Homeಮುಖಪುಟಏಳು ಐಷಾರಾಮಿ ಬಿಎಂಡಬ್ಲ್ಯೂ ಕಾರುಗಳಿಗೆ ಟೆಂಡರ್ : ತೀವ್ರ ಟೀಕೆಗೆ ಗುರಿಯಾದ ಲೋಕ್‌ಪಾಲ್

ಏಳು ಐಷಾರಾಮಿ ಬಿಎಂಡಬ್ಲ್ಯೂ ಕಾರುಗಳಿಗೆ ಟೆಂಡರ್ : ತೀವ್ರ ಟೀಕೆಗೆ ಗುರಿಯಾದ ಲೋಕ್‌ಪಾಲ್

- Advertisement -
- Advertisement -

ಭ್ರಷ್ಟಾಚಾರ ನಿಗ್ರಹ ಸಂಸ್ಥೆ ‘ಲೋಕಪಾಲ್’ ತನ್ನ ಸದಸ್ಯರಿಗೆ ಸುಮಾರು 70 ಲಕ್ಷ ರೂಪಾಯಿ ಆನ್ ರೋಡ್ ಬೆಲೆಯ ಏಳು ಐಷಾರಾಮಿ ಬಿಎಂಡಬ್ಲ್ಯು ಕಾರುಗಳನ್ನು ಖರೀದಿಸಲು ಮುಂದಾಗಿರುವುದು ಚರ್ಚೆಗೆ ಕಾರಣವಾಗಿದೆ.

ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ರಾಜ್ಯಸಭಾ ಸಂಸದರಾದ ಪಿ. ಚಿದಂಬರಂ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರು ಲೋಕಪಾಲ್ ನಡೆಯನ್ನು ಟೀಕಿಸಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಸಾಧಾರಣ ಸೆಡಾನ್ ಕಾರುಗಳನ್ನು ನೀಡುವಾಗ, ಲೋಕಪಾಲ್ ಅಧ್ಯಕ್ಷರು ಮತ್ತು ಅದರ ಆರು ಮಂದಿ ಸದಸ್ಯರು ಬಿಎಂಡಬ್ಲ್ಯು ಕಾರುಗಳನ್ನು ಬಯಸುತ್ತಿರುವುದು ಏಕೆ? ಎಂದು ಮಾಜಿ ಗೃಹ ಸಚಿವ ಪಿ. ಚಿದಂಬರಂ ಪ್ರಶ್ನಿಸಿದ್ದಾರೆ.

“ಈ ಕಾರುಗಳನ್ನು ಖರೀದಿಸಲು ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಬೇಕು? ಲೋಕಪಾಲ್‌ನ ಕನಿಷ್ಠ ಒಬ್ಬರು ಅಥವಾ ಇಬ್ಬರು ಸದಸ್ಯರು ಈ ಕಾರುಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಅಥವಾ ನಿರಾಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಚಿದಂಬರಂ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಲೋಕಪಾಲ್ ಕುರಿತ ಸಂಸದೀಯ ಸಮಿತಿಯ ಅಧ್ಯಕ್ಷತೆ ವಹಿಸಿದ್ದನ್ನು ನೆನಪಿಸಿಕೊಂಡಿರುವ ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಅಭಿಷೇಕ್ ಮನು ಸಿಂಘ್ವಿ, ನನ್ನ ತಂದೆ, ಮಾಜಿ ಸಂಸದ ಡಾ. ಎಲ್. ಎಂ. ಸಿಂಘ್ವಿ ಅವರು 1960ರ ದಶಕದಲ್ಲಿ ಲೋಕಪಾಲ್‌ನ ಕಲ್ಪನೆಯನ್ನು ಮೊದಲು ಮುನ್ನಲೆಗೆ ತಂದವರು. ಈ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಈಗ ತನ್ನ ಸದಸ್ಯರಿಗೆ ಬಿಎಂಡಬ್ಲ್ಯು ಕಾರುಗಳನ್ನು ಖರೀದಿಸಲು ಮುಂದಾಗಿರುವುದು ದುರಂತ ವ್ಯಂಗ್ಯ ಎಂದಿದ್ದಾರೆ. ಸಮಗ್ರತೆಯ ರಕ್ಷಕರು ನ್ಯಾಯಸಮ್ಮತತೆಯ ಬದಲು ಐಷಾರಾಮಿಗಳನ್ನು ಬೆನ್ನಟ್ಟುತ್ತಿದ್ದಾರೆ” ಎಂದು ಅವರು ಎಕ್ಸ್‌ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

