Homeಮುಖಪುಟಇಸ್ರೇಲ್| ನೆತನ್ಯಾಹು ಆಡಳಿತ ವಿರುದ್ಧ ಭುಗಿಲೆದ್ದ ಜನಾಕ್ರೋಶ: ವಿವಿಧ ನಗರಗಳಲ್ಲಿ ಪ್ರತಿಭಟನೆ

ಇಸ್ರೇಲ್| ನೆತನ್ಯಾಹು ಆಡಳಿತ ವಿರುದ್ಧ ಭುಗಿಲೆದ್ದ ಜನಾಕ್ರೋಶ: ವಿವಿಧ ನಗರಗಳಲ್ಲಿ ಪ್ರತಿಭಟನೆ

- Advertisement -
- Advertisement -

ಇಸ್ರೇಲ್‌ನಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. ಭಾನುವಾರ (ಮಾ.31) ರಾತ್ರಿ ಜೆರುಸಲೆಮ್‌ನ ನೆಸೆಟ್ (ಇಸ್ರೇಲಿ ಸಂಸತ್ತು) ಎದುರು ಸಾವಿರಾರು ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ದಿ ಗಾರ್ಡಿಯನ್ ಪ್ರಕಾರ, ಕಳೆದ ನಾಲ್ಕು ದಿನಗಳಿಂದ, ಇಸ್ರೇಲ್‌ನ ಟೆಲ್ ಅವಿವ್, ಜೆರುಸಲೆಮ್, ಹೈಫಾ, ಬೀರ್ ಶೆವಾ ಮತ್ತು ಸಿಸೇರಿಯಾದಲ್ಲಿ ನೆತನ್ಯಾಹು ವಿರುದ್ದ ಪ್ರತಿಭಟನೆಗಳು ನಡೆದಿವೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ್ದಾಗ ಹಲವು ಮಂದಿಯನ್ನು ಕರೆದೊಯ್ದು ಒತ್ತೆಯಾಳಾಗಿಟ್ಟುಕೊಂಡಿವೆ. ಅವರನ್ನು ರಕ್ಷಿಸುವ ವಿಷಯದಲ್ಲಿ ನೆತನ್ಯಾಹು ಸರ್ಕಾರ ಗಂಭೀರವಾಗಿ ಚಿಂತಿಸುತ್ತಿಲ್ಲ. ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನೆತನ್ಯಾಹು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕರಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಹಮಾಸ್ ವಶದಲ್ಲಿರುವವರ ಕುಟುಂಬಸ್ಥರೂ ಭಾಗವಹಿಸಿದ್ದರು.

“ಒತ್ತೆಯಾಳುಗಳ ವಿಚಾರ ಎಲ್ಲಕ್ಕಿಂತ ದೊಡ್ಡದು. ಇದರಲ್ಲಿ ರಾಜಕೀಯ ಇಲ್ಲ. ಆದರೆ, ನನ್ನ ಸಹೋದರ ಮನೆಗೆ ಹಿಂದಿರುಗಲು ನಾನು ಸರ್ಕಾರಿ ಅಧಿಕಾರಿಗಳ ವಿರುದ್ದ ಹೋರಾಡಬೇಕಾಗುತ್ತದೆ ಎಂದು ನಂಬಿರಲಿಲ್ಲ ಎಂದು ಹಮಾಸ್ ವಶದಲ್ಲಿರುವ ವ್ಯಕ್ತಿ ಎಲಾಡ್ ಎಂಬ ವ್ಯಕ್ತಿಯ ಸಹೋದರ ಕಾರ್ಮಿಟ್ ಪಾಲ್ಟಿ ಕಾಟ್ಜಿರ್ ಹೇಳಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಯೈರ್ ಲ್ಯಾಪಿಡ್, ಸರ್ಕಾರದ ಸಚಿವರ ವಿರುದ್ದ ಮತಚಲಾಯಿಸಿ ಅವರನ್ನು ಮನೆಗೆ ಕಳುಹಿಸಿ. ಈ ಕಲೆ ಅವರ ಜೀವನದುದ್ದಕ್ಕೂ ಅಂಟಿಕೊಂಡಿರುತ್ತದೆ. ನಾವು ಯುದ್ಧವನ್ನು ಕೊನೆಗೊಳಿಸಲು ಬಯಸಿದ್ದೇವೆ. ನಮಗೆ ಬೇರೆ ಸರ್ಕಾರ ಬೇಕು ಎಂದಿದ್ದಾರೆ.

ದಿ ನ್ಯೂಯಾರ್ಕ್ ಟೈಮ್ಸ್ ವರದಿಯ ಪ್ರಕಾರ, ಹಮಾಸ್‌ ವಶದಲ್ಲಿರುವ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಗಾಗಿ ಸರ್ಕಾರವು ಹಮಾಸ್‌ನೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಟೆಲ್ ಅವಿವ್ ನಗರದಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಯುತ್ತಿದೆ. ಆದರೆ, ನೆತನ್ಯಾಹು ಸರ್ಕಾರ ನಾವು ಯುದ್ದವನ್ನು ಮುಂದುವರೆಸುತ್ತೇವೆ ಎಂದಿದೆ.

ಇದುವರೆಗೆ ಇಸ್ರೇಲ್‌ ಆಕ್ರಮಣ 70 ಒತ್ತೆಯಾಳುಗಳ ಸಾವಿಗೆ ಕಾರಣವಾಗಿವೆ ಎಂದು ಹಮಾಸ್ ಹೇಳಿಕೊಂಡಿದೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್‌ನ ಮುಂದುವರಿದ ಆಕ್ರಮಣದಿಂದ ಇದುವರೆಗೆ ಸುಮಾರು 30 ಜನರನ್ನು ಕೊಂದಿವೆ ಮತ್ತು ಉಳಿದಿರುವವರು ತೀವ್ರ ಆಹಾರ, ನೈರ್ಮಲ್ಯ ಮತ್ತು ಆರೋಗ್ಯ ರಕ್ಷಣೆಯ ಬಿಕ್ಕಟ್ಟುಗಳನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ : ’10 ವರ್ಷದ ದುರಾಡಳಿತದ ನಂತರ ಇದ್ದಕ್ಕಿದ್ದಂತೆ ಎಚ್ಚರಗೊಂಡಿದ್ದೀರಿ..; ಮೋದಿ ವಿರುದ್ಧ ಕಿಡಿಕಾರಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...