Homeದಲಿತ್ ಫೈಲ್ಸ್ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

- Advertisement -
- Advertisement -

ಉತ್ತರಪ್ರದೇಶದ ಫಿರೋಜಾಬಾದ್‌ ಜಿಲ್ಲೆಯ ಸಾಧುಪುರ್‌‌ ಗ್ರಾಮದಲ್ಲಿ 1981 ಇಸವಿಯಲ್ಲಿ ನಡೆದ ಘಟನೆ ಇದು. ಏಕಾಏಕಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ದಲಿತರ ಜೀವಗಳು ಹಾರಿಹೋಗಿದ್ದವು. ಆದರೆ ಪ್ರಕರಣ ನಡೆದು 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿದೆ.

ಪ್ರಕರಣ ಸವೆಸಿದ ಹಾದಿಯ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ವಿಸ್ತೃತವಾಗಿ ವರದಿ ಮಾಡಿದೆ. ಪ್ರಕರಣದ ಏಳುಬೀಳಿನಲ್ಲಿ ನೊಂದ ದಲಿತರ ತ್ರಾಸದಾಯಕ ಪಯಣವನ್ನು ವರದಿ ತೆರೆದಿಟ್ಟಿದೆ.

1981ರ ಡಿಸೆಂಬರ್‌ 30ನೇ ತಾರೀಕು. ಮೈನ್‌ಪುರಿ ಜಿಲ್ಲೆಗೆ ಸೇರಿದ, ಈಗ ಫಿರೋಜಾಬಾದ್‌ಗೆ ಒಳಪಟ್ಟಿರುವ ಸಾಧುಪುರ್ ಗ್ರಾಮದಲ್ಲಿ ಅಂದು ಸಂಜೆ 6 ಗಂಟೆಯಲ್ಲಿ ಭೀಕರ ದಾಳಿ ನಡೆದಿತ್ತು. 30ರ ಹರೆಯದ ಪ್ರೇಮಾವತಿ, ತನ್ನ 14 ವರ್ಷದ ಮಗಳು ಸುಖದೇವಿ ಅವರೊಂದಿಗೆ ರೊಟ್ಟಿಗಳನ್ನು ತಟ್ಟುತ್ತಿದ್ದರು. ಪ್ರೇಮಾವತಿ ಅವರ ಮಕ್ಕಳಾದ  ಹರಿಶಂಕರ್ (12), ಕೈಲಾಶ್  8 ಅಡುಗೆ ಮನೆಯಲ್ಲಿ ಕುಳಿತ್ತಿದ್ದರು.

ಇದ್ದಕ್ಕಿದ್ದಂತೆ, ಇಬ್ಬರು ಪುರುಷರು ಅಡುಗೆಮನೆಗೆ ಪ್ರವೇಶಿಸಿದರು. ಪೊಲೀಸ್‌ ಸಮವಸ್ತ್ರದಲ್ಲಿದ್ದ ಮೂರನೇ ವ್ಯಕ್ತಿ ಮುಖ್ಯ ಬಾಗಿಲಿನ ಹೊರಗೆ ಕವಾಲಾಗಿ ನಿಂತಿದ್ದ. ಐದು ನಿಮಿಷಗಳ ಕಾಲ ಇಬ್ಬರು ವ್ಯಕ್ತಿಗಳು ಮನಬಂದಂತೆ ಗುಂಡು ಹಾರಿಸಿದರು. ಸುಖದೇವಿ ಹೊಟ್ಟೆಗೆ, ಹರಿಶಂಕರ್ ಕುತ್ತಿಗೆಗೆ ಮತ್ತು ಕೈಲಾಶ್‌ನ ಎದೆ ಮತ್ತು ಹೊಟ್ಟೆಗೆ ಗುಂಡು ತಗುಲಿದವು. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದರು.

ಹೇಗೋ ಪ್ರೇಮಾವತಿ ಬದುಕುಳಿದಿದ್ದಳು. ಕಾಲಿಗೆ ಗುಂಡು ತಗುಲಿದ್ದರಿಂದ ವಾಕಿಂಗ್ ಸ್ಟಿಕ್ ಅವರಿಗೆ ಕಾಯಂ ಆಯಿತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಮಂದಿ ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರೂ ಸೇರಿದಂತೆ 10 ಜನರನ್ನು ಈ ಸರಣಿಯಲ್ಲಿ ಕಗ್ಗೊಲೆ ಮಾಡಿದ್ದರು.

