Homeಮುಖಪುಟಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ - ಶಿವಾನಂದ್ ತಿವಾರಿ

ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

- Advertisement -
- Advertisement -

“ಅಂತರರಾಷ್ಟ್ರೀಯ ಗಣ್ಯರ ವಿರುದ್ಧ ಕೇಂದ್ರ ಸರ್ಕಾರವೂ ಸಚಿನ್ ತೆಂಡೂಲ್ಕರ್ ಅವರನ್ನು ಕಣಕ್ಕಿಳಿಸಿದೆ” ಎಂದು ಆರ್‌ಜೆಡಿಯ ನಾಯಕ ನಾಯಕ ಶಿವಾನಂದ್ ತಿವಾರಿ ಶುಕ್ರವಾರ ಆರೋಪಿಸಿದ್ದಾರೆ. ರೈತ ಹೋರಾಟವನ್ನು ಬೆಂಬಲಿಸಿ ಖ್ಯಾತ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಮತ್ತು ಪಾಪ್ ಸಿಂಗರ್ ರಿಹಾನ್ನ ಟ್ವೀಟ್ ಮಾಡಿದ್ದರು.

ಇದನ್ನು ಖಂಡಿಸಿ ಕ್ರಿಕೆಟರ್‌ಗಳಾದ ಸಚಿನ್ ತೆಂಡೂಲ್ಕರ್, ರವಿಶಾಸ್ತ್ರಿ, ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್, ಕಂಗನಾ ರಣಾವತ್ ಸೇರಿ ಮುಂತಾದವರು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಆರ್‌ಜೆಡಿಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಾನಂದ ತಿವಾರಿ, “ಸಚಿನ್ ಅಂಥವರಿಂದ ಹೇಳಿಕೆಗಳನ್ನು ಕೊಡಿಸುವ ಮೂಲಕ ರೈತರ ಹೋರಾಟಕ್ಕೆ ಜಗತ್ತು ಕುರುಡಾಗಿರಬೇಕು ಎಂದು ಕೇಂದ್ರ ಬಯಸುತ್ತಿದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಬಾಲಿವುಡ್ ನಟ ಸಲ್ಮಾನ್ ಖಾನ್‌‌ ಹೇಳಿದ್ದೇನು?

“ರೈತರಿಗೆ ಟ್ವಿಟರ್ ಬಗ್ಗೆ ಗೊತ್ತಿಲ್ಲ. ಟ್ವಿಟರ್ ರಾಜಕೀಯ ಇತ್ತೀಚೆಗೆ ಪ್ರಾರಂಭವಾಗಿದೆ. ಎಲ್ಲರೂ ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಗ್ರೇಟಾ ಥನ್‌ಬರ್ಗ್‌ ಅಥವಾ ರಿಹಾನ್ನಾ ಬಗ್ಗೆ ರೈತರಿಗೆ ಏನು ಗೊತ್ತು? ನೀವು ಅವರ ವಿರುದ್ಧ ಸಚಿನ್ ತೆಂಡೂಲ್ಕರ್ ಅವರನ್ನು ಕಣಕ್ಕಿಳಿಸಿದ್ದೀರಿ” ಎಂದು ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ತಿವಾರಿ ಅವರ ಹೇಳಿಕೆಯು ಬಿಹಾರದ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಯುವನ್ನು ಕೆರಳಿಸಿದ್ದು, ತಿವಾರಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ದೆಹಲಿ ಪೊಲೀಸರು ಘರ್ಷಣೆ ನಡೆಸಿದ ನಂತರ ಅಲ್ಲಿ ಇಂಟರ್ನೆಟ್ ಕಡಿತಗೊಳಿಸಿರುವುದನ್ನು ಉಲ್ಲೇಖಿಸಿ ಸಿಎನ್‌ಎನ್ ಹೋರಾಟದ ಬಗ್ಗೆ ವರದಿ ಮಾಡಿತ್ತು. ಇದನ್ನು ತನ್ನ ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದ ಪಾಪ್ ತಾರೆ ರಿಹಾನ್ನಾ “ರೈತ ಹೋರಾಟದ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ರಿಹಾನ್ನಾ ಟ್ವೀಟ್ ಮಾಡಿದ ನಂತರ ಹೋರಾಟವು ಜಾಗತಿಕವಾಗಿ ಸದ್ದು ಮಾಡಿದ್ದು ಹಲವಾರು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಿದ್ದರು. ಇದರಿಂದ ಅಸಮಧಾನಗೊಂಡಿದ್ದ ಕೇಂದ್ರ ಸರ್ಕಾರ ರೈತರ ಸಮಸ್ಯೆಯು ದೇಶದ ಆಂತರಿಕ ವಿಷಯ, ವಿದೇಶಿಯರು ತಲೆ ಹಾಕಬಾರದು ಎಂದು ಹೇಳಿತ್ತು. ಜೊತೆಗೆ ರೈತರನ್ನು ಬೆಂಬಲಿಸಿದ ಹ್ಯಾಶ್‌ಟ್ಯಾಗ್‌ಗಳ ವಿರುದ್ದ ಕೆಲವು ಹ್ಯಾಶ್‌ಟ್ಯಾಗ್‌ಗಳನ್ನು ನೀಡಿತ್ತು. ಇದನ್ನು ಅನುಸರಿಸಿ ಭಾರತೀಯ ಸೆಲೆಬ್ರಿಟಿಗಳು ಸರ್ಕಾರದ ಪರ ಬ್ಯಾಟ್ ಬೀಸಿದ್ದರು.

ಈ ಮಧ್ಯೆ ರೈತ ಹೋರಾಟದ ಪರವಾಗಿ ಮಾತನಾಡಿದ್ದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್, ತನ್ನ ಟ್ವೀಟ್‌ ಒಂದರಲ್ಲಿ ಹೋರಾಟಕ್ಕೆ ಹೇಗೆ ಬೆಂಬಲಿಸಬಹುದು ಎಂಬ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರು. ಇದೀಗ ಪೊಲೀಸರು ಈ ಟೂಲ್‌‌ಕಿಟ್‌ ಅನ್ನು ರಚಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. 

ಗ್ರೇಟಾ ಅವರನ್ನು ಬೆಂಬಲಿಸಿ ಸೆಲಬ್ರಿಟಿಗಳಾದ ಸೋನಾಕ್ಷಿ ಸಿನ್ಹಾ, ತಾಪ್ಸಿ ಪನ್ನು, ರಮ್ಯಾ, ಮನೋಜ್ ತಿವಾರಿ, ರೋಹಿತ್ ಶರ್ಮಾ ಮುಂತಾದವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...