Homeದಲಿತ್ ಫೈಲ್ಸ್ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

- Advertisement -
- Advertisement -

ಉತ್ತರಪ್ರದೇಶದ ಫಿರೋಜಾಬಾದ್‌ ಜಿಲ್ಲೆಯ ಸಾಧುಪುರ್‌‌ ಗ್ರಾಮದಲ್ಲಿ 1981 ಇಸವಿಯಲ್ಲಿ ನಡೆದ ಘಟನೆ ಇದು. ಏಕಾಏಕಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ದಲಿತರ ಜೀವಗಳು ಹಾರಿಹೋಗಿದ್ದವು. ಆದರೆ ಪ್ರಕರಣ ನಡೆದು 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿದೆ.

ಪ್ರಕರಣ ಸವೆಸಿದ ಹಾದಿಯ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ವಿಸ್ತೃತವಾಗಿ ವರದಿ ಮಾಡಿದೆ. ಪ್ರಕರಣದ ಏಳುಬೀಳಿನಲ್ಲಿ ನೊಂದ ದಲಿತರ ತ್ರಾಸದಾಯಕ ಪಯಣವನ್ನು ವರದಿ ತೆರೆದಿಟ್ಟಿದೆ.

1981ರ ಡಿಸೆಂಬರ್‌ 30ನೇ ತಾರೀಕು. ಮೈನ್‌ಪುರಿ ಜಿಲ್ಲೆಗೆ ಸೇರಿದ, ಈಗ ಫಿರೋಜಾಬಾದ್‌ಗೆ ಒಳಪಟ್ಟಿರುವ ಸಾಧುಪುರ್ ಗ್ರಾಮದಲ್ಲಿ ಅಂದು ಸಂಜೆ 6 ಗಂಟೆಯಲ್ಲಿ ಭೀಕರ ದಾಳಿ ನಡೆದಿತ್ತು. 30ರ ಹರೆಯದ ಪ್ರೇಮಾವತಿ, ತನ್ನ 14 ವರ್ಷದ ಮಗಳು ಸುಖದೇವಿ ಅವರೊಂದಿಗೆ ರೊಟ್ಟಿಗಳನ್ನು ತಟ್ಟುತ್ತಿದ್ದರು. ಪ್ರೇಮಾವತಿ ಅವರ ಮಕ್ಕಳಾದ  ಹರಿಶಂಕರ್ (12), ಕೈಲಾಶ್  8 ಅಡುಗೆ ಮನೆಯಲ್ಲಿ ಕುಳಿತ್ತಿದ್ದರು.

ಇದ್ದಕ್ಕಿದ್ದಂತೆ, ಇಬ್ಬರು ಪುರುಷರು ಅಡುಗೆಮನೆಗೆ ಪ್ರವೇಶಿಸಿದರು. ಪೊಲೀಸ್‌ ಸಮವಸ್ತ್ರದಲ್ಲಿದ್ದ ಮೂರನೇ ವ್ಯಕ್ತಿ ಮುಖ್ಯ ಬಾಗಿಲಿನ ಹೊರಗೆ ಕವಾಲಾಗಿ ನಿಂತಿದ್ದ. ಐದು ನಿಮಿಷಗಳ ಕಾಲ ಇಬ್ಬರು ವ್ಯಕ್ತಿಗಳು ಮನಬಂದಂತೆ ಗುಂಡು ಹಾರಿಸಿದರು. ಸುಖದೇವಿ ಹೊಟ್ಟೆಗೆ, ಹರಿಶಂಕರ್ ಕುತ್ತಿಗೆಗೆ ಮತ್ತು ಕೈಲಾಶ್‌ನ ಎದೆ ಮತ್ತು ಹೊಟ್ಟೆಗೆ ಗುಂಡು ತಗುಲಿದವು. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದರು.

ಹೇಗೋ ಪ್ರೇಮಾವತಿ ಬದುಕುಳಿದಿದ್ದಳು. ಕಾಲಿಗೆ ಗುಂಡು ತಗುಲಿದ್ದರಿಂದ ವಾಕಿಂಗ್ ಸ್ಟಿಕ್ ಅವರಿಗೆ ಕಾಯಂ ಆಯಿತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಮಂದಿ ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರೂ ಸೇರಿದಂತೆ 10 ಜನರನ್ನು ಈ ಸರಣಿಯಲ್ಲಿ ಕಗ್ಗೊಲೆ ಮಾಡಿದ್ದರು.

