Homeಮುಖಪುಟಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

- Advertisement -
- Advertisement -

ಪೂರ್ವ ದೆಹಲಿಯ ಶಕರ್‌ಪುರ ಪ್ರದೇಶದಲ್ಲಿ ತನ್ನ ಬಾಡಿಗೆದಾರ ಯುವತಿಯ ಮನೆಯ ಮಲಗುವ ಕೋಣೆ ಮತ್ತು ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆ ಯುವತಿ ನಾಗರಿಕ ಸೇವಾ ಆಕಾಂಕ್ಷಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಗರದಿಂದ ಹೊರಗೆ ಹೋಗುವ ಮೊದಲು ಕೀಗಳನ್ನು ತನ್ನ ಮನೆಯ ಓನರ್‌ನ ಮಗ ಕರಣ್‌ಗೆ ಹಸ್ತಾಂತರಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ. ಇದರ ನಂತರ ಯುವತಿಯ ವಾಟ್ಸಾಪ್‌ನಲ್ಲಿ ಕೆಲವು ಅಸಾಮಾನ್ಯ ಚಟುವಟಿಕೆ ಗಮನಿಸಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

“ಯುವತಿಯು ತನ್ನ ವಾಟ್ಸಪ್‌ ಲಿಂಕ್ ಆಗಿರುವ ಡಿವೈಸ್‌ಗಳನ್ನು ಪರಿಶೀಲಿಸಿದಾಗ, ತನ್ನ ವಾಟ್ಸಾಪ್ ಖಾತೆಯು ಅಪರಿಚಿತ ಲ್ಯಾಪ್‌ಟಾಪ್‌ಗೆ ಲಾಗ್ ಇನ್ ಆಗಿರುವುದು ಕಂಡುಬಂದಿತ್ತು. ತಕ್ಷಣವೇ ಅದರಿಂದ ಲಾಗ್ ಔಟ್ ಮಾಡಿದೆ” ಎಂದು ಅವರು ಹೇಳಿದ್ದಾಗಿ ಪೊಲೀಸ್ ಉಪ ಕಮಿಷನರ್ (ಪೂರ್ವ) ಅಪೂರ್ವ ಗುಪ್ತಾ ಅವರು ಹೇಳಿದ್ದಾರೆ.

ಇದನ್ನೂಓದಿ: ಅತ್ಯಾಚಾರ ಪ್ರಕರಣ | CPI(M) ಶಾಸಕ, ನಟ ಮುಖೇಶ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಇದರ ನಂತರ ಯುವತಿಯು ಅನುಮಾನಾಸ್ಪದಳಾಗಿ ರಹಸ್ಯ ಕ್ಯಾಮೆರಾಗಳು ಅಥವಾ ಕಣ್ಗಾವಲು ಸಾಧನಗಳಿಗಾಗಿ ತನ್ನ ಅಪಾರ್ಟ್ಮೆಂಟ್ ಅನ್ನು ಹುಡುಕಲು ಪ್ರಾರಂಭಿಸಿದ್ದು, ಈ ವೇಳೆ ಅವರ ಬಾತ್ರೂಮ್‌ನ ಬಲ್ಬ್ ಹೋಲ್ಡರ್ನಲ್ಲಿ ಕ್ಯಾಮೆರಾ ಇರುವುದು ಕಂಡುಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದರು. ಇದರ ಬೆನ್ನಲ್ಲೇ ಸೋಮವಾರ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ದೂರಿನ ನಂತರ ಪೊಲೀಸ್ ತಂಡವು ಸಂಪೂರ್ಣ ಹುಡುಕಾಟ ನಡೆಸಿದ್ದು, ಅವರ ಮಲಗುವ ಕೋಣೆಯ ಬಲ್ಬ್ ಹೋಲ್ಡರ್‌ನಲ್ಲಿ ಅಳವಡಿಸಲಾದ ಮತ್ತೊಂದು ಕ್ಯಾಮೆರಾವನ್ನು ಪತ್ತೆ ಮಾಡಿದೆ ಎಂದು ಅಧಿಕಾರಿ ಹೇಳಿದ್ದಾರೆ. ತಾನು ಊರಿಂದ ಹೊರಗೆ ಹೋದಲ್ಲೆಲ್ಲಾ ಅದೇ ಕಟ್ಟಡದ ಬೇರೆ ಮಹಡಿಯಲ್ಲಿ ವಾಸಿಸುವ ಕರಣ್‌ಗೆ ತನ್ನ ಮನೆಯ ಕೀಲಿಗಳನ್ನು ಕೊಟ್ಟಿದ್ದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ವಿಚಾರಣೆ ವೇಳೆ ಕರಣ್ ಮೂರು ತಿಂಗಳ ಹಿಂದೆ ಮಹಿಳೆಯು ಉತ್ತರ ಪ್ರದೇಶದ ತನ್ನ ಊರಿಗೆ ತೆರಳಿದಾಗ ಮನೆಯ ಕೀಲಿಗಳನ್ನು ಆತನಿಗೆ ಹಸ್ತಾಂತರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ. ಇದನ್ನು ಬಳಸಿಕೊಂಡ ಕರಣ್ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಲಭ್ಯವಿರುವ ಮೂರು ಸ್ಪೈ ಕ್ಯಾಮೆರಾಗಳನ್ನು ಖರೀದಿಸಿದ್ದನು. ಅವುಗಳಲ್ಲಿ ಒಂದನ್ನು ಯುವತಿಯ ಮಲಗುವ ಕೋಣೆಯಲ್ಲಿ ಮತ್ತು ಇನ್ನೊಂದನ್ನು ತನ್ನ ಬಾತ್ರೂಮ್‌ನಲ್ಲಿ ಸ್ಥಾಪಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ: ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅನುಮತಿಸಿದ ‘ಬಿಎನ್‌ಎಸ್‌ಎಸ್‌’ ಕಾಯ್ದೆ ಹೇಳುವುದೇನು..?