“ಲೋಕಪಾಲ್ ಸಂಸ್ಥೆಯು 2019ರಲ್ಲಿ ಸ್ಥಾಪನೆಯಾದಾಗಿನಿಂದ 8,703 ದೂರುಗಳನ್ನು ಸ್ವೀಕರಿಸಿದೆ. ಈ ಪೈಕಿ ಕೇವಲ 24 ಪ್ರಕರಣಗಳಲ್ಲಿ ತನಿಖೆ ನಡೆದಿದೆ ಮತ್ತು 6 ಪ್ರಕರಣಗಳಲ್ಲಿ ಮಾತ್ರ ಕಾನೂನು ಕ್ರಮಕ್ಕೆ ಅನುಮತಿ ನೀಡಲಾಗಿದೆ” ಎಂದು ಸಿಂಘ್ವಿ ತಿಳಿಸಿದ್ದಾರೆ.

ಮುಂದುವರಿದು, “ಈಗ ತಲಾ 70 ಲಕ್ಷ ರೂಪಾಯಿ ಮೌಲ್ಯದ ಬಿಎಂಡಬ್ಲ್ಯೂ ಕಾರುಗಳು. ಲೋಕಪಾಲ್ ಭ್ರಷ್ಟಾಚಾರವನ್ನು ತಡೆಯುವ ಶಕ್ತಿಶಾಲಿ ಸಂಸ್ಥೆಯಾಗಿರಬೇಕು, ಆದರೆ ಅದು ದುರ್ಬಲವಾಗಿ ಕೆಲಸ ಮಾಡುತ್ತಿದೆ. ಉದಾಹರಣೆಗೆ: ಅದು ಬಲಿಷ್ಠವಾದ ‘ಪ್ಯಾಂಥರ್’ (ಚೀತಾ) ರೀತಿಯಾಗಿರಬೇಕು, ಆದರೆ ಇದು ಚಿಕ್ಕ ‘ಪೂಡಲ್’ (ಪುಟ್ಟ ನಾಯಿ) ರೀತಿಯಾಗಿದೆ” ಎಂದು ಸಿಂಘ್ವಿ ಹೇಳಿದ್ದಾರೆ.

ಅಕ್ಟೋಬರ್ 16ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ, ಲೋಕಪಾಲ್ ಏಳು ಬಿಎಂಡ್ಬ್ಲ್ಯೂ 3 ಸೀರೀಸ್ ಲಿ ಕಾರುಗಳ ಪೂರೈಕೆಗಾಗಿ ಮುಕ್ತ ಟೆಂಡರ್‌ಗಳನ್ನು ಆಹ್ವಾನಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಲೋಕಪಾಲ್ ಚಾಲಕರು ಮತ್ತು ಸಿಬ್ಬಂದಿಗೆ ಏಳು ದಿನಗಳ ತರಬೇತಿಯನ್ನು ನೀಡುವಂತೆ ಬಿಎಂಡಬ್ಲ್ಯು ಹೇಳಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅಧ್ಯಕ್ಷೆತೆಯ ಲೋಕ್‌ಪಾಲ್‌ನಲ್ಲಿ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ, ನ್ಯಾಯಮೂರ್ತಿ ಸಂಜಯ್ ಯಾದವ್ ಮತ್ತು ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ಮಾಜಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮತ್ತು ನಿವೃತ್ತ ಅಧಿಕಾರಿಗಳಾದ ಪಂಕಜ್ ಕುಮಾರ್ ಮತ್ತು ಅಜಯ್ ಟಿರ್ಕಿ ಸದಸ್ಯರಾಗಿದ್ದಾರೆ.

ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...