Homeಕರ್ನಾಟಕನಿಯಮ ಉಲ್ಲಂಘಿಸಿ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಗೆ ಟೆಂಡರ್: ಪ್ರಕಾಶಕರ ದೂರು

ನಿಯಮ ಉಲ್ಲಂಘಿಸಿ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಗೆ ಟೆಂಡರ್: ಪ್ರಕಾಶಕರ ದೂರು

- Advertisement -
- Advertisement -

ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧೀನದ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಪೂರೈಕೆ ಮಾಡಲು ಅಲ್ಪಾವಧಿ ಟೆಂಡರ್ ಕರೆಯಲಾಗಿದೆ. ಇದು ನಿಯಮಾವಳಿಗಳಿಗೆ ವಿರುದ್ಧವಾಗಿದೆ ಎಂದು ಪ್ರಕಾಶಕರು ದೂರಿದ್ದಾರೆ.

ಈ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸಲು ಇಲಾಖೆಯ ಕಾರ್ಯದರ್ಶಿಯ ಅಧ್ಯಕ್ಷತೆಯಲ್ಲಿ 18 ಸದಸ್ಯರ ರಾಜ್ಯಮಟ್ಟದ ಆಯ್ಕೆ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಶಿಫಾರಸು ಮಾಡಿದ ಬಳಿಕವಷ್ಟೇ ಪುಸ್ತಕಗಳ ಖರೀದಿಗೆ ಟೆಂಡರ್ ಕರೆಯಬೇಕು ಎಂದು ಪ್ರಕಾಶಕರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕರ್ನಾಟಕ ಪ್ರಕಾಶಕರ ಸಂಘದ ಸೃಷ್ಟಿ ನಾಗೇಶ್ ಮಾತನಾಡಿದ್ದು, “ಹಾಸನ ಜಿಲ್ಲೆಯಲ್ಲಿ ಅಲ್ಪಾವಧಿ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಅರ್ಜಿ ಸಲ್ಲಿಸಲು ಜನವರಿ 2 ಕೊನೆಯ ದಿನವಾಗಿತ್ತು. ಬೇರೆ ಜಿಲ್ಲೆಗಳಲ್ಲೂ ಇದೇ ರೀತಿಯ ಟೆಂಡರ್ ಕರೆಯಲಾಗಿದೆ ಎಂದು ಹೇಳಲಾಗಿದ್ದು, ಆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಮೂಲಕ ಯಾವುದೋ ಒಂದೆರಡು ಪ್ರಕಾಶನಗಳಿಗೆ ಅನುಕೂಲ ಮಾಡಿಕೊಡವ ಪ್ರಯತ್ನ ನಡೆದಿದೆ” ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: ‘ಬಜೆಟ್‌ನಲ್ಲಿ ತೆಲಂಗಾಣಕ್ಕೆ ಕೊಟ್ಟಿದ್ದು ಶೂನ್ಯ’; ಬ್ಯಾನರ್ ಹಾಕಿಸಿದ ತೆಲಂಗಾಣ ಸರ್ಕಾರ

“ಸಮಾಜ ಜಲ್ಯಾಣ ಇಲಾಖೆ ತನ್ನ ಆದೇಶದಲ್ಲಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಆಯ್ಕೆ ಸಮಿತಿ ಮೂಲಕವೇ ಖರೀದಿಸಬೇಕು” ಎಂದು ತಿಳಿಸಿದೆ. ಆದರೆ ಇದೀಗ ಆ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಅವರು ಹೇಳಿದರು.

ಈ ಬಗ್ಗೆ ‘ನಾನುಗೌರಿ.ಕಾಂ’ ಪ್ರತಿನಿಧಿಯೊಂದಿಗೆ ಮಾತನಾಡಿದ ಪ್ರಕಾಶಕರ ಸಂಘದ ಸೃಷ್ಟಿ ನಾಗೇಶ್ ಅವರು, “ಈ ಪುಸ್ತಕ ಖರೀದಿಗೆಂದೇ ಸಮಾಜ ಕಲ್ಯಾಣ ಇಲಾಖೆ ಪ್ರತಿವರ್ಷ 24 ಕೋಟಿ ರೂ. ವೆಚ್ಚ ಮಾಡುತ್ತದೆ. ಪುಸ್ತಕ ಖರೀದಿಗೆ ಬೆಲೆ ನಿಗದಿ ಮಾಡಲು ಒಂದು ಸಮಿತಿ ಇರಬೇಕು ಎಂದು ನಾವು ಮನವಿ ಸಲ್ಲಿಸಿದ್ದೆವು. ಅದರಂತೆ  ರಾಜ್ಯ ಮಟ್ಟದ ಸಮಿತಿ ರಚನೆ ಮಾಡಿ ಕೆಲವು ನಿಯಮಗಳನ್ನು ಮಾಡಲಾಯಿತು. ಆ ನಿಯಮಗಳ ಅಡಿಯಲ್ಲಿ ಈ ಟೆಂಡರ್ ಪ್ರಕ್ರಿಯೆ ಕೂಡ ಬರುತ್ತದೆ” ಎಂದು ಹೇಳಿದರು.

“ನಿಯಮಾವಳಿಗಳ ಬಗ್ಗೆ ಮೇಲ್ಮಟ್ಟದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ‘. ಆದರೆ ಜಿಲ್ಲಾಮಟ್ಟದ ಅಧಿಕಾರಿಗಳು ನಿಯಮ ಪಾಲಿಸುತ್ತಿಲ್ಲ. ನಿಯಮಾನುಸಾರ ಟೆಂಡರ್ ಕರೆದರೆ ಯಾವ ಪ್ರಕಾಶಕರಿಗೆ ಸಿಗತ್ತದೋ ಸಿಗಲಿ, ಆದರೆ ಅವರ ಮನಸೋ ಇಚ್ಛೆ ಟೆಂಡರ್ ಕರೆಯುವುದರಿಂದ ಅದು ಒಬ್ಬಿಬ್ಬರ ಪಾಲಾಗುತ್ತದೆ. ಅಲ್ಲಿ ಸರ್ಕಾರದ ಹಣ ಪೋಲಾಗಲೂಬಹುದು. ಹಾಗಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಖರೀದಿಸಲು, ಸಮಿತಿಯು ಶಿಫಾರಸು ಮಾಡಿದ ಬಳಿಕವಷ್ಟೇ ಪುಸ್ತಕಗಳ ಖರೀದಿಗೆ ಟೆಂಡರ್ ಕರೆಯಬೇಕು” ಎಂದು ಅವರು ಒತ್ತಾಯಿಸಿದರು.

ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ ಕೂಡ ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಹಾಗೂ ಪುಸ್ತಕ ಬೆಲೆ ನಿಗದಿ ವಿಚಾರವಾಗಿ ಸಿಎಂಗೆ ಪತ್ರ ಬರೆದಿದ್ದು, “ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಏಕವಗಾಕ್ಷಿ ಯೋಜನೆಯ ಪುಸ್ತಕ ಖರೀದಿಗೆ ಹಣ ಬಿಡುಗಡೆ ಮಾಡಬೇಕು ಮತ್ತು ಕನ್ನಡ ಪುಸ್ತಕಗಳ ಪುಟವಾರು ಬೆಲೆ ಪರಿಷ್ಕರಿಸಿ, ತಕ್ಷಣವೇ ಜಾರಿ ಮಾಡಬೇಕು” ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...