Homeಮುಖಪುಟಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

- Advertisement -
- Advertisement -

ಪೂರ್ವ ದೆಹಲಿಯ ಶಕರ್‌ಪುರ ಪ್ರದೇಶದಲ್ಲಿ ತನ್ನ ಬಾಡಿಗೆದಾರ ಯುವತಿಯ ಮನೆಯ ಮಲಗುವ ಕೋಣೆ ಮತ್ತು ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆ ಯುವತಿ ನಾಗರಿಕ ಸೇವಾ ಆಕಾಂಕ್ಷಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಗರದಿಂದ ಹೊರಗೆ ಹೋಗುವ ಮೊದಲು ಕೀಗಳನ್ನು ತನ್ನ ಮನೆಯ ಓನರ್‌ನ ಮಗ ಕರಣ್‌ಗೆ ಹಸ್ತಾಂತರಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ. ಇದರ ನಂತರ ಯುವತಿಯ ವಾಟ್ಸಾಪ್‌ನಲ್ಲಿ ಕೆಲವು ಅಸಾಮಾನ್ಯ ಚಟುವಟಿಕೆ ಗಮನಿಸಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

“ಯುವತಿಯು ತನ್ನ ವಾಟ್ಸಪ್‌ ಲಿಂಕ್ ಆಗಿರುವ ಡಿವೈಸ್‌ಗಳನ್ನು ಪರಿಶೀಲಿಸಿದಾಗ, ತನ್ನ ವಾಟ್ಸಾಪ್ ಖಾತೆಯು ಅಪರಿಚಿತ ಲ್ಯಾಪ್‌ಟಾಪ್‌ಗೆ ಲಾಗ್ ಇನ್ ಆಗಿರುವುದು ಕಂಡುಬಂದಿತ್ತು. ತಕ್ಷಣವೇ ಅದರಿಂದ ಲಾಗ್ ಔಟ್ ಮಾಡಿದೆ” ಎಂದು ಅವರು ಹೇಳಿದ್ದಾಗಿ ಪೊಲೀಸ್ ಉಪ ಕಮಿಷನರ್ (ಪೂರ್ವ) ಅಪೂರ್ವ ಗುಪ್ತಾ ಅವರು ಹೇಳಿದ್ದಾರೆ.

ಇದನ್ನೂಓದಿ: ಅತ್ಯಾಚಾರ ಪ್ರಕರಣ | CPI(M) ಶಾಸಕ, ನಟ ಮುಖೇಶ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಇದರ ನಂತರ ಯುವತಿಯು ಅನುಮಾನಾಸ್ಪದಳಾಗಿ ರಹಸ್ಯ ಕ್ಯಾಮೆರಾಗಳು ಅಥವಾ ಕಣ್ಗಾವಲು ಸಾಧನಗಳಿಗಾಗಿ ತನ್ನ ಅಪಾರ್ಟ್ಮೆಂಟ್ ಅನ್ನು ಹುಡುಕಲು ಪ್ರಾರಂಭಿಸಿದ್ದು, ಈ ವೇಳೆ ಅವರ ಬಾತ್ರೂಮ್‌ನ ಬಲ್ಬ್ ಹೋಲ್ಡರ್ನಲ್ಲಿ ಕ್ಯಾಮೆರಾ ಇರುವುದು ಕಂಡುಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದರು. ಇದರ ಬೆನ್ನಲ್ಲೇ ಸೋಮವಾರ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ದೂರಿನ ನಂತರ ಪೊಲೀಸ್ ತಂಡವು ಸಂಪೂರ್ಣ ಹುಡುಕಾಟ ನಡೆಸಿದ್ದು, ಅವರ ಮಲಗುವ ಕೋಣೆಯ ಬಲ್ಬ್ ಹೋಲ್ಡರ್‌ನಲ್ಲಿ ಅಳವಡಿಸಲಾದ ಮತ್ತೊಂದು ಕ್ಯಾಮೆರಾವನ್ನು ಪತ್ತೆ ಮಾಡಿದೆ ಎಂದು ಅಧಿಕಾರಿ ಹೇಳಿದ್ದಾರೆ. ತಾನು ಊರಿಂದ ಹೊರಗೆ ಹೋದಲ್ಲೆಲ್ಲಾ ಅದೇ ಕಟ್ಟಡದ ಬೇರೆ ಮಹಡಿಯಲ್ಲಿ ವಾಸಿಸುವ ಕರಣ್‌ಗೆ ತನ್ನ ಮನೆಯ ಕೀಲಿಗಳನ್ನು ಕೊಟ್ಟಿದ್ದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕರಣ್ ಮೂರು ತಿಂಗಳ ಹಿಂದೆ ಮಹಿಳೆಯು ಉತ್ತರ ಪ್ರದೇಶದ ತನ್ನ ಊರಿಗೆ ತೆರಳಿದಾಗ ಮನೆಯ ಕೀಲಿಗಳನ್ನು ಆತನಿಗೆ ಹಸ್ತಾಂತರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ. ಇದನ್ನು ಬಳಸಿಕೊಂಡ ಕರಣ್ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಲಭ್ಯವಿರುವ ಮೂರು ಸ್ಪೈ ಕ್ಯಾಮೆರಾಗಳನ್ನು ಖರೀದಿಸಿದ್ದನು. ಅವುಗಳಲ್ಲಿ ಒಂದನ್ನು ಯುವತಿಯ ಮಲಗುವ ಕೋಣೆಯಲ್ಲಿ ಮತ್ತು ಇನ್ನೊಂದನ್ನು ತನ್ನ ಬಾತ್ರೂಮ್‌ನಲ್ಲಿ ಸ್ಥಾಪಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ: ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅನುಮತಿಸಿದ ‘ಬಿಎನ್‌ಎಸ್‌ಎಸ್‌’ ಕಾಯ್ದೆ ಹೇಳುವುದೇನು..?

