Homeದಲಿತ್ ಫೈಲ್ಸ್ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

- Advertisement -
- Advertisement -

ಉತ್ತರಪ್ರದೇಶದ ಫಿರೋಜಾಬಾದ್‌ ಜಿಲ್ಲೆಯ ಸಾಧುಪುರ್‌‌ ಗ್ರಾಮದಲ್ಲಿ 1981 ಇಸವಿಯಲ್ಲಿ ನಡೆದ ಘಟನೆ ಇದು. ಏಕಾಏಕಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ದಲಿತರ ಜೀವಗಳು ಹಾರಿಹೋಗಿದ್ದವು. ಆದರೆ ಪ್ರಕರಣ ನಡೆದು 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿದೆ.

ಪ್ರಕರಣ ಸವೆಸಿದ ಹಾದಿಯ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ವಿಸ್ತೃತವಾಗಿ ವರದಿ ಮಾಡಿದೆ. ಪ್ರಕರಣದ ಏಳುಬೀಳಿನಲ್ಲಿ ನೊಂದ ದಲಿತರ ತ್ರಾಸದಾಯಕ ಪಯಣವನ್ನು ವರದಿ ತೆರೆದಿಟ್ಟಿದೆ.

1981ರ ಡಿಸೆಂಬರ್‌ 30ನೇ ತಾರೀಕು. ಮೈನ್‌ಪುರಿ ಜಿಲ್ಲೆಗೆ ಸೇರಿದ, ಈಗ ಫಿರೋಜಾಬಾದ್‌ಗೆ ಒಳಪಟ್ಟಿರುವ ಸಾಧುಪುರ್ ಗ್ರಾಮದಲ್ಲಿ ಅಂದು ಸಂಜೆ 6 ಗಂಟೆಯಲ್ಲಿ ಭೀಕರ ದಾಳಿ ನಡೆದಿತ್ತು. 30ರ ಹರೆಯದ ಪ್ರೇಮಾವತಿ, ತನ್ನ 14 ವರ್ಷದ ಮಗಳು ಸುಖದೇವಿ ಅವರೊಂದಿಗೆ ರೊಟ್ಟಿಗಳನ್ನು ತಟ್ಟುತ್ತಿದ್ದರು. ಪ್ರೇಮಾವತಿ ಅವರ ಮಕ್ಕಳಾದ  ಹರಿಶಂಕರ್ (12), ಕೈಲಾಶ್  8 ಅಡುಗೆ ಮನೆಯಲ್ಲಿ ಕುಳಿತ್ತಿದ್ದರು.

ಇದ್ದಕ್ಕಿದ್ದಂತೆ, ಇಬ್ಬರು ಪುರುಷರು ಅಡುಗೆಮನೆಗೆ ಪ್ರವೇಶಿಸಿದರು. ಪೊಲೀಸ್‌ ಸಮವಸ್ತ್ರದಲ್ಲಿದ್ದ ಮೂರನೇ ವ್ಯಕ್ತಿ ಮುಖ್ಯ ಬಾಗಿಲಿನ ಹೊರಗೆ ಕವಾಲಾಗಿ ನಿಂತಿದ್ದ. ಐದು ನಿಮಿಷಗಳ ಕಾಲ ಇಬ್ಬರು ವ್ಯಕ್ತಿಗಳು ಮನಬಂದಂತೆ ಗುಂಡು ಹಾರಿಸಿದರು. ಸುಖದೇವಿ ಹೊಟ್ಟೆಗೆ, ಹರಿಶಂಕರ್ ಕುತ್ತಿಗೆಗೆ ಮತ್ತು ಕೈಲಾಶ್‌ನ ಎದೆ ಮತ್ತು ಹೊಟ್ಟೆಗೆ ಗುಂಡು ತಗುಲಿದವು. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದರು.

ಹೇಗೋ ಪ್ರೇಮಾವತಿ ಬದುಕುಳಿದಿದ್ದಳು. ಕಾಲಿಗೆ ಗುಂಡು ತಗುಲಿದ್ದರಿಂದ ವಾಕಿಂಗ್ ಸ್ಟಿಕ್ ಅವರಿಗೆ ಕಾಯಂ ಆಯಿತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಮಂದಿ ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರೂ ಸೇರಿದಂತೆ 10 ಜನರನ್ನು ಈ ಸರಣಿಯಲ್ಲಿ ಕಗ್ಗೊಲೆ ಮಾಡಿದ್ದರು.