ಸುಮಾರು 42 ವರ್ಷಗಳ ಹಿಂದೆ ನಡೆದ ಪ್ರಕರಣವಿದು. 1989ರಲ್ಲಿ ಹೊಸ ಜಿಲ್ಲೆಯ ರಚನೆ ಆಯಿತು. ಹೊಸ ಜಿಲ್ಲೆಯಲ್ಲಿ ಸುಮಾರು 32 ವರ್ಷ ನ್ಯಾಯಕ್ಕಾಗಿ ಕಾಯಬೇಕಾಯಿತು. ಫಿರೋಜಾಬಾದ್ ನ್ಯಾಯಾಲಯವು ಕಳೆದ ಮೇ 31 ರಂದು ಸಾಧುಪುರ್‌ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಪ್ರಕಟಿಸಿದೆ. ವಿಚಾರಣೆ ನಡೆಯುವ ವೇಳೆಯಲ್ಲಿಯೇ ಇಬ್ಬರು ಆರೋಪಿಗಳು (ಅನಾರ್ ಮತ್ತು ಜಪಾನ್ ಸಿಂಗ್) ನಿಧನರಾಗಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 307 (ಕೊಲೆಗೆ ಯತ್ನ) ಅಡಿಯಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ 90 ವರ್ಷದ ಗಂಗಾ ದಯಾಳ್‌ಗೆ ಜೀವಾವಧಿ ಶಿಕ್ಷೆ, 50,000 ರೂಪಾಯಿ ದಂಡ ವಿಧಿಸಲಾಗಿದೆ.

“ಇದು ನ್ಯಾಯವೆಂದು ಕಾಣುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಸವೆಸಿದೆ. ನನಗೆ ಈಗ ನ್ಯಾಯ ಸಿಗುತ್ತದೆಯೇ?”- ಸುಮಾರು ನಾಲ್ಕು ದಶಕಗಳ ಹಿಂದೆ ತನ್ನ ಮಕ್ಕಳನ್ನು ಕಳೆದುಕೊಂಡ, ಈಗ 72 ವರ್ಷದವರಾಗಿರುವ ಪ್ರೇಮಾವತಿಯವರು ಪತಿ ರಾಮ್ ಭರೋಸ್ (82) ಪಕ್ಕದಲ್ಲಿ ಕುಳಿತು ಹೀಗೆ ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತರ ಪರ ವಾದ ಮಂಡಿಸಿದ ಫಿರೋಜಾಬಾದ್ ಜಿಲ್ಲಾ ಪ್ರಧಾನ ವಕೀಲ ರಾಜೀವ್ ಉಪಾಧ್ಯಾಯ ಪ್ರತಿಕ್ರಿಯಿಸಿ, “1989ರಲ್ಲಿ ಹೊಸ ಜಿಲ್ಲೆ ರಚನೆಯಾದ ಕಾರಣ ವಿಚಾರಣೆ ಎಲ್ಲಿ ನಡೆಯಬೇಕು ಎಂದು ನಿರ್ಧರಿಸಲು ಸಾಕಷ್ಟು ಸಮಯ ವ್ಯಯಿಸಿದ್ದರಿಂದ ತೀರ್ಪು ವಿಳಂಬವಾಯಿತು” ಎಂದಿದ್ದಾರೆ.

“ಈ ಘಟನೆ ಸಂಭವಿಸಿದಾಗ, ಶಿಕೋಹಾಬಾದ್ ಪೊಲೀಸ್ ಠಾಣೆ (ಸಾಧುಪುರ್‌ ಗ್ರಾಮ ಈ ಠಾಣೆ ವ್ಯಾಪ್ತಿಗೆ ಸೇರಿದೆ) ಮೈನ್‌ಪುರಿ ಜಿಲ್ಲೆಯಲ್ಲಿತ್ತು. 1989ರಲ್ಲಿ, ಫಿರೋಜಾಬಾದ್ ಜಿಲ್ಲೆಯನ್ನು ರಚಿಸಲಾಯಿತು. ಶಿಕೋಹಾಬಾದ್ ಹೊಸ ಜಿಲ್ಲೆಯ ಭಾಗವಾಯಿತು. ಪ್ರಕರಣವು ಈಗಾಗಲೇ ಮೈನ್‌ಪುರಿ ಜಿಲ್ಲೆಯಲ್ಲಿ ಪ್ರಾರಂಭವಾಗಿರುವುದರಿಂದ, ಯಾವ ಜಿಲ್ಲಾ ನ್ಯಾಯಾಲಯವು ಈ ವಿಷಯವನ್ನು ಆಲಿಸಬೇಕು ಎಂಬುದರ ಕುರಿತು ವಾದಗಳು ಇದ್ದವು” ಎನ್ನುತ್ತಾರೆ ಉಪಾಧ್ಯಾಯ.

