Homeದಲಿತ್ ಫೈಲ್ಸ್ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

- Advertisement -
- Advertisement -

ಉತ್ತರಪ್ರದೇಶದ ಫಿರೋಜಾಬಾದ್‌ ಜಿಲ್ಲೆಯ ಸಾಧುಪುರ್‌‌ ಗ್ರಾಮದಲ್ಲಿ 1981 ಇಸವಿಯಲ್ಲಿ ನಡೆದ ಘಟನೆ ಇದು. ಏಕಾಏಕಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ದಲಿತರ ಜೀವಗಳು ಹಾರಿಹೋಗಿದ್ದವು. ಆದರೆ ಪ್ರಕರಣ ನಡೆದು 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿದೆ.

ಪ್ರಕರಣ ಸವೆಸಿದ ಹಾದಿಯ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ವಿಸ್ತೃತವಾಗಿ ವರದಿ ಮಾಡಿದೆ. ಪ್ರಕರಣದ ಏಳುಬೀಳಿನಲ್ಲಿ ನೊಂದ ದಲಿತರ ತ್ರಾಸದಾಯಕ ಪಯಣವನ್ನು ವರದಿ ತೆರೆದಿಟ್ಟಿದೆ.

1981ರ ಡಿಸೆಂಬರ್‌ 30ನೇ ತಾರೀಕು. ಮೈನ್‌ಪುರಿ ಜಿಲ್ಲೆಗೆ ಸೇರಿದ, ಈಗ ಫಿರೋಜಾಬಾದ್‌ಗೆ ಒಳಪಟ್ಟಿರುವ ಸಾಧುಪುರ್ ಗ್ರಾಮದಲ್ಲಿ ಅಂದು ಸಂಜೆ 6 ಗಂಟೆಯಲ್ಲಿ ಭೀಕರ ದಾಳಿ ನಡೆದಿತ್ತು. 30ರ ಹರೆಯದ ಪ್ರೇಮಾವತಿ, ತನ್ನ 14 ವರ್ಷದ ಮಗಳು ಸುಖದೇವಿ ಅವರೊಂದಿಗೆ ರೊಟ್ಟಿಗಳನ್ನು ತಟ್ಟುತ್ತಿದ್ದರು. ಪ್ರೇಮಾವತಿ ಅವರ ಮಕ್ಕಳಾದ  ಹರಿಶಂಕರ್ (12), ಕೈಲಾಶ್  8 ಅಡುಗೆ ಮನೆಯಲ್ಲಿ ಕುಳಿತ್ತಿದ್ದರು.

ಇದ್ದಕ್ಕಿದ್ದಂತೆ, ಇಬ್ಬರು ಪುರುಷರು ಅಡುಗೆಮನೆಗೆ ಪ್ರವೇಶಿಸಿದರು. ಪೊಲೀಸ್‌ ಸಮವಸ್ತ್ರದಲ್ಲಿದ್ದ ಮೂರನೇ ವ್ಯಕ್ತಿ ಮುಖ್ಯ ಬಾಗಿಲಿನ ಹೊರಗೆ ಕವಾಲಾಗಿ ನಿಂತಿದ್ದ. ಐದು ನಿಮಿಷಗಳ ಕಾಲ ಇಬ್ಬರು ವ್ಯಕ್ತಿಗಳು ಮನಬಂದಂತೆ ಗುಂಡು ಹಾರಿಸಿದರು. ಸುಖದೇವಿ ಹೊಟ್ಟೆಗೆ, ಹರಿಶಂಕರ್ ಕುತ್ತಿಗೆಗೆ ಮತ್ತು ಕೈಲಾಶ್‌ನ ಎದೆ ಮತ್ತು ಹೊಟ್ಟೆಗೆ ಗುಂಡು ತಗುಲಿದವು. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದರು.

ಹೇಗೋ ಪ್ರೇಮಾವತಿ ಬದುಕುಳಿದಿದ್ದಳು. ಕಾಲಿಗೆ ಗುಂಡು ತಗುಲಿದ್ದರಿಂದ ವಾಕಿಂಗ್ ಸ್ಟಿಕ್ ಅವರಿಗೆ ಕಾಯಂ ಆಯಿತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಮಂದಿ ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರೂ ಸೇರಿದಂತೆ 10 ಜನರನ್ನು ಈ ಸರಣಿಯಲ್ಲಿ ಕಗ್ಗೊಲೆ ಮಾಡಿದ್ದರು.

