Homeಮುಖಪುಟಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

- Advertisement -
- Advertisement -

ಪೂರ್ವ ದೆಹಲಿಯ ಶಕರ್‌ಪುರ ಪ್ರದೇಶದಲ್ಲಿ ತನ್ನ ಬಾಡಿಗೆದಾರ ಯುವತಿಯ ಮನೆಯ ಮಲಗುವ ಕೋಣೆ ಮತ್ತು ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆ ಯುವತಿ ನಾಗರಿಕ ಸೇವಾ ಆಕಾಂಕ್ಷಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಗರದಿಂದ ಹೊರಗೆ ಹೋಗುವ ಮೊದಲು ಕೀಗಳನ್ನು ತನ್ನ ಮನೆಯ ಓನರ್‌ನ ಮಗ ಕರಣ್‌ಗೆ ಹಸ್ತಾಂತರಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ. ಇದರ ನಂತರ ಯುವತಿಯ ವಾಟ್ಸಾಪ್‌ನಲ್ಲಿ ಕೆಲವು ಅಸಾಮಾನ್ಯ ಚಟುವಟಿಕೆ ಗಮನಿಸಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

“ಯುವತಿಯು ತನ್ನ ವಾಟ್ಸಪ್‌ ಲಿಂಕ್ ಆಗಿರುವ ಡಿವೈಸ್‌ಗಳನ್ನು ಪರಿಶೀಲಿಸಿದಾಗ, ತನ್ನ ವಾಟ್ಸಾಪ್ ಖಾತೆಯು ಅಪರಿಚಿತ ಲ್ಯಾಪ್‌ಟಾಪ್‌ಗೆ ಲಾಗ್ ಇನ್ ಆಗಿರುವುದು ಕಂಡುಬಂದಿತ್ತು. ತಕ್ಷಣವೇ ಅದರಿಂದ ಲಾಗ್ ಔಟ್ ಮಾಡಿದೆ” ಎಂದು ಅವರು ಹೇಳಿದ್ದಾಗಿ ಪೊಲೀಸ್ ಉಪ ಕಮಿಷನರ್ (ಪೂರ್ವ) ಅಪೂರ್ವ ಗುಪ್ತಾ ಅವರು ಹೇಳಿದ್ದಾರೆ.

ಇದನ್ನೂಓದಿ: ಅತ್ಯಾಚಾರ ಪ್ರಕರಣ | CPI(M) ಶಾಸಕ, ನಟ ಮುಖೇಶ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಇದರ ನಂತರ ಯುವತಿಯು ಅನುಮಾನಾಸ್ಪದಳಾಗಿ ರಹಸ್ಯ ಕ್ಯಾಮೆರಾಗಳು ಅಥವಾ ಕಣ್ಗಾವಲು ಸಾಧನಗಳಿಗಾಗಿ ತನ್ನ ಅಪಾರ್ಟ್ಮೆಂಟ್ ಅನ್ನು ಹುಡುಕಲು ಪ್ರಾರಂಭಿಸಿದ್ದು, ಈ ವೇಳೆ ಅವರ ಬಾತ್ರೂಮ್‌ನ ಬಲ್ಬ್ ಹೋಲ್ಡರ್ನಲ್ಲಿ ಕ್ಯಾಮೆರಾ ಇರುವುದು ಕಂಡುಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದರು. ಇದರ ಬೆನ್ನಲ್ಲೇ ಸೋಮವಾರ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ದೂರಿನ ನಂತರ ಪೊಲೀಸ್ ತಂಡವು ಸಂಪೂರ್ಣ ಹುಡುಕಾಟ ನಡೆಸಿದ್ದು, ಅವರ ಮಲಗುವ ಕೋಣೆಯ ಬಲ್ಬ್ ಹೋಲ್ಡರ್‌ನಲ್ಲಿ ಅಳವಡಿಸಲಾದ ಮತ್ತೊಂದು ಕ್ಯಾಮೆರಾವನ್ನು ಪತ್ತೆ ಮಾಡಿದೆ ಎಂದು ಅಧಿಕಾರಿ ಹೇಳಿದ್ದಾರೆ. ತಾನು ಊರಿಂದ ಹೊರಗೆ ಹೋದಲ್ಲೆಲ್ಲಾ ಅದೇ ಕಟ್ಟಡದ ಬೇರೆ ಮಹಡಿಯಲ್ಲಿ ವಾಸಿಸುವ ಕರಣ್‌ಗೆ ತನ್ನ ಮನೆಯ ಕೀಲಿಗಳನ್ನು ಕೊಟ್ಟಿದ್ದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕರಣ್ ಮೂರು ತಿಂಗಳ ಹಿಂದೆ ಮಹಿಳೆಯು ಉತ್ತರ ಪ್ರದೇಶದ ತನ್ನ ಊರಿಗೆ ತೆರಳಿದಾಗ ಮನೆಯ ಕೀಲಿಗಳನ್ನು ಆತನಿಗೆ ಹಸ್ತಾಂತರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ. ಇದನ್ನು ಬಳಸಿಕೊಂಡ ಕರಣ್ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಲಭ್ಯವಿರುವ ಮೂರು ಸ್ಪೈ ಕ್ಯಾಮೆರಾಗಳನ್ನು ಖರೀದಿಸಿದ್ದನು. ಅವುಗಳಲ್ಲಿ ಒಂದನ್ನು ಯುವತಿಯ ಮಲಗುವ ಕೋಣೆಯಲ್ಲಿ ಮತ್ತು ಇನ್ನೊಂದನ್ನು ತನ್ನ ಬಾತ್ರೂಮ್‌ನಲ್ಲಿ ಸ್ಥಾಪಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ: ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅನುಮತಿಸಿದ ‘ಬಿಎನ್‌ಎಸ್‌ಎಸ್‌’ ಕಾಯ್ದೆ ಹೇಳುವುದೇನು..?

