Homeಮುಖಪುಟಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

- Advertisement -
- Advertisement -

ಪೂರ್ವ ದೆಹಲಿಯ ಶಕರ್‌ಪುರ ಪ್ರದೇಶದಲ್ಲಿ ತನ್ನ ಬಾಡಿಗೆದಾರ ಯುವತಿಯ ಮನೆಯ ಮಲಗುವ ಕೋಣೆ ಮತ್ತು ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆ ಯುವತಿ ನಾಗರಿಕ ಸೇವಾ ಆಕಾಂಕ್ಷಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಗರದಿಂದ ಹೊರಗೆ ಹೋಗುವ ಮೊದಲು ಕೀಗಳನ್ನು ತನ್ನ ಮನೆಯ ಓನರ್‌ನ ಮಗ ಕರಣ್‌ಗೆ ಹಸ್ತಾಂತರಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ. ಇದರ ನಂತರ ಯುವತಿಯ ವಾಟ್ಸಾಪ್‌ನಲ್ಲಿ ಕೆಲವು ಅಸಾಮಾನ್ಯ ಚಟುವಟಿಕೆ ಗಮನಿಸಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

“ಯುವತಿಯು ತನ್ನ ವಾಟ್ಸಪ್‌ ಲಿಂಕ್ ಆಗಿರುವ ಡಿವೈಸ್‌ಗಳನ್ನು ಪರಿಶೀಲಿಸಿದಾಗ, ತನ್ನ ವಾಟ್ಸಾಪ್ ಖಾತೆಯು ಅಪರಿಚಿತ ಲ್ಯಾಪ್‌ಟಾಪ್‌ಗೆ ಲಾಗ್ ಇನ್ ಆಗಿರುವುದು ಕಂಡುಬಂದಿತ್ತು. ತಕ್ಷಣವೇ ಅದರಿಂದ ಲಾಗ್ ಔಟ್ ಮಾಡಿದೆ” ಎಂದು ಅವರು ಹೇಳಿದ್ದಾಗಿ ಪೊಲೀಸ್ ಉಪ ಕಮಿಷನರ್ (ಪೂರ್ವ) ಅಪೂರ್ವ ಗುಪ್ತಾ ಅವರು ಹೇಳಿದ್ದಾರೆ.

ಇದನ್ನೂಓದಿ: ಅತ್ಯಾಚಾರ ಪ್ರಕರಣ | CPI(M) ಶಾಸಕ, ನಟ ಮುಖೇಶ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಇದರ ನಂತರ ಯುವತಿಯು ಅನುಮಾನಾಸ್ಪದಳಾಗಿ ರಹಸ್ಯ ಕ್ಯಾಮೆರಾಗಳು ಅಥವಾ ಕಣ್ಗಾವಲು ಸಾಧನಗಳಿಗಾಗಿ ತನ್ನ ಅಪಾರ್ಟ್ಮೆಂಟ್ ಅನ್ನು ಹುಡುಕಲು ಪ್ರಾರಂಭಿಸಿದ್ದು, ಈ ವೇಳೆ ಅವರ ಬಾತ್ರೂಮ್‌ನ ಬಲ್ಬ್ ಹೋಲ್ಡರ್ನಲ್ಲಿ ಕ್ಯಾಮೆರಾ ಇರುವುದು ಕಂಡುಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದರು. ಇದರ ಬೆನ್ನಲ್ಲೇ ಸೋಮವಾರ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ದೂರಿನ ನಂತರ ಪೊಲೀಸ್ ತಂಡವು ಸಂಪೂರ್ಣ ಹುಡುಕಾಟ ನಡೆಸಿದ್ದು, ಅವರ ಮಲಗುವ ಕೋಣೆಯ ಬಲ್ಬ್ ಹೋಲ್ಡರ್‌ನಲ್ಲಿ ಅಳವಡಿಸಲಾದ ಮತ್ತೊಂದು ಕ್ಯಾಮೆರಾವನ್ನು ಪತ್ತೆ ಮಾಡಿದೆ ಎಂದು ಅಧಿಕಾರಿ ಹೇಳಿದ್ದಾರೆ. ತಾನು ಊರಿಂದ ಹೊರಗೆ ಹೋದಲ್ಲೆಲ್ಲಾ ಅದೇ ಕಟ್ಟಡದ ಬೇರೆ ಮಹಡಿಯಲ್ಲಿ ವಾಸಿಸುವ ಕರಣ್‌ಗೆ ತನ್ನ ಮನೆಯ ಕೀಲಿಗಳನ್ನು ಕೊಟ್ಟಿದ್ದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕರಣ್ ಮೂರು ತಿಂಗಳ ಹಿಂದೆ ಮಹಿಳೆಯು ಉತ್ತರ ಪ್ರದೇಶದ ತನ್ನ ಊರಿಗೆ ತೆರಳಿದಾಗ ಮನೆಯ ಕೀಲಿಗಳನ್ನು ಆತನಿಗೆ ಹಸ್ತಾಂತರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ. ಇದನ್ನು ಬಳಸಿಕೊಂಡ ಕರಣ್ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಲಭ್ಯವಿರುವ ಮೂರು ಸ್ಪೈ ಕ್ಯಾಮೆರಾಗಳನ್ನು ಖರೀದಿಸಿದ್ದನು. ಅವುಗಳಲ್ಲಿ ಒಂದನ್ನು ಯುವತಿಯ ಮಲಗುವ ಕೋಣೆಯಲ್ಲಿ ಮತ್ತು ಇನ್ನೊಂದನ್ನು ತನ್ನ ಬಾತ್ರೂಮ್‌ನಲ್ಲಿ ಸ್ಥಾಪಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ: ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅನುಮತಿಸಿದ ‘ಬಿಎನ್‌ಎಸ್‌ಎಸ್‌’ ಕಾಯ್ದೆ ಹೇಳುವುದೇನು..?

