Homeಮುಖಪುಟಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

ಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ (ಕೆಐಐಟಿ) ನೇಪಾಳಿ ವಿದ್ಯಾರ್ಥಿನಿಯೊಬ್ಬರು ಭಾನುವಾರ (ಫೆ.16) ಸಂಜೆ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೂರನೇ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ಪ್ರಕೃತಿ ಲಾಮ್ಸಾಲ್ ಅಸಹಜವಾಗಿ ಸಾವಿಗೀಡಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಈ ಘಟನೆಯಿಂದ ಕೆಐಐಟಿ ಕ್ಯಾಂಪಸ್‌ನಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳು ಸಂಸ್ಥೆಯ ವಿರುದ್ಧ ಭಾನುವಾರ ರಾತ್ರಿಯೇ ದಿಢೀರ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದರಿಂದ ಕೋಪಗೊಂಡ ಕೆಐಐಟಿ ಆಡಳಿತ ಮಂಡಳಿ, ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಖಾಲಿ ಮಾಡಿಸಿ ವಾಪಸ್ ಊರಿಗೆ ಹೋಗುವಂತೆ ಒತ್ತಾಯಿಸಿದೆ.

ಅಲ್ಲದೇ ಅವರೆಲ್ಲರನ್ನೂ ಬಸ್ ಹತ್ತಿಸಿ ಕ್ಯಾಂಪಸ್‌ನಿಂದ 30 ಕಿಲೋ ಮೀಟರ್ ದೂರದ ಕಟ್ಟಕ್ ರೈಲು ನಿಲ್ದಾಣದಲ್ಲಿ ಇಳಿಸಿದ್ದಾರೆ. ಹುಡುಗಿಯರು ಸೇರಿಂದಂತೆ ಹಲವು ವಿದ್ಯಾರ್ಥಿಗಳು ಟಿಕೆಟ್ ಸಿಗದೆ ರೈಲಿನಲ್ಲಿ ಊರಿಗೆ ಹೋಗಲಾಗದೆ ನಿಲ್ದಾಣದ ಹೊರಗಡೆಯೇ ಅತಂತ್ರರಾಗಿ ನಿಂತಿದ್ದಾರೆ.

ಈ ಬೆಳವಣಿಗೆ ಈಗ ಭಾರತ ಮತ್ತು ನೇಪಾಳ ನಡುವಿನ ರಾಜತಾಂತ್ರಿಕ ವಿಷಯವಾಗಿ ಮಾರ್ಪಟ್ಟಿದೆ. “ಒಡಿಶಾದಲ್ಲಿ ತೊಂದರೆಗೊಳಗಾದ ನೇಪಾಳಿ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ನವದೆಹಲಿಯಲ್ಲಿರುವ ನಮ್ಮ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕಳುಹಿಸಿದ್ದೇವೆ. ವಿದ್ಯಾರ್ಥಿಗಳು ಅವರ ಆದ್ಯತೆಯ ಮೇರೆಗೆ ತಮ್ಮ ಹಾಸ್ಟೆಲ್‌ನಲ್ಲಿ ಉಳಿಯುವ ಅಥವಾ ಮನೆಗೆ ಮರಳುವ ಆಯ್ಕೆಯನ್ನು ಹೊಂದಿದ್ದಾರೆ” ಎಂದು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಆರಂಭದಲ್ಲಿ ವಿದ್ಯಾರ್ಥಿಗಳ ವಿಷಯದಲ್ಲಿ ಕಠಿಣ ನಿಲುವು ತಳೆದಿದ್ದ ಕೆಐಐಟಿ, ತನ್ನ ಕ್ರಮದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆ ಹಿಂದೆ ಸರಿದಿದೆ. “ಇನ್ನು ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು. ಈಗ ನಡೆದಿರುವ ಪ್ರಕರಣದ ಬಗ್ಗೆ ಸುಗಮ ಮತ್ತು ಪಕ್ಷಪಾತವಿಲ್ಲದ ತನಿಖೆ ಕೈಗೊಳ್ಳಲು ಸಹಾಯವಾಗುವಂತೆ ನೇಪಾಳಿ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ತಮ್ಮ ಸ್ಥಳಗಳಿಗೆ ಮರಳಲು ಸೂಚಿಸಲಾಗಿದೆ” ಎಂದು ಹೇಳಿಕೆ ನೀಡಿದೆ.

