Homeಮುಖಪುಟಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

ಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ (ಕೆಐಐಟಿ) ನೇಪಾಳಿ ವಿದ್ಯಾರ್ಥಿನಿಯೊಬ್ಬರು ಭಾನುವಾರ (ಫೆ.16) ಸಂಜೆ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೂರನೇ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ಪ್ರಕೃತಿ ಲಾಮ್ಸಾಲ್ ಅಸಹಜವಾಗಿ ಸಾವಿಗೀಡಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಈ ಘಟನೆಯಿಂದ ಕೆಐಐಟಿ ಕ್ಯಾಂಪಸ್‌ನಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳು ಸಂಸ್ಥೆಯ ವಿರುದ್ಧ ಭಾನುವಾರ ರಾತ್ರಿಯೇ ದಿಢೀರ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದರಿಂದ ಕೋಪಗೊಂಡ ಕೆಐಐಟಿ ಆಡಳಿತ ಮಂಡಳಿ, ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಖಾಲಿ ಮಾಡಿಸಿ ವಾಪಸ್ ಊರಿಗೆ ಹೋಗುವಂತೆ ಒತ್ತಾಯಿಸಿದೆ.

ಅಲ್ಲದೇ ಅವರೆಲ್ಲರನ್ನೂ ಬಸ್ ಹತ್ತಿಸಿ ಕ್ಯಾಂಪಸ್‌ನಿಂದ 30 ಕಿಲೋ ಮೀಟರ್ ದೂರದ ಕಟ್ಟಕ್ ರೈಲು ನಿಲ್ದಾಣದಲ್ಲಿ ಇಳಿಸಿದ್ದಾರೆ. ಹುಡುಗಿಯರು ಸೇರಿಂದಂತೆ ಹಲವು ವಿದ್ಯಾರ್ಥಿಗಳು ಟಿಕೆಟ್ ಸಿಗದೆ ರೈಲಿನಲ್ಲಿ ಊರಿಗೆ ಹೋಗಲಾಗದೆ ನಿಲ್ದಾಣದ ಹೊರಗಡೆಯೇ ಅತಂತ್ರರಾಗಿ ನಿಂತಿದ್ದಾರೆ.

ಈ ಬೆಳವಣಿಗೆ ಈಗ ಭಾರತ ಮತ್ತು ನೇಪಾಳ ನಡುವಿನ ರಾಜತಾಂತ್ರಿಕ ವಿಷಯವಾಗಿ ಮಾರ್ಪಟ್ಟಿದೆ. “ಒಡಿಶಾದಲ್ಲಿ ತೊಂದರೆಗೊಳಗಾದ ನೇಪಾಳಿ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ನವದೆಹಲಿಯಲ್ಲಿರುವ ನಮ್ಮ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕಳುಹಿಸಿದ್ದೇವೆ. ವಿದ್ಯಾರ್ಥಿಗಳು ಅವರ ಆದ್ಯತೆಯ ಮೇರೆಗೆ ತಮ್ಮ ಹಾಸ್ಟೆಲ್‌ನಲ್ಲಿ ಉಳಿಯುವ ಅಥವಾ ಮನೆಗೆ ಮರಳುವ ಆಯ್ಕೆಯನ್ನು ಹೊಂದಿದ್ದಾರೆ” ಎಂದು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಆರಂಭದಲ್ಲಿ ವಿದ್ಯಾರ್ಥಿಗಳ ವಿಷಯದಲ್ಲಿ ಕಠಿಣ ನಿಲುವು ತಳೆದಿದ್ದ ಕೆಐಐಟಿ, ತನ್ನ ಕ್ರಮದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆ ಹಿಂದೆ ಸರಿದಿದೆ. “ಇನ್ನು ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು. ಈಗ ನಡೆದಿರುವ ಪ್ರಕರಣದ ಬಗ್ಗೆ ಸುಗಮ ಮತ್ತು ಪಕ್ಷಪಾತವಿಲ್ಲದ ತನಿಖೆ ಕೈಗೊಳ್ಳಲು ಸಹಾಯವಾಗುವಂತೆ ನೇಪಾಳಿ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ತಮ್ಮ ಸ್ಥಳಗಳಿಗೆ ಮರಳಲು ಸೂಚಿಸಲಾಗಿದೆ” ಎಂದು ಹೇಳಿಕೆ ನೀಡಿದೆ.