ಸುಮಾರು 42 ವರ್ಷಗಳ ಹಿಂದೆ ನಡೆದ ಪ್ರಕರಣವಿದು. 1989ರಲ್ಲಿ ಹೊಸ ಜಿಲ್ಲೆಯ ರಚನೆ ಆಯಿತು. ಹೊಸ ಜಿಲ್ಲೆಯಲ್ಲಿ ಸುಮಾರು 32 ವರ್ಷ ನ್ಯಾಯಕ್ಕಾಗಿ ಕಾಯಬೇಕಾಯಿತು. ಫಿರೋಜಾಬಾದ್ ನ್ಯಾಯಾಲಯವು ಕಳೆದ ಮೇ 31 ರಂದು ಸಾಧುಪುರ್‌ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಪ್ರಕಟಿಸಿದೆ. ವಿಚಾರಣೆ ನಡೆಯುವ ವೇಳೆಯಲ್ಲಿಯೇ ಇಬ್ಬರು ಆರೋಪಿಗಳು (ಅನಾರ್ ಮತ್ತು ಜಪಾನ್ ಸಿಂಗ್) ನಿಧನರಾಗಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 307 (ಕೊಲೆಗೆ ಯತ್ನ) ಅಡಿಯಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ 90 ವರ್ಷದ ಗಂಗಾ ದಯಾಳ್‌ಗೆ ಜೀವಾವಧಿ ಶಿಕ್ಷೆ, 50,000 ರೂಪಾಯಿ ದಂಡ ವಿಧಿಸಲಾಗಿದೆ.

“ಇದು ನ್ಯಾಯವೆಂದು ಕಾಣುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಸವೆಸಿದೆ. ನನಗೆ ಈಗ ನ್ಯಾಯ ಸಿಗುತ್ತದೆಯೇ?”- ಸುಮಾರು ನಾಲ್ಕು ದಶಕಗಳ ಹಿಂದೆ ತನ್ನ ಮಕ್ಕಳನ್ನು ಕಳೆದುಕೊಂಡ, ಈಗ 72 ವರ್ಷದವರಾಗಿರುವ ಪ್ರೇಮಾವತಿಯವರು ಪತಿ ರಾಮ್ ಭರೋಸ್ (82) ಪಕ್ಕದಲ್ಲಿ ಕುಳಿತು ಹೀಗೆ ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತರ ಪರ ವಾದ ಮಂಡಿಸಿದ ಫಿರೋಜಾಬಾದ್ ಜಿಲ್ಲಾ ಪ್ರಧಾನ ವಕೀಲ ರಾಜೀವ್ ಉಪಾಧ್ಯಾಯ ಪ್ರತಿಕ್ರಿಯಿಸಿ, “1989ರಲ್ಲಿ ಹೊಸ ಜಿಲ್ಲೆ ರಚನೆಯಾದ ಕಾರಣ ವಿಚಾರಣೆ ಎಲ್ಲಿ ನಡೆಯಬೇಕು ಎಂದು ನಿರ್ಧರಿಸಲು ಸಾಕಷ್ಟು ಸಮಯ ವ್ಯಯಿಸಿದ್ದರಿಂದ ತೀರ್ಪು ವಿಳಂಬವಾಯಿತು” ಎಂದಿದ್ದಾರೆ.

“ಈ ಘಟನೆ ಸಂಭವಿಸಿದಾಗ, ಶಿಕೋಹಾಬಾದ್ ಪೊಲೀಸ್ ಠಾಣೆ (ಸಾಧುಪುರ್‌ ಗ್ರಾಮ ಈ ಠಾಣೆ ವ್ಯಾಪ್ತಿಗೆ ಸೇರಿದೆ) ಮೈನ್‌ಪುರಿ ಜಿಲ್ಲೆಯಲ್ಲಿತ್ತು. 1989ರಲ್ಲಿ, ಫಿರೋಜಾಬಾದ್ ಜಿಲ್ಲೆಯನ್ನು ರಚಿಸಲಾಯಿತು. ಶಿಕೋಹಾಬಾದ್ ಹೊಸ ಜಿಲ್ಲೆಯ ಭಾಗವಾಯಿತು. ಪ್ರಕರಣವು ಈಗಾಗಲೇ ಮೈನ್‌ಪುರಿ ಜಿಲ್ಲೆಯಲ್ಲಿ ಪ್ರಾರಂಭವಾಗಿರುವುದರಿಂದ, ಯಾವ ಜಿಲ್ಲಾ ನ್ಯಾಯಾಲಯವು ಈ ವಿಷಯವನ್ನು ಆಲಿಸಬೇಕು ಎಂಬುದರ ಕುರಿತು ವಾದಗಳು ಇದ್ದವು” ಎನ್ನುತ್ತಾರೆ ಉಪಾಧ್ಯಾಯ.

