Homeಮುಖಪುಟಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: 'ಗೋಧಿ ಮೀಡಿಯಾ'ಗಳ 'ಲವ್ ಜಿಹಾದ್' ಆರೋಪ ಟುಸ್ಸಾಗಿದ್ದು...

ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: ‘ಗೋಧಿ ಮೀಡಿಯಾ’ಗಳ ‘ಲವ್ ಜಿಹಾದ್’ ಆರೋಪ ಟುಸ್ಸಾಗಿದ್ದು ಹೇಗೆ?

- Advertisement -
- Advertisement -

ನವದೆಹಲಿ: ಹರಿಯಾಣದ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರ ಹತ್ಯೆಯು ಕೇವಲ ವೈಯಕ್ತಿಕ ದ್ವೇಷ ಮತ್ತು ಸಾಮಾಜಿಕ ಕಳಂಕದಿಂದ ನಡೆದ ಘಟನೆಯಾಗಿತ್ತು. ಅಲ್ಲಿ ಆಕೆಯ ತಂದೆಯೇ ಆಕೆಗೆ ನಾಲ್ಕು ಸುತ್ತು ಗುಂಡುಗಳನ್ನು ಹಾರಿಸಿದ್ದನು. ಆದರೆ, ಈ ಘಟನೆ ನಡೆದ ಕೆಲವೇ ಸಮಯದಲ್ಲಿ ‘ಗೋಧಿ ಮೀಡಿಯಾ’ ಎಂದು ಗುರುತಿಸಲ್ಪಡುವ ಕೆಲವು ಮುಖ್ಯವಾಹಿನಿ ಮಾಧ್ಯಮಗಳು ಇದಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದವು.

ಹಲವು ಮುಖ್ಯವಾಹಿನಿ ಮಾಧ್ಯಮಗಳು ಆರಂಭದಲ್ಲಿ ರಾಧಿಕಾ ಹತ್ಯೆಗೆ  ‘ಲವ್ ಜಿಹಾದ್’ ಕಾರಣ ಎಂದು ದೊಡ್ಡದಾಗಿ ಬಿತ್ತರಿಸಿದ್ದವು. ರಾಧಿಕಾ ಕೆಲವು ವರ್ಷಗಳ ಹಿಂದೆ ಮುಸ್ಲಿಂ ಕಲಾವಿದ ಇನಾಮ್-ಉಲ್-ಹಕ್‌ ಅವರೊಂದಿಗೆ ಒಂದು ಮ್ಯೂಸಿಕ್ ಆಲ್ಬಂ ಮಾಡಿದ್ದು ಇದಕ್ಕೆ ಏಕೈಕ ಆಧಾರವಾಗಿತ್ತು. ಆದರೆ, ರಾಧಿಕಾ ಅವರ ತಂದೆ ದೀಪಕ್ ಯಾದವ್ ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ ತಕ್ಷಣವೇ ಸತ್ಯಾಂಶ ಹೊರಬಿತ್ತು.

ಈ ಮಧ್ಯೆ, ವೈರಲ್ ಆದ ಮ್ಯೂಸಿಕ್ ವೀಡಿಯೊದಲ್ಲಿ ರಾಧಿಕಾ ಯಾದವ್ ಜೊತೆ ಕಾಣಿಸಿಕೊಂಡಿದ್ದ ನಟ ಶುಕ್ರವಾರ ಒಂದು ಸ್ಪಷ್ಟನೆ ನೀಡಿದ್ದಾರೆ. ಅವರು ತಮ್ಮ ವೃತ್ತಿಪರ ಸಂಬಂಧವನ್ನು ಹೊರತುಪಡಿಸಿ ರಾಧಿಕಾಳೊಂದಿಗೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಇನಾಮ್-ಉಲ್-ಹಕ್ ಅವರು ದುಬೈನಲ್ಲಿ ಟೆನಿಸ್ ಪ್ರೀಮಿಯರ್ ಲೀಗ್ ವೇಳೆ ರಾಧಿಕಾಳನ್ನು ಮೊದಲ ಬಾರಿಗೆ ಭೇಟಿಯಾಗಿದ್ದರು ಮತ್ತು ನಂತರ ಒಂದು ಮ್ಯೂಸಿಕ್ ವೀಡಿಯೊದಲ್ಲಿ ಕೆಲಸ ಮಾಡಿದ್ದರು. ಆ ವೀಡಿಯೊ ಯೂಟ್ಯೂಬ್‌ನಲ್ಲಿ ಲಭ್ಯವಿದ್ದು, ಅದಕ್ಕಾಗಿಯೇ ಅದನ್ನು ಪದೇ ಪದೇ ಪ್ರಸ್ತಾಪಿಸಲಾಗುತ್ತಿದೆ ಎಂದೂ ಕೆಲ ಮಾಧ್ಯಮಗಳ ವರದಿಗಳು ಹೇಳಿವೆ.

