Homeದಲಿತ್ ಫೈಲ್ಸ್ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

- Advertisement -
- Advertisement -

ಉತ್ತರಪ್ರದೇಶದ ಫಿರೋಜಾಬಾದ್‌ ಜಿಲ್ಲೆಯ ಸಾಧುಪುರ್‌‌ ಗ್ರಾಮದಲ್ಲಿ 1981 ಇಸವಿಯಲ್ಲಿ ನಡೆದ ಘಟನೆ ಇದು. ಏಕಾಏಕಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ದಲಿತರ ಜೀವಗಳು ಹಾರಿಹೋಗಿದ್ದವು. ಆದರೆ ಪ್ರಕರಣ ನಡೆದು 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿದೆ.

ಪ್ರಕರಣ ಸವೆಸಿದ ಹಾದಿಯ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ವಿಸ್ತೃತವಾಗಿ ವರದಿ ಮಾಡಿದೆ. ಪ್ರಕರಣದ ಏಳುಬೀಳಿನಲ್ಲಿ ನೊಂದ ದಲಿತರ ತ್ರಾಸದಾಯಕ ಪಯಣವನ್ನು ವರದಿ ತೆರೆದಿಟ್ಟಿದೆ.

1981ರ ಡಿಸೆಂಬರ್‌ 30ನೇ ತಾರೀಕು. ಮೈನ್‌ಪುರಿ ಜಿಲ್ಲೆಗೆ ಸೇರಿದ, ಈಗ ಫಿರೋಜಾಬಾದ್‌ಗೆ ಒಳಪಟ್ಟಿರುವ ಸಾಧುಪುರ್ ಗ್ರಾಮದಲ್ಲಿ ಅಂದು ಸಂಜೆ 6 ಗಂಟೆಯಲ್ಲಿ ಭೀಕರ ದಾಳಿ ನಡೆದಿತ್ತು. 30ರ ಹರೆಯದ ಪ್ರೇಮಾವತಿ, ತನ್ನ 14 ವರ್ಷದ ಮಗಳು ಸುಖದೇವಿ ಅವರೊಂದಿಗೆ ರೊಟ್ಟಿಗಳನ್ನು ತಟ್ಟುತ್ತಿದ್ದರು. ಪ್ರೇಮಾವತಿ ಅವರ ಮಕ್ಕಳಾದ  ಹರಿಶಂಕರ್ (12), ಕೈಲಾಶ್  8 ಅಡುಗೆ ಮನೆಯಲ್ಲಿ ಕುಳಿತ್ತಿದ್ದರು.

ಇದ್ದಕ್ಕಿದ್ದಂತೆ, ಇಬ್ಬರು ಪುರುಷರು ಅಡುಗೆಮನೆಗೆ ಪ್ರವೇಶಿಸಿದರು. ಪೊಲೀಸ್‌ ಸಮವಸ್ತ್ರದಲ್ಲಿದ್ದ ಮೂರನೇ ವ್ಯಕ್ತಿ ಮುಖ್ಯ ಬಾಗಿಲಿನ ಹೊರಗೆ ಕವಾಲಾಗಿ ನಿಂತಿದ್ದ. ಐದು ನಿಮಿಷಗಳ ಕಾಲ ಇಬ್ಬರು ವ್ಯಕ್ತಿಗಳು ಮನಬಂದಂತೆ ಗುಂಡು ಹಾರಿಸಿದರು. ಸುಖದೇವಿ ಹೊಟ್ಟೆಗೆ, ಹರಿಶಂಕರ್ ಕುತ್ತಿಗೆಗೆ ಮತ್ತು ಕೈಲಾಶ್‌ನ ಎದೆ ಮತ್ತು ಹೊಟ್ಟೆಗೆ ಗುಂಡು ತಗುಲಿದವು. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದರು.

ಹೇಗೋ ಪ್ರೇಮಾವತಿ ಬದುಕುಳಿದಿದ್ದಳು. ಕಾಲಿಗೆ ಗುಂಡು ತಗುಲಿದ್ದರಿಂದ ವಾಕಿಂಗ್ ಸ್ಟಿಕ್ ಅವರಿಗೆ ಕಾಯಂ ಆಯಿತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಮಂದಿ ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರೂ ಸೇರಿದಂತೆ 10 ಜನರನ್ನು ಈ ಸರಣಿಯಲ್ಲಿ ಕಗ್ಗೊಲೆ ಮಾಡಿದ್ದರು.

