Homeಮುಖಪುಟಏಳು ಐಷಾರಾಮಿ ಬಿಎಂಡಬ್ಲ್ಯೂ ಕಾರುಗಳಿಗೆ ಟೆಂಡರ್ : ತೀವ್ರ ಟೀಕೆಗೆ ಗುರಿಯಾದ ಲೋಕ್‌ಪಾಲ್

ಏಳು ಐಷಾರಾಮಿ ಬಿಎಂಡಬ್ಲ್ಯೂ ಕಾರುಗಳಿಗೆ ಟೆಂಡರ್ : ತೀವ್ರ ಟೀಕೆಗೆ ಗುರಿಯಾದ ಲೋಕ್‌ಪಾಲ್

- Advertisement -
- Advertisement -

ಭ್ರಷ್ಟಾಚಾರ ನಿಗ್ರಹ ಸಂಸ್ಥೆ ‘ಲೋಕಪಾಲ್’ ತನ್ನ ಸದಸ್ಯರಿಗೆ ಸುಮಾರು 70 ಲಕ್ಷ ರೂಪಾಯಿ ಆನ್ ರೋಡ್ ಬೆಲೆಯ ಏಳು ಐಷಾರಾಮಿ ಬಿಎಂಡಬ್ಲ್ಯು ಕಾರುಗಳನ್ನು ಖರೀದಿಸಲು ಮುಂದಾಗಿರುವುದು ಚರ್ಚೆಗೆ ಕಾರಣವಾಗಿದೆ.

ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ರಾಜ್ಯಸಭಾ ಸಂಸದರಾದ ಪಿ. ಚಿದಂಬರಂ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರು ಲೋಕಪಾಲ್ ನಡೆಯನ್ನು ಟೀಕಿಸಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಸಾಧಾರಣ ಸೆಡಾನ್ ಕಾರುಗಳನ್ನು ನೀಡುವಾಗ, ಲೋಕಪಾಲ್ ಅಧ್ಯಕ್ಷರು ಮತ್ತು ಅದರ ಆರು ಮಂದಿ ಸದಸ್ಯರು ಬಿಎಂಡಬ್ಲ್ಯು ಕಾರುಗಳನ್ನು ಬಯಸುತ್ತಿರುವುದು ಏಕೆ? ಎಂದು ಮಾಜಿ ಗೃಹ ಸಚಿವ ಪಿ. ಚಿದಂಬರಂ ಪ್ರಶ್ನಿಸಿದ್ದಾರೆ.

“ಈ ಕಾರುಗಳನ್ನು ಖರೀದಿಸಲು ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಬೇಕು? ಲೋಕಪಾಲ್‌ನ ಕನಿಷ್ಠ ಒಬ್ಬರು ಅಥವಾ ಇಬ್ಬರು ಸದಸ್ಯರು ಈ ಕಾರುಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಅಥವಾ ನಿರಾಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಚಿದಂಬರಂ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಲೋಕಪಾಲ್ ಕುರಿತ ಸಂಸದೀಯ ಸಮಿತಿಯ ಅಧ್ಯಕ್ಷತೆ ವಹಿಸಿದ್ದನ್ನು ನೆನಪಿಸಿಕೊಂಡಿರುವ ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಅಭಿಷೇಕ್ ಮನು ಸಿಂಘ್ವಿ, ನನ್ನ ತಂದೆ, ಮಾಜಿ ಸಂಸದ ಡಾ. ಎಲ್. ಎಂ. ಸಿಂಘ್ವಿ ಅವರು 1960ರ ದಶಕದಲ್ಲಿ ಲೋಕಪಾಲ್‌ನ ಕಲ್ಪನೆಯನ್ನು ಮೊದಲು ಮುನ್ನಲೆಗೆ ತಂದವರು. ಈ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಈಗ ತನ್ನ ಸದಸ್ಯರಿಗೆ ಬಿಎಂಡಬ್ಲ್ಯು ಕಾರುಗಳನ್ನು ಖರೀದಿಸಲು ಮುಂದಾಗಿರುವುದು ದುರಂತ ವ್ಯಂಗ್ಯ ಎಂದಿದ್ದಾರೆ. ಸಮಗ್ರತೆಯ ರಕ್ಷಕರು ನ್ಯಾಯಸಮ್ಮತತೆಯ ಬದಲು ಐಷಾರಾಮಿಗಳನ್ನು ಬೆನ್ನಟ್ಟುತ್ತಿದ್ದಾರೆ” ಎಂದು ಅವರು ಎಕ್ಸ್‌ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

