Homeಮುಖಪುಟಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: 'ಗೋಧಿ ಮೀಡಿಯಾ'ಗಳ 'ಲವ್ ಜಿಹಾದ್' ಆರೋಪ ಟುಸ್ಸಾಗಿದ್ದು...

ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: ‘ಗೋಧಿ ಮೀಡಿಯಾ’ಗಳ ‘ಲವ್ ಜಿಹಾದ್’ ಆರೋಪ ಟುಸ್ಸಾಗಿದ್ದು ಹೇಗೆ?

- Advertisement -
- Advertisement -

ನವದೆಹಲಿ: ಹರಿಯಾಣದ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರ ಹತ್ಯೆಯು ಕೇವಲ ವೈಯಕ್ತಿಕ ದ್ವೇಷ ಮತ್ತು ಸಾಮಾಜಿಕ ಕಳಂಕದಿಂದ ನಡೆದ ಘಟನೆಯಾಗಿತ್ತು. ಅಲ್ಲಿ ಆಕೆಯ ತಂದೆಯೇ ಆಕೆಗೆ ನಾಲ್ಕು ಸುತ್ತು ಗುಂಡುಗಳನ್ನು ಹಾರಿಸಿದ್ದನು. ಆದರೆ, ಈ ಘಟನೆ ನಡೆದ ಕೆಲವೇ ಸಮಯದಲ್ಲಿ ‘ಗೋಧಿ ಮೀಡಿಯಾ’ ಎಂದು ಗುರುತಿಸಲ್ಪಡುವ ಕೆಲವು ಮುಖ್ಯವಾಹಿನಿ ಮಾಧ್ಯಮಗಳು ಇದಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದವು.

ಹಲವು ಮುಖ್ಯವಾಹಿನಿ ಮಾಧ್ಯಮಗಳು ಆರಂಭದಲ್ಲಿ ರಾಧಿಕಾ ಹತ್ಯೆಗೆ  ‘ಲವ್ ಜಿಹಾದ್’ ಕಾರಣ ಎಂದು ದೊಡ್ಡದಾಗಿ ಬಿತ್ತರಿಸಿದ್ದವು. ರಾಧಿಕಾ ಕೆಲವು ವರ್ಷಗಳ ಹಿಂದೆ ಮುಸ್ಲಿಂ ಕಲಾವಿದ ಇನಾಮ್-ಉಲ್-ಹಕ್‌ ಅವರೊಂದಿಗೆ ಒಂದು ಮ್ಯೂಸಿಕ್ ಆಲ್ಬಂ ಮಾಡಿದ್ದು ಇದಕ್ಕೆ ಏಕೈಕ ಆಧಾರವಾಗಿತ್ತು. ಆದರೆ, ರಾಧಿಕಾ ಅವರ ತಂದೆ ದೀಪಕ್ ಯಾದವ್ ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ ತಕ್ಷಣವೇ ಸತ್ಯಾಂಶ ಹೊರಬಿತ್ತು.

ಈ ಮಧ್ಯೆ, ವೈರಲ್ ಆದ ಮ್ಯೂಸಿಕ್ ವೀಡಿಯೊದಲ್ಲಿ ರಾಧಿಕಾ ಯಾದವ್ ಜೊತೆ ಕಾಣಿಸಿಕೊಂಡಿದ್ದ ನಟ ಶುಕ್ರವಾರ ಒಂದು ಸ್ಪಷ್ಟನೆ ನೀಡಿದ್ದಾರೆ. ಅವರು ತಮ್ಮ ವೃತ್ತಿಪರ ಸಂಬಂಧವನ್ನು ಹೊರತುಪಡಿಸಿ ರಾಧಿಕಾಳೊಂದಿಗೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಇನಾಮ್-ಉಲ್-ಹಕ್ ಅವರು ದುಬೈನಲ್ಲಿ ಟೆನಿಸ್ ಪ್ರೀಮಿಯರ್ ಲೀಗ್ ವೇಳೆ ರಾಧಿಕಾಳನ್ನು ಮೊದಲ ಬಾರಿಗೆ ಭೇಟಿಯಾಗಿದ್ದರು ಮತ್ತು ನಂತರ ಒಂದು ಮ್ಯೂಸಿಕ್ ವೀಡಿಯೊದಲ್ಲಿ ಕೆಲಸ ಮಾಡಿದ್ದರು. ಆ ವೀಡಿಯೊ ಯೂಟ್ಯೂಬ್‌ನಲ್ಲಿ ಲಭ್ಯವಿದ್ದು, ಅದಕ್ಕಾಗಿಯೇ ಅದನ್ನು ಪದೇ ಪದೇ ಪ್ರಸ್ತಾಪಿಸಲಾಗುತ್ತಿದೆ ಎಂದೂ ಕೆಲ ಮಾಧ್ಯಮಗಳ ವರದಿಗಳು ಹೇಳಿವೆ.

