Homeಮುಖಪುಟರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಭಾಗವಹಿಸಿರುವ ರೈತರು ತಮ್ಮ ಟ್ರಾಲಿಗಳಲ್ಲಿ, ತಮ್ಮದೆ ಟೆಂಟ್‌ಗಳಲ್ಲಿ ಕಳೆದ 67 ದಿನಗಳಿಂದ ವಾಸಿಸುತ್ತಿದ್ದಾರೆ. ಆದರೆ ಪ್ರತಿಭಟನೆಗೆ ಬೆಂಬಲಿಸಿ ಬರುತ್ತಿರುವ ಜನಸಾಗರಕ್ಕೆ, ಹೊರ ರಾಜ್ಯಗಳಿಂದ ಬರುವ ರೈತರಿಗೆ ಉಳಿಯಲು ವ್ಯವಸ್ಥೆಯಾಗುತ್ತಿರುವುದು ಟೆಂಟ್ ಸಿಟಿ ಎಂಬ ಅದ್ಭುತ ಸ್ಥಳದಲ್ಲಿ.

ಹೌದು, ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ 67 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೆಂಬಲಕ್ಕೆ ಬರುವವರಿಗೆ ಈ ಟೆಂಟ್ ಸಿಟಿಗಳು ಆಶ್ರಯತಾಣಗಳಾಗಿವೆ.

ಹೋರಾಟಕ್ಕೆ ಬೆಂಬಲ ನೀಡಲು ಬರುವ ಜನರಿಗೆ ರೈತರು ಉಳಿಯಲು ವ್ಯವಸ್ಥೆ ಮಾಡುತ್ತಿದ್ದಾರೆ. ತಮ್ಮ ಟ್ರ್ಯಾಲಿ, ಟೆಂಟ್, ಟ್ರ್ಯಾಕ್ಟರ್‌ಗಳಲ್ಲೂ ಜಾಗ ನೀಡಿದ್ದಾರೆ. ಆದರೆ ಇಷ್ಟೊಂದು ಸಂಖ್ಯೆಯಲ್ಲಿ ತುಂಬುತ್ತಿರುವ ಜನರಿಗಾಗಿ ಈ ಟೆಂಟ್ ಸಿಟಿಗಳ ಅವಶ್ಯಕತೆ ಹೆಚ್ಚಾಗಿದೆ. ಇವುಗಳ ಸೇವೆ ಈ ರೈತ ಹೋರಾಟದಲ್ಲಿ ವಿಭಿನ್ನವಾಗಿ ನಿಲ್ಲುತ್ತಿದೆ.

ಹೇಮಕುಂತ್ ಫೌಂಡೇಶನ್ ಎಂಬ ಸಾರ್ವಜನಿಕ ಸೇವಾ ಸಂಸ್ಥೆ ಪ್ರತಿಭಟನೆ ಬೆಂಬಲಿಸಿ ಬರುವವರಿಗೆ ಉಳಿಯಲು ಸಿಂಘು, ಚಿಲ್ಲಾ, ಗಾಝಿಪುರ್ ಮತ್ತು ಟಿಕ್ರಿ ಗಡಿಗಳಲ್ಲಿ ಟೆಂಟ್ ಸಿಟಿಗಳನ್ನು ನಿರ್ಮಿಸಿದೆ. ಈ ಟೆಂಟ್ ಸಿಟಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಪುರುಷರಿಗೂ ಇಲ್ಲಿ ಉಳಿಯಲು ಅವಕಾಶವಿದೆ. ಆದರೆ ಅವರೆಲ್ಲಾ ಹೆಚ್ಚಾಗಿ ಟ್ರ್ಯಾಲಿಗಳಲ್ಲಿ ಉಳಿಯುವ ಕಾರಣ ಇಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ.

