Homeಮುಖಪುಟಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

- Advertisement -
- Advertisement -

ಪೂರ್ವ ದೆಹಲಿಯ ಶಕರ್‌ಪುರ ಪ್ರದೇಶದಲ್ಲಿ ತನ್ನ ಬಾಡಿಗೆದಾರ ಯುವತಿಯ ಮನೆಯ ಮಲಗುವ ಕೋಣೆ ಮತ್ತು ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆ ಯುವತಿ ನಾಗರಿಕ ಸೇವಾ ಆಕಾಂಕ್ಷಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಗರದಿಂದ ಹೊರಗೆ ಹೋಗುವ ಮೊದಲು ಕೀಗಳನ್ನು ತನ್ನ ಮನೆಯ ಓನರ್‌ನ ಮಗ ಕರಣ್‌ಗೆ ಹಸ್ತಾಂತರಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ. ಇದರ ನಂತರ ಯುವತಿಯ ವಾಟ್ಸಾಪ್‌ನಲ್ಲಿ ಕೆಲವು ಅಸಾಮಾನ್ಯ ಚಟುವಟಿಕೆ ಗಮನಿಸಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

“ಯುವತಿಯು ತನ್ನ ವಾಟ್ಸಪ್‌ ಲಿಂಕ್ ಆಗಿರುವ ಡಿವೈಸ್‌ಗಳನ್ನು ಪರಿಶೀಲಿಸಿದಾಗ, ತನ್ನ ವಾಟ್ಸಾಪ್ ಖಾತೆಯು ಅಪರಿಚಿತ ಲ್ಯಾಪ್‌ಟಾಪ್‌ಗೆ ಲಾಗ್ ಇನ್ ಆಗಿರುವುದು ಕಂಡುಬಂದಿತ್ತು. ತಕ್ಷಣವೇ ಅದರಿಂದ ಲಾಗ್ ಔಟ್ ಮಾಡಿದೆ” ಎಂದು ಅವರು ಹೇಳಿದ್ದಾಗಿ ಪೊಲೀಸ್ ಉಪ ಕಮಿಷನರ್ (ಪೂರ್ವ) ಅಪೂರ್ವ ಗುಪ್ತಾ ಅವರು ಹೇಳಿದ್ದಾರೆ.

ಇದನ್ನೂಓದಿ: ಅತ್ಯಾಚಾರ ಪ್ರಕರಣ | CPI(M) ಶಾಸಕ, ನಟ ಮುಖೇಶ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಇದರ ನಂತರ ಯುವತಿಯು ಅನುಮಾನಾಸ್ಪದಳಾಗಿ ರಹಸ್ಯ ಕ್ಯಾಮೆರಾಗಳು ಅಥವಾ ಕಣ್ಗಾವಲು ಸಾಧನಗಳಿಗಾಗಿ ತನ್ನ ಅಪಾರ್ಟ್ಮೆಂಟ್ ಅನ್ನು ಹುಡುಕಲು ಪ್ರಾರಂಭಿಸಿದ್ದು, ಈ ವೇಳೆ ಅವರ ಬಾತ್ರೂಮ್‌ನ ಬಲ್ಬ್ ಹೋಲ್ಡರ್ನಲ್ಲಿ ಕ್ಯಾಮೆರಾ ಇರುವುದು ಕಂಡುಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದರು. ಇದರ ಬೆನ್ನಲ್ಲೇ ಸೋಮವಾರ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ದೂರಿನ ನಂತರ ಪೊಲೀಸ್ ತಂಡವು ಸಂಪೂರ್ಣ ಹುಡುಕಾಟ ನಡೆಸಿದ್ದು, ಅವರ ಮಲಗುವ ಕೋಣೆಯ ಬಲ್ಬ್ ಹೋಲ್ಡರ್‌ನಲ್ಲಿ ಅಳವಡಿಸಲಾದ ಮತ್ತೊಂದು ಕ್ಯಾಮೆರಾವನ್ನು ಪತ್ತೆ ಮಾಡಿದೆ ಎಂದು ಅಧಿಕಾರಿ ಹೇಳಿದ್ದಾರೆ. ತಾನು ಊರಿಂದ ಹೊರಗೆ ಹೋದಲ್ಲೆಲ್ಲಾ ಅದೇ ಕಟ್ಟಡದ ಬೇರೆ ಮಹಡಿಯಲ್ಲಿ ವಾಸಿಸುವ ಕರಣ್‌ಗೆ ತನ್ನ ಮನೆಯ ಕೀಲಿಗಳನ್ನು ಕೊಟ್ಟಿದ್ದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕರಣ್ ಮೂರು ತಿಂಗಳ ಹಿಂದೆ ಮಹಿಳೆಯು ಉತ್ತರ ಪ್ರದೇಶದ ತನ್ನ ಊರಿಗೆ ತೆರಳಿದಾಗ ಮನೆಯ ಕೀಲಿಗಳನ್ನು ಆತನಿಗೆ ಹಸ್ತಾಂತರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ. ಇದನ್ನು ಬಳಸಿಕೊಂಡ ಕರಣ್ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಲಭ್ಯವಿರುವ ಮೂರು ಸ್ಪೈ ಕ್ಯಾಮೆರಾಗಳನ್ನು ಖರೀದಿಸಿದ್ದನು. ಅವುಗಳಲ್ಲಿ ಒಂದನ್ನು ಯುವತಿಯ ಮಲಗುವ ಕೋಣೆಯಲ್ಲಿ ಮತ್ತು ಇನ್ನೊಂದನ್ನು ತನ್ನ ಬಾತ್ರೂಮ್‌ನಲ್ಲಿ ಸ್ಥಾಪಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ: ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅನುಮತಿಸಿದ ‘ಬಿಎನ್‌ಎಸ್‌ಎಸ್‌’ ಕಾಯ್ದೆ ಹೇಳುವುದೇನು..?

