Homeಮುಖಪುಟಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: 'ಗೋಧಿ ಮೀಡಿಯಾ'ಗಳ 'ಲವ್ ಜಿಹಾದ್' ಆರೋಪ ಟುಸ್ಸಾಗಿದ್ದು...

ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: ‘ಗೋಧಿ ಮೀಡಿಯಾ’ಗಳ ‘ಲವ್ ಜಿಹಾದ್’ ಆರೋಪ ಟುಸ್ಸಾಗಿದ್ದು ಹೇಗೆ?

- Advertisement -
- Advertisement -

ನವದೆಹಲಿ: ಹರಿಯಾಣದ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರ ಹತ್ಯೆಯು ಕೇವಲ ವೈಯಕ್ತಿಕ ದ್ವೇಷ ಮತ್ತು ಸಾಮಾಜಿಕ ಕಳಂಕದಿಂದ ನಡೆದ ಘಟನೆಯಾಗಿತ್ತು. ಅಲ್ಲಿ ಆಕೆಯ ತಂದೆಯೇ ಆಕೆಗೆ ನಾಲ್ಕು ಸುತ್ತು ಗುಂಡುಗಳನ್ನು ಹಾರಿಸಿದ್ದನು. ಆದರೆ, ಈ ಘಟನೆ ನಡೆದ ಕೆಲವೇ ಸಮಯದಲ್ಲಿ ‘ಗೋಧಿ ಮೀಡಿಯಾ’ ಎಂದು ಗುರುತಿಸಲ್ಪಡುವ ಕೆಲವು ಮುಖ್ಯವಾಹಿನಿ ಮಾಧ್ಯಮಗಳು ಇದಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದವು.

ಹಲವು ಮುಖ್ಯವಾಹಿನಿ ಮಾಧ್ಯಮಗಳು ಆರಂಭದಲ್ಲಿ ರಾಧಿಕಾ ಹತ್ಯೆಗೆ  ‘ಲವ್ ಜಿಹಾದ್’ ಕಾರಣ ಎಂದು ದೊಡ್ಡದಾಗಿ ಬಿತ್ತರಿಸಿದ್ದವು. ರಾಧಿಕಾ ಕೆಲವು ವರ್ಷಗಳ ಹಿಂದೆ ಮುಸ್ಲಿಂ ಕಲಾವಿದ ಇನಾಮ್-ಉಲ್-ಹಕ್‌ ಅವರೊಂದಿಗೆ ಒಂದು ಮ್ಯೂಸಿಕ್ ಆಲ್ಬಂ ಮಾಡಿದ್ದು ಇದಕ್ಕೆ ಏಕೈಕ ಆಧಾರವಾಗಿತ್ತು. ಆದರೆ, ರಾಧಿಕಾ ಅವರ ತಂದೆ ದೀಪಕ್ ಯಾದವ್ ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ ತಕ್ಷಣವೇ ಸತ್ಯಾಂಶ ಹೊರಬಿತ್ತು.

ಈ ಮಧ್ಯೆ, ವೈರಲ್ ಆದ ಮ್ಯೂಸಿಕ್ ವೀಡಿಯೊದಲ್ಲಿ ರಾಧಿಕಾ ಯಾದವ್ ಜೊತೆ ಕಾಣಿಸಿಕೊಂಡಿದ್ದ ನಟ ಶುಕ್ರವಾರ ಒಂದು ಸ್ಪಷ್ಟನೆ ನೀಡಿದ್ದಾರೆ. ಅವರು ತಮ್ಮ ವೃತ್ತಿಪರ ಸಂಬಂಧವನ್ನು ಹೊರತುಪಡಿಸಿ ರಾಧಿಕಾಳೊಂದಿಗೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಇನಾಮ್-ಉಲ್-ಹಕ್ ಅವರು ದುಬೈನಲ್ಲಿ ಟೆನಿಸ್ ಪ್ರೀಮಿಯರ್ ಲೀಗ್ ವೇಳೆ ರಾಧಿಕಾಳನ್ನು ಮೊದಲ ಬಾರಿಗೆ ಭೇಟಿಯಾಗಿದ್ದರು ಮತ್ತು ನಂತರ ಒಂದು ಮ್ಯೂಸಿಕ್ ವೀಡಿಯೊದಲ್ಲಿ ಕೆಲಸ ಮಾಡಿದ್ದರು. ಆ ವೀಡಿಯೊ ಯೂಟ್ಯೂಬ್‌ನಲ್ಲಿ ಲಭ್ಯವಿದ್ದು, ಅದಕ್ಕಾಗಿಯೇ ಅದನ್ನು ಪದೇ ಪದೇ ಪ್ರಸ್ತಾಪಿಸಲಾಗುತ್ತಿದೆ ಎಂದೂ ಕೆಲ ಮಾಧ್ಯಮಗಳ ವರದಿಗಳು ಹೇಳಿವೆ.