“ಲೋಕಪಾಲ್ ಸಂಸ್ಥೆಯು 2019ರಲ್ಲಿ ಸ್ಥಾಪನೆಯಾದಾಗಿನಿಂದ 8,703 ದೂರುಗಳನ್ನು ಸ್ವೀಕರಿಸಿದೆ. ಈ ಪೈಕಿ ಕೇವಲ 24 ಪ್ರಕರಣಗಳಲ್ಲಿ ತನಿಖೆ ನಡೆದಿದೆ ಮತ್ತು 6 ಪ್ರಕರಣಗಳಲ್ಲಿ ಮಾತ್ರ ಕಾನೂನು ಕ್ರಮಕ್ಕೆ ಅನುಮತಿ ನೀಡಲಾಗಿದೆ” ಎಂದು ಸಿಂಘ್ವಿ ತಿಳಿಸಿದ್ದಾರೆ.

ಮುಂದುವರಿದು, “ಈಗ ತಲಾ 70 ಲಕ್ಷ ರೂಪಾಯಿ ಮೌಲ್ಯದ ಬಿಎಂಡಬ್ಲ್ಯೂ ಕಾರುಗಳು. ಲೋಕಪಾಲ್ ಭ್ರಷ್ಟಾಚಾರವನ್ನು ತಡೆಯುವ ಶಕ್ತಿಶಾಲಿ ಸಂಸ್ಥೆಯಾಗಿರಬೇಕು, ಆದರೆ ಅದು ದುರ್ಬಲವಾಗಿ ಕೆಲಸ ಮಾಡುತ್ತಿದೆ. ಉದಾಹರಣೆಗೆ: ಅದು ಬಲಿಷ್ಠವಾದ ‘ಪ್ಯಾಂಥರ್’ (ಚೀತಾ) ರೀತಿಯಾಗಿರಬೇಕು, ಆದರೆ ಇದು ಚಿಕ್ಕ ‘ಪೂಡಲ್’ (ಪುಟ್ಟ ನಾಯಿ) ರೀತಿಯಾಗಿದೆ” ಎಂದು ಸಿಂಘ್ವಿ ಹೇಳಿದ್ದಾರೆ.

ಅಕ್ಟೋಬರ್ 16ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ, ಲೋಕಪಾಲ್ ಏಳು ಬಿಎಂಡ್ಬ್ಲ್ಯೂ 3 ಸೀರೀಸ್ ಲಿ ಕಾರುಗಳ ಪೂರೈಕೆಗಾಗಿ ಮುಕ್ತ ಟೆಂಡರ್‌ಗಳನ್ನು ಆಹ್ವಾನಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಲೋಕಪಾಲ್ ಚಾಲಕರು ಮತ್ತು ಸಿಬ್ಬಂದಿಗೆ ಏಳು ದಿನಗಳ ತರಬೇತಿಯನ್ನು ನೀಡುವಂತೆ ಬಿಎಂಡಬ್ಲ್ಯು ಹೇಳಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅಧ್ಯಕ್ಷೆತೆಯ ಲೋಕ್‌ಪಾಲ್‌ನಲ್ಲಿ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ, ನ್ಯಾಯಮೂರ್ತಿ ಸಂಜಯ್ ಯಾದವ್ ಮತ್ತು ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ಮಾಜಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮತ್ತು ನಿವೃತ್ತ ಅಧಿಕಾರಿಗಳಾದ ಪಂಕಜ್ ಕುಮಾರ್ ಮತ್ತು ಅಜಯ್ ಟಿರ್ಕಿ ಸದಸ್ಯರಾಗಿದ್ದಾರೆ.

ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...