Homeಮುಖಪುಟಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ - ಶಿವಾನಂದ್ ತಿವಾರಿ

ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

- Advertisement -
- Advertisement -

“ಅಂತರರಾಷ್ಟ್ರೀಯ ಗಣ್ಯರ ವಿರುದ್ಧ ಕೇಂದ್ರ ಸರ್ಕಾರವೂ ಸಚಿನ್ ತೆಂಡೂಲ್ಕರ್ ಅವರನ್ನು ಕಣಕ್ಕಿಳಿಸಿದೆ” ಎಂದು ಆರ್‌ಜೆಡಿಯ ನಾಯಕ ನಾಯಕ ಶಿವಾನಂದ್ ತಿವಾರಿ ಶುಕ್ರವಾರ ಆರೋಪಿಸಿದ್ದಾರೆ. ರೈತ ಹೋರಾಟವನ್ನು ಬೆಂಬಲಿಸಿ ಖ್ಯಾತ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಮತ್ತು ಪಾಪ್ ಸಿಂಗರ್ ರಿಹಾನ್ನ ಟ್ವೀಟ್ ಮಾಡಿದ್ದರು.

ಇದನ್ನು ಖಂಡಿಸಿ ಕ್ರಿಕೆಟರ್‌ಗಳಾದ ಸಚಿನ್ ತೆಂಡೂಲ್ಕರ್, ರವಿಶಾಸ್ತ್ರಿ, ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್, ಕಂಗನಾ ರಣಾವತ್ ಸೇರಿ ಮುಂತಾದವರು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಆರ್‌ಜೆಡಿಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಾನಂದ ತಿವಾರಿ, “ಸಚಿನ್ ಅಂಥವರಿಂದ ಹೇಳಿಕೆಗಳನ್ನು ಕೊಡಿಸುವ ಮೂಲಕ ರೈತರ ಹೋರಾಟಕ್ಕೆ ಜಗತ್ತು ಕುರುಡಾಗಿರಬೇಕು ಎಂದು ಕೇಂದ್ರ ಬಯಸುತ್ತಿದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಬಾಲಿವುಡ್ ನಟ ಸಲ್ಮಾನ್ ಖಾನ್‌‌ ಹೇಳಿದ್ದೇನು?

“ರೈತರಿಗೆ ಟ್ವಿಟರ್ ಬಗ್ಗೆ ಗೊತ್ತಿಲ್ಲ. ಟ್ವಿಟರ್ ರಾಜಕೀಯ ಇತ್ತೀಚೆಗೆ ಪ್ರಾರಂಭವಾಗಿದೆ. ಎಲ್ಲರೂ ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಗ್ರೇಟಾ ಥನ್‌ಬರ್ಗ್‌ ಅಥವಾ ರಿಹಾನ್ನಾ ಬಗ್ಗೆ ರೈತರಿಗೆ ಏನು ಗೊತ್ತು? ನೀವು ಅವರ ವಿರುದ್ಧ ಸಚಿನ್ ತೆಂಡೂಲ್ಕರ್ ಅವರನ್ನು ಕಣಕ್ಕಿಳಿಸಿದ್ದೀರಿ” ಎಂದು ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ತಿವಾರಿ ಅವರ ಹೇಳಿಕೆಯು ಬಿಹಾರದ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಯುವನ್ನು ಕೆರಳಿಸಿದ್ದು, ತಿವಾರಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ದೆಹಲಿ ಪೊಲೀಸರು ಘರ್ಷಣೆ ನಡೆಸಿದ ನಂತರ ಅಲ್ಲಿ ಇಂಟರ್ನೆಟ್ ಕಡಿತಗೊಳಿಸಿರುವುದನ್ನು ಉಲ್ಲೇಖಿಸಿ ಸಿಎನ್‌ಎನ್ ಹೋರಾಟದ ಬಗ್ಗೆ ವರದಿ ಮಾಡಿತ್ತು. ಇದನ್ನು ತನ್ನ ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದ ಪಾಪ್ ತಾರೆ ರಿಹಾನ್ನಾ “ರೈತ ಹೋರಾಟದ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ರಿಹಾನ್ನಾ ಟ್ವೀಟ್ ಮಾಡಿದ ನಂತರ ಹೋರಾಟವು ಜಾಗತಿಕವಾಗಿ ಸದ್ದು ಮಾಡಿದ್ದು ಹಲವಾರು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಿದ್ದರು. ಇದರಿಂದ ಅಸಮಧಾನಗೊಂಡಿದ್ದ ಕೇಂದ್ರ ಸರ್ಕಾರ ರೈತರ ಸಮಸ್ಯೆಯು ದೇಶದ ಆಂತರಿಕ ವಿಷಯ, ವಿದೇಶಿಯರು ತಲೆ ಹಾಕಬಾರದು ಎಂದು ಹೇಳಿತ್ತು. ಜೊತೆಗೆ ರೈತರನ್ನು ಬೆಂಬಲಿಸಿದ ಹ್ಯಾಶ್‌ಟ್ಯಾಗ್‌ಗಳ ವಿರುದ್ದ ಕೆಲವು ಹ್ಯಾಶ್‌ಟ್ಯಾಗ್‌ಗಳನ್ನು ನೀಡಿತ್ತು. ಇದನ್ನು ಅನುಸರಿಸಿ ಭಾರತೀಯ ಸೆಲೆಬ್ರಿಟಿಗಳು ಸರ್ಕಾರದ ಪರ ಬ್ಯಾಟ್ ಬೀಸಿದ್ದರು.

ಈ ಮಧ್ಯೆ ರೈತ ಹೋರಾಟದ ಪರವಾಗಿ ಮಾತನಾಡಿದ್ದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್, ತನ್ನ ಟ್ವೀಟ್‌ ಒಂದರಲ್ಲಿ ಹೋರಾಟಕ್ಕೆ ಹೇಗೆ ಬೆಂಬಲಿಸಬಹುದು ಎಂಬ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರು. ಇದೀಗ ಪೊಲೀಸರು ಈ ಟೂಲ್‌‌ಕಿಟ್‌ ಅನ್ನು ರಚಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. 

ಗ್ರೇಟಾ ಅವರನ್ನು ಬೆಂಬಲಿಸಿ ಸೆಲಬ್ರಿಟಿಗಳಾದ ಸೋನಾಕ್ಷಿ ಸಿನ್ಹಾ, ತಾಪ್ಸಿ ಪನ್ನು, ರಮ್ಯಾ, ಮನೋಜ್ ತಿವಾರಿ, ರೋಹಿತ್ ಶರ್ಮಾ ಮುಂತಾದವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...