Homeಮುಖಪುಟಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

- Advertisement -
- Advertisement -

ಪೂರ್ವ ದೆಹಲಿಯ ಶಕರ್‌ಪುರ ಪ್ರದೇಶದಲ್ಲಿ ತನ್ನ ಬಾಡಿಗೆದಾರ ಯುವತಿಯ ಮನೆಯ ಮಲಗುವ ಕೋಣೆ ಮತ್ತು ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆ ಯುವತಿ ನಾಗರಿಕ ಸೇವಾ ಆಕಾಂಕ್ಷಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಗರದಿಂದ ಹೊರಗೆ ಹೋಗುವ ಮೊದಲು ಕೀಗಳನ್ನು ತನ್ನ ಮನೆಯ ಓನರ್‌ನ ಮಗ ಕರಣ್‌ಗೆ ಹಸ್ತಾಂತರಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ. ಇದರ ನಂತರ ಯುವತಿಯ ವಾಟ್ಸಾಪ್‌ನಲ್ಲಿ ಕೆಲವು ಅಸಾಮಾನ್ಯ ಚಟುವಟಿಕೆ ಗಮನಿಸಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

“ಯುವತಿಯು ತನ್ನ ವಾಟ್ಸಪ್‌ ಲಿಂಕ್ ಆಗಿರುವ ಡಿವೈಸ್‌ಗಳನ್ನು ಪರಿಶೀಲಿಸಿದಾಗ, ತನ್ನ ವಾಟ್ಸಾಪ್ ಖಾತೆಯು ಅಪರಿಚಿತ ಲ್ಯಾಪ್‌ಟಾಪ್‌ಗೆ ಲಾಗ್ ಇನ್ ಆಗಿರುವುದು ಕಂಡುಬಂದಿತ್ತು. ತಕ್ಷಣವೇ ಅದರಿಂದ ಲಾಗ್ ಔಟ್ ಮಾಡಿದೆ” ಎಂದು ಅವರು ಹೇಳಿದ್ದಾಗಿ ಪೊಲೀಸ್ ಉಪ ಕಮಿಷನರ್ (ಪೂರ್ವ) ಅಪೂರ್ವ ಗುಪ್ತಾ ಅವರು ಹೇಳಿದ್ದಾರೆ.

ಇದನ್ನೂಓದಿ: ಅತ್ಯಾಚಾರ ಪ್ರಕರಣ | CPI(M) ಶಾಸಕ, ನಟ ಮುಖೇಶ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಇದರ ನಂತರ ಯುವತಿಯು ಅನುಮಾನಾಸ್ಪದಳಾಗಿ ರಹಸ್ಯ ಕ್ಯಾಮೆರಾಗಳು ಅಥವಾ ಕಣ್ಗಾವಲು ಸಾಧನಗಳಿಗಾಗಿ ತನ್ನ ಅಪಾರ್ಟ್ಮೆಂಟ್ ಅನ್ನು ಹುಡುಕಲು ಪ್ರಾರಂಭಿಸಿದ್ದು, ಈ ವೇಳೆ ಅವರ ಬಾತ್ರೂಮ್‌ನ ಬಲ್ಬ್ ಹೋಲ್ಡರ್ನಲ್ಲಿ ಕ್ಯಾಮೆರಾ ಇರುವುದು ಕಂಡುಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದರು. ಇದರ ಬೆನ್ನಲ್ಲೇ ಸೋಮವಾರ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ದೂರಿನ ನಂತರ ಪೊಲೀಸ್ ತಂಡವು ಸಂಪೂರ್ಣ ಹುಡುಕಾಟ ನಡೆಸಿದ್ದು, ಅವರ ಮಲಗುವ ಕೋಣೆಯ ಬಲ್ಬ್ ಹೋಲ್ಡರ್‌ನಲ್ಲಿ ಅಳವಡಿಸಲಾದ ಮತ್ತೊಂದು ಕ್ಯಾಮೆರಾವನ್ನು ಪತ್ತೆ ಮಾಡಿದೆ ಎಂದು ಅಧಿಕಾರಿ ಹೇಳಿದ್ದಾರೆ. ತಾನು ಊರಿಂದ ಹೊರಗೆ ಹೋದಲ್ಲೆಲ್ಲಾ ಅದೇ ಕಟ್ಟಡದ ಬೇರೆ ಮಹಡಿಯಲ್ಲಿ ವಾಸಿಸುವ ಕರಣ್‌ಗೆ ತನ್ನ ಮನೆಯ ಕೀಲಿಗಳನ್ನು ಕೊಟ್ಟಿದ್ದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕರಣ್ ಮೂರು ತಿಂಗಳ ಹಿಂದೆ ಮಹಿಳೆಯು ಉತ್ತರ ಪ್ರದೇಶದ ತನ್ನ ಊರಿಗೆ ತೆರಳಿದಾಗ ಮನೆಯ ಕೀಲಿಗಳನ್ನು ಆತನಿಗೆ ಹಸ್ತಾಂತರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ. ಇದನ್ನು ಬಳಸಿಕೊಂಡ ಕರಣ್ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಲಭ್ಯವಿರುವ ಮೂರು ಸ್ಪೈ ಕ್ಯಾಮೆರಾಗಳನ್ನು ಖರೀದಿಸಿದ್ದನು. ಅವುಗಳಲ್ಲಿ ಒಂದನ್ನು ಯುವತಿಯ ಮಲಗುವ ಕೋಣೆಯಲ್ಲಿ ಮತ್ತು ಇನ್ನೊಂದನ್ನು ತನ್ನ ಬಾತ್ರೂಮ್‌ನಲ್ಲಿ ಸ್ಥಾಪಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ: ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅನುಮತಿಸಿದ ‘ಬಿಎನ್‌ಎಸ್‌ಎಸ್‌’ ಕಾಯ್ದೆ ಹೇಳುವುದೇನು..?