“(ಅಲಹಾಬಾದ್) ಹೈಕೋರ್ಟ್ ಫಿರೋಜಾಬಾದ್ ನ್ಯಾಯಾಲಯವನ್ನು ಆಯ್ಕೆ ಮಾಡುವ ಮೊದಲು ಸ್ವಲ್ಪ ಸಮಯವಾಗಿತ್ತು. ಆ ನಂತರವೂ ಆರೋಪಿಗಳು ಕಾಲಾವಕಾಶ ಕೋರುತ್ತಲೇ ಇದ್ದರು. ಇದು ಪ್ರಕರಣವನ್ನು ಮತ್ತಷ್ಟು ವಿಳಂಬಗೊಳಿಸಿತು” ಎಂದಿದ್ದಾರೆ.

ಇದನ್ನೂ ಓದಿರಿ: ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

ಅಂದಿನ ಘಟನೆಯನ್ನು ನೆನಪಿಸಿಕೊಂಡಿರುವ ಪ್ರೇಮಾವತಿ, “ಎಲ್ಲವೂ ತುಂಬಾ ವೇಗವಾಗಿ ನಡೆಯಿತು. ಒಂದು ಕ್ಷಣ, ಏನಾಗುತ್ತಿದೆ ಎಂದು ನನಗೆ ಅರ್ಥವಾಗಲಿಲ್ಲ. ನಾನು ಸಂಪೂರ್ಣವಾಗಿ ಪ್ರಜ್ಞೆ ಕಳೆದುಕೊಂಡಿದ್ದೆ. ಕಾಲಿಗೆ ಗುಂಡು ತಗುಲಿದ್ದರೂ ನನಗೆ ಯಾವುದೇ ನೋವು ಆಗಲಿಲ್ಲ. ಆಗಷ್ಟೇ ಗುಂಡಿನ ದಾಳಿ ಆರಂಭಿಸಿದ್ದರು. ಅವರು ನಮ್ಮನ್ನು ಯಾವುದೇ ವಿಚಾರ ಕೇಳಲಿಲ್ಲ. ಅವರು ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ” ಎಂದು ನೆನೆದಿದ್ದಾರೆ.

ಅಂದು ಪ್ರೇಮಾವತಿಯವರ ಅರ್ಧದಷ್ಟು ಕುಟುಂಬ ಬಲಿಯಾಗಿತ್ತು. ಬದುಕುಳಿದವರು ರಾಮ್ ಭರೋಸ್, ಪ್ರೇಮಾವತಿ ಮತ್ತು ಅವರ ಮಗ ಮಹೇಂದ್ರ ಸಿಂಗ್ (ಆಗ ಕೇವಲ 2 ವರ್ಷದ ಮಗು). ಈಗ 44 ವರ್ಷ ವಯಸ್ಸಿನವರಾದ ಮಹೇಂದ್ರ ಅವರು ಆ ಸಂಜೆ ಮತ್ತೊಂದು ಕೋಣೆಯಲ್ಲಿ ಮಲಗಿದ್ದರಿಂದ ಮಾತ್ರ ಬದುಕುಳಿದ್ದರು. ರಾಮ್ ಭರೋಸ್ ಅವರು ನೆರೆಯ ಮನೆಯಲ್ಲಿದ್ದ ಕಾರಣ ಜೀವ ಉಳಿಸಿಕೊಂಡಿದ್ದರು.

ತನ್ನ ಏಳು ಮಂದಿಯ ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುವ ಮಹೇಂದ್ರ ಅವರು, “ಸರ್ಕಾರವು ಪ್ರತಿ ಸಂತ್ರಸ್ತ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವ ಭರವಸೆ ನೀಡಿತು. ನಾನು 18 ನೇ ವರ್ಷಕ್ಕೆ ಕಾಲಿಟ್ಟಾಗಿನಿಂದ ಆ ಕೆಲಸವನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ. ನಾನು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ನನ್ನನ್ನು ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಅಲೆಸಲಾಯಿತು” ಎಂದು ಅಳಲು ತೋಡಿಕೊಂಡಿದ್ದಾರೆ.

(ಪೂರ್ಣ ವರದಿಗಾಗಿ ‘ಇಲ್ಲಿ’ ಕ್ಲಿಕ್ ಮಾಡಿರಿ)

ವರದಿ ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....