Homeಮುಖಪುಟಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ...

ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಶಿವಸೇನೆ ಅತೃಪ್ತ ಶಾಸಕರ ಮಾದರಿಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರ ಪ್ರಯತ್ನಕ್ಕೆ ತಾತ್ಕಾಲಿಕ ತಡೆಬಿದ್ದಿದೆ. ಪಕ್ಷಾಂತರ ನಿಷೇದ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಒಟ್ಟು ಶಾಸಕರ ಮೂರನೇ ಎರಡರಷ್ಟು ಬಹುಮತ ಇಲ್ಲದ ಕಾರಣಕ್ಕೆ ಪಕ್ಷಾಂತರಕ್ಕೆ ತಡೆ ಬಿದ್ದಿದೆ. ಆದರೆ ಈಗಲೂ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಗೋವಾದಲ್ಲಿ 11 ಕಾಂಗ್ರೆಸ್ ಶಾಸಕರಿದ್ದು, ಕಾನೂನು ಬದ್ದ ಸಾಮೂಹಿಕ ಪಕ್ಷಾಂತಕ್ಕೆ ಕನಿಷ್ಠ 8 ಶಾಸಕರ ಅಗತ್ಯವಿದೆ. ಅದನ್ನು ಸಾಧಿಸುವುದಕ್ಕಾಗಿ ಮಾಜಿ ಮುಖ್ಯಮಂತ್ರಿ, ಹಾಲಿ ಶಾಸಕ ದಿಗಂಬರ್ ಕಾಮತ್ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಸಂಭಾವ್ಯ ಬಂಡಾಯವನ್ನು ತಡೆಯಲು ಕಾಂಗ್ರೆಸ್ ಪಕ್ಷವು ನಿನ್ನೆ ಸಂಜೆ ಶಾಸಕರ ಸಭೆ ಕರೆದಿತ್ತು. ಪಕ್ಷದ ಮುಖಂಡ ಮುಕುಲ್ ವಾಸ್ನಿಕ್ ಮತ್ತು ಉಸ್ತುವಾರಿ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಿಗಂಬರ್ ಕಾಮತ್, ಮೈಕಲ್ ಲೋಬೊ ಹೊರತುಪಡಿಸಿ ಉಳಿದ 09 ಸದಸ್ಯರು ಭಾಗವಹಿಸಿದ್ದಾರೆ. ಆ ಚಿತ್ರವನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಇದು ಬಿಜೆಪಿಯ ವಿಫಲ ಯತ್ನ ಎಂದು ಕರೆದಿದೆ.

ಬಿಜೆಪಿಯು ತನ್ನ ಆರು ಶಾಸಕರನ್ನು ಗೋವಾದಿಂದ ಹೊರಗೆ ಸ್ಥಳಾಂತರಿಸಲು ಚಾರ್ಟರ್ಡ್ ಫ್ಲೈಟ್ ಅನ್ನು ಸಿದ್ಧಪಡಿಸಿದೆ. ಬಿಜೆಪಿಯ ಉನ್ನತ ನಾಯಕರೊಬ್ಬರು ಶಾಸಕರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದು, ಅವರು ಪಕ್ಷಕ್ಕೆ ಸೇರಿದರೆ ತಲಾ ₹ 15 ಕೋಟಿಯಿಂದ ₹ 20 ಕೋಟಿ ನೀಡುವುದಾಗಿ ಆಮಿಷ ತೋರಿಸಿದ್ದಾರೆ. ಶಾಸಕರ ಸಂಖ್ಯೆ ಕಡಿಮೆಯಾದಾಗ ಅವರ ಯೋಜನೆ ಸ್ಥಗಿತಗೊಂಡಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಭಾನುವಾರ ಕಾಂಗ್ರೆಸ್ ಪಕ್ಷದ ಐವರು ಶಾಸಕರು ನಾಪತ್ತೆಯಾಗಿದ್ದರು. ಅವರು ದಿಂಗಂಬರ್ ಕಾಮತ್ ನೇತೃತ್ವದಲ್ಲಿ ಸಿಎಂ ಪ್ರಮೋದ್ ಸಾವಂತ್‌ರನ್ನು ಭೇಟಿಯಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಇದು ಪಕ್ಷದ ವರಿಷ್ಟರನ್ನು ಚಿಂತೆಗೆ ದೂಡಿತ್ತು. ಸೋಮವಾರ ಅವರೆಲ್ಲರೂ ಮತ್ತೆ ಪ್ರತ್ಯಕ್ಷರಾಗಿದ್ದಾರೆ ಮತ್ತು ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದ್ದಾರೆ. ಆದರೂ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷಾಂತರವಾಗದಂತೆ ತಡೆಯಲು ಕಾವಲು ಕಾಯುತ್ತಿದೆ.

ಕಾಣೆಯಾಗಿದ್ದ ವಿರೋಧ ಪಕ್ಷದ ನಾಯಕ ಮೈಕಲ್ ಲೊಬೋರನ್ನು ಆ ಸ್ಥಾನದಿಂದ ತೆಗೆದುಹಾಕುವಂತೆ ಕಾಂಗ್ರೆಸ್ ಸ್ಪೀಕರ್‌ ಅವರಲ್ಲಿ ಮನವಿ ಮಾಡಿದೆ. ಅವರು ದಿಗಂಬರ್ ಕಾಮತ್ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷಾಂತರಕ್ಕೆ ಯೋಜನೆ ರೂಪಿಸಿದವರಲ್ಲಿ ಒಬ್ಬರಾಗಿದ್ದಾರೆ ಎನ್ನಲಾಗಿದೆ.

ಗೋವಾ ಸಿಎಂ ಪ್ರಮೋದ್ ಸಾವಂತ್ ಮಾಧ್ಯಮಗಳೊಂದಿಗೆ ಮಾತನಾಡಿ ನನಗೂ ಕಾಂಗ್ರೆಸ್ ಬಿಕ್ಕಟ್ಟಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದಿಗಂಬರ್ ಕಾಮತ್ ನೇತೃತ್ವದಲ್ಲಿ ಚುನಾವಣೆ ಎದುರಿಸಿತ್ತು. ಆದರೆ 11 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಆನಂತರ ದಿಗಂಬರ್ ಕಾಮತ್ ಬದಲಿಗೆ ಮೈಕಲ್ ಲೋಬೊರನ್ನು ವಿರೋಧ ಪಕ್ಷದ ಮುಖಂಡರನ್ನಾಗಿ ನೇಮಿಸಿತ್ತು. ಇದರಿಂದ ದಿಗಂಬರ್ ಕಾಮತ್ ಬಂಡಾಯವೆದ್ದಿದ್ದಾರೆ ಎನ್ನಲಾಗಿತ್ತು. ಆಶ್ಚರ್ಯಕರ ರೀತಿಯಲ್ಲಿ ವಿಪಕ್ಷ ನಾಯಕ ಮೈಕಲ್ ಲೋಬೊ ಕೂಡ ಅವರ ಜೊತೆಗೂಡಿದ್ದಾರೆ.

ಇದನ್ನೂ ಓದಿ: ಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...