Homeದಲಿತ್ ಫೈಲ್ಸ್ದಲಿತ ನಾಯಕ ಜಿಗ್ನೇಶ್‌ ಸೇರಿದಂತೆ ಹತ್ತು ಮಂದಿಗೆ ಜೈಲು ಶಿಕ್ಷೆ: ಕೋರ್ಟ್ ತೀರ್ಪು

ದಲಿತ ನಾಯಕ ಜಿಗ್ನೇಶ್‌ ಸೇರಿದಂತೆ ಹತ್ತು ಮಂದಿಗೆ ಜೈಲು ಶಿಕ್ಷೆ: ಕೋರ್ಟ್ ತೀರ್ಪು

- Advertisement -
- Advertisement -

2017ರ ಜುಲೈನಲ್ಲಿ ಮೆಹ್ಸಾನಾ ಪಟ್ಟಣದಿಂದ ಪೊಲೀಸ್ ಅನುಮತಿಯಿಲ್ಲದೆ ರ್‍ಯಾಲಿ ನಡೆಸಿದ ಆರೋಪದ ಮೇಲೆ ದಲಿತ ನಾಯಕ, ವಡ್ಗಾಮ್‌ ಶಾಸಕ ಜಿಗ್ನೇಶ್ ಮೇವಾನಿ, ಕಾಂಗ್ರೆಸ್ ಪಕ್ಷದ ನಾಯಕರಾದ ರೇಷ್ಮಾ ಪಟೇಲ್‌ ಸೇರಿದಂತೆ ಒಟ್ಟು ಹತ್ತು ಮಂದಿಗೆ ಗುಜರಾತ್‌ನ ಮೆಹ್ಸಾನಾದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

ಕಾನೂನು ಬಾಹಿರವಾಗಿ ಸಭೆ ನಡೆಸಲಾಗಿದೆ ಎಂಬ ಆರೋಪವನ್ನು ಎತ್ತಿ ಹಿಡಿದಿರುವ ಕೋರ್ಟ್, ಎಲ್ಲಾ ಅಪರಾಧಿಗಳಿಗೆ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ತಲಾ 1,000 ರೂ. ದಂಡ ವಿಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಜೆಎ ಪರ್ಮಾರ್ ಅವರು ತೀರ್ಪು ನೀಡಿದ್ದು, “ರ್‍ಯಾಲಿ ನಡೆಸುವುದು ಅಪರಾಧವಲ್ಲ. ಆದರೆ ಅನುಮತಿಯಿಲ್ಲದೆ ರ್‍ಯಾಲಿ ನಡೆಸುವುದು ಅಪರಾಧ” ಎಂದು ಅಭಿಪ್ರಾಯಪಟ್ಟಿದ್ದಾರೆ. “ಅವಿಧೇಯತೆಯನ್ನು ಎಂದಿಗೂ ಸಹಿಸಲಾಗುವುದಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

ದಲಿತರ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಖಂಡಿಸಿ ಊನಾದಲ್ಲಿ ನಡೆದ ಬೃಹತ್‌ ಆಂದೋಲನದ ಕರಾಳ ನೆನಪಿಗಾಗಿ ಜುಲೈ 12, 2017ರಂದು ಮೇವಾನಿ ಮತ್ತು ಅವರ ಸಹಚರರು ಮೆಹ್ಸಾನಾದಿಂದ ನೆರೆಯ ಬನಸ್ಕಾಂತ ಜಿಲ್ಲೆಯ ಧನೇರಾಗೆ ‘ಆಜಾದಿ ಕೂಚ್’ ಕಾರ್ಯಕ್ರಮ ನಡೆಸಿದರು.