ಈ ಕ್ಯಾಮೆರಾಗಳನ್ನು ಆನ್‌ಲೈನ್‌ನಲ್ಲಿ ಆಪರೇಟ್ ಮಾಡಲು ಸಾಧ್ಯವಾಗದ ಕಾರಣ ಮತ್ತು ವೀಡಿಯೊಗಳನ್ನು ಸಂಗ್ರಹಿಸಲು ಮೆಮೊರಿ ಕಾರ್ಡ್ ಅನ್ನು ಬಳಸಿದ್ದನು. ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಮೆಮೊರಿ ಕಾರ್ಡ್‌ನಿಂದ ಲ್ಯಾಪ್‌ಟಾಪ್‌ಗೆ ವರ್ಗಾಯಿಸಲು ಬಯಸಿದ್ದ ಕರಣ್ ಫ್ಯಾನ್‌ ರಿಪೇರಿ ಮಾಡುವ ನೆಪದಲ್ಲಿ ಮನೆಯ ಕೀಲಿಗಳನ್ನು ನೀಡುವಂತೆ ಮಹಿಳೆಗೆ ನಿರಂತರವಾಗಿ ವಿನಂತಿಸಿದ್ದನು ಎಂದು ಯುವತಿ ಹೇಳಿದ್ದಾರೆ.

ಪೊಲೀಸರು ನಡೆಸಿದ ತನಿಖೆಯ ಸಮಯದಲ್ಲಿ, ಕರಣ್ ಕೈಯಲ್ಲಿದ್ದ ಮತ್ತೊಂದು ಸ್ಪೈ ಕ್ಯಾಮೆರಾವನ್ನು ವಶಪಡಿಸಿಕೊಳ್ಳಲಾಗಿದ್ದು, ಜೊತೆಗೆ ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಸಂಗ್ರಹಿಸಲು ಬಳಸಿದ ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಎನ್‌ಎಸ್‌ನ ಸೆಕ್ಷನ್ 77 ಅಡಿಯಲ್ಲಿ ಶಕರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರಣ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರಣ್ ಪದವೀಧರರಾಗಿದ್ದು, ಕಳೆದ ಏಳು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಬಾಡಿಗೆದಾರ ಯುವತಿ

ವಿಡಿಯೊ ನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...