Homeಮುಖಪುಟಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

ಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ (ಕೆಐಐಟಿ) ನೇಪಾಳಿ ವಿದ್ಯಾರ್ಥಿನಿಯೊಬ್ಬರು ಭಾನುವಾರ (ಫೆ.16) ಸಂಜೆ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೂರನೇ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ಪ್ರಕೃತಿ ಲಾಮ್ಸಾಲ್ ಅಸಹಜವಾಗಿ ಸಾವಿಗೀಡಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಈ ಘಟನೆಯಿಂದ ಕೆಐಐಟಿ ಕ್ಯಾಂಪಸ್‌ನಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳು ಸಂಸ್ಥೆಯ ವಿರುದ್ಧ ಭಾನುವಾರ ರಾತ್ರಿಯೇ ದಿಢೀರ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದರಿಂದ ಕೋಪಗೊಂಡ ಕೆಐಐಟಿ ಆಡಳಿತ ಮಂಡಳಿ, ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಖಾಲಿ ಮಾಡಿಸಿ ವಾಪಸ್ ಊರಿಗೆ ಹೋಗುವಂತೆ ಒತ್ತಾಯಿಸಿದೆ.

ಅಲ್ಲದೇ ಅವರೆಲ್ಲರನ್ನೂ ಬಸ್ ಹತ್ತಿಸಿ ಕ್ಯಾಂಪಸ್‌ನಿಂದ 30 ಕಿಲೋ ಮೀಟರ್ ದೂರದ ಕಟ್ಟಕ್ ರೈಲು ನಿಲ್ದಾಣದಲ್ಲಿ ಇಳಿಸಿದ್ದಾರೆ. ಹುಡುಗಿಯರು ಸೇರಿಂದಂತೆ ಹಲವು ವಿದ್ಯಾರ್ಥಿಗಳು ಟಿಕೆಟ್ ಸಿಗದೆ ರೈಲಿನಲ್ಲಿ ಊರಿಗೆ ಹೋಗಲಾಗದೆ ನಿಲ್ದಾಣದ ಹೊರಗಡೆಯೇ ಅತಂತ್ರರಾಗಿ ನಿಂತಿದ್ದಾರೆ.

ಈ ಬೆಳವಣಿಗೆ ಈಗ ಭಾರತ ಮತ್ತು ನೇಪಾಳ ನಡುವಿನ ರಾಜತಾಂತ್ರಿಕ ವಿಷಯವಾಗಿ ಮಾರ್ಪಟ್ಟಿದೆ. “ಒಡಿಶಾದಲ್ಲಿ ತೊಂದರೆಗೊಳಗಾದ ನೇಪಾಳಿ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ನವದೆಹಲಿಯಲ್ಲಿರುವ ನಮ್ಮ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕಳುಹಿಸಿದ್ದೇವೆ. ವಿದ್ಯಾರ್ಥಿಗಳು ಅವರ ಆದ್ಯತೆಯ ಮೇರೆಗೆ ತಮ್ಮ ಹಾಸ್ಟೆಲ್‌ನಲ್ಲಿ ಉಳಿಯುವ ಅಥವಾ ಮನೆಗೆ ಮರಳುವ ಆಯ್ಕೆಯನ್ನು ಹೊಂದಿದ್ದಾರೆ” ಎಂದು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಆರಂಭದಲ್ಲಿ ವಿದ್ಯಾರ್ಥಿಗಳ ವಿಷಯದಲ್ಲಿ ಕಠಿಣ ನಿಲುವು ತಳೆದಿದ್ದ ಕೆಐಐಟಿ, ತನ್ನ ಕ್ರಮದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆ ಹಿಂದೆ ಸರಿದಿದೆ. “ಇನ್ನು ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು. ಈಗ ನಡೆದಿರುವ ಪ್ರಕರಣದ ಬಗ್ಗೆ ಸುಗಮ ಮತ್ತು ಪಕ್ಷಪಾತವಿಲ್ಲದ ತನಿಖೆ ಕೈಗೊಳ್ಳಲು ಸಹಾಯವಾಗುವಂತೆ ನೇಪಾಳಿ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ತಮ್ಮ ಸ್ಥಳಗಳಿಗೆ ಮರಳಲು ಸೂಚಿಸಲಾಗಿದೆ” ಎಂದು ಹೇಳಿಕೆ ನೀಡಿದೆ.