ಮೇವಾನಿಯವರ ಸಹಚರರಲ್ಲಿ ಒಬ್ಬರಾದ ಕೌಶಿಕ್ ಪರ್ಮಾರ್ ಅವರು, ಮೇವಾನಿ ಅವರು ಸ್ಥಾಪಿಸಿದ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಸಂಘಟನೆಯ ಬ್ಯಾನರ್ ಅಡಿಯಲ್ಲಿ ರ್‍ಯಾಲಿ ನಡೆಸುವುದಾಗಿ ಮೆಹ್ಸಾನಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ ಅವರಿಂದ ಅನುಮತಿ ಕೋರಿದ್ದರು. ಆರಂಭದಲ್ಲಿ ಅನುಮತಿ ನೀಡಲಾಯಿತು. ಬಳಿಕ ಅದನ್ನು ಪ್ರಾಧಿಕಾರ ಹಿಂಪಡೆದರೂ ಸಂಘಟಕರು ರ್‍ಯಾಲಿ ನಡೆಸಿದರು.

10 ಆರೋಪಿಗಳಿಗೆ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಾಲಯ, “ಆರೋಪಿಗಳು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆದೇಶವನ್ನು ಸೂಕ್ತ ಉನ್ನತ ಅಧಿಕಾರಿಗಳ ಮುಂದೆ ಪ್ರಶ್ನಿಸಿ ನಂತರ ಸರಿಯಾದ ಅನುಮತಿ ಪಡೆದು ರ್‍ಯಾಲಿ ನಡೆಸಬೇಕಿತ್ತು” ಎಂದಿದೆ.

ಮೆಹ್ಸಾನಾ ಪೊಲೀಸರು ಮೆರವಣಿಗೆ ನಡೆಸಲು ಅನುಮತಿ ನೀಡದ ಕಾರಣ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 143ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿರಿ: ಜಿಗ್ನೇಶ್‌ ಜಾಮೀನು: ಅಸ್ಸಾಂ ಪೊಲೀಸರನ್ನು ಕುಟುಕಿದ ಕೆಳ ನ್ಯಾಯಾಲಯದ ನಡೆಗೆ ಹೈಕೋರ್ಟ್ ಅಸಮ್ಮತಿ

ರ್‍ಯಾಲಿಯಲ್ಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಅಂದಿನ ನಾಯಕ, ಈಗ ಕಾಂಗ್ರೆಸ್‌ ಸೇರಿರುವ ಕನ್ಹಯ್ಯಾ ಕುಮಾರ್ ಭಾಗವಹಿಸಿದ್ದರು. ಪ್ರಕರಣದ ಆರೋಪಿಗಳಲ್ಲಿ ಇವರೂ ಒಬ್ಬರಾಗಿದ್ದಾರೆ.

ಆದರೆ ಕಳೆದ ವರ್ಷ ಏಪ್ರಿಲ್‌ನಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯವು ವಿಚಾರಣೆ ನಡೆಸುವಾಗ ಕನ್ಹಯ್ಯ ಗೈರುಹಾಜರಾಗಿದ್ದರು. ಅವರು ನ್ಯಾಯಾಲಯಕ್ಕೆ ಹಾಜರಾದಾಗ ಅವರ ವಿರುದ್ಧ ಪ್ರತ್ಯೇಕ ವಿಚಾರಣೆ ನಡೆಸಲು ನ್ಯಾಯಾಲಯ ತೀರ್ಮಾನಿಸಿತು.

ಒಬ್ಬ ಆರೋಪಿ ಸಾವಿಗೀಡಾಗಿದ್ದಾರೆ. ಸಾವಿಗೀಡಾದ ವ್ಯಕ್ತಿ ಹಾಗೂ ಕನ್ಹಯ್ಯ ಕುಮಾರ್‌ ಅವರನ್ನು ಹೊರತುಪಡಿಸಿ ಕಳೆದ ವರ್ಷ ಎಪ್ರಿಲ್‌ನಲ್ಲಿ ಮೇವಾನಿ ಸೇರಿದಂತೆ 10 ಜನರ ವಿರುದ್ಧ ನ್ಯಾಯಾಲಯವು ವಿಚಾರಣೆಯನ್ನು ಪ್ರಾರಂಭಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...