Homeಮುಖಪುಟಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

ಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

- Advertisement -
- Advertisement -

‘ಡೇಟಾ ಪ್ರೊಟೆಕ್ಷನ್ ಮಸೂದೆ’ ಜಾರಿಗೆ ಬರುವ ತನಕ ತಾತ್ಕಾಲಿಕವಾಗಿ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ನಿರ್ಧರಿಸಿದೆ ಎಂದು ವಾಟ್ಸಪ್ ಶುಕ್ರವಾರ ತನ್ನ ಗೌಪ್ಯತಾ ನೀತಿಯ ಬಗ್ಗೆ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ವಾಟ್ಸಪ್‌ನ ಹೊಸ ಗೌಪ್ಯತಾ ನೀತಿಯು, ವಾಟ್ಸಪ್‌ನಲ್ಲಿ ನಾವು ನಡೆಸಿದ ಕೆಲವು ಸಂಭಾಷಣೆಗಳನ್ನು ಫೇಸ್‌ಬುಕ್‌ನಲ್ಲಿ ಜಾಹಿರಾತಿಗೆ ಬಳಸಲು ಅನುಮತಿ ನೀಡುತ್ತದೆ.

ಏಕ ನ್ಯಾಯಾಧೀಶರ ಆದೇಶದ ವಿರುದ್ಧ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ನ್ಯಾಯಪೀಠ ಫೇಸ್‌ಬುಕ್ ಮತ್ತು ವಾಟ್ಸಾಪ್ ಮೇಲ್ಮನವಿ ವಿಚಾರಣೆ ನಡೆಸಿತು. ಏಕ ನ್ಯಾಯಾಧೀಶರ ಪೀಠವು, ವಾಟ್ಸಾಪ್‌ನ ಹೊಸ ನೀತಿಯ ಬಗ್ಗೆ ತನಿಖೆ ನಡೆಸಲು ನಿರ್ದೇಶಿಸುವ ಭಾರತದ ‘ನಿಯಂತ್ರಕ ಸ್ಪರ್ಧಾ ಆಯೋಗ’ (ಸಿಸಿಐ)ದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿತ್ತು.

ವಾಟ್ಸಾಪ್ ಪರವಾಗಿ ಹಾಜರಾದ ವಕೀಲ ಹರೀಶ್ ಸಾಲ್ವೆ ಅವರು “ಹೊಸ ಗೌಪ್ಯತಾ ನೀತಿಯನ್ನು ಸ್ಥಗಿತಗೊಳಿಸಲು ಸರ್ಕಾರ ಕೇಳಿ ಕೊಂಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

‘ಡೇಟಾ ಸಂರಕ್ಷಣಾ ಮಸೂದೆ’ ಬರುವವರೆಗೆ ನಾವು ಹೊಸ ಗೌಪ್ಯತಾ ನೀತಿಯನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ್ದೇವೆ. ಮಸೂದೆಯು ಯಾವಾಗ ಹೊರಬರುತ್ತದೆ ಎಂದು ನಮಗೆ ತಿಳಿದಿಲ್ಲ. ನಾವು ಇದನ್ನು ಸ್ವಲ್ಪ ಸಮಯದವರೆಗೆ ಮಾಡುವುದಿಲ್ಲ ಎಂದು ಹರೀಶ್‌ ನ್ಯಾಯಾಲಯಕ್ಕೆ ಹೇಳಿದ್ದಾರೆ.

“ನಾವು ಹೊಸ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ಸ್ವಯಂಪ್ರೇರಣೆಯಿಂದ ಒಪ್ಪಿದ್ದೇವೆ. ಅದನ್ನು ಒಪ್ಪಿಕೊಳ್ಳಲೆ ಬೇಕು ಎಂದು ಬಳಕೆದಾದರನ್ನು ಒತ್ತಾಯಿಸುವುದಿಲ್ಲ” ಎಂದು ಹರೀಶ್ ಸಾಲ್ವೆ ವಾಟ್ಸಪ್‌ ಪರವಾಗಿ ಹೇಳಿದ್ದಾರೆ.

ಭಾರತದಲ್ಲಿ 53 ಕೋಟಿ ಬಳಕೆದಾರರನ್ನು ವಾಟ್ಸ್‌ಪ್‌ ಹೊಂದಿದ್ದು, ಅದು ತನ್ನ ಬಳಕೆದಾರರ ಡೇಟಾವನ್ನು ತನ್ನ ಮಾತೃಸಂಸ್ಥೆ ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುತ್ತಿದೆ ಎಂಬ ಬಗ್ಗೆ ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದರು. ಇದರಿಂದಾಗಿ ಹೊಸ ಗೌಪ್ಯತಾ ನೀತಿಯನ್ನು ಪರಿಚಯಿಸಿದ ನಂತರ ವಾಟ್ಸಪ್‌ ತೀವ್ರ ಹಿನ್ನಡೆ ಅನುಭವಿಸಿತ್ತು. ಹಲವಾರು ಬಳಕೆದಾರರು ಸಿಗ್ನಲ್ ಮತ್ತು ಟೆಲಿಗ್ರಾಮ್‌ನಂತಹ ಅಪ್ಲಿಕೇಶನ್‌ಗಳಿಗೆ ತೆರಳಿದ್ದರು.

ಈ ಹಿಂದೆ ಆಪ್‌ ಬಳಸಬೇಕೆಂದರೆ ತನ್ನ ಹೊಸ ನೀತಿಯನ್ನು ಕಡ್ಡಾಯವಾಗಿ ಒಪ್ಪಿಕೊಳ್ಳಬೇಕು ಎಂದು ವಾಟ್ಸಪ್‌ ಹೇಳಿತ್ತು. ಆದರೆ ನಂತರ ಅದರಿಂದ ಹಿಂದೆ ಸರಿದಿತ್ತು. ಆದರೆ ಹೊಸ ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳುವಂತೆ ಅದು ನೋಟಿಫಿಕೇಷನ್‌ ಕಳುಹಿಸುತ್ತಲೆ ಇದೆ.

ಈ ನೋಟಿಫಿಕೇಷನ್‌ ವಿರುದ್ದ ಸರ್ಕಾರವು ಹೊಸ ಅಫಿಡವಿಟ್ ಕೂಡಾ ಸಲ್ಲಿಸಿತ್ತು. ವಾಟ್ಸಪ್ ಕುತಂತ್ರದಿಂದ ತನ್ನ ಗೌಪ್ಯತಾ ನೀತಿಗೆ ಒಪ್ಪಿಗೆ ಪಡೆಯುತ್ತಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...