Homeಕರ್ನಾಟಕನಿಯಮ ಉಲ್ಲಂಘಿಸಿ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಗೆ ಟೆಂಡರ್: ಪ್ರಕಾಶಕರ ದೂರು

ನಿಯಮ ಉಲ್ಲಂಘಿಸಿ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಗೆ ಟೆಂಡರ್: ಪ್ರಕಾಶಕರ ದೂರು

- Advertisement -
- Advertisement -

ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧೀನದ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಪೂರೈಕೆ ಮಾಡಲು ಅಲ್ಪಾವಧಿ ಟೆಂಡರ್ ಕರೆಯಲಾಗಿದೆ. ಇದು ನಿಯಮಾವಳಿಗಳಿಗೆ ವಿರುದ್ಧವಾಗಿದೆ ಎಂದು ಪ್ರಕಾಶಕರು ದೂರಿದ್ದಾರೆ.

ಈ ವಿದ್ಯಾನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸಲು ಇಲಾಖೆಯ ಕಾರ್ಯದರ್ಶಿಯ ಅಧ್ಯಕ್ಷತೆಯಲ್ಲಿ 18 ಸದಸ್ಯರ ರಾಜ್ಯಮಟ್ಟದ ಆಯ್ಕೆ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಶಿಫಾರಸು ಮಾಡಿದ ಬಳಿಕವಷ್ಟೇ ಪುಸ್ತಕಗಳ ಖರೀದಿಗೆ ಟೆಂಡರ್ ಕರೆಯಬೇಕು ಎಂದು ಪ್ರಕಾಶಕರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕರ್ನಾಟಕ ಪ್ರಕಾಶಕರ ಸಂಘದ ಸೃಷ್ಟಿ ನಾಗೇಶ್ ಮಾತನಾಡಿದ್ದು, “ಹಾಸನ ಜಿಲ್ಲೆಯಲ್ಲಿ ಅಲ್ಪಾವಧಿ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಅರ್ಜಿ ಸಲ್ಲಿಸಲು ಜನವರಿ 2 ಕೊನೆಯ ದಿನವಾಗಿತ್ತು. ಬೇರೆ ಜಿಲ್ಲೆಗಳಲ್ಲೂ ಇದೇ ರೀತಿಯ ಟೆಂಡರ್ ಕರೆಯಲಾಗಿದೆ ಎಂದು ಹೇಳಲಾಗಿದ್ದು, ಆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಮೂಲಕ ಯಾವುದೋ ಒಂದೆರಡು ಪ್ರಕಾಶನಗಳಿಗೆ ಅನುಕೂಲ ಮಾಡಿಕೊಡವ ಪ್ರಯತ್ನ ನಡೆದಿದೆ” ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: ‘ಬಜೆಟ್‌ನಲ್ಲಿ ತೆಲಂಗಾಣಕ್ಕೆ ಕೊಟ್ಟಿದ್ದು ಶೂನ್ಯ’; ಬ್ಯಾನರ್ ಹಾಕಿಸಿದ ತೆಲಂಗಾಣ ಸರ್ಕಾರ

“ಸಮಾಜ ಜಲ್ಯಾಣ ಇಲಾಖೆ ತನ್ನ ಆದೇಶದಲ್ಲಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಆಯ್ಕೆ ಸಮಿತಿ ಮೂಲಕವೇ ಖರೀದಿಸಬೇಕು” ಎಂದು ತಿಳಿಸಿದೆ. ಆದರೆ ಇದೀಗ ಆ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಅವರು ಹೇಳಿದರು.

ಈ ಬಗ್ಗೆ ‘ನಾನುಗೌರಿ.ಕಾಂ’ ಪ್ರತಿನಿಧಿಯೊಂದಿಗೆ ಮಾತನಾಡಿದ ಪ್ರಕಾಶಕರ ಸಂಘದ ಸೃಷ್ಟಿ ನಾಗೇಶ್ ಅವರು, “ಈ ಪುಸ್ತಕ ಖರೀದಿಗೆಂದೇ ಸಮಾಜ ಕಲ್ಯಾಣ ಇಲಾಖೆ ಪ್ರತಿವರ್ಷ 24 ಕೋಟಿ ರೂ. ವೆಚ್ಚ ಮಾಡುತ್ತದೆ. ಪುಸ್ತಕ ಖರೀದಿಗೆ ಬೆಲೆ ನಿಗದಿ ಮಾಡಲು ಒಂದು ಸಮಿತಿ ಇರಬೇಕು ಎಂದು ನಾವು ಮನವಿ ಸಲ್ಲಿಸಿದ್ದೆವು. ಅದರಂತೆ  ರಾಜ್ಯ ಮಟ್ಟದ ಸಮಿತಿ ರಚನೆ ಮಾಡಿ ಕೆಲವು ನಿಯಮಗಳನ್ನು ಮಾಡಲಾಯಿತು. ಆ ನಿಯಮಗಳ ಅಡಿಯಲ್ಲಿ ಈ ಟೆಂಡರ್ ಪ್ರಕ್ರಿಯೆ ಕೂಡ ಬರುತ್ತದೆ” ಎಂದು ಹೇಳಿದರು.

“ನಿಯಮಾವಳಿಗಳ ಬಗ್ಗೆ ಮೇಲ್ಮಟ್ಟದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ‘. ಆದರೆ ಜಿಲ್ಲಾಮಟ್ಟದ ಅಧಿಕಾರಿಗಳು ನಿಯಮ ಪಾಲಿಸುತ್ತಿಲ್ಲ. ನಿಯಮಾನುಸಾರ ಟೆಂಡರ್ ಕರೆದರೆ ಯಾವ ಪ್ರಕಾಶಕರಿಗೆ ಸಿಗತ್ತದೋ ಸಿಗಲಿ, ಆದರೆ ಅವರ ಮನಸೋ ಇಚ್ಛೆ ಟೆಂಡರ್ ಕರೆಯುವುದರಿಂದ ಅದು ಒಬ್ಬಿಬ್ಬರ ಪಾಲಾಗುತ್ತದೆ. ಅಲ್ಲಿ ಸರ್ಕಾರದ ಹಣ ಪೋಲಾಗಲೂಬಹುದು. ಹಾಗಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಖರೀದಿಸಲು, ಸಮಿತಿಯು ಶಿಫಾರಸು ಮಾಡಿದ ಬಳಿಕವಷ್ಟೇ ಪುಸ್ತಕಗಳ ಖರೀದಿಗೆ ಟೆಂಡರ್ ಕರೆಯಬೇಕು” ಎಂದು ಅವರು ಒತ್ತಾಯಿಸಿದರು.

ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ ಕೂಡ ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಹಾಗೂ ಪುಸ್ತಕ ಬೆಲೆ ನಿಗದಿ ವಿಚಾರವಾಗಿ ಸಿಎಂಗೆ ಪತ್ರ ಬರೆದಿದ್ದು, “ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಏಕವಗಾಕ್ಷಿ ಯೋಜನೆಯ ಪುಸ್ತಕ ಖರೀದಿಗೆ ಹಣ ಬಿಡುಗಡೆ ಮಾಡಬೇಕು ಮತ್ತು ಕನ್ನಡ ಪುಸ್ತಕಗಳ ಪುಟವಾರು ಬೆಲೆ ಪರಿಷ್ಕರಿಸಿ, ತಕ್ಷಣವೇ ಜಾರಿ ಮಾಡಬೇಕು” ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....