Homeಮುಖಪುಟಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ...

ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಶಿವಸೇನೆ ಅತೃಪ್ತ ಶಾಸಕರ ಮಾದರಿಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರ ಪ್ರಯತ್ನಕ್ಕೆ ತಾತ್ಕಾಲಿಕ ತಡೆಬಿದ್ದಿದೆ. ಪಕ್ಷಾಂತರ ನಿಷೇದ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಒಟ್ಟು ಶಾಸಕರ ಮೂರನೇ ಎರಡರಷ್ಟು ಬಹುಮತ ಇಲ್ಲದ ಕಾರಣಕ್ಕೆ ಪಕ್ಷಾಂತರಕ್ಕೆ ತಡೆ ಬಿದ್ದಿದೆ. ಆದರೆ ಈಗಲೂ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಗೋವಾದಲ್ಲಿ 11 ಕಾಂಗ್ರೆಸ್ ಶಾಸಕರಿದ್ದು, ಕಾನೂನು ಬದ್ದ ಸಾಮೂಹಿಕ ಪಕ್ಷಾಂತಕ್ಕೆ ಕನಿಷ್ಠ 8 ಶಾಸಕರ ಅಗತ್ಯವಿದೆ. ಅದನ್ನು ಸಾಧಿಸುವುದಕ್ಕಾಗಿ ಮಾಜಿ ಮುಖ್ಯಮಂತ್ರಿ, ಹಾಲಿ ಶಾಸಕ ದಿಗಂಬರ್ ಕಾಮತ್ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಸಂಭಾವ್ಯ ಬಂಡಾಯವನ್ನು ತಡೆಯಲು ಕಾಂಗ್ರೆಸ್ ಪಕ್ಷವು ನಿನ್ನೆ ಸಂಜೆ ಶಾಸಕರ ಸಭೆ ಕರೆದಿತ್ತು. ಪಕ್ಷದ ಮುಖಂಡ ಮುಕುಲ್ ವಾಸ್ನಿಕ್ ಮತ್ತು ಉಸ್ತುವಾರಿ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಿಗಂಬರ್ ಕಾಮತ್, ಮೈಕಲ್ ಲೋಬೊ ಹೊರತುಪಡಿಸಿ ಉಳಿದ 09 ಸದಸ್ಯರು ಭಾಗವಹಿಸಿದ್ದಾರೆ. ಆ ಚಿತ್ರವನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಇದು ಬಿಜೆಪಿಯ ವಿಫಲ ಯತ್ನ ಎಂದು ಕರೆದಿದೆ.

ಬಿಜೆಪಿಯು ತನ್ನ ಆರು ಶಾಸಕರನ್ನು ಗೋವಾದಿಂದ ಹೊರಗೆ ಸ್ಥಳಾಂತರಿಸಲು ಚಾರ್ಟರ್ಡ್ ಫ್ಲೈಟ್ ಅನ್ನು ಸಿದ್ಧಪಡಿಸಿದೆ. ಬಿಜೆಪಿಯ ಉನ್ನತ ನಾಯಕರೊಬ್ಬರು ಶಾಸಕರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದು, ಅವರು ಪಕ್ಷಕ್ಕೆ ಸೇರಿದರೆ ತಲಾ ₹ 15 ಕೋಟಿಯಿಂದ ₹ 20 ಕೋಟಿ ನೀಡುವುದಾಗಿ ಆಮಿಷ ತೋರಿಸಿದ್ದಾರೆ. ಶಾಸಕರ ಸಂಖ್ಯೆ ಕಡಿಮೆಯಾದಾಗ ಅವರ ಯೋಜನೆ ಸ್ಥಗಿತಗೊಂಡಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಭಾನುವಾರ ಕಾಂಗ್ರೆಸ್ ಪಕ್ಷದ ಐವರು ಶಾಸಕರು ನಾಪತ್ತೆಯಾಗಿದ್ದರು. ಅವರು ದಿಂಗಂಬರ್ ಕಾಮತ್ ನೇತೃತ್ವದಲ್ಲಿ ಸಿಎಂ ಪ್ರಮೋದ್ ಸಾವಂತ್‌ರನ್ನು ಭೇಟಿಯಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಇದು ಪಕ್ಷದ ವರಿಷ್ಟರನ್ನು ಚಿಂತೆಗೆ ದೂಡಿತ್ತು. ಸೋಮವಾರ ಅವರೆಲ್ಲರೂ ಮತ್ತೆ ಪ್ರತ್ಯಕ್ಷರಾಗಿದ್ದಾರೆ ಮತ್ತು ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದ್ದಾರೆ. ಆದರೂ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷಾಂತರವಾಗದಂತೆ ತಡೆಯಲು ಕಾವಲು ಕಾಯುತ್ತಿದೆ.

ಕಾಣೆಯಾಗಿದ್ದ ವಿರೋಧ ಪಕ್ಷದ ನಾಯಕ ಮೈಕಲ್ ಲೊಬೋರನ್ನು ಆ ಸ್ಥಾನದಿಂದ ತೆಗೆದುಹಾಕುವಂತೆ ಕಾಂಗ್ರೆಸ್ ಸ್ಪೀಕರ್‌ ಅವರಲ್ಲಿ ಮನವಿ ಮಾಡಿದೆ. ಅವರು ದಿಗಂಬರ್ ಕಾಮತ್ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷಾಂತರಕ್ಕೆ ಯೋಜನೆ ರೂಪಿಸಿದವರಲ್ಲಿ ಒಬ್ಬರಾಗಿದ್ದಾರೆ ಎನ್ನಲಾಗಿದೆ.

ಗೋವಾ ಸಿಎಂ ಪ್ರಮೋದ್ ಸಾವಂತ್ ಮಾಧ್ಯಮಗಳೊಂದಿಗೆ ಮಾತನಾಡಿ ನನಗೂ ಕಾಂಗ್ರೆಸ್ ಬಿಕ್ಕಟ್ಟಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದಿಗಂಬರ್ ಕಾಮತ್ ನೇತೃತ್ವದಲ್ಲಿ ಚುನಾವಣೆ ಎದುರಿಸಿತ್ತು. ಆದರೆ 11 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಆನಂತರ ದಿಗಂಬರ್ ಕಾಮತ್ ಬದಲಿಗೆ ಮೈಕಲ್ ಲೋಬೊರನ್ನು ವಿರೋಧ ಪಕ್ಷದ ಮುಖಂಡರನ್ನಾಗಿ ನೇಮಿಸಿತ್ತು. ಇದರಿಂದ ದಿಗಂಬರ್ ಕಾಮತ್ ಬಂಡಾಯವೆದ್ದಿದ್ದಾರೆ ಎನ್ನಲಾಗಿತ್ತು. ಆಶ್ಚರ್ಯಕರ ರೀತಿಯಲ್ಲಿ ವಿಪಕ್ಷ ನಾಯಕ ಮೈಕಲ್ ಲೋಬೊ ಕೂಡ ಅವರ ಜೊತೆಗೂಡಿದ್ದಾರೆ.

ಇದನ್ನೂ ಓದಿ: ಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....