Homeದಲಿತ್ ಫೈಲ್ಸ್ದಲಿತ ನಾಯಕ ಜಿಗ್ನೇಶ್‌ ಸೇರಿದಂತೆ ಹತ್ತು ಮಂದಿಗೆ ಜೈಲು ಶಿಕ್ಷೆ: ಕೋರ್ಟ್ ತೀರ್ಪು

ದಲಿತ ನಾಯಕ ಜಿಗ್ನೇಶ್‌ ಸೇರಿದಂತೆ ಹತ್ತು ಮಂದಿಗೆ ಜೈಲು ಶಿಕ್ಷೆ: ಕೋರ್ಟ್ ತೀರ್ಪು

- Advertisement -
- Advertisement -

2017ರ ಜುಲೈನಲ್ಲಿ ಮೆಹ್ಸಾನಾ ಪಟ್ಟಣದಿಂದ ಪೊಲೀಸ್ ಅನುಮತಿಯಿಲ್ಲದೆ ರ್‍ಯಾಲಿ ನಡೆಸಿದ ಆರೋಪದ ಮೇಲೆ ದಲಿತ ನಾಯಕ, ವಡ್ಗಾಮ್‌ ಶಾಸಕ ಜಿಗ್ನೇಶ್ ಮೇವಾನಿ, ಕಾಂಗ್ರೆಸ್ ಪಕ್ಷದ ನಾಯಕರಾದ ರೇಷ್ಮಾ ಪಟೇಲ್‌ ಸೇರಿದಂತೆ ಒಟ್ಟು ಹತ್ತು ಮಂದಿಗೆ ಗುಜರಾತ್‌ನ ಮೆಹ್ಸಾನಾದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

ಕಾನೂನು ಬಾಹಿರವಾಗಿ ಸಭೆ ನಡೆಸಲಾಗಿದೆ ಎಂಬ ಆರೋಪವನ್ನು ಎತ್ತಿ ಹಿಡಿದಿರುವ ಕೋರ್ಟ್, ಎಲ್ಲಾ ಅಪರಾಧಿಗಳಿಗೆ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ತಲಾ 1,000 ರೂ. ದಂಡ ವಿಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಜೆಎ ಪರ್ಮಾರ್ ಅವರು ತೀರ್ಪು ನೀಡಿದ್ದು, “ರ್‍ಯಾಲಿ ನಡೆಸುವುದು ಅಪರಾಧವಲ್ಲ. ಆದರೆ ಅನುಮತಿಯಿಲ್ಲದೆ ರ್‍ಯಾಲಿ ನಡೆಸುವುದು ಅಪರಾಧ” ಎಂದು ಅಭಿಪ್ರಾಯಪಟ್ಟಿದ್ದಾರೆ. “ಅವಿಧೇಯತೆಯನ್ನು ಎಂದಿಗೂ ಸಹಿಸಲಾಗುವುದಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

ದಲಿತರ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಖಂಡಿಸಿ ಊನಾದಲ್ಲಿ ನಡೆದ ಬೃಹತ್‌ ಆಂದೋಲನದ ಕರಾಳ ನೆನಪಿಗಾಗಿ ಜುಲೈ 12, 2017ರಂದು ಮೇವಾನಿ ಮತ್ತು ಅವರ ಸಹಚರರು ಮೆಹ್ಸಾನಾದಿಂದ ನೆರೆಯ ಬನಸ್ಕಾಂತ ಜಿಲ್ಲೆಯ ಧನೇರಾಗೆ ‘ಆಜಾದಿ ಕೂಚ್’ ಕಾರ್ಯಕ್ರಮ ನಡೆಸಿದರು.

ಮೇವಾನಿಯವರ ಸಹಚರರಲ್ಲಿ ಒಬ್ಬರಾದ ಕೌಶಿಕ್ ಪರ್ಮಾರ್ ಅವರು, ಮೇವಾನಿ ಅವರು ಸ್ಥಾಪಿಸಿದ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಸಂಘಟನೆಯ ಬ್ಯಾನರ್ ಅಡಿಯಲ್ಲಿ ರ್‍ಯಾಲಿ ನಡೆಸುವುದಾಗಿ ಮೆಹ್ಸಾನಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ ಅವರಿಂದ ಅನುಮತಿ ಕೋರಿದ್ದರು. ಆರಂಭದಲ್ಲಿ ಅನುಮತಿ ನೀಡಲಾಯಿತು. ಬಳಿಕ ಅದನ್ನು ಪ್ರಾಧಿಕಾರ ಹಿಂಪಡೆದರೂ ಸಂಘಟಕರು ರ್‍ಯಾಲಿ ನಡೆಸಿದರು.

10 ಆರೋಪಿಗಳಿಗೆ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಾಲಯ, “ಆರೋಪಿಗಳು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆದೇಶವನ್ನು ಸೂಕ್ತ ಉನ್ನತ ಅಧಿಕಾರಿಗಳ ಮುಂದೆ ಪ್ರಶ್ನಿಸಿ ನಂತರ ಸರಿಯಾದ ಅನುಮತಿ ಪಡೆದು ರ್‍ಯಾಲಿ ನಡೆಸಬೇಕಿತ್ತು” ಎಂದಿದೆ.

ಮೆಹ್ಸಾನಾ ಪೊಲೀಸರು ಮೆರವಣಿಗೆ ನಡೆಸಲು ಅನುಮತಿ ನೀಡದ ಕಾರಣ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 143ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿರಿ: ಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

ರ್‍ಯಾಲಿಯಲ್ಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಅಂದಿನ ನಾಯಕ, ಈಗ ಕಾಂಗ್ರೆಸ್‌ ಸೇರಿರುವ ಕನ್ಹಯ್ಯಾ ಕುಮಾರ್ ಭಾಗವಹಿಸಿದ್ದರು. ಪ್ರಕರಣದ ಆರೋಪಿಗಳಲ್ಲಿ ಇವರೂ ಒಬ್ಬರಾಗಿದ್ದಾರೆ.

ಆದರೆ ಕಳೆದ ವರ್ಷ ಏಪ್ರಿಲ್‌ನಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯವು ವಿಚಾರಣೆ ನಡೆಸುವಾಗ ಕನ್ಹಯ್ಯ ಗೈರುಹಾಜರಾಗಿದ್ದರು. ಅವರು ನ್ಯಾಯಾಲಯಕ್ಕೆ ಹಾಜರಾದಾಗ ಅವರ ವಿರುದ್ಧ ಪ್ರತ್ಯೇಕ ವಿಚಾರಣೆ ನಡೆಸಲು ನ್ಯಾಯಾಲಯ ತೀರ್ಮಾನಿಸಿತು.

ಒಬ್ಬ ಆರೋಪಿ ಸಾವಿಗೀಡಾಗಿದ್ದಾರೆ. ಸಾವಿಗೀಡಾದ ವ್ಯಕ್ತಿ ಹಾಗೂ ಕನ್ಹಯ್ಯ ಕುಮಾರ್‌ ಅವರನ್ನು ಹೊರತುಪಡಿಸಿ ಕಳೆದ ವರ್ಷ ಎಪ್ರಿಲ್‌ನಲ್ಲಿ ಮೇವಾನಿ ಸೇರಿದಂತೆ 10 ಜನರ ವಿರುದ್ಧ ನ್ಯಾಯಾಲಯವು ವಿಚಾರಣೆಯನ್ನು ಪ್ರಾರಂಭಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...