ಮುಸ್ಲಿಂ ವಿರೋಧಿ, ಇಸ್ಲಾಮೋಫೋಬಿಕ್ ದ್ವೇಷ ಭಾಷಣಗಳನ್ನು ಹರಡಲು ಯಾವುದೇ ಅವಕಾಶವನ್ನು ಬಿಡದ ಕೆಲ ಮುಖ್ಯವಾಹಿನಿ ಮಾಧ್ಯಮಗಳು, 25 ವರ್ಷದ ರಾಧಿಕಾಳ ಹತ್ಯೆಯಾದ ಕೆಲವೇ ಸಮಯದಲ್ಲಿ ತಾವು ‘ಲವ್‌ ಜಿಹಾದ್’ ಎಂದು ಬಿತ್ತರಿಸಿದ್ದು ತಪ್ಪು ಎಂದು ಒಪ್ಪಿಕೊಳ್ಳಬೇಕಾಯಿತು. ರಾಧಿಕಾಳ ತಂದೆ ತಮ್ಮ ಪರವಾನಗಿ ಪಡೆದ ರಿವಾಲ್ವರ್‌ನಿಂದ ಆಕೆಯನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಮತ್ತು ತಾನೇ ಮಗಳನ್ನು ಹತ್ಯೆಗೈದಿರುವುದಾಗಿ ಅಪರಾಧದ ನಂತರ ತನ್ನ ಸಹೋದರನೊಂದಿಗೆ ಒಪ್ಪಿಕೊಂಡಿದ್ದಾರೆ ಎಂಬುದು ಶೀಘ್ರದಲ್ಲೇ ದೃಢಪಟ್ಟಿತು.

ರಾಧಿಕಾ ಯಾದವ್ ಅವರ ಚಿಕ್ಕಪ್ಪ ವಿಜಯ್ ಯಾದವ್, “ಒಬ್ಬ ವ್ಯಕ್ತಿ ತಾನೇ ತಪ್ಪಿತಸ್ಥ ಎಂದು ಅರಿತುಕೊಂಡಾಗ, ಅದಕ್ಕಿಂತ ದೊಡ್ಡ ಶಿಕ್ಷೆ ಬೇರಿಲ್ಲ” ಎಂದಿದ್ದಾರೆ.

ವಿಜಯ್ ಯಾದವ್, “ದೀಪಕ್‌ ಯಾದವ್ ನನ್ನ ಸಹೋದರ. ಅವನೇ ತನ್ನ ಮಗಳನ್ನು ಕೊಂದಿದ್ದೇನೆ, ತನ್ನನ್ನು ಕೊಂದುಬಿಡು…’ ಎಂದು ಹೇಳಿದ. ಕಾರಣ ಕೇಳಿದರೆ ಹೇಳಲಿಲ್ಲ. ‘ಕೇವಲ ಮನಸ್ಸು ಕೆಟ್ಟಿತ್ತು’ ಎಂದು ಹೇಳಿದ” ಎಂದು ತಿಳಿಸಿದ್ದಾರೆ.

ಸಾರ್ವಜನಿಕರಿಂದ ತನಗೆ ಮಗಳ ದುಡಿಮೆಯಲ್ಲಿ ಬದುಕು ಸಾಗಿಸುತ್ತಿದ್ದೀಯಾ ಎಂಬ “ನಿಂದನೆಗಳು”, ಟೆನಿಸ್ ಅಕಾಡೆಮಿ, ಇನ್‌ಸ್ಟಾಗ್ರಾಮ್ ರೀಲ್ ಮತ್ತು ಮ್ಯೂಸಿಕ್ ವೀಡಿಯೊ ಸೇರಿದಂತೆ ಹಲವು ಕಾರಣಗಳು ಮಗಳ ಹತ್ಯೆಗೆ ಕಾರಣವೆಂದು ದೀಪಕ್ ಯಾದವ್  ಅವರು  ಹೇಳಿಕೊಂಡಿದ್ದಾರೆ ಎಂದು ಕೆಲವು ದೃಢಪಡಿಸದ ವರದಿಗಳು ಹೇಳಿವೆ.