“ನೇಪಾಳಿ ವಿದ್ಯಾರ್ಥಿಗಳು ಕ್ಯಾಂಪಸ್‌ಗೆ ಮರಳಲು ವ್ಯವಸ್ಥೆ ಮಾಡಲಾಗುವುದು. ಅವರು ಈ ಹಿಂದಿನಂತೆ ತರಗತಿಗಳಲ್ಲಿ ಭಾಗವಹಿಸಬಹುದು. ಅವರ ಶಿಕ್ಷಣಕ್ಕೆ ತೊಂದೆಯಾಗದಂತೆ ವಿಶ್ವವಿದ್ಯಾಲಯ ನೋಡಿಕೊಳ್ಳಲಿದೆ. ತರಗತಿಗಳು ಮತ್ತು ಹಾಸ್ಟೆಲ್‌ಗಳಿಂದ ಅವರನ್ನುಅಮಾನತು ಮಾಡಿರುವ ಆದೇಶ ತಕ್ಷಣದಿಂದಲೇ ಹಿಂತೆಗೆದುಕೊಳ್ಳಲಾಗಿದೆ” ಎಂದು ಕೆಐಐಟಿ ತಿಳಿಸಿದೆ.

ಇದಕ್ಕೂ ಮೊದಲು, ಕೆಐಐಟಿ ಹೊರಡಿಸಿದ ನೋಟಿಸ್‌ನಲ್ಲಿ, “ನೇಪಾಳದ ಎಲ್ಲಾ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಅನಿರ್ದಿಷ್ಟಾವಧಿಗೆ ಮುಚ್ಚಲ್ಪಟ್ಟಿದೆ. ಫೆಬ್ರವರಿ 17, 2025 ರಂದು ಇಂದು ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ತಕ್ಷಣವೇ ಖಾಲಿ ಮಾಡುವಂತೆ ಅವರಿಗೆ ನಿರ್ದೇಶಿಸಲಾಗಿದೆ” ಎಂದು ಹೇಳಿತ್ತು.

ಪೊಲೀಸರ ಪ್ರಕಾರ, ವಿದ್ಯಾರ್ಥಿನಿ ಪ್ರಕೃತಿಗೆ ಕ್ಯಾಂಪಸ್‌ನಲ್ಲಿ ಸ್ಥಳೀಯ ವಿದ್ಯಾರ್ಥಿಯೊಬ್ಬ ಪೀಡಿಸುತ್ತಿದ್ದ. ಆದರೆ, ಪ್ರಕೃತಿ ಇನ್ನೊಬ್ಬ ಹುಡುಗನನ್ನು ಇಷ್ಟಪಟ್ಟಿದ್ದರು. ಪೀಡಿಸುತ್ತಿದ್ದ ಸ್ಥಳೀಯ ವಿದ್ಯಾರ್ಥಿಯ ಕಿರುಕುಳಕ್ಕೆ ಬೇಸತ್ತು ಅವರು ಫೆ.16ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ಫೆಬ್ರವರಿ 16ರಂದು ನೇಪಾಳಿ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ ನಮಗೆ ದೂರು ಬಂದಿತ್ತು. ನಾವು ಹಾಸ್ಟೆಲ್ ಕೋಣೆಗೆ ಧಾವಿಸಿ ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದೆವು” ಎಂದು ಭುವನೇಶ್ವರದ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಹೇಳಿದ್ದಾರೆ.

ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. College administrative action is not good. after pressure coming from central govt. they accept all students to attend the classes. first find out the reason,

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...