ಸುಮಾರು 42 ವರ್ಷಗಳ ಹಿಂದೆ ನಡೆದ ಪ್ರಕರಣವಿದು. 1989ರಲ್ಲಿ ಹೊಸ ಜಿಲ್ಲೆಯ ರಚನೆ ಆಯಿತು. ಹೊಸ ಜಿಲ್ಲೆಯಲ್ಲಿ ಸುಮಾರು 32 ವರ್ಷ ನ್ಯಾಯಕ್ಕಾಗಿ ಕಾಯಬೇಕಾಯಿತು. ಫಿರೋಜಾಬಾದ್ ನ್ಯಾಯಾಲಯವು ಕಳೆದ ಮೇ 31 ರಂದು ಸಾಧುಪುರ್‌ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಪ್ರಕಟಿಸಿದೆ. ವಿಚಾರಣೆ ನಡೆಯುವ ವೇಳೆಯಲ್ಲಿಯೇ ಇಬ್ಬರು ಆರೋಪಿಗಳು (ಅನಾರ್ ಮತ್ತು ಜಪಾನ್ ಸಿಂಗ್) ನಿಧನರಾಗಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 307 (ಕೊಲೆಗೆ ಯತ್ನ) ಅಡಿಯಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ 90 ವರ್ಷದ ಗಂಗಾ ದಯಾಳ್‌ಗೆ ಜೀವಾವಧಿ ಶಿಕ್ಷೆ, 50,000 ರೂಪಾಯಿ ದಂಡ ವಿಧಿಸಲಾಗಿದೆ.

“ಇದು ನ್ಯಾಯವೆಂದು ಕಾಣುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಸವೆಸಿದೆ. ನನಗೆ ಈಗ ನ್ಯಾಯ ಸಿಗುತ್ತದೆಯೇ?”- ಸುಮಾರು ನಾಲ್ಕು ದಶಕಗಳ ಹಿಂದೆ ತನ್ನ ಮಕ್ಕಳನ್ನು ಕಳೆದುಕೊಂಡ, ಈಗ 72 ವರ್ಷದವರಾಗಿರುವ ಪ್ರೇಮಾವತಿಯವರು ಪತಿ ರಾಮ್ ಭರೋಸ್ (82) ಪಕ್ಕದಲ್ಲಿ ಕುಳಿತು ಹೀಗೆ ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತರ ಪರ ವಾದ ಮಂಡಿಸಿದ ಫಿರೋಜಾಬಾದ್ ಜಿಲ್ಲಾ ಪ್ರಧಾನ ವಕೀಲ ರಾಜೀವ್ ಉಪಾಧ್ಯಾಯ ಪ್ರತಿಕ್ರಿಯಿಸಿ, “1989ರಲ್ಲಿ ಹೊಸ ಜಿಲ್ಲೆ ರಚನೆಯಾದ ಕಾರಣ ವಿಚಾರಣೆ ಎಲ್ಲಿ ನಡೆಯಬೇಕು ಎಂದು ನಿರ್ಧರಿಸಲು ಸಾಕಷ್ಟು ಸಮಯ ವ್ಯಯಿಸಿದ್ದರಿಂದ ತೀರ್ಪು ವಿಳಂಬವಾಯಿತು” ಎಂದಿದ್ದಾರೆ.

“ಈ ಘಟನೆ ಸಂಭವಿಸಿದಾಗ, ಶಿಕೋಹಾಬಾದ್ ಪೊಲೀಸ್ ಠಾಣೆ (ಸಾಧುಪುರ್‌ ಗ್ರಾಮ ಈ ಠಾಣೆ ವ್ಯಾಪ್ತಿಗೆ ಸೇರಿದೆ) ಮೈನ್‌ಪುರಿ ಜಿಲ್ಲೆಯಲ್ಲಿತ್ತು. 1989ರಲ್ಲಿ, ಫಿರೋಜಾಬಾದ್ ಜಿಲ್ಲೆಯನ್ನು ರಚಿಸಲಾಯಿತು. ಶಿಕೋಹಾಬಾದ್ ಹೊಸ ಜಿಲ್ಲೆಯ ಭಾಗವಾಯಿತು. ಪ್ರಕರಣವು ಈಗಾಗಲೇ ಮೈನ್‌ಪುರಿ ಜಿಲ್ಲೆಯಲ್ಲಿ ಪ್ರಾರಂಭವಾಗಿರುವುದರಿಂದ, ಯಾವ ಜಿಲ್ಲಾ ನ್ಯಾಯಾಲಯವು ಈ ವಿಷಯವನ್ನು ಆಲಿಸಬೇಕು ಎಂಬುದರ ಕುರಿತು ವಾದಗಳು ಇದ್ದವು” ಎನ್ನುತ್ತಾರೆ ಉಪಾಧ್ಯಾಯ.