ಈ ಕ್ಯಾಮೆರಾಗಳನ್ನು ಆನ್‌ಲೈನ್‌ನಲ್ಲಿ ಆಪರೇಟ್ ಮಾಡಲು ಸಾಧ್ಯವಾಗದ ಕಾರಣ ಮತ್ತು ವೀಡಿಯೊಗಳನ್ನು ಸಂಗ್ರಹಿಸಲು ಮೆಮೊರಿ ಕಾರ್ಡ್ ಅನ್ನು ಬಳಸಿದ್ದನು. ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಮೆಮೊರಿ ಕಾರ್ಡ್‌ನಿಂದ ಲ್ಯಾಪ್‌ಟಾಪ್‌ಗೆ ವರ್ಗಾಯಿಸಲು ಬಯಸಿದ್ದ ಕರಣ್ ಫ್ಯಾನ್‌ ರಿಪೇರಿ ಮಾಡುವ ನೆಪದಲ್ಲಿ ಮನೆಯ ಕೀಲಿಗಳನ್ನು ನೀಡುವಂತೆ ಮಹಿಳೆಗೆ ನಿರಂತರವಾಗಿ ವಿನಂತಿಸಿದ್ದನು ಎಂದು ಯುವತಿ ಹೇಳಿದ್ದಾರೆ.

ಪೊಲೀಸರು ನಡೆಸಿದ ತನಿಖೆಯ ಸಮಯದಲ್ಲಿ, ಕರಣ್ ಕೈಯಲ್ಲಿದ್ದ ಮತ್ತೊಂದು ಸ್ಪೈ ಕ್ಯಾಮೆರಾವನ್ನು ವಶಪಡಿಸಿಕೊಳ್ಳಲಾಗಿದ್ದು, ಜೊತೆಗೆ ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಸಂಗ್ರಹಿಸಲು ಬಳಸಿದ ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಎನ್‌ಎಸ್‌ನ ಸೆಕ್ಷನ್ 77 ಅಡಿಯಲ್ಲಿ ಶಕರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರಣ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರಣ್ ಪದವೀಧರರಾಗಿದ್ದು, ಕಳೆದ ಏಳು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಬಾಡಿಗೆದಾರ ಯುವತಿ

ವಿಡಿಯೊ ನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...