Homeಮುಖಪುಟಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

- Advertisement -
- Advertisement -

ಪೂರ್ವ ದೆಹಲಿಯ ಶಕರ್‌ಪುರ ಪ್ರದೇಶದಲ್ಲಿ ತನ್ನ ಬಾಡಿಗೆದಾರ ಯುವತಿಯ ಮನೆಯ ಮಲಗುವ ಕೋಣೆ ಮತ್ತು ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆ ಯುವತಿ ನಾಗರಿಕ ಸೇವಾ ಆಕಾಂಕ್ಷಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಗರದಿಂದ ಹೊರಗೆ ಹೋಗುವ ಮೊದಲು ಕೀಗಳನ್ನು ತನ್ನ ಮನೆಯ ಓನರ್‌ನ ಮಗ ಕರಣ್‌ಗೆ ಹಸ್ತಾಂತರಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ. ಇದರ ನಂತರ ಯುವತಿಯ ವಾಟ್ಸಾಪ್‌ನಲ್ಲಿ ಕೆಲವು ಅಸಾಮಾನ್ಯ ಚಟುವಟಿಕೆ ಗಮನಿಸಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

“ಯುವತಿಯು ತನ್ನ ವಾಟ್ಸಪ್‌ ಲಿಂಕ್ ಆಗಿರುವ ಡಿವೈಸ್‌ಗಳನ್ನು ಪರಿಶೀಲಿಸಿದಾಗ, ತನ್ನ ವಾಟ್ಸಾಪ್ ಖಾತೆಯು ಅಪರಿಚಿತ ಲ್ಯಾಪ್‌ಟಾಪ್‌ಗೆ ಲಾಗ್ ಇನ್ ಆಗಿರುವುದು ಕಂಡುಬಂದಿತ್ತು. ತಕ್ಷಣವೇ ಅದರಿಂದ ಲಾಗ್ ಔಟ್ ಮಾಡಿದೆ” ಎಂದು ಅವರು ಹೇಳಿದ್ದಾಗಿ ಪೊಲೀಸ್ ಉಪ ಕಮಿಷನರ್ (ಪೂರ್ವ) ಅಪೂರ್ವ ಗುಪ್ತಾ ಅವರು ಹೇಳಿದ್ದಾರೆ.

ಇದನ್ನೂಓದಿ: ಅತ್ಯಾಚಾರ ಪ್ರಕರಣ | CPI(M) ಶಾಸಕ, ನಟ ಮುಖೇಶ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಇದರ ನಂತರ ಯುವತಿಯು ಅನುಮಾನಾಸ್ಪದಳಾಗಿ ರಹಸ್ಯ ಕ್ಯಾಮೆರಾಗಳು ಅಥವಾ ಕಣ್ಗಾವಲು ಸಾಧನಗಳಿಗಾಗಿ ತನ್ನ ಅಪಾರ್ಟ್ಮೆಂಟ್ ಅನ್ನು ಹುಡುಕಲು ಪ್ರಾರಂಭಿಸಿದ್ದು, ಈ ವೇಳೆ ಅವರ ಬಾತ್ರೂಮ್‌ನ ಬಲ್ಬ್ ಹೋಲ್ಡರ್ನಲ್ಲಿ ಕ್ಯಾಮೆರಾ ಇರುವುದು ಕಂಡುಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದರು. ಇದರ ಬೆನ್ನಲ್ಲೇ ಸೋಮವಾರ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ದೂರಿನ ನಂತರ ಪೊಲೀಸ್ ತಂಡವು ಸಂಪೂರ್ಣ ಹುಡುಕಾಟ ನಡೆಸಿದ್ದು, ಅವರ ಮಲಗುವ ಕೋಣೆಯ ಬಲ್ಬ್ ಹೋಲ್ಡರ್‌ನಲ್ಲಿ ಅಳವಡಿಸಲಾದ ಮತ್ತೊಂದು ಕ್ಯಾಮೆರಾವನ್ನು ಪತ್ತೆ ಮಾಡಿದೆ ಎಂದು ಅಧಿಕಾರಿ ಹೇಳಿದ್ದಾರೆ. ತಾನು ಊರಿಂದ ಹೊರಗೆ ಹೋದಲ್ಲೆಲ್ಲಾ ಅದೇ ಕಟ್ಟಡದ ಬೇರೆ ಮಹಡಿಯಲ್ಲಿ ವಾಸಿಸುವ ಕರಣ್‌ಗೆ ತನ್ನ ಮನೆಯ ಕೀಲಿಗಳನ್ನು ಕೊಟ್ಟಿದ್ದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕರಣ್ ಮೂರು ತಿಂಗಳ ಹಿಂದೆ ಮಹಿಳೆಯು ಉತ್ತರ ಪ್ರದೇಶದ ತನ್ನ ಊರಿಗೆ ತೆರಳಿದಾಗ ಮನೆಯ ಕೀಲಿಗಳನ್ನು ಆತನಿಗೆ ಹಸ್ತಾಂತರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ. ಇದನ್ನು ಬಳಸಿಕೊಂಡ ಕರಣ್ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಲಭ್ಯವಿರುವ ಮೂರು ಸ್ಪೈ ಕ್ಯಾಮೆರಾಗಳನ್ನು ಖರೀದಿಸಿದ್ದನು. ಅವುಗಳಲ್ಲಿ ಒಂದನ್ನು ಯುವತಿಯ ಮಲಗುವ ಕೋಣೆಯಲ್ಲಿ ಮತ್ತು ಇನ್ನೊಂದನ್ನು ತನ್ನ ಬಾತ್ರೂಮ್‌ನಲ್ಲಿ ಸ್ಥಾಪಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ: ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅನುಮತಿಸಿದ ‘ಬಿಎನ್‌ಎಸ್‌ಎಸ್‌’ ಕಾಯ್ದೆ ಹೇಳುವುದೇನು..?

