕ ನ್ಯಾಯಾಧೀಶರ ಆದೇಶದ ವಿರುದ್ಧ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ನ್ಯಾಯಪೀಠ ಫೇಸ್‌ಬುಕ್ ಮತ್ತು ವಾಟ್ಸಾಪ್ ಮೇಲ್ಮನವಿ ವಿಚಾರಣೆ ನಡೆಸಿತು. ಏಕ ನ್ಯಾಯಾಧೀಶರ ಪೀಠವು, ವಾಟ್ಸಾಪ್‌ನ ಹೊಸ ನೀತಿಯ ಬಗ್ಗೆ ತನಿಖೆ ನಡೆಸಲು ನಿರ್ದೇಶಿಸುವ ಭಾರತದ ‘ನಿಯಂತ್ರಕ ಸ್ಪರ್ಧಾ ಆಯೋಗ’ (ಸಿಸಿಐ)ದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿತ್ತು.

ವಾಟ್ಸಾಪ್ ಪರವಾಗಿ ಹಾಜರಾದ ವಕೀಲ ಹರೀಶ್ ಸಾಲ್ವೆ ಅವರು “ಹೊಸ ಗೌಪ್ಯತಾ ನೀತಿಯನ್ನು ಸ್ಥಗಿತಗೊಳಿಸಲು ಸರ್ಕಾರ ಕೇಳಿ ಕೊಂಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

‘ಡೇಟಾ ಸಂರಕ್ಷಣಾ ಮಸೂದೆ’ ಬರುವವರೆಗೆ ನಾವು ಹೊಸ ಗೌಪ್ಯತಾ ನೀತಿಯನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ್ದೇವೆ. ಮಸೂದೆಯು ಯಾವಾಗ ಹೊರಬರುತ್ತದೆ ಎಂದು ನಮಗೆ ತಿಳಿದಿಲ್ಲ. ನಾವು ಇದನ್ನು ಸ್ವಲ್ಪ ಸಮಯದವರೆಗೆ ಮಾಡುವುದಿಲ್ಲ ಎಂದು ಹರೀಶ್‌ ನ್ಯಾಯಾಲಯಕ್ಕೆ ಹೇಳಿದ್ದಾರೆ.

“ನಾವು ಹೊಸ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ಸ್ವಯಂಪ್ರೇರಣೆಯಿಂದ ಒಪ್ಪಿದ್ದೇವೆ. ಅದನ್ನು ಒಪ್ಪಿಕೊಳ್ಳಲೆ ಬೇಕು ಎಂದು ಬಳಕೆದಾದರನ್ನು ಒತ್ತಾಯಿಸುವುದಿಲ್ಲ” ಎಂದು ಹರೀಶ್ ಸಾಲ್ವೆ ವಾಟ್ಸಪ್‌ ಪರವಾಗಿ ಹೇಳಿದ್ದಾರೆ.

ಭಾರತದಲ್ಲಿ 53 ಕೋಟಿ ಬಳಕೆದಾರರನ್ನು ವಾಟ್ಸ್‌ಪ್‌ ಹೊಂದಿದ್ದು, ಅದು ತನ್ನ ಬಳಕೆದಾರರ ಡೇಟಾವನ್ನು ತನ್ನ ಮಾತೃಸಂಸ್ಥೆ ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುತ್ತಿದೆ ಎಂಬ ಬಗ್ಗೆ ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದರು. ಇದರಿಂದಾಗಿ ಹೊಸ ಗೌಪ್ಯತಾ ನೀತಿಯನ್ನು ಪರಿಚಯಿಸಿದ ನಂತರ ವಾಟ್ಸಪ್‌ ತೀವ್ರ ಹಿನ್ನಡೆ ಅನುಭವಿಸಿತ್ತು. ಹಲವಾರು ಬಳಕೆದಾರರು ಸಿಗ್ನಲ್ ಮತ್ತು ಟೆಲಿಗ್ರಾಮ್‌ನಂತಹ ಅಪ್ಲಿಕೇಶನ್‌ಗಳಿಗೆ ತೆರಳಿದ್ದರು.

ಈ ಹಿಂದೆ ಆಪ್‌ ಬಳಸಬೇಕೆಂದರೆ ತನ್ನ ಹೊಸ ನೀತಿಯನ್ನು ಕಡ್ಡಾಯವಾಗಿ ಒಪ್ಪಿಕೊಳ್ಳಬೇಕು ಎಂದು ವಾಟ್ಸಪ್‌ ಹೇಳಿತ್ತು. ಆದರೆ ನಂತರ ಅದರಿಂದ ಹಿಂದೆ ಸರಿದಿತ್ತು. ಆದರೆ ಹೊಸ ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳುವಂತೆ ಅದು ನೋಟಿಫಿಕೇಷನ್‌ ಕಳುಹಿಸುತ್ತಲೆ ಇದೆ.

ಈ ನೋಟಿಫಿಕೇಷನ್‌ ವಿರುದ್ದ ಸರ್ಕಾರವು ಹೊಸ ಅಫಿಡವಿಟ್ ಕೂಡಾ ಸಲ್ಲಿಸಿತ್ತು. ವಾಟ್ಸಪ್ ಕುತಂತ್ರದಿಂದ ತನ್ನ ಗೌಪ್ಯತಾ ನೀತಿಗೆ ಒಪ್ಪಿಗೆ ಪಡೆಯುತ್ತಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...