ಮುಸ್ಲಿಂ ವಿರೋಧಿ, ಇಸ್ಲಾಮೋಫೋಬಿಕ್ ದ್ವೇಷ ಭಾಷಣಗಳನ್ನು ಹರಡಲು ಯಾವುದೇ ಅವಕಾಶವನ್ನು ಬಿಡದ ಕೆಲ ಮುಖ್ಯವಾಹಿನಿ ಮಾಧ್ಯಮಗಳು, 25 ವರ್ಷದ ರಾಧಿಕಾಳ ಹತ್ಯೆಯಾದ ಕೆಲವೇ ಸಮಯದಲ್ಲಿ ತಾವು ‘ಲವ್‌ ಜಿಹಾದ್’ ಎಂದು ಬಿತ್ತರಿಸಿದ್ದು ತಪ್ಪು ಎಂದು ಒಪ್ಪಿಕೊಳ್ಳಬೇಕಾಯಿತು. ರಾಧಿಕಾಳ ತಂದೆ ತಮ್ಮ ಪರವಾನಗಿ ಪಡೆದ ರಿವಾಲ್ವರ್‌ನಿಂದ ಆಕೆಯನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಮತ್ತು ತಾನೇ ಮಗಳನ್ನು ಹತ್ಯೆಗೈದಿರುವುದಾಗಿ ಅಪರಾಧದ ನಂತರ ತನ್ನ ಸಹೋದರನೊಂದಿಗೆ ಒಪ್ಪಿಕೊಂಡಿದ್ದಾರೆ ಎಂಬುದು ಶೀಘ್ರದಲ್ಲೇ ದೃಢಪಟ್ಟಿತು.

ರಾಧಿಕಾ ಯಾದವ್ ಅವರ ಚಿಕ್ಕಪ್ಪ ವಿಜಯ್ ಯಾದವ್, “ಒಬ್ಬ ವ್ಯಕ್ತಿ ತಾನೇ ತಪ್ಪಿತಸ್ಥ ಎಂದು ಅರಿತುಕೊಂಡಾಗ, ಅದಕ್ಕಿಂತ ದೊಡ್ಡ ಶಿಕ್ಷೆ ಬೇರಿಲ್ಲ” ಎಂದಿದ್ದಾರೆ.

ವಿಜಯ್ ಯಾದವ್, “ದೀಪಕ್‌ ಯಾದವ್ ನನ್ನ ಸಹೋದರ. ಅವನೇ ತನ್ನ ಮಗಳನ್ನು ಕೊಂದಿದ್ದೇನೆ, ತನ್ನನ್ನು ಕೊಂದುಬಿಡು…’ ಎಂದು ಹೇಳಿದ. ಕಾರಣ ಕೇಳಿದರೆ ಹೇಳಲಿಲ್ಲ. ‘ಕೇವಲ ಮನಸ್ಸು ಕೆಟ್ಟಿತ್ತು’ ಎಂದು ಹೇಳಿದ” ಎಂದು ತಿಳಿಸಿದ್ದಾರೆ.

ಸಾರ್ವಜನಿಕರಿಂದ ತನಗೆ ಮಗಳ ದುಡಿಮೆಯಲ್ಲಿ ಬದುಕು ಸಾಗಿಸುತ್ತಿದ್ದೀಯಾ ಎಂಬ “ನಿಂದನೆಗಳು”, ಟೆನಿಸ್ ಅಕಾಡೆಮಿ, ಇನ್‌ಸ್ಟಾಗ್ರಾಮ್ ರೀಲ್ ಮತ್ತು ಮ್ಯೂಸಿಕ್ ವೀಡಿಯೊ ಸೇರಿದಂತೆ ಹಲವು ಕಾರಣಗಳು ಮಗಳ ಹತ್ಯೆಗೆ ಕಾರಣವೆಂದು ದೀಪಕ್ ಯಾದವ್  ಅವರು  ಹೇಳಿಕೊಂಡಿದ್ದಾರೆ ಎಂದು ಕೆಲವು ದೃಢಪಡಿಸದ ವರದಿಗಳು ಹೇಳಿವೆ.