ಮುಸ್ಲಿಂ ವಿರೋಧಿ, ಇಸ್ಲಾಮೋಫೋಬಿಕ್ ದ್ವೇಷ ಭಾಷಣಗಳನ್ನು ಹರಡಲು ಯಾವುದೇ ಅವಕಾಶವನ್ನು ಬಿಡದ ಕೆಲ ಮುಖ್ಯವಾಹಿನಿ ಮಾಧ್ಯಮಗಳು, 25 ವರ್ಷದ ರಾಧಿಕಾಳ ಹತ್ಯೆಯಾದ ಕೆಲವೇ ಸಮಯದಲ್ಲಿ ತಾವು ‘ಲವ್‌ ಜಿಹಾದ್’ ಎಂದು ಬಿತ್ತರಿಸಿದ್ದು ತಪ್ಪು ಎಂದು ಒಪ್ಪಿಕೊಳ್ಳಬೇಕಾಯಿತು. ರಾಧಿಕಾಳ ತಂದೆ ತಮ್ಮ ಪರವಾನಗಿ ಪಡೆದ ರಿವಾಲ್ವರ್‌ನಿಂದ ಆಕೆಯನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಮತ್ತು ತಾನೇ ಮಗಳನ್ನು ಹತ್ಯೆಗೈದಿರುವುದಾಗಿ ಅಪರಾಧದ ನಂತರ ತನ್ನ ಸಹೋದರನೊಂದಿಗೆ ಒಪ್ಪಿಕೊಂಡಿದ್ದಾರೆ ಎಂಬುದು ಶೀಘ್ರದಲ್ಲೇ ದೃಢಪಟ್ಟಿತು.

ರಾಧಿಕಾ ಯಾದವ್ ಅವರ ಚಿಕ್ಕಪ್ಪ ವಿಜಯ್ ಯಾದವ್, “ಒಬ್ಬ ವ್ಯಕ್ತಿ ತಾನೇ ತಪ್ಪಿತಸ್ಥ ಎಂದು ಅರಿತುಕೊಂಡಾಗ, ಅದಕ್ಕಿಂತ ದೊಡ್ಡ ಶಿಕ್ಷೆ ಬೇರಿಲ್ಲ” ಎಂದಿದ್ದಾರೆ.

ವಿಜಯ್ ಯಾದವ್, “ದೀಪಕ್‌ ಯಾದವ್ ನನ್ನ ಸಹೋದರ. ಅವನೇ ತನ್ನ ಮಗಳನ್ನು ಕೊಂದಿದ್ದೇನೆ, ತನ್ನನ್ನು ಕೊಂದುಬಿಡು…’ ಎಂದು ಹೇಳಿದ. ಕಾರಣ ಕೇಳಿದರೆ ಹೇಳಲಿಲ್ಲ. ‘ಕೇವಲ ಮನಸ್ಸು ಕೆಟ್ಟಿತ್ತು’ ಎಂದು ಹೇಳಿದ” ಎಂದು ತಿಳಿಸಿದ್ದಾರೆ.

ಸಾರ್ವಜನಿಕರಿಂದ ತನಗೆ ಮಗಳ ದುಡಿಮೆಯಲ್ಲಿ ಬದುಕು ಸಾಗಿಸುತ್ತಿದ್ದೀಯಾ ಎಂಬ “ನಿಂದನೆಗಳು”, ಟೆನಿಸ್ ಅಕಾಡೆಮಿ, ಇನ್‌ಸ್ಟಾಗ್ರಾಮ್ ರೀಲ್ ಮತ್ತು ಮ್ಯೂಸಿಕ್ ವೀಡಿಯೊ ಸೇರಿದಂತೆ ಹಲವು ಕಾರಣಗಳು ಮಗಳ ಹತ್ಯೆಗೆ ಕಾರಣವೆಂದು ದೀಪಕ್ ಯಾದವ್  ಅವರು  ಹೇಳಿಕೊಂಡಿದ್ದಾರೆ ಎಂದು ಕೆಲವು ದೃಢಪಡಿಸದ ವರದಿಗಳು ಹೇಳಿವೆ.