“ನೇಪಾಳಿ ವಿದ್ಯಾರ್ಥಿಗಳು ಕ್ಯಾಂಪಸ್‌ಗೆ ಮರಳಲು ವ್ಯವಸ್ಥೆ ಮಾಡಲಾಗುವುದು. ಅವರು ಈ ಹಿಂದಿನಂತೆ ತರಗತಿಗಳಲ್ಲಿ ಭಾಗವಹಿಸಬಹುದು. ಅವರ ಶಿಕ್ಷಣಕ್ಕೆ ತೊಂದೆಯಾಗದಂತೆ ವಿಶ್ವವಿದ್ಯಾಲಯ ನೋಡಿಕೊಳ್ಳಲಿದೆ. ತರಗತಿಗಳು ಮತ್ತು ಹಾಸ್ಟೆಲ್‌ಗಳಿಂದ ಅವರನ್ನುಅಮಾನತು ಮಾಡಿರುವ ಆದೇಶ ತಕ್ಷಣದಿಂದಲೇ ಹಿಂತೆಗೆದುಕೊಳ್ಳಲಾಗಿದೆ” ಎಂದು ಕೆಐಐಟಿ ತಿಳಿಸಿದೆ.

ಇದಕ್ಕೂ ಮೊದಲು, ಕೆಐಐಟಿ ಹೊರಡಿಸಿದ ನೋಟಿಸ್‌ನಲ್ಲಿ, “ನೇಪಾಳದ ಎಲ್ಲಾ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಅನಿರ್ದಿಷ್ಟಾವಧಿಗೆ ಮುಚ್ಚಲ್ಪಟ್ಟಿದೆ. ಫೆಬ್ರವರಿ 17, 2025 ರಂದು ಇಂದು ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ತಕ್ಷಣವೇ ಖಾಲಿ ಮಾಡುವಂತೆ ಅವರಿಗೆ ನಿರ್ದೇಶಿಸಲಾಗಿದೆ” ಎಂದು ಹೇಳಿತ್ತು.

ಪೊಲೀಸರ ಪ್ರಕಾರ, ವಿದ್ಯಾರ್ಥಿನಿ ಪ್ರಕೃತಿಗೆ ಕ್ಯಾಂಪಸ್‌ನಲ್ಲಿ ಸ್ಥಳೀಯ ವಿದ್ಯಾರ್ಥಿಯೊಬ್ಬ ಪೀಡಿಸುತ್ತಿದ್ದ. ಆದರೆ, ಪ್ರಕೃತಿ ಇನ್ನೊಬ್ಬ ಹುಡುಗನನ್ನು ಇಷ್ಟಪಟ್ಟಿದ್ದರು. ಪೀಡಿಸುತ್ತಿದ್ದ ಸ್ಥಳೀಯ ವಿದ್ಯಾರ್ಥಿಯ ಕಿರುಕುಳಕ್ಕೆ ಬೇಸತ್ತು ಅವರು ಫೆ.16ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ಫೆಬ್ರವರಿ 16ರಂದು ನೇಪಾಳಿ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ ನಮಗೆ ದೂರು ಬಂದಿತ್ತು. ನಾವು ಹಾಸ್ಟೆಲ್ ಕೋಣೆಗೆ ಧಾವಿಸಿ ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದೆವು” ಎಂದು ಭುವನೇಶ್ವರದ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಹೇಳಿದ್ದಾರೆ.

ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. College administrative action is not good. after pressure coming from central govt. they accept all students to attend the classes. first find out the reason,

LEAVE A REPLY

Please enter your comment!
Please enter your name here

- Advertisment -

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...