ಗುರುಗ್ರಾಮ್ ನ್ಯಾಯಾಲಯ ಶನಿವಾರ ದೀಪಕ್ ಯಾದವ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

25 ವರ್ಷದ ರಾಧಿಕಾ ಅವರ ದೇಹಕ್ಕೆ ನಾಲ್ಕು ಗುಂಡುಗಳು ತಗುಲಿವೆ.  ಇವುಗಳಲ್ಲಿ ಮೂರು ಗುಂಡುಗಳು ಬೆನ್ನಿಗೆ ಮತ್ತು ಒಂದು ಭುಜಕ್ಕೆ ಹೊಕ್ಕಿದೆ ಎಂದು ಮೂವರು ವೈದ್ಯರ ತಂಡದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ ಎಂದು ಪೊಲೀಸರು ಶುಕ್ರವಾರ ಮಾಹಿತಿ ನೀಡಿದ್ದಾರೆ. ಶನಿವಾರ ವಜಿರಾಬಾದ್‌ನಲ್ಲಿ ಆಕೆಯ ಅಂತ್ಯಕ್ರಿಯೆ ನಡೆದಿದೆ.

ಗುರುವಾರ ಬೆಳಿಗ್ಗೆ 10:30 ರ ಸುಮಾರಿಗೆ, ಸುಶಾಂತ್ ಲೋಕ್-2 ರ ‘ಬ್ಲಾಕ್-ಜಿ’ನಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ರಾಧಿಕಾ ಉಪಹಾರ ತಯಾರಿಸುತ್ತಿದ್ದಾಗ ದೀಪಕ್ ಯಾದವ್ ಆಕೆಯನ್ನು ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತಂದೆಯು ತಾನು ಮಗಳ ಕೊಲೆಗೆ ಮೊದಲೇ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಗುರುಗ್ರಾಮ್ ಪೊಲೀಸರ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಂದೀಪ್ ಕುಮಾರ್ ಹೇಳಿದ್ದಾರೆ.

ದೀಪಕ್‌ ಯಾದವ್‌ ಸಾಮಾನ್ಯವಾಗಿ ಬೆಳಿಗ್ಗೆ ಹಾಲು ತರಲು ತಾವೇ ಹೋಗುತ್ತಿದ್ದರು. ಆದರೆ ಗುರುವಾರ ಮಗನಿಗೆ ಹೋಗುವಂತೆ ಹೇಳಿದರು. ಮನೆಯಲ್ಲಿ ರಾಧಿಕಾಳೊಂದಿಗೆ ಒಬ್ಬಂಟಿಯಾಗಿದ್ದಾಗ, ಅವಳು ಉಪಹಾರ ತಯಾರಿಸುತ್ತಿದ್ದಾಗ ಆಕೆಯ ಮೇಲೆ ದೀಪಕ್ ಗುಂಡುಗಳನ್ನು ಹಾರಿಸಿದನು ಎಂದು ಸಂದೀಪ್‌ ಕುಮಾರ್ ವಿವರಿಸಿದರು.

ಈ ಪ್ರಕರಣಕ್ಕೆ ಲವ್ ಜಿಹಾದ್ ಹಣೆಪಟ್ಟಿ ಕಟ್ಟುವ ಮೂಲಕ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಲು  ‘ಗೋಧಿ ಮೀಡಿಯಾ’ಗಳು ಪ್ರಯತ್ನಿಸಿದವು. ಈ ಪ್ರಕರಣವು ವಾಸ್ತವ ಸ್ಥಿತಿಯನ್ನು ಮರೆಮಾಚಿ ಸುದ್ದಿಯನ್ನು ತಿರುಚಲು ಗೋಧಿ ಮೀಡಿಯಾಗಳು ಹೇಗೆ ಬಳಸಿಕೊಳ್ಳುತ್ತವೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ.

ಕಾಶ್ಮೀರದ ಮುಸ್ಲಿಂ ಪ್ರಾಬಲ್ಯ ಪ್ರದೇಶಗಳಿಗೆ ಭೇಟಿ ಕೊಡಬೇಡಿ: ಬಂಗಾಳಿಗಳಿಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...