ಸುಮಾರು 42 ವರ್ಷಗಳ ಹಿಂದೆ ನಡೆದ ಪ್ರಕರಣವಿದು. 1989ರಲ್ಲಿ ಹೊಸ ಜಿಲ್ಲೆಯ ರಚನೆ ಆಯಿತು. ಹೊಸ ಜಿಲ್ಲೆಯಲ್ಲಿ ಸುಮಾರು 32 ವರ್ಷ ನ್ಯಾಯಕ್ಕಾಗಿ ಕಾಯಬೇಕಾಯಿತು. ಫಿರೋಜಾಬಾದ್ ನ್ಯಾಯಾಲಯವು ಕಳೆದ ಮೇ 31 ರಂದು ಸಾಧುಪುರ್‌ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಪ್ರಕಟಿಸಿದೆ. ವಿಚಾರಣೆ ನಡೆಯುವ ವೇಳೆಯಲ್ಲಿಯೇ ಇಬ್ಬರು ಆರೋಪಿಗಳು (ಅನಾರ್ ಮತ್ತು ಜಪಾನ್ ಸಿಂಗ್) ನಿಧನರಾಗಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 307 (ಕೊಲೆಗೆ ಯತ್ನ) ಅಡಿಯಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ 90 ವರ್ಷದ ಗಂಗಾ ದಯಾಳ್‌ಗೆ ಜೀವಾವಧಿ ಶಿಕ್ಷೆ, 50,000 ರೂಪಾಯಿ ದಂಡ ವಿಧಿಸಲಾಗಿದೆ.

“ಇದು ನ್ಯಾಯವೆಂದು ಕಾಣುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಸವೆಸಿದೆ. ನನಗೆ ಈಗ ನ್ಯಾಯ ಸಿಗುತ್ತದೆಯೇ?”- ಸುಮಾರು ನಾಲ್ಕು ದಶಕಗಳ ಹಿಂದೆ ತನ್ನ ಮಕ್ಕಳನ್ನು ಕಳೆದುಕೊಂಡ, ಈಗ 72 ವರ್ಷದವರಾಗಿರುವ ಪ್ರೇಮಾವತಿಯವರು ಪತಿ ರಾಮ್ ಭರೋಸ್ (82) ಪಕ್ಕದಲ್ಲಿ ಕುಳಿತು ಹೀಗೆ ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತರ ಪರ ವಾದ ಮಂಡಿಸಿದ ಫಿರೋಜಾಬಾದ್ ಜಿಲ್ಲಾ ಪ್ರಧಾನ ವಕೀಲ ರಾಜೀವ್ ಉಪಾಧ್ಯಾಯ ಪ್ರತಿಕ್ರಿಯಿಸಿ, “1989ರಲ್ಲಿ ಹೊಸ ಜಿಲ್ಲೆ ರಚನೆಯಾದ ಕಾರಣ ವಿಚಾರಣೆ ಎಲ್ಲಿ ನಡೆಯಬೇಕು ಎಂದು ನಿರ್ಧರಿಸಲು ಸಾಕಷ್ಟು ಸಮಯ ವ್ಯಯಿಸಿದ್ದರಿಂದ ತೀರ್ಪು ವಿಳಂಬವಾಯಿತು” ಎಂದಿದ್ದಾರೆ.

“ಈ ಘಟನೆ ಸಂಭವಿಸಿದಾಗ, ಶಿಕೋಹಾಬಾದ್ ಪೊಲೀಸ್ ಠಾಣೆ (ಸಾಧುಪುರ್‌ ಗ್ರಾಮ ಈ ಠಾಣೆ ವ್ಯಾಪ್ತಿಗೆ ಸೇರಿದೆ) ಮೈನ್‌ಪುರಿ ಜಿಲ್ಲೆಯಲ್ಲಿತ್ತು. 1989ರಲ್ಲಿ, ಫಿರೋಜಾಬಾದ್ ಜಿಲ್ಲೆಯನ್ನು ರಚಿಸಲಾಯಿತು. ಶಿಕೋಹಾಬಾದ್ ಹೊಸ ಜಿಲ್ಲೆಯ ಭಾಗವಾಯಿತು. ಪ್ರಕರಣವು ಈಗಾಗಲೇ ಮೈನ್‌ಪುರಿ ಜಿಲ್ಲೆಯಲ್ಲಿ ಪ್ರಾರಂಭವಾಗಿರುವುದರಿಂದ, ಯಾವ ಜಿಲ್ಲಾ ನ್ಯಾಯಾಲಯವು ಈ ವಿಷಯವನ್ನು ಆಲಿಸಬೇಕು ಎಂಬುದರ ಕುರಿತು ವಾದಗಳು ಇದ್ದವು” ಎನ್ನುತ್ತಾರೆ ಉಪಾಧ್ಯಾಯ.