ಸುಮಾರು 42 ವರ್ಷಗಳ ಹಿಂದೆ ನಡೆದ ಪ್ರಕರಣವಿದು. 1989ರಲ್ಲಿ ಹೊಸ ಜಿಲ್ಲೆಯ ರಚನೆ ಆಯಿತು. ಹೊಸ ಜಿಲ್ಲೆಯಲ್ಲಿ ಸುಮಾರು 32 ವರ್ಷ ನ್ಯಾಯಕ್ಕಾಗಿ ಕಾಯಬೇಕಾಯಿತು. ಫಿರೋಜಾಬಾದ್ ನ್ಯಾಯಾಲಯವು ಕಳೆದ ಮೇ 31 ರಂದು ಸಾಧುಪುರ್‌ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಪ್ರಕಟಿಸಿದೆ. ವಿಚಾರಣೆ ನಡೆಯುವ ವೇಳೆಯಲ್ಲಿಯೇ ಇಬ್ಬರು ಆರೋಪಿಗಳು (ಅನಾರ್ ಮತ್ತು ಜಪಾನ್ ಸಿಂಗ್) ನಿಧನರಾಗಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 307 (ಕೊಲೆಗೆ ಯತ್ನ) ಅಡಿಯಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ 90 ವರ್ಷದ ಗಂಗಾ ದಯಾಳ್‌ಗೆ ಜೀವಾವಧಿ ಶಿಕ್ಷೆ, 50,000 ರೂಪಾಯಿ ದಂಡ ವಿಧಿಸಲಾಗಿದೆ.

“ಇದು ನ್ಯಾಯವೆಂದು ಕಾಣುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಸವೆಸಿದೆ. ನನಗೆ ಈಗ ನ್ಯಾಯ ಸಿಗುತ್ತದೆಯೇ?”- ಸುಮಾರು ನಾಲ್ಕು ದಶಕಗಳ ಹಿಂದೆ ತನ್ನ ಮಕ್ಕಳನ್ನು ಕಳೆದುಕೊಂಡ, ಈಗ 72 ವರ್ಷದವರಾಗಿರುವ ಪ್ರೇಮಾವತಿಯವರು ಪತಿ ರಾಮ್ ಭರೋಸ್ (82) ಪಕ್ಕದಲ್ಲಿ ಕುಳಿತು ಹೀಗೆ ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತರ ಪರ ವಾದ ಮಂಡಿಸಿದ ಫಿರೋಜಾಬಾದ್ ಜಿಲ್ಲಾ ಪ್ರಧಾನ ವಕೀಲ ರಾಜೀವ್ ಉಪಾಧ್ಯಾಯ ಪ್ರತಿಕ್ರಿಯಿಸಿ, “1989ರಲ್ಲಿ ಹೊಸ ಜಿಲ್ಲೆ ರಚನೆಯಾದ ಕಾರಣ ವಿಚಾರಣೆ ಎಲ್ಲಿ ನಡೆಯಬೇಕು ಎಂದು ನಿರ್ಧರಿಸಲು ಸಾಕಷ್ಟು ಸಮಯ ವ್ಯಯಿಸಿದ್ದರಿಂದ ತೀರ್ಪು ವಿಳಂಬವಾಯಿತು” ಎಂದಿದ್ದಾರೆ.

“ಈ ಘಟನೆ ಸಂಭವಿಸಿದಾಗ, ಶಿಕೋಹಾಬಾದ್ ಪೊಲೀಸ್ ಠಾಣೆ (ಸಾಧುಪುರ್‌ ಗ್ರಾಮ ಈ ಠಾಣೆ ವ್ಯಾಪ್ತಿಗೆ ಸೇರಿದೆ) ಮೈನ್‌ಪುರಿ ಜಿಲ್ಲೆಯಲ್ಲಿತ್ತು. 1989ರಲ್ಲಿ, ಫಿರೋಜಾಬಾದ್ ಜಿಲ್ಲೆಯನ್ನು ರಚಿಸಲಾಯಿತು. ಶಿಕೋಹಾಬಾದ್ ಹೊಸ ಜಿಲ್ಲೆಯ ಭಾಗವಾಯಿತು. ಪ್ರಕರಣವು ಈಗಾಗಲೇ ಮೈನ್‌ಪುರಿ ಜಿಲ್ಲೆಯಲ್ಲಿ ಪ್ರಾರಂಭವಾಗಿರುವುದರಿಂದ, ಯಾವ ಜಿಲ್ಲಾ ನ್ಯಾಯಾಲಯವು ಈ ವಿಷಯವನ್ನು ಆಲಿಸಬೇಕು ಎಂಬುದರ ಕುರಿತು ವಾದಗಳು ಇದ್ದವು” ಎನ್ನುತ್ತಾರೆ ಉಪಾಧ್ಯಾಯ.