“ನೇಪಾಳಿ ವಿದ್ಯಾರ್ಥಿಗಳು ಕ್ಯಾಂಪಸ್‌ಗೆ ಮರಳಲು ವ್ಯವಸ್ಥೆ ಮಾಡಲಾಗುವುದು. ಅವರು ಈ ಹಿಂದಿನಂತೆ ತರಗತಿಗಳಲ್ಲಿ ಭಾಗವಹಿಸಬಹುದು. ಅವರ ಶಿಕ್ಷಣಕ್ಕೆ ತೊಂದೆಯಾಗದಂತೆ ವಿಶ್ವವಿದ್ಯಾಲಯ ನೋಡಿಕೊಳ್ಳಲಿದೆ. ತರಗತಿಗಳು ಮತ್ತು ಹಾಸ್ಟೆಲ್‌ಗಳಿಂದ ಅವರನ್ನುಅಮಾನತು ಮಾಡಿರುವ ಆದೇಶ ತಕ್ಷಣದಿಂದಲೇ ಹಿಂತೆಗೆದುಕೊಳ್ಳಲಾಗಿದೆ” ಎಂದು ಕೆಐಐಟಿ ತಿಳಿಸಿದೆ.

ಇದಕ್ಕೂ ಮೊದಲು, ಕೆಐಐಟಿ ಹೊರಡಿಸಿದ ನೋಟಿಸ್‌ನಲ್ಲಿ, “ನೇಪಾಳದ ಎಲ್ಲಾ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಅನಿರ್ದಿಷ್ಟಾವಧಿಗೆ ಮುಚ್ಚಲ್ಪಟ್ಟಿದೆ. ಫೆಬ್ರವರಿ 17, 2025 ರಂದು ಇಂದು ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ತಕ್ಷಣವೇ ಖಾಲಿ ಮಾಡುವಂತೆ ಅವರಿಗೆ ನಿರ್ದೇಶಿಸಲಾಗಿದೆ” ಎಂದು ಹೇಳಿತ್ತು.

ಪೊಲೀಸರ ಪ್ರಕಾರ, ವಿದ್ಯಾರ್ಥಿನಿ ಪ್ರಕೃತಿಗೆ ಕ್ಯಾಂಪಸ್‌ನಲ್ಲಿ ಸ್ಥಳೀಯ ವಿದ್ಯಾರ್ಥಿಯೊಬ್ಬ ಪೀಡಿಸುತ್ತಿದ್ದ. ಆದರೆ, ಪ್ರಕೃತಿ ಇನ್ನೊಬ್ಬ ಹುಡುಗನನ್ನು ಇಷ್ಟಪಟ್ಟಿದ್ದರು. ಪೀಡಿಸುತ್ತಿದ್ದ ಸ್ಥಳೀಯ ವಿದ್ಯಾರ್ಥಿಯ ಕಿರುಕುಳಕ್ಕೆ ಬೇಸತ್ತು ಅವರು ಫೆ.16ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ಫೆಬ್ರವರಿ 16ರಂದು ನೇಪಾಳಿ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ ನಮಗೆ ದೂರು ಬಂದಿತ್ತು. ನಾವು ಹಾಸ್ಟೆಲ್ ಕೋಣೆಗೆ ಧಾವಿಸಿ ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದೆವು” ಎಂದು ಭುವನೇಶ್ವರದ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಹೇಳಿದ್ದಾರೆ.

ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. College administrative action is not good. after pressure coming from central govt. they accept all students to attend the classes. first find out the reason,

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...