“(ಅಲಹಾಬಾದ್) ಹೈಕೋರ್ಟ್ ಫಿರೋಜಾಬಾದ್ ನ್ಯಾಯಾಲಯವನ್ನು ಆಯ್ಕೆ ಮಾಡುವ ಮೊದಲು ಸ್ವಲ್ಪ ಸಮಯವಾಗಿತ್ತು. ಆ ನಂತರವೂ ಆರೋಪಿಗಳು ಕಾಲಾವಕಾಶ ಕೋರುತ್ತಲೇ ಇದ್ದರು. ಇದು ಪ್ರಕರಣವನ್ನು ಮತ್ತಷ್ಟು ವಿಳಂಬಗೊಳಿಸಿತು” ಎಂದಿದ್ದಾರೆ.

ಇದನ್ನೂ ಓದಿರಿ: ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

ಅಂದಿನ ಘಟನೆಯನ್ನು ನೆನಪಿಸಿಕೊಂಡಿರುವ ಪ್ರೇಮಾವತಿ, “ಎಲ್ಲವೂ ತುಂಬಾ ವೇಗವಾಗಿ ನಡೆಯಿತು. ಒಂದು ಕ್ಷಣ, ಏನಾಗುತ್ತಿದೆ ಎಂದು ನನಗೆ ಅರ್ಥವಾಗಲಿಲ್ಲ. ನಾನು ಸಂಪೂರ್ಣವಾಗಿ ಪ್ರಜ್ಞೆ ಕಳೆದುಕೊಂಡಿದ್ದೆ. ಕಾಲಿಗೆ ಗುಂಡು ತಗುಲಿದ್ದರೂ ನನಗೆ ಯಾವುದೇ ನೋವು ಆಗಲಿಲ್ಲ. ಆಗಷ್ಟೇ ಗುಂಡಿನ ದಾಳಿ ಆರಂಭಿಸಿದ್ದರು. ಅವರು ನಮ್ಮನ್ನು ಯಾವುದೇ ವಿಚಾರ ಕೇಳಲಿಲ್ಲ. ಅವರು ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ” ಎಂದು ನೆನೆದಿದ್ದಾರೆ.

ಅಂದು ಪ್ರೇಮಾವತಿಯವರ ಅರ್ಧದಷ್ಟು ಕುಟುಂಬ ಬಲಿಯಾಗಿತ್ತು. ಬದುಕುಳಿದವರು ರಾಮ್ ಭರೋಸ್, ಪ್ರೇಮಾವತಿ ಮತ್ತು ಅವರ ಮಗ ಮಹೇಂದ್ರ ಸಿಂಗ್ (ಆಗ ಕೇವಲ 2 ವರ್ಷದ ಮಗು). ಈಗ 44 ವರ್ಷ ವಯಸ್ಸಿನವರಾದ ಮಹೇಂದ್ರ ಅವರು ಆ ಸಂಜೆ ಮತ್ತೊಂದು ಕೋಣೆಯಲ್ಲಿ ಮಲಗಿದ್ದರಿಂದ ಮಾತ್ರ ಬದುಕುಳಿದ್ದರು. ರಾಮ್ ಭರೋಸ್ ಅವರು ನೆರೆಯ ಮನೆಯಲ್ಲಿದ್ದ ಕಾರಣ ಜೀವ ಉಳಿಸಿಕೊಂಡಿದ್ದರು.

ತನ್ನ ಏಳು ಮಂದಿಯ ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುವ ಮಹೇಂದ್ರ ಅವರು, “ಸರ್ಕಾರವು ಪ್ರತಿ ಸಂತ್ರಸ್ತ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವ ಭರವಸೆ ನೀಡಿತು. ನಾನು 18 ನೇ ವರ್ಷಕ್ಕೆ ಕಾಲಿಟ್ಟಾಗಿನಿಂದ ಆ ಕೆಲಸವನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ. ನಾನು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ನನ್ನನ್ನು ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಅಲೆಸಲಾಯಿತು” ಎಂದು ಅಳಲು ತೋಡಿಕೊಂಡಿದ್ದಾರೆ.

(ಪೂರ್ಣ ವರದಿಗಾಗಿ ‘ಇಲ್ಲಿ’ ಕ್ಲಿಕ್ ಮಾಡಿರಿ)

ವರದಿ ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...