ಈ ಕ್ಯಾಮೆರಾಗಳನ್ನು ಆನ್‌ಲೈನ್‌ನಲ್ಲಿ ಆಪರೇಟ್ ಮಾಡಲು ಸಾಧ್ಯವಾಗದ ಕಾರಣ ಮತ್ತು ವೀಡಿಯೊಗಳನ್ನು ಸಂಗ್ರಹಿಸಲು ಮೆಮೊರಿ ಕಾರ್ಡ್ ಅನ್ನು ಬಳಸಿದ್ದನು. ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಮೆಮೊರಿ ಕಾರ್ಡ್‌ನಿಂದ ಲ್ಯಾಪ್‌ಟಾಪ್‌ಗೆ ವರ್ಗಾಯಿಸಲು ಬಯಸಿದ್ದ ಕರಣ್ ಫ್ಯಾನ್‌ ರಿಪೇರಿ ಮಾಡುವ ನೆಪದಲ್ಲಿ ಮನೆಯ ಕೀಲಿಗಳನ್ನು ನೀಡುವಂತೆ ಮಹಿಳೆಗೆ ನಿರಂತರವಾಗಿ ವಿನಂತಿಸಿದ್ದನು ಎಂದು ಯುವತಿ ಹೇಳಿದ್ದಾರೆ.

ಪೊಲೀಸರು ನಡೆಸಿದ ತನಿಖೆಯ ಸಮಯದಲ್ಲಿ, ಕರಣ್ ಕೈಯಲ್ಲಿದ್ದ ಮತ್ತೊಂದು ಸ್ಪೈ ಕ್ಯಾಮೆರಾವನ್ನು ವಶಪಡಿಸಿಕೊಳ್ಳಲಾಗಿದ್ದು, ಜೊತೆಗೆ ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಸಂಗ್ರಹಿಸಲು ಬಳಸಿದ ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಎನ್‌ಎಸ್‌ನ ಸೆಕ್ಷನ್ 77 ಅಡಿಯಲ್ಲಿ ಶಕರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರಣ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರಣ್ ಪದವೀಧರರಾಗಿದ್ದು, ಕಳೆದ ಏಳು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಬಾಡಿಗೆದಾರ ಯುವತಿ

ವಿಡಿಯೊ ನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...