Homeಮುಖಪುಟಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ...

ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಶಿವಸೇನೆ ಅತೃಪ್ತ ಶಾಸಕರ ಮಾದರಿಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರ ಪ್ರಯತ್ನಕ್ಕೆ ತಾತ್ಕಾಲಿಕ ತಡೆಬಿದ್ದಿದೆ. ಪಕ್ಷಾಂತರ ನಿಷೇದ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಒಟ್ಟು ಶಾಸಕರ ಮೂರನೇ ಎರಡರಷ್ಟು ಬಹುಮತ ಇಲ್ಲದ ಕಾರಣಕ್ಕೆ ಪಕ್ಷಾಂತರಕ್ಕೆ ತಡೆ ಬಿದ್ದಿದೆ. ಆದರೆ ಈಗಲೂ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಗೋವಾದಲ್ಲಿ 11 ಕಾಂಗ್ರೆಸ್ ಶಾಸಕರಿದ್ದು, ಕಾನೂನು ಬದ್ದ ಸಾಮೂಹಿಕ ಪಕ್ಷಾಂತಕ್ಕೆ ಕನಿಷ್ಠ 8 ಶಾಸಕರ ಅಗತ್ಯವಿದೆ. ಅದನ್ನು ಸಾಧಿಸುವುದಕ್ಕಾಗಿ ಮಾಜಿ ಮುಖ್ಯಮಂತ್ರಿ, ಹಾಲಿ ಶಾಸಕ ದಿಗಂಬರ್ ಕಾಮತ್ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಸಂಭಾವ್ಯ ಬಂಡಾಯವನ್ನು ತಡೆಯಲು ಕಾಂಗ್ರೆಸ್ ಪಕ್ಷವು ನಿನ್ನೆ ಸಂಜೆ ಶಾಸಕರ ಸಭೆ ಕರೆದಿತ್ತು. ಪಕ್ಷದ ಮುಖಂಡ ಮುಕುಲ್ ವಾಸ್ನಿಕ್ ಮತ್ತು ಉಸ್ತುವಾರಿ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಿಗಂಬರ್ ಕಾಮತ್, ಮೈಕಲ್ ಲೋಬೊ ಹೊರತುಪಡಿಸಿ ಉಳಿದ 09 ಸದಸ್ಯರು ಭಾಗವಹಿಸಿದ್ದಾರೆ. ಆ ಚಿತ್ರವನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಇದು ಬಿಜೆಪಿಯ ವಿಫಲ ಯತ್ನ ಎಂದು ಕರೆದಿದೆ.

ಬಿಜೆಪಿಯು ತನ್ನ ಆರು ಶಾಸಕರನ್ನು ಗೋವಾದಿಂದ ಹೊರಗೆ ಸ್ಥಳಾಂತರಿಸಲು ಚಾರ್ಟರ್ಡ್ ಫ್ಲೈಟ್ ಅನ್ನು ಸಿದ್ಧಪಡಿಸಿದೆ. ಬಿಜೆಪಿಯ ಉನ್ನತ ನಾಯಕರೊಬ್ಬರು ಶಾಸಕರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದು, ಅವರು ಪಕ್ಷಕ್ಕೆ ಸೇರಿದರೆ ತಲಾ ₹ 15 ಕೋಟಿಯಿಂದ ₹ 20 ಕೋಟಿ ನೀಡುವುದಾಗಿ ಆಮಿಷ ತೋರಿಸಿದ್ದಾರೆ. ಶಾಸಕರ ಸಂಖ್ಯೆ ಕಡಿಮೆಯಾದಾಗ ಅವರ ಯೋಜನೆ ಸ್ಥಗಿತಗೊಂಡಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಭಾನುವಾರ ಕಾಂಗ್ರೆಸ್ ಪಕ್ಷದ ಐವರು ಶಾಸಕರು ನಾಪತ್ತೆಯಾಗಿದ್ದರು. ಅವರು ದಿಂಗಂಬರ್ ಕಾಮತ್ ನೇತೃತ್ವದಲ್ಲಿ ಸಿಎಂ ಪ್ರಮೋದ್ ಸಾವಂತ್‌ರನ್ನು ಭೇಟಿಯಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಇದು ಪಕ್ಷದ ವರಿಷ್ಟರನ್ನು ಚಿಂತೆಗೆ ದೂಡಿತ್ತು. ಸೋಮವಾರ ಅವರೆಲ್ಲರೂ ಮತ್ತೆ ಪ್ರತ್ಯಕ್ಷರಾಗಿದ್ದಾರೆ ಮತ್ತು ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದ್ದಾರೆ. ಆದರೂ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷಾಂತರವಾಗದಂತೆ ತಡೆಯಲು ಕಾವಲು ಕಾಯುತ್ತಿದೆ.

ಕಾಣೆಯಾಗಿದ್ದ ವಿರೋಧ ಪಕ್ಷದ ನಾಯಕ ಮೈಕಲ್ ಲೊಬೋರನ್ನು ಆ ಸ್ಥಾನದಿಂದ ತೆಗೆದುಹಾಕುವಂತೆ ಕಾಂಗ್ರೆಸ್ ಸ್ಪೀಕರ್‌ ಅವರಲ್ಲಿ ಮನವಿ ಮಾಡಿದೆ. ಅವರು ದಿಗಂಬರ್ ಕಾಮತ್ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷಾಂತರಕ್ಕೆ ಯೋಜನೆ ರೂಪಿಸಿದವರಲ್ಲಿ ಒಬ್ಬರಾಗಿದ್ದಾರೆ ಎನ್ನಲಾಗಿದೆ.

ಗೋವಾ ಸಿಎಂ ಪ್ರಮೋದ್ ಸಾವಂತ್ ಮಾಧ್ಯಮಗಳೊಂದಿಗೆ ಮಾತನಾಡಿ ನನಗೂ ಕಾಂಗ್ರೆಸ್ ಬಿಕ್ಕಟ್ಟಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದಿಗಂಬರ್ ಕಾಮತ್ ನೇತೃತ್ವದಲ್ಲಿ ಚುನಾವಣೆ ಎದುರಿಸಿತ್ತು. ಆದರೆ 11 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಆನಂತರ ದಿಗಂಬರ್ ಕಾಮತ್ ಬದಲಿಗೆ ಮೈಕಲ್ ಲೋಬೊರನ್ನು ವಿರೋಧ ಪಕ್ಷದ ಮುಖಂಡರನ್ನಾಗಿ ನೇಮಿಸಿತ್ತು. ಇದರಿಂದ ದಿಗಂಬರ್ ಕಾಮತ್ ಬಂಡಾಯವೆದ್ದಿದ್ದಾರೆ ಎನ್ನಲಾಗಿತ್ತು. ಆಶ್ಚರ್ಯಕರ ರೀತಿಯಲ್ಲಿ ವಿಪಕ್ಷ ನಾಯಕ ಮೈಕಲ್ ಲೋಬೊ ಕೂಡ ಅವರ ಜೊತೆಗೂಡಿದ್ದಾರೆ.

ಇದನ್ನೂ ಓದಿ: ಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...