Homeಮುಖಪುಟಇಸ್ರೇಲ್| ನೆತನ್ಯಾಹು ಆಡಳಿತ ವಿರುದ್ಧ ಭುಗಿಲೆದ್ದ ಜನಾಕ್ರೋಶ: ವಿವಿಧ ನಗರಗಳಲ್ಲಿ ಪ್ರತಿಭಟನೆ

ಇಸ್ರೇಲ್| ನೆತನ್ಯಾಹು ಆಡಳಿತ ವಿರುದ್ಧ ಭುಗಿಲೆದ್ದ ಜನಾಕ್ರೋಶ: ವಿವಿಧ ನಗರಗಳಲ್ಲಿ ಪ್ರತಿಭಟನೆ

- Advertisement -
- Advertisement -

ಇಸ್ರೇಲ್‌ನಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. ಭಾನುವಾರ (ಮಾ.31) ರಾತ್ರಿ ಜೆರುಸಲೆಮ್‌ನ ನೆಸೆಟ್ (ಇಸ್ರೇಲಿ ಸಂಸತ್ತು) ಎದುರು ಸಾವಿರಾರು ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ದಿ ಗಾರ್ಡಿಯನ್ ಪ್ರಕಾರ, ಕಳೆದ ನಾಲ್ಕು ದಿನಗಳಿಂದ, ಇಸ್ರೇಲ್‌ನ ಟೆಲ್ ಅವಿವ್, ಜೆರುಸಲೆಮ್, ಹೈಫಾ, ಬೀರ್ ಶೆವಾ ಮತ್ತು ಸಿಸೇರಿಯಾದಲ್ಲಿ ನೆತನ್ಯಾಹು ವಿರುದ್ದ ಪ್ರತಿಭಟನೆಗಳು ನಡೆದಿವೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ್ದಾಗ ಹಲವು ಮಂದಿಯನ್ನು ಕರೆದೊಯ್ದು ಒತ್ತೆಯಾಳಾಗಿಟ್ಟುಕೊಂಡಿವೆ. ಅವರನ್ನು ರಕ್ಷಿಸುವ ವಿಷಯದಲ್ಲಿ ನೆತನ್ಯಾಹು ಸರ್ಕಾರ ಗಂಭೀರವಾಗಿ ಚಿಂತಿಸುತ್ತಿಲ್ಲ. ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನೆತನ್ಯಾಹು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕರಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಹಮಾಸ್ ವಶದಲ್ಲಿರುವವರ ಕುಟುಂಬಸ್ಥರೂ ಭಾಗವಹಿಸಿದ್ದರು.

“ಒತ್ತೆಯಾಳುಗಳ ವಿಚಾರ ಎಲ್ಲಕ್ಕಿಂತ ದೊಡ್ಡದು. ಇದರಲ್ಲಿ ರಾಜಕೀಯ ಇಲ್ಲ. ಆದರೆ, ನನ್ನ ಸಹೋದರ ಮನೆಗೆ ಹಿಂದಿರುಗಲು ನಾನು ಸರ್ಕಾರಿ ಅಧಿಕಾರಿಗಳ ವಿರುದ್ದ ಹೋರಾಡಬೇಕಾಗುತ್ತದೆ ಎಂದು ನಂಬಿರಲಿಲ್ಲ ಎಂದು ಹಮಾಸ್ ವಶದಲ್ಲಿರುವ ವ್ಯಕ್ತಿ ಎಲಾಡ್ ಎಂಬ ವ್ಯಕ್ತಿಯ ಸಹೋದರ ಕಾರ್ಮಿಟ್ ಪಾಲ್ಟಿ ಕಾಟ್ಜಿರ್ ಹೇಳಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಯೈರ್ ಲ್ಯಾಪಿಡ್, ಸರ್ಕಾರದ ಸಚಿವರ ವಿರುದ್ದ ಮತಚಲಾಯಿಸಿ ಅವರನ್ನು ಮನೆಗೆ ಕಳುಹಿಸಿ. ಈ ಕಲೆ ಅವರ ಜೀವನದುದ್ದಕ್ಕೂ ಅಂಟಿಕೊಂಡಿರುತ್ತದೆ. ನಾವು ಯುದ್ಧವನ್ನು ಕೊನೆಗೊಳಿಸಲು ಬಯಸಿದ್ದೇವೆ. ನಮಗೆ ಬೇರೆ ಸರ್ಕಾರ ಬೇಕು ಎಂದಿದ್ದಾರೆ.

ದಿ ನ್ಯೂಯಾರ್ಕ್ ಟೈಮ್ಸ್ ವರದಿಯ ಪ್ರಕಾರ, ಹಮಾಸ್‌ ವಶದಲ್ಲಿರುವ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಗಾಗಿ ಸರ್ಕಾರವು ಹಮಾಸ್‌ನೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಟೆಲ್ ಅವಿವ್ ನಗರದಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಯುತ್ತಿದೆ. ಆದರೆ, ನೆತನ್ಯಾಹು ಸರ್ಕಾರ ನಾವು ಯುದ್ದವನ್ನು ಮುಂದುವರೆಸುತ್ತೇವೆ ಎಂದಿದೆ.

ಇದುವರೆಗೆ ಇಸ್ರೇಲ್‌ ಆಕ್ರಮಣ 70 ಒತ್ತೆಯಾಳುಗಳ ಸಾವಿಗೆ ಕಾರಣವಾಗಿವೆ ಎಂದು ಹಮಾಸ್ ಹೇಳಿಕೊಂಡಿದೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್‌ನ ಮುಂದುವರಿದ ಆಕ್ರಮಣದಿಂದ ಇದುವರೆಗೆ ಸುಮಾರು 30 ಜನರನ್ನು ಕೊಂದಿವೆ ಮತ್ತು ಉಳಿದಿರುವವರು ತೀವ್ರ ಆಹಾರ, ನೈರ್ಮಲ್ಯ ಮತ್ತು ಆರೋಗ್ಯ ರಕ್ಷಣೆಯ ಬಿಕ್ಕಟ್ಟುಗಳನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ : ’10 ವರ್ಷದ ದುರಾಡಳಿತದ ನಂತರ ಇದ್ದಕ್ಕಿದ್ದಂತೆ ಎಚ್ಚರಗೊಂಡಿದ್ದೀರಿ..; ಮೋದಿ ವಿರುದ್ಧ ಕಿಡಿಕಾರಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...