“(ಅಲಹಾಬಾದ್) ಹೈಕೋರ್ಟ್ ಫಿರೋಜಾಬಾದ್ ನ್ಯಾಯಾಲಯವನ್ನು ಆಯ್ಕೆ ಮಾಡುವ ಮೊದಲು ಸ್ವಲ್ಪ ಸಮಯವಾಗಿತ್ತು. ಆ ನಂತರವೂ ಆರೋಪಿಗಳು ಕಾಲಾವಕಾಶ ಕೋರುತ್ತಲೇ ಇದ್ದರು. ಇದು ಪ್ರಕರಣವನ್ನು ಮತ್ತಷ್ಟು ವಿಳಂಬಗೊಳಿಸಿತು” ಎಂದಿದ್ದಾರೆ.

ಇದನ್ನೂ ಓದಿರಿ: ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

ಅಂದಿನ ಘಟನೆಯನ್ನು ನೆನಪಿಸಿಕೊಂಡಿರುವ ಪ್ರೇಮಾವತಿ, “ಎಲ್ಲವೂ ತುಂಬಾ ವೇಗವಾಗಿ ನಡೆಯಿತು. ಒಂದು ಕ್ಷಣ, ಏನಾಗುತ್ತಿದೆ ಎಂದು ನನಗೆ ಅರ್ಥವಾಗಲಿಲ್ಲ. ನಾನು ಸಂಪೂರ್ಣವಾಗಿ ಪ್ರಜ್ಞೆ ಕಳೆದುಕೊಂಡಿದ್ದೆ. ಕಾಲಿಗೆ ಗುಂಡು ತಗುಲಿದ್ದರೂ ನನಗೆ ಯಾವುದೇ ನೋವು ಆಗಲಿಲ್ಲ. ಆಗಷ್ಟೇ ಗುಂಡಿನ ದಾಳಿ ಆರಂಭಿಸಿದ್ದರು. ಅವರು ನಮ್ಮನ್ನು ಯಾವುದೇ ವಿಚಾರ ಕೇಳಲಿಲ್ಲ. ಅವರು ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ” ಎಂದು ನೆನೆದಿದ್ದಾರೆ.

ಅಂದು ಪ್ರೇಮಾವತಿಯವರ ಅರ್ಧದಷ್ಟು ಕುಟುಂಬ ಬಲಿಯಾಗಿತ್ತು. ಬದುಕುಳಿದವರು ರಾಮ್ ಭರೋಸ್, ಪ್ರೇಮಾವತಿ ಮತ್ತು ಅವರ ಮಗ ಮಹೇಂದ್ರ ಸಿಂಗ್ (ಆಗ ಕೇವಲ 2 ವರ್ಷದ ಮಗು). ಈಗ 44 ವರ್ಷ ವಯಸ್ಸಿನವರಾದ ಮಹೇಂದ್ರ ಅವರು ಆ ಸಂಜೆ ಮತ್ತೊಂದು ಕೋಣೆಯಲ್ಲಿ ಮಲಗಿದ್ದರಿಂದ ಮಾತ್ರ ಬದುಕುಳಿದ್ದರು. ರಾಮ್ ಭರೋಸ್ ಅವರು ನೆರೆಯ ಮನೆಯಲ್ಲಿದ್ದ ಕಾರಣ ಜೀವ ಉಳಿಸಿಕೊಂಡಿದ್ದರು.

ತನ್ನ ಏಳು ಮಂದಿಯ ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುವ ಮಹೇಂದ್ರ ಅವರು, “ಸರ್ಕಾರವು ಪ್ರತಿ ಸಂತ್ರಸ್ತ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವ ಭರವಸೆ ನೀಡಿತು. ನಾನು 18 ನೇ ವರ್ಷಕ್ಕೆ ಕಾಲಿಟ್ಟಾಗಿನಿಂದ ಆ ಕೆಲಸವನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ. ನಾನು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ನನ್ನನ್ನು ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಅಲೆಸಲಾಯಿತು” ಎಂದು ಅಳಲು ತೋಡಿಕೊಂಡಿದ್ದಾರೆ.

(ಪೂರ್ಣ ವರದಿಗಾಗಿ ‘ಇಲ್ಲಿ’ ಕ್ಲಿಕ್ ಮಾಡಿರಿ)

ವರದಿ ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...