Homeಮುಖಪುಟಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ...

ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಶಿವಸೇನೆ ಅತೃಪ್ತ ಶಾಸಕರ ಮಾದರಿಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರ ಪ್ರಯತ್ನಕ್ಕೆ ತಾತ್ಕಾಲಿಕ ತಡೆಬಿದ್ದಿದೆ. ಪಕ್ಷಾಂತರ ನಿಷೇದ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಒಟ್ಟು ಶಾಸಕರ ಮೂರನೇ ಎರಡರಷ್ಟು ಬಹುಮತ ಇಲ್ಲದ ಕಾರಣಕ್ಕೆ ಪಕ್ಷಾಂತರಕ್ಕೆ ತಡೆ ಬಿದ್ದಿದೆ. ಆದರೆ ಈಗಲೂ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಗೋವಾದಲ್ಲಿ 11 ಕಾಂಗ್ರೆಸ್ ಶಾಸಕರಿದ್ದು, ಕಾನೂನು ಬದ್ದ ಸಾಮೂಹಿಕ ಪಕ್ಷಾಂತಕ್ಕೆ ಕನಿಷ್ಠ 8 ಶಾಸಕರ ಅಗತ್ಯವಿದೆ. ಅದನ್ನು ಸಾಧಿಸುವುದಕ್ಕಾಗಿ ಮಾಜಿ ಮುಖ್ಯಮಂತ್ರಿ, ಹಾಲಿ ಶಾಸಕ ದಿಗಂಬರ್ ಕಾಮತ್ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಸಂಭಾವ್ಯ ಬಂಡಾಯವನ್ನು ತಡೆಯಲು ಕಾಂಗ್ರೆಸ್ ಪಕ್ಷವು ನಿನ್ನೆ ಸಂಜೆ ಶಾಸಕರ ಸಭೆ ಕರೆದಿತ್ತು. ಪಕ್ಷದ ಮುಖಂಡ ಮುಕುಲ್ ವಾಸ್ನಿಕ್ ಮತ್ತು ಉಸ್ತುವಾರಿ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಿಗಂಬರ್ ಕಾಮತ್, ಮೈಕಲ್ ಲೋಬೊ ಹೊರತುಪಡಿಸಿ ಉಳಿದ 09 ಸದಸ್ಯರು ಭಾಗವಹಿಸಿದ್ದಾರೆ. ಆ ಚಿತ್ರವನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಇದು ಬಿಜೆಪಿಯ ವಿಫಲ ಯತ್ನ ಎಂದು ಕರೆದಿದೆ.

ಬಿಜೆಪಿಯು ತನ್ನ ಆರು ಶಾಸಕರನ್ನು ಗೋವಾದಿಂದ ಹೊರಗೆ ಸ್ಥಳಾಂತರಿಸಲು ಚಾರ್ಟರ್ಡ್ ಫ್ಲೈಟ್ ಅನ್ನು ಸಿದ್ಧಪಡಿಸಿದೆ. ಬಿಜೆಪಿಯ ಉನ್ನತ ನಾಯಕರೊಬ್ಬರು ಶಾಸಕರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದು, ಅವರು ಪಕ್ಷಕ್ಕೆ ಸೇರಿದರೆ ತಲಾ ₹ 15 ಕೋಟಿಯಿಂದ ₹ 20 ಕೋಟಿ ನೀಡುವುದಾಗಿ ಆಮಿಷ ತೋರಿಸಿದ್ದಾರೆ. ಶಾಸಕರ ಸಂಖ್ಯೆ ಕಡಿಮೆಯಾದಾಗ ಅವರ ಯೋಜನೆ ಸ್ಥಗಿತಗೊಂಡಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಭಾನುವಾರ ಕಾಂಗ್ರೆಸ್ ಪಕ್ಷದ ಐವರು ಶಾಸಕರು ನಾಪತ್ತೆಯಾಗಿದ್ದರು. ಅವರು ದಿಂಗಂಬರ್ ಕಾಮತ್ ನೇತೃತ್ವದಲ್ಲಿ ಸಿಎಂ ಪ್ರಮೋದ್ ಸಾವಂತ್‌ರನ್ನು ಭೇಟಿಯಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಇದು ಪಕ್ಷದ ವರಿಷ್ಟರನ್ನು ಚಿಂತೆಗೆ ದೂಡಿತ್ತು. ಸೋಮವಾರ ಅವರೆಲ್ಲರೂ ಮತ್ತೆ ಪ್ರತ್ಯಕ್ಷರಾಗಿದ್ದಾರೆ ಮತ್ತು ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದ್ದಾರೆ. ಆದರೂ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷಾಂತರವಾಗದಂತೆ ತಡೆಯಲು ಕಾವಲು ಕಾಯುತ್ತಿದೆ.

ಕಾಣೆಯಾಗಿದ್ದ ವಿರೋಧ ಪಕ್ಷದ ನಾಯಕ ಮೈಕಲ್ ಲೊಬೋರನ್ನು ಆ ಸ್ಥಾನದಿಂದ ತೆಗೆದುಹಾಕುವಂತೆ ಕಾಂಗ್ರೆಸ್ ಸ್ಪೀಕರ್‌ ಅವರಲ್ಲಿ ಮನವಿ ಮಾಡಿದೆ. ಅವರು ದಿಗಂಬರ್ ಕಾಮತ್ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷಾಂತರಕ್ಕೆ ಯೋಜನೆ ರೂಪಿಸಿದವರಲ್ಲಿ ಒಬ್ಬರಾಗಿದ್ದಾರೆ ಎನ್ನಲಾಗಿದೆ.

ಗೋವಾ ಸಿಎಂ ಪ್ರಮೋದ್ ಸಾವಂತ್ ಮಾಧ್ಯಮಗಳೊಂದಿಗೆ ಮಾತನಾಡಿ ನನಗೂ ಕಾಂಗ್ರೆಸ್ ಬಿಕ್ಕಟ್ಟಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದಿಗಂಬರ್ ಕಾಮತ್ ನೇತೃತ್ವದಲ್ಲಿ ಚುನಾವಣೆ ಎದುರಿಸಿತ್ತು. ಆದರೆ 11 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಆನಂತರ ದಿಗಂಬರ್ ಕಾಮತ್ ಬದಲಿಗೆ ಮೈಕಲ್ ಲೋಬೊರನ್ನು ವಿರೋಧ ಪಕ್ಷದ ಮುಖಂಡರನ್ನಾಗಿ ನೇಮಿಸಿತ್ತು. ಇದರಿಂದ ದಿಗಂಬರ್ ಕಾಮತ್ ಬಂಡಾಯವೆದ್ದಿದ್ದಾರೆ ಎನ್ನಲಾಗಿತ್ತು. ಆಶ್ಚರ್ಯಕರ ರೀತಿಯಲ್ಲಿ ವಿಪಕ್ಷ ನಾಯಕ ಮೈಕಲ್ ಲೋಬೊ ಕೂಡ ಅವರ ಜೊತೆಗೂಡಿದ್ದಾರೆ.

ಇದನ್ನೂ ಓದಿ: ಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...