Homeಮುಖಪುಟಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ...

ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಶಿವಸೇನೆ ಅತೃಪ್ತ ಶಾಸಕರ ಮಾದರಿಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರ ಪ್ರಯತ್ನಕ್ಕೆ ತಾತ್ಕಾಲಿಕ ತಡೆಬಿದ್ದಿದೆ. ಪಕ್ಷಾಂತರ ನಿಷೇದ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಒಟ್ಟು ಶಾಸಕರ ಮೂರನೇ ಎರಡರಷ್ಟು ಬಹುಮತ ಇಲ್ಲದ ಕಾರಣಕ್ಕೆ ಪಕ್ಷಾಂತರಕ್ಕೆ ತಡೆ ಬಿದ್ದಿದೆ. ಆದರೆ ಈಗಲೂ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಗೋವಾದಲ್ಲಿ 11 ಕಾಂಗ್ರೆಸ್ ಶಾಸಕರಿದ್ದು, ಕಾನೂನು ಬದ್ದ ಸಾಮೂಹಿಕ ಪಕ್ಷಾಂತಕ್ಕೆ ಕನಿಷ್ಠ 8 ಶಾಸಕರ ಅಗತ್ಯವಿದೆ. ಅದನ್ನು ಸಾಧಿಸುವುದಕ್ಕಾಗಿ ಮಾಜಿ ಮುಖ್ಯಮಂತ್ರಿ, ಹಾಲಿ ಶಾಸಕ ದಿಗಂಬರ್ ಕಾಮತ್ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಸಂಭಾವ್ಯ ಬಂಡಾಯವನ್ನು ತಡೆಯಲು ಕಾಂಗ್ರೆಸ್ ಪಕ್ಷವು ನಿನ್ನೆ ಸಂಜೆ ಶಾಸಕರ ಸಭೆ ಕರೆದಿತ್ತು. ಪಕ್ಷದ ಮುಖಂಡ ಮುಕುಲ್ ವಾಸ್ನಿಕ್ ಮತ್ತು ಉಸ್ತುವಾರಿ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಿಗಂಬರ್ ಕಾಮತ್, ಮೈಕಲ್ ಲೋಬೊ ಹೊರತುಪಡಿಸಿ ಉಳಿದ 09 ಸದಸ್ಯರು ಭಾಗವಹಿಸಿದ್ದಾರೆ. ಆ ಚಿತ್ರವನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಇದು ಬಿಜೆಪಿಯ ವಿಫಲ ಯತ್ನ ಎಂದು ಕರೆದಿದೆ.

ಬಿಜೆಪಿಯು ತನ್ನ ಆರು ಶಾಸಕರನ್ನು ಗೋವಾದಿಂದ ಹೊರಗೆ ಸ್ಥಳಾಂತರಿಸಲು ಚಾರ್ಟರ್ಡ್ ಫ್ಲೈಟ್ ಅನ್ನು ಸಿದ್ಧಪಡಿಸಿದೆ. ಬಿಜೆಪಿಯ ಉನ್ನತ ನಾಯಕರೊಬ್ಬರು ಶಾಸಕರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದು, ಅವರು ಪಕ್ಷಕ್ಕೆ ಸೇರಿದರೆ ತಲಾ ₹ 15 ಕೋಟಿಯಿಂದ ₹ 20 ಕೋಟಿ ನೀಡುವುದಾಗಿ ಆಮಿಷ ತೋರಿಸಿದ್ದಾರೆ. ಶಾಸಕರ ಸಂಖ್ಯೆ ಕಡಿಮೆಯಾದಾಗ ಅವರ ಯೋಜನೆ ಸ್ಥಗಿತಗೊಂಡಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಭಾನುವಾರ ಕಾಂಗ್ರೆಸ್ ಪಕ್ಷದ ಐವರು ಶಾಸಕರು ನಾಪತ್ತೆಯಾಗಿದ್ದರು. ಅವರು ದಿಂಗಂಬರ್ ಕಾಮತ್ ನೇತೃತ್ವದಲ್ಲಿ ಸಿಎಂ ಪ್ರಮೋದ್ ಸಾವಂತ್‌ರನ್ನು ಭೇಟಿಯಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಇದು ಪಕ್ಷದ ವರಿಷ್ಟರನ್ನು ಚಿಂತೆಗೆ ದೂಡಿತ್ತು. ಸೋಮವಾರ ಅವರೆಲ್ಲರೂ ಮತ್ತೆ ಪ್ರತ್ಯಕ್ಷರಾಗಿದ್ದಾರೆ ಮತ್ತು ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದ್ದಾರೆ. ಆದರೂ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷಾಂತರವಾಗದಂತೆ ತಡೆಯಲು ಕಾವಲು ಕಾಯುತ್ತಿದೆ.

ಕಾಣೆಯಾಗಿದ್ದ ವಿರೋಧ ಪಕ್ಷದ ನಾಯಕ ಮೈಕಲ್ ಲೊಬೋರನ್ನು ಆ ಸ್ಥಾನದಿಂದ ತೆಗೆದುಹಾಕುವಂತೆ ಕಾಂಗ್ರೆಸ್ ಸ್ಪೀಕರ್‌ ಅವರಲ್ಲಿ ಮನವಿ ಮಾಡಿದೆ. ಅವರು ದಿಗಂಬರ್ ಕಾಮತ್ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷಾಂತರಕ್ಕೆ ಯೋಜನೆ ರೂಪಿಸಿದವರಲ್ಲಿ ಒಬ್ಬರಾಗಿದ್ದಾರೆ ಎನ್ನಲಾಗಿದೆ.

ಗೋವಾ ಸಿಎಂ ಪ್ರಮೋದ್ ಸಾವಂತ್ ಮಾಧ್ಯಮಗಳೊಂದಿಗೆ ಮಾತನಾಡಿ ನನಗೂ ಕಾಂಗ್ರೆಸ್ ಬಿಕ್ಕಟ್ಟಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದಿಗಂಬರ್ ಕಾಮತ್ ನೇತೃತ್ವದಲ್ಲಿ ಚುನಾವಣೆ ಎದುರಿಸಿತ್ತು. ಆದರೆ 11 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಆನಂತರ ದಿಗಂಬರ್ ಕಾಮತ್ ಬದಲಿಗೆ ಮೈಕಲ್ ಲೋಬೊರನ್ನು ವಿರೋಧ ಪಕ್ಷದ ಮುಖಂಡರನ್ನಾಗಿ ನೇಮಿಸಿತ್ತು. ಇದರಿಂದ ದಿಗಂಬರ್ ಕಾಮತ್ ಬಂಡಾಯವೆದ್ದಿದ್ದಾರೆ ಎನ್ನಲಾಗಿತ್ತು. ಆಶ್ಚರ್ಯಕರ ರೀತಿಯಲ್ಲಿ ವಿಪಕ್ಷ ನಾಯಕ ಮೈಕಲ್ ಲೋಬೊ ಕೂಡ ಅವರ ಜೊತೆಗೂಡಿದ್ದಾರೆ.

ಇದನ್ನೂ ಓದಿ: ಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...