ಟೆಂಟ್ ಸಿಟಿಯಲ್ಲಿ ಉಳಿಯುವುದು ಉಚಿತವಾಗಿರುತ್ತದೆ. ಎಷ್ಟು ದಿನ ಬೇಕಿದ್ದರು ಇಲ್ಲಿ ಉಳಿಯಬಹುದು. ನಮಗೆ ಟೆಂಟ್ ನೀಡಿರುವ ದಾಖಲೆಗಾಗಿ ಯಾವುದಾದರೂ ಒಂದು ಗುರುತು ಪತ್ರ ನೀಡಬೇಕಾಗುತ್ತದೆ. ಒಬ್ಬಂಟಿಯಾಗಿರುವವರಿಗೆ ಸಿಂಗಲ್ ಟೆಂಟ್ ನೀಡಲಾಗುತ್ತಿದೆ. ಇಬ್ಬರಿದ್ದರೆ ಅವರಿಗೆ ಆಗುವಂತಹ ಟೆಂಟ್, ಇಡೀ ಕುಟುಂಬವಿದ್ದರೇ ಅವರಿಗೆ ಉಳಿಯಲು ಮತ್ತು 20 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದರೇ ದೊಡ್ಡ ಟೆಂಟ್ ವ್ಯವಸ್ಥೆ ಮಾಡಲಾಗುತ್ತದೆ.

ಟೆಂಟ್ ಒಳಗಡೆ ಹಾಸಿಗೆ ಮತ್ತು 2 ಬೆಡ್‌ಶೀಟ್‌ಗಳನ್ನು ವ್ಯವಸ್ಥೆ ಮಾಡುತ್ತಾರೆ. ಚಳಿ ಹೆಚ್ಚು ಎನಿಸಿದರೇ ಮತ್ತೆ ಬೆಡ್‌ಶೀಟ್‌ಗಳನ್ನು ನೀಡಲಾಗುತ್ತದೆ. ಟೆಂಟ್ ಸಿಟಿಯಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿರುವ ಕಾರಣ, ರಾತ್ರಿ ಪೂರ್ತಿ ಟೆಂಟ್ ಸಿಟಿಯಲ್ಲಿ ಯುವಕರು ಕಾವಲು ಕಾಯುತ್ತಾರೆ. ಪಾಳಿಯ ಮೇರೆಗೆ ಮೂರು ಜನರ ತಂಡ ಕಾರ್ಯ ನಿರ್ವಹಿಸುತ್ತದೆ.

ಇಲ್ಲಿನ ಸ್ವಯಂ ಸೇವಕರ ಪ್ರಕಾರ ಮೊದ ಮೊದಲು ಇಲ್ಲಿ ಉಳಿಯುವವರ ಸಂಖ್ಯೆ ಕಡಿಮೆಯಿತ್ತು. ಆದರೆ ಪ್ರತಿಭಟನೆಯ ದಿನಗಳು ಹೆಚ್ಚಾಗುತ್ತಿದ್ದಂತೆ ಬೇರೆ ರಾಜ್ಯಗಳಿಂದ ಬರುವವರ ಸಂಖ್ಯೆಯೂ ಹೆಚ್ಚಾಗಿ ಟೆಂಟ್ ಸಿಟಿ ತುಂಬುತ್ತಿದೆ. ಭದ್ರತೆ ದೃಷ್ಠಿಯಿಂದಲೂ ಇಲ್ಲಿ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ನಾವು ಆಶ್ರಯ ಪಡೆದವರ ಲಗೇಜ್ ಜವಾಬ್ದಾರಿ ಪಡೆಯುವುದಿಲ್ಲ. ಇಷ್ಟೊಂದು ಸಂಖ್ಯೆಯಲ್ಲಿ ಜನ ಬರುವುದರಿಂದ ಅವರೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೂ ನಮ್ಮ ಟೆಂಟ್ ಸಿಟಿಗೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ನಮ್ಮ ಬಳಿ ಟೆಂಟ್‌ಗಳಿವೆ ಆದರೆ ಹೋರಾಟದ ಸ್ಥಳ ಟೆಂಟ್, ಟ್ರ್ಯಾಲಿ, ಟ್ರ್ಯಾಕ್ಟರ್‌ಗಳಿಂದ ತುಂಬಿರುವುದರಿಂದ ಸ್ಥಳ ಸಿಗುತ್ತಿಲ್ಲ ಎನ್ನುತ್ತಾರೆ.

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ತಮಿಳುನಾಡಿನಿಂದ ಬಂದಿದ್ದ ರೈತ ಮಹಿಳೆಯರು, ಮಹಾರಾಷ್ಟ್ರದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತಂಡ ಸೇರಿದಂತೆ ಹೊರ ರಾಜ್ಯಗಳಿಂದ ಬಂದು ಉಳಿಯುವವರ ಸಂಖ್ಯೆ ಹೆಚ್ಚಾಗಿದೆ.

– ಮಮತ. ಎಂ


ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...