ಈ ಕ್ಯಾಮೆರಾಗಳನ್ನು ಆನ್‌ಲೈನ್‌ನಲ್ಲಿ ಆಪರೇಟ್ ಮಾಡಲು ಸಾಧ್ಯವಾಗದ ಕಾರಣ ಮತ್ತು ವೀಡಿಯೊಗಳನ್ನು ಸಂಗ್ರಹಿಸಲು ಮೆಮೊರಿ ಕಾರ್ಡ್ ಅನ್ನು ಬಳಸಿದ್ದನು. ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಮೆಮೊರಿ ಕಾರ್ಡ್‌ನಿಂದ ಲ್ಯಾಪ್‌ಟಾಪ್‌ಗೆ ವರ್ಗಾಯಿಸಲು ಬಯಸಿದ್ದ ಕರಣ್ ಫ್ಯಾನ್‌ ರಿಪೇರಿ ಮಾಡುವ ನೆಪದಲ್ಲಿ ಮನೆಯ ಕೀಲಿಗಳನ್ನು ನೀಡುವಂತೆ ಮಹಿಳೆಗೆ ನಿರಂತರವಾಗಿ ವಿನಂತಿಸಿದ್ದನು ಎಂದು ಯುವತಿ ಹೇಳಿದ್ದಾರೆ.

ಪೊಲೀಸರು ನಡೆಸಿದ ತನಿಖೆಯ ಸಮಯದಲ್ಲಿ, ಕರಣ್ ಕೈಯಲ್ಲಿದ್ದ ಮತ್ತೊಂದು ಸ್ಪೈ ಕ್ಯಾಮೆರಾವನ್ನು ವಶಪಡಿಸಿಕೊಳ್ಳಲಾಗಿದ್ದು, ಜೊತೆಗೆ ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಸಂಗ್ರಹಿಸಲು ಬಳಸಿದ ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಎನ್‌ಎಸ್‌ನ ಸೆಕ್ಷನ್ 77 ಅಡಿಯಲ್ಲಿ ಶಕರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರಣ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರಣ್ ಪದವೀಧರರಾಗಿದ್ದು, ಕಳೆದ ಏಳು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಬಾಡಿಗೆದಾರ ಯುವತಿ

ವಿಡಿಯೊ ನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...