“(ಅಲಹಾಬಾದ್) ಹೈಕೋರ್ಟ್ ಫಿರೋಜಾಬಾದ್ ನ್ಯಾಯಾಲಯವನ್ನು ಆಯ್ಕೆ ಮಾಡುವ ಮೊದಲು ಸ್ವಲ್ಪ ಸಮಯವಾಗಿತ್ತು. ಆ ನಂತರವೂ ಆರೋಪಿಗಳು ಕಾಲಾವಕಾಶ ಕೋರುತ್ತಲೇ ಇದ್ದರು. ಇದು ಪ್ರಕರಣವನ್ನು ಮತ್ತಷ್ಟು ವಿಳಂಬಗೊಳಿಸಿತು” ಎಂದಿದ್ದಾರೆ.

ಇದನ್ನೂ ಓದಿರಿ: ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

ಅಂದಿನ ಘಟನೆಯನ್ನು ನೆನಪಿಸಿಕೊಂಡಿರುವ ಪ್ರೇಮಾವತಿ, “ಎಲ್ಲವೂ ತುಂಬಾ ವೇಗವಾಗಿ ನಡೆಯಿತು. ಒಂದು ಕ್ಷಣ, ಏನಾಗುತ್ತಿದೆ ಎಂದು ನನಗೆ ಅರ್ಥವಾಗಲಿಲ್ಲ. ನಾನು ಸಂಪೂರ್ಣವಾಗಿ ಪ್ರಜ್ಞೆ ಕಳೆದುಕೊಂಡಿದ್ದೆ. ಕಾಲಿಗೆ ಗುಂಡು ತಗುಲಿದ್ದರೂ ನನಗೆ ಯಾವುದೇ ನೋವು ಆಗಲಿಲ್ಲ. ಆಗಷ್ಟೇ ಗುಂಡಿನ ದಾಳಿ ಆರಂಭಿಸಿದ್ದರು. ಅವರು ನಮ್ಮನ್ನು ಯಾವುದೇ ವಿಚಾರ ಕೇಳಲಿಲ್ಲ. ಅವರು ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ” ಎಂದು ನೆನೆದಿದ್ದಾರೆ.

ಅಂದು ಪ್ರೇಮಾವತಿಯವರ ಅರ್ಧದಷ್ಟು ಕುಟುಂಬ ಬಲಿಯಾಗಿತ್ತು. ಬದುಕುಳಿದವರು ರಾಮ್ ಭರೋಸ್, ಪ್ರೇಮಾವತಿ ಮತ್ತು ಅವರ ಮಗ ಮಹೇಂದ್ರ ಸಿಂಗ್ (ಆಗ ಕೇವಲ 2 ವರ್ಷದ ಮಗು). ಈಗ 44 ವರ್ಷ ವಯಸ್ಸಿನವರಾದ ಮಹೇಂದ್ರ ಅವರು ಆ ಸಂಜೆ ಮತ್ತೊಂದು ಕೋಣೆಯಲ್ಲಿ ಮಲಗಿದ್ದರಿಂದ ಮಾತ್ರ ಬದುಕುಳಿದ್ದರು. ರಾಮ್ ಭರೋಸ್ ಅವರು ನೆರೆಯ ಮನೆಯಲ್ಲಿದ್ದ ಕಾರಣ ಜೀವ ಉಳಿಸಿಕೊಂಡಿದ್ದರು.

ತನ್ನ ಏಳು ಮಂದಿಯ ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುವ ಮಹೇಂದ್ರ ಅವರು, “ಸರ್ಕಾರವು ಪ್ರತಿ ಸಂತ್ರಸ್ತ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವ ಭರವಸೆ ನೀಡಿತು. ನಾನು 18 ನೇ ವರ್ಷಕ್ಕೆ ಕಾಲಿಟ್ಟಾಗಿನಿಂದ ಆ ಕೆಲಸವನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ. ನಾನು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ನನ್ನನ್ನು ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಅಲೆಸಲಾಯಿತು” ಎಂದು ಅಳಲು ತೋಡಿಕೊಂಡಿದ್ದಾರೆ.

(ಪೂರ್ಣ ವರದಿಗಾಗಿ ‘ಇಲ್ಲಿ’ ಕ್ಲಿಕ್ ಮಾಡಿರಿ)

ವರದಿ ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...