ಈ ಕ್ಯಾಮೆರಾಗಳನ್ನು ಆನ್‌ಲೈನ್‌ನಲ್ಲಿ ಆಪರೇಟ್ ಮಾಡಲು ಸಾಧ್ಯವಾಗದ ಕಾರಣ ಮತ್ತು ವೀಡಿಯೊಗಳನ್ನು ಸಂಗ್ರಹಿಸಲು ಮೆಮೊರಿ ಕಾರ್ಡ್ ಅನ್ನು ಬಳಸಿದ್ದನು. ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಮೆಮೊರಿ ಕಾರ್ಡ್‌ನಿಂದ ಲ್ಯಾಪ್‌ಟಾಪ್‌ಗೆ ವರ್ಗಾಯಿಸಲು ಬಯಸಿದ್ದ ಕರಣ್ ಫ್ಯಾನ್‌ ರಿಪೇರಿ ಮಾಡುವ ನೆಪದಲ್ಲಿ ಮನೆಯ ಕೀಲಿಗಳನ್ನು ನೀಡುವಂತೆ ಮಹಿಳೆಗೆ ನಿರಂತರವಾಗಿ ವಿನಂತಿಸಿದ್ದನು ಎಂದು ಯುವತಿ ಹೇಳಿದ್ದಾರೆ.

ಪೊಲೀಸರು ನಡೆಸಿದ ತನಿಖೆಯ ಸಮಯದಲ್ಲಿ, ಕರಣ್ ಕೈಯಲ್ಲಿದ್ದ ಮತ್ತೊಂದು ಸ್ಪೈ ಕ್ಯಾಮೆರಾವನ್ನು ವಶಪಡಿಸಿಕೊಳ್ಳಲಾಗಿದ್ದು, ಜೊತೆಗೆ ರೆಕಾರ್ಡ್ ಮಾಡಿದ ವೀಡಿಯೊಗಳನ್ನು ಸಂಗ್ರಹಿಸಲು ಬಳಸಿದ ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಎನ್‌ಎಸ್‌ನ ಸೆಕ್ಷನ್ 77 ಅಡಿಯಲ್ಲಿ ಶಕರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರಣ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರಣ್ ಪದವೀಧರರಾಗಿದ್ದು, ಕಳೆದ ಏಳು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಬಾಡಿಗೆದಾರ ಯುವತಿ

ವಿಡಿಯೊ ನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...