“(ಅಲಹಾಬಾದ್) ಹೈಕೋರ್ಟ್ ಫಿರೋಜಾಬಾದ್ ನ್ಯಾಯಾಲಯವನ್ನು ಆಯ್ಕೆ ಮಾಡುವ ಮೊದಲು ಸ್ವಲ್ಪ ಸಮಯವಾಗಿತ್ತು. ಆ ನಂತರವೂ ಆರೋಪಿಗಳು ಕಾಲಾವಕಾಶ ಕೋರುತ್ತಲೇ ಇದ್ದರು. ಇದು ಪ್ರಕರಣವನ್ನು ಮತ್ತಷ್ಟು ವಿಳಂಬಗೊಳಿಸಿತು” ಎಂದಿದ್ದಾರೆ.

ಇದನ್ನೂ ಓದಿರಿ: ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

ಅಂದಿನ ಘಟನೆಯನ್ನು ನೆನಪಿಸಿಕೊಂಡಿರುವ ಪ್ರೇಮಾವತಿ, “ಎಲ್ಲವೂ ತುಂಬಾ ವೇಗವಾಗಿ ನಡೆಯಿತು. ಒಂದು ಕ್ಷಣ, ಏನಾಗುತ್ತಿದೆ ಎಂದು ನನಗೆ ಅರ್ಥವಾಗಲಿಲ್ಲ. ನಾನು ಸಂಪೂರ್ಣವಾಗಿ ಪ್ರಜ್ಞೆ ಕಳೆದುಕೊಂಡಿದ್ದೆ. ಕಾಲಿಗೆ ಗುಂಡು ತಗುಲಿದ್ದರೂ ನನಗೆ ಯಾವುದೇ ನೋವು ಆಗಲಿಲ್ಲ. ಆಗಷ್ಟೇ ಗುಂಡಿನ ದಾಳಿ ಆರಂಭಿಸಿದ್ದರು. ಅವರು ನಮ್ಮನ್ನು ಯಾವುದೇ ವಿಚಾರ ಕೇಳಲಿಲ್ಲ. ಅವರು ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ” ಎಂದು ನೆನೆದಿದ್ದಾರೆ.

ಅಂದು ಪ್ರೇಮಾವತಿಯವರ ಅರ್ಧದಷ್ಟು ಕುಟುಂಬ ಬಲಿಯಾಗಿತ್ತು. ಬದುಕುಳಿದವರು ರಾಮ್ ಭರೋಸ್, ಪ್ರೇಮಾವತಿ ಮತ್ತು ಅವರ ಮಗ ಮಹೇಂದ್ರ ಸಿಂಗ್ (ಆಗ ಕೇವಲ 2 ವರ್ಷದ ಮಗು). ಈಗ 44 ವರ್ಷ ವಯಸ್ಸಿನವರಾದ ಮಹೇಂದ್ರ ಅವರು ಆ ಸಂಜೆ ಮತ್ತೊಂದು ಕೋಣೆಯಲ್ಲಿ ಮಲಗಿದ್ದರಿಂದ ಮಾತ್ರ ಬದುಕುಳಿದ್ದರು. ರಾಮ್ ಭರೋಸ್ ಅವರು ನೆರೆಯ ಮನೆಯಲ್ಲಿದ್ದ ಕಾರಣ ಜೀವ ಉಳಿಸಿಕೊಂಡಿದ್ದರು.

ತನ್ನ ಏಳು ಮಂದಿಯ ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುವ ಮಹೇಂದ್ರ ಅವರು, “ಸರ್ಕಾರವು ಪ್ರತಿ ಸಂತ್ರಸ್ತ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವ ಭರವಸೆ ನೀಡಿತು. ನಾನು 18 ನೇ ವರ್ಷಕ್ಕೆ ಕಾಲಿಟ್ಟಾಗಿನಿಂದ ಆ ಕೆಲಸವನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ. ನಾನು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ನನ್ನನ್ನು ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಅಲೆಸಲಾಯಿತು” ಎಂದು ಅಳಲು ತೋಡಿಕೊಂಡಿದ್ದಾರೆ.

(ಪೂರ್ಣ ವರದಿಗಾಗಿ ‘ಇಲ್ಲಿ’ ಕ್ಲಿಕ್ ಮಾಡಿರಿ)

ವರದಿ ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...