ಗುರುಗ್ರಾಮ್ ನ್ಯಾಯಾಲಯ ಶನಿವಾರ ದೀಪಕ್ ಯಾದವ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

25 ವರ್ಷದ ರಾಧಿಕಾ ಅವರ ದೇಹಕ್ಕೆ ನಾಲ್ಕು ಗುಂಡುಗಳು ತಗುಲಿವೆ.  ಇವುಗಳಲ್ಲಿ ಮೂರು ಗುಂಡುಗಳು ಬೆನ್ನಿಗೆ ಮತ್ತು ಒಂದು ಭುಜಕ್ಕೆ ಹೊಕ್ಕಿದೆ ಎಂದು ಮೂವರು ವೈದ್ಯರ ತಂಡದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ ಎಂದು ಪೊಲೀಸರು ಶುಕ್ರವಾರ ಮಾಹಿತಿ ನೀಡಿದ್ದಾರೆ. ಶನಿವಾರ ವಜಿರಾಬಾದ್‌ನಲ್ಲಿ ಆಕೆಯ ಅಂತ್ಯಕ್ರಿಯೆ ನಡೆದಿದೆ.

ಗುರುವಾರ ಬೆಳಿಗ್ಗೆ 10:30 ರ ಸುಮಾರಿಗೆ, ಸುಶಾಂತ್ ಲೋಕ್-2 ರ ‘ಬ್ಲಾಕ್-ಜಿ’ನಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ರಾಧಿಕಾ ಉಪಹಾರ ತಯಾರಿಸುತ್ತಿದ್ದಾಗ ದೀಪಕ್ ಯಾದವ್ ಆಕೆಯನ್ನು ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತಂದೆಯು ತಾನು ಮಗಳ ಕೊಲೆಗೆ ಮೊದಲೇ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಗುರುಗ್ರಾಮ್ ಪೊಲೀಸರ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಂದೀಪ್ ಕುಮಾರ್ ಹೇಳಿದ್ದಾರೆ.

ದೀಪಕ್‌ ಯಾದವ್‌ ಸಾಮಾನ್ಯವಾಗಿ ಬೆಳಿಗ್ಗೆ ಹಾಲು ತರಲು ತಾವೇ ಹೋಗುತ್ತಿದ್ದರು. ಆದರೆ ಗುರುವಾರ ಮಗನಿಗೆ ಹೋಗುವಂತೆ ಹೇಳಿದರು. ಮನೆಯಲ್ಲಿ ರಾಧಿಕಾಳೊಂದಿಗೆ ಒಬ್ಬಂಟಿಯಾಗಿದ್ದಾಗ, ಅವಳು ಉಪಹಾರ ತಯಾರಿಸುತ್ತಿದ್ದಾಗ ಆಕೆಯ ಮೇಲೆ ದೀಪಕ್ ಗುಂಡುಗಳನ್ನು ಹಾರಿಸಿದನು ಎಂದು ಸಂದೀಪ್‌ ಕುಮಾರ್ ವಿವರಿಸಿದರು.

ಈ ಪ್ರಕರಣಕ್ಕೆ ಲವ್ ಜಿಹಾದ್ ಹಣೆಪಟ್ಟಿ ಕಟ್ಟುವ ಮೂಲಕ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಲು  ‘ಗೋಧಿ ಮೀಡಿಯಾ’ಗಳು ಪ್ರಯತ್ನಿಸಿದವು. ಈ ಪ್ರಕರಣವು ವಾಸ್ತವ ಸ್ಥಿತಿಯನ್ನು ಮರೆಮಾಚಿ ಸುದ್ದಿಯನ್ನು ತಿರುಚಲು ಗೋಧಿ ಮೀಡಿಯಾಗಳು ಹೇಗೆ ಬಳಸಿಕೊಳ್ಳುತ್ತವೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ.

ಕಾಶ್ಮೀರದ ಮುಸ್ಲಿಂ ಪ್ರಾಬಲ್ಯ ಪ್ರದೇಶಗಳಿಗೆ ಭೇಟಿ ಕೊಡಬೇಡಿ: ಬಂಗಾಳಿಗಳಿಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...