Homeಮುಖಪುಟರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಭಾಗವಹಿಸಿರುವ ರೈತರು ತಮ್ಮ ಟ್ರಾಲಿಗಳಲ್ಲಿ, ತಮ್ಮದೆ ಟೆಂಟ್‌ಗಳಲ್ಲಿ ಕಳೆದ 67 ದಿನಗಳಿಂದ ವಾಸಿಸುತ್ತಿದ್ದಾರೆ. ಆದರೆ ಪ್ರತಿಭಟನೆಗೆ ಬೆಂಬಲಿಸಿ ಬರುತ್ತಿರುವ ಜನಸಾಗರಕ್ಕೆ, ಹೊರ ರಾಜ್ಯಗಳಿಂದ ಬರುವ ರೈತರಿಗೆ ಉಳಿಯಲು ವ್ಯವಸ್ಥೆಯಾಗುತ್ತಿರುವುದು ಟೆಂಟ್ ಸಿಟಿ ಎಂಬ ಅದ್ಭುತ ಸ್ಥಳದಲ್ಲಿ.

ಹೌದು, ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ 67 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೆಂಬಲಕ್ಕೆ ಬರುವವರಿಗೆ ಈ ಟೆಂಟ್ ಸಿಟಿಗಳು ಆಶ್ರಯತಾಣಗಳಾಗಿವೆ.

ಹೋರಾಟಕ್ಕೆ ಬೆಂಬಲ ನೀಡಲು ಬರುವ ಜನರಿಗೆ ರೈತರು ಉಳಿಯಲು ವ್ಯವಸ್ಥೆ ಮಾಡುತ್ತಿದ್ದಾರೆ. ತಮ್ಮ ಟ್ರ್ಯಾಲಿ, ಟೆಂಟ್, ಟ್ರ್ಯಾಕ್ಟರ್‌ಗಳಲ್ಲೂ ಜಾಗ ನೀಡಿದ್ದಾರೆ. ಆದರೆ ಇಷ್ಟೊಂದು ಸಂಖ್ಯೆಯಲ್ಲಿ ತುಂಬುತ್ತಿರುವ ಜನರಿಗಾಗಿ ಈ ಟೆಂಟ್ ಸಿಟಿಗಳ ಅವಶ್ಯಕತೆ ಹೆಚ್ಚಾಗಿದೆ. ಇವುಗಳ ಸೇವೆ ಈ ರೈತ ಹೋರಾಟದಲ್ಲಿ ವಿಭಿನ್ನವಾಗಿ ನಿಲ್ಲುತ್ತಿದೆ.

ಹೇಮಕುಂತ್ ಫೌಂಡೇಶನ್ ಎಂಬ ಸಾರ್ವಜನಿಕ ಸೇವಾ ಸಂಸ್ಥೆ ಪ್ರತಿಭಟನೆ ಬೆಂಬಲಿಸಿ ಬರುವವರಿಗೆ ಉಳಿಯಲು ಸಿಂಘು, ಚಿಲ್ಲಾ, ಗಾಝಿಪುರ್ ಮತ್ತು ಟಿಕ್ರಿ ಗಡಿಗಳಲ್ಲಿ ಟೆಂಟ್ ಸಿಟಿಗಳನ್ನು ನಿರ್ಮಿಸಿದೆ. ಈ ಟೆಂಟ್ ಸಿಟಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಪುರುಷರಿಗೂ ಇಲ್ಲಿ ಉಳಿಯಲು ಅವಕಾಶವಿದೆ. ಆದರೆ ಅವರೆಲ್ಲಾ ಹೆಚ್ಚಾಗಿ ಟ್ರ್ಯಾಲಿಗಳಲ್ಲಿ ಉಳಿಯುವ ಕಾರಣ ಇಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ.

ಟೆಂಟ್