Homeಮುಖಪುಟಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

ಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ (ಕೆಐಐಟಿ) ನೇಪಾಳಿ ವಿದ್ಯಾರ್ಥಿನಿಯೊಬ್ಬರು ಭಾನುವಾರ (ಫೆ.16) ಸಂಜೆ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೂರನೇ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ಪ್ರಕೃತಿ ಲಾಮ್ಸಾಲ್ ಅಸಹಜವಾಗಿ ಸಾವಿಗೀಡಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಈ ಘಟನೆಯಿಂದ ಕೆಐಐಟಿ ಕ್ಯಾಂಪಸ್‌ನಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳು ಸಂಸ್ಥೆಯ ವಿರುದ್ಧ ಭಾನುವಾರ ರಾತ್ರಿಯೇ ದಿಢೀರ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದರಿಂದ ಕೋಪಗೊಂಡ ಕೆಐಐಟಿ ಆಡಳಿತ ಮಂಡಳಿ, ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಖಾಲಿ ಮಾಡಿಸಿ ವಾಪಸ್ ಊರಿಗೆ ಹೋಗುವಂತೆ ಒತ್ತಾಯಿಸಿದೆ.

ಅಲ್ಲದೇ ಅವರೆಲ್ಲರನ್ನೂ ಬಸ್ ಹತ್ತಿಸಿ ಕ್ಯಾಂಪಸ್‌ನಿಂದ 30 ಕಿಲೋ ಮೀಟರ್ ದೂರದ ಕಟ್ಟಕ್ ರೈಲು ನಿಲ್ದಾಣದಲ್ಲಿ ಇಳಿಸಿದ್ದಾರೆ. ಹುಡುಗಿಯರು ಸೇರಿಂದಂತೆ ಹಲವು ವಿದ್ಯಾರ್ಥಿಗಳು ಟಿಕೆಟ್ ಸಿಗದೆ ರೈಲಿನಲ್ಲಿ ಊರಿಗೆ ಹೋಗಲಾಗದೆ ನಿಲ್ದಾಣದ ಹೊರಗಡೆಯೇ ಅತಂತ್ರರಾಗಿ ನಿಂತಿದ್ದಾರೆ.

ಈ ಬೆಳವಣಿಗೆ ಈಗ ಭಾರತ ಮತ್ತು ನೇಪಾಳ ನಡುವಿನ ರಾಜತಾಂತ್ರಿಕ ವಿಷಯವಾಗಿ ಮಾರ್ಪಟ್ಟಿದೆ. “ಒಡಿಶಾದಲ್ಲಿ ತೊಂದರೆಗೊಳಗಾದ ನೇಪಾಳಿ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ನವದೆಹಲಿಯಲ್ಲಿರುವ ನಮ್ಮ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕಳುಹಿಸಿದ್ದೇವೆ. ವಿದ್ಯಾರ್ಥಿಗಳು ಅವರ ಆದ್ಯತೆಯ ಮೇರೆಗೆ ತಮ್ಮ ಹಾಸ್ಟೆಲ್‌ನಲ್ಲಿ ಉಳಿಯುವ ಅಥವಾ ಮನೆಗೆ ಮರಳುವ ಆಯ್ಕೆಯನ್ನು ಹೊಂದಿದ್ದಾರೆ” ಎಂದು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಆರಂಭದಲ್ಲಿ ವಿದ್ಯಾರ್ಥಿಗಳ ವಿಷಯದಲ್ಲಿ ಕಠಿಣ ನಿಲುವು ತಳೆದಿದ್ದ ಕೆಐಐಟಿ, ತನ್ನ ಕ್ರಮದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆ ಹಿಂದೆ ಸರಿದಿದೆ. “ಇನ್ನು ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು. ಈಗ ನಡೆದಿರುವ ಪ್ರಕರಣದ ಬಗ್ಗೆ ಸುಗಮ ಮತ್ತು ಪಕ್ಷಪಾತವಿಲ್ಲದ ತನಿಖೆ ಕೈಗೊಳ್ಳಲು ಸಹಾಯವಾಗುವಂತೆ ನೇಪಾಳಿ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ತಮ್ಮ ಸ್ಥಳಗಳಿಗೆ ಮರಳಲು ಸೂಚಿಸಲಾಗಿದೆ” ಎಂದು ಹೇಳಿಕೆ ನೀಡಿದೆ.