ಈ ಕ್ಯಾಮೆರಾಗಳನ್ನು ಆನ್‌ಲೈನ್‌ನಲ್ಲಿ ಆಪರೇಟ್ ಮಾಡಲು ಸಾಧ್ಯವಾಗದ ಕಾರಣ ಮತ್ತು ವೀಡಿಯೊಗಳನ್ನು ಸಂಗ್ರಹಿಸಲು ಮೆಮೊರಿ ಕಾರ್ಡ್ ಅನ್ನು ಬಳಸಿದ್ದನು. ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಮೆಮೊರಿ ಕಾರ್ಡ್‌ನಿಂದ ಲ್ಯಾಪ್‌ಟಾಪ್‌ಗೆ ವರ್ಗಾಯಿಸಲು ಬಯಸಿದ್ದ ಕರಣ್ ಫ್ಯಾನ್‌ ರಿಪೇರಿ ಮಾಡುವ ನೆಪದಲ್ಲಿ ಮನೆಯ ಕೀಲಿಗಳನ್ನು ನೀಡುವಂತೆ ಮಹಿಳೆಗೆ ನಿರಂತರವಾಗಿ ವಿನಂತಿಸಿದ್ದನು ಎಂದು ಯುವತಿ ಹೇಳಿದ್ದಾರೆ.

ಪೊಲೀಸರು ನಡೆಸಿದ ತನಿಖೆಯ ಸಮಯದಲ್ಲಿ, ಕರಣ್ ಕೈಯಲ್ಲಿದ್ದ ಮತ್ತೊಂದು ಸ್ಪೈ ಕ್ಯಾಮೆರಾವನ್ನು ವಶಪಡಿಸಿಕೊಳ್ಳಲಾಗಿದ್ದು, ಜೊತೆಗೆ ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಸಂಗ್ರಹಿಸಲು ಬಳಸಿದ ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಎನ್‌ಎಸ್‌ನ ಸೆಕ್ಷನ್ 77 ಅಡಿಯಲ್ಲಿ ಶಕರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರಣ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರಣ್ ಪದವೀಧರರಾಗಿದ್ದು, ಕಳೆದ ಏಳು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಬಾಡಿಗೆದಾರ ಯುವತಿ

ವಿಡಿಯೊ ನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...