ಗುರುಗ್ರಾಮ್ ನ್ಯಾಯಾಲಯ ಶನಿವಾರ ದೀಪಕ್ ಯಾದವ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

25 ವರ್ಷದ ರಾಧಿಕಾ ಅವರ ದೇಹಕ್ಕೆ ನಾಲ್ಕು ಗುಂಡುಗಳು ತಗುಲಿವೆ.  ಇವುಗಳಲ್ಲಿ ಮೂರು ಗುಂಡುಗಳು ಬೆನ್ನಿಗೆ ಮತ್ತು ಒಂದು ಭುಜಕ್ಕೆ ಹೊಕ್ಕಿದೆ ಎಂದು ಮೂವರು ವೈದ್ಯರ ತಂಡದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ ಎಂದು ಪೊಲೀಸರು ಶುಕ್ರವಾರ ಮಾಹಿತಿ ನೀಡಿದ್ದಾರೆ. ಶನಿವಾರ ವಜಿರಾಬಾದ್‌ನಲ್ಲಿ ಆಕೆಯ ಅಂತ್ಯಕ್ರಿಯೆ ನಡೆದಿದೆ.

ಗುರುವಾರ ಬೆಳಿಗ್ಗೆ 10:30 ರ ಸುಮಾರಿಗೆ, ಸುಶಾಂತ್ ಲೋಕ್-2 ರ ‘ಬ್ಲಾಕ್-ಜಿ’ನಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ರಾಧಿಕಾ ಉಪಹಾರ ತಯಾರಿಸುತ್ತಿದ್ದಾಗ ದೀಪಕ್ ಯಾದವ್ ಆಕೆಯನ್ನು ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತಂದೆಯು ತಾನು ಮಗಳ ಕೊಲೆಗೆ ಮೊದಲೇ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಗುರುಗ್ರಾಮ್ ಪೊಲೀಸರ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಂದೀಪ್ ಕುಮಾರ್ ಹೇಳಿದ್ದಾರೆ.

ದೀಪಕ್‌ ಯಾದವ್‌ ಸಾಮಾನ್ಯವಾಗಿ ಬೆಳಿಗ್ಗೆ ಹಾಲು ತರಲು ತಾವೇ ಹೋಗುತ್ತಿದ್ದರು. ಆದರೆ ಗುರುವಾರ ಮಗನಿಗೆ ಹೋಗುವಂತೆ ಹೇಳಿದರು. ಮನೆಯಲ್ಲಿ ರಾಧಿಕಾಳೊಂದಿಗೆ ಒಬ್ಬಂಟಿಯಾಗಿದ್ದಾಗ, ಅವಳು ಉಪಹಾರ ತಯಾರಿಸುತ್ತಿದ್ದಾಗ ಆಕೆಯ ಮೇಲೆ ದೀಪಕ್ ಗುಂಡುಗಳನ್ನು ಹಾರಿಸಿದನು ಎಂದು ಸಂದೀಪ್‌ ಕುಮಾರ್ ವಿವರಿಸಿದರು.

ಈ ಪ್ರಕರಣಕ್ಕೆ ಲವ್ ಜಿಹಾದ್ ಹಣೆಪಟ್ಟಿ ಕಟ್ಟುವ ಮೂಲಕ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಲು  ‘ಗೋಧಿ ಮೀಡಿಯಾ’ಗಳು ಪ್ರಯತ್ನಿಸಿದವು. ಈ ಪ್ರಕರಣವು ವಾಸ್ತವ ಸ್ಥಿತಿಯನ್ನು ಮರೆಮಾಚಿ ಸುದ್ದಿಯನ್ನು ತಿರುಚಲು ಗೋಧಿ ಮೀಡಿಯಾಗಳು ಹೇಗೆ ಬಳಸಿಕೊಳ್ಳುತ್ತವೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ.

ಕಾಶ್ಮೀರದ ಮುಸ್ಲಿಂ ಪ್ರಾಬಲ್ಯ ಪ್ರದೇಶಗಳಿಗೆ ಭೇಟಿ ಕೊಡಬೇಡಿ: ಬಂಗಾಳಿಗಳಿಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...