ಈ ಕ್ಯಾಮೆರಾಗಳನ್ನು ಆನ್‌ಲೈನ್‌ನಲ್ಲಿ ಆಪರೇಟ್ ಮಾಡಲು ಸಾಧ್ಯವಾಗದ ಕಾರಣ ಮತ್ತು ವೀಡಿಯೊಗಳನ್ನು ಸಂಗ್ರಹಿಸಲು ಮೆಮೊರಿ ಕಾರ್ಡ್ ಅನ್ನು ಬಳಸಿದ್ದನು. ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಮೆಮೊರಿ ಕಾರ್ಡ್‌ನಿಂದ ಲ್ಯಾಪ್‌ಟಾಪ್‌ಗೆ ವರ್ಗಾಯಿಸಲು ಬಯಸಿದ್ದ ಕರಣ್ ಫ್ಯಾನ್‌ ರಿಪೇರಿ ಮಾಡುವ ನೆಪದಲ್ಲಿ ಮನೆಯ ಕೀಲಿಗಳನ್ನು ನೀಡುವಂತೆ ಮಹಿಳೆಗೆ ನಿರಂತರವಾಗಿ ವಿನಂತಿಸಿದ್ದನು ಎಂದು ಯುವತಿ ಹೇಳಿದ್ದಾರೆ.

ಪೊಲೀಸರು ನಡೆಸಿದ ತನಿಖೆಯ ಸಮಯದಲ್ಲಿ, ಕರಣ್ ಕೈಯಲ್ಲಿದ್ದ ಮತ್ತೊಂದು ಸ್ಪೈ ಕ್ಯಾಮೆರಾವನ್ನು ವಶಪಡಿಸಿಕೊಳ್ಳಲಾಗಿದ್ದು, ಜೊತೆಗೆ ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಸಂಗ್ರಹಿಸಲು ಬಳಸಿದ ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಎನ್‌ಎಸ್‌ನ ಸೆಕ್ಷನ್ 77 ಅಡಿಯಲ್ಲಿ ಶಕರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರಣ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರಣ್ ಪದವೀಧರರಾಗಿದ್ದು, ಕಳೆದ ಏಳು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಬಾಡಿಗೆದಾರ ಯುವತಿ

ವಿಡಿಯೊ ನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...