“ನೇಪಾಳಿ ವಿದ್ಯಾರ್ಥಿಗಳು ಕ್ಯಾಂಪಸ್‌ಗೆ ಮರಳಲು ವ್ಯವಸ್ಥೆ ಮಾಡಲಾಗುವುದು. ಅವರು ಈ ಹಿಂದಿನಂತೆ ತರಗತಿಗಳಲ್ಲಿ ಭಾಗವಹಿಸಬಹುದು. ಅವರ ಶಿಕ್ಷಣಕ್ಕೆ ತೊಂದೆಯಾಗದಂತೆ ವಿಶ್ವವಿದ್ಯಾಲಯ ನೋಡಿಕೊಳ್ಳಲಿದೆ. ತರಗತಿಗಳು ಮತ್ತು ಹಾಸ್ಟೆಲ್‌ಗಳಿಂದ ಅವರನ್ನುಅಮಾನತು ಮಾಡಿರುವ ಆದೇಶ ತಕ್ಷಣದಿಂದಲೇ ಹಿಂತೆಗೆದುಕೊಳ್ಳಲಾಗಿದೆ” ಎಂದು ಕೆಐಐಟಿ ತಿಳಿಸಿದೆ.

ಇದಕ್ಕೂ ಮೊದಲು, ಕೆಐಐಟಿ ಹೊರಡಿಸಿದ ನೋಟಿಸ್‌ನಲ್ಲಿ, “ನೇಪಾಳದ ಎಲ್ಲಾ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಅನಿರ್ದಿಷ್ಟಾವಧಿಗೆ ಮುಚ್ಚಲ್ಪಟ್ಟಿದೆ. ಫೆಬ್ರವರಿ 17, 2025 ರಂದು ಇಂದು ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ತಕ್ಷಣವೇ ಖಾಲಿ ಮಾಡುವಂತೆ ಅವರಿಗೆ ನಿರ್ದೇಶಿಸಲಾಗಿದೆ” ಎಂದು ಹೇಳಿತ್ತು.

ಪೊಲೀಸರ ಪ್ರಕಾರ, ವಿದ್ಯಾರ್ಥಿನಿ ಪ್ರಕೃತಿಗೆ ಕ್ಯಾಂಪಸ್‌ನಲ್ಲಿ ಸ್ಥಳೀಯ ವಿದ್ಯಾರ್ಥಿಯೊಬ್ಬ ಪೀಡಿಸುತ್ತಿದ್ದ. ಆದರೆ, ಪ್ರಕೃತಿ ಇನ್ನೊಬ್ಬ ಹುಡುಗನನ್ನು ಇಷ್ಟಪಟ್ಟಿದ್ದರು. ಪೀಡಿಸುತ್ತಿದ್ದ ಸ್ಥಳೀಯ ವಿದ್ಯಾರ್ಥಿಯ ಕಿರುಕುಳಕ್ಕೆ ಬೇಸತ್ತು ಅವರು ಫೆ.16ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ಫೆಬ್ರವರಿ 16ರಂದು ನೇಪಾಳಿ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ ನಮಗೆ ದೂರು ಬಂದಿತ್ತು. ನಾವು ಹಾಸ್ಟೆಲ್ ಕೋಣೆಗೆ ಧಾವಿಸಿ ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದೆವು” ಎಂದು ಭುವನೇಶ್ವರದ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಹೇಳಿದ್ದಾರೆ.

ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. College administrative action is not good. after pressure coming from central govt. they accept all students to attend the classes. first find out the reason,

LEAVE A REPLY

Please enter your comment!
Please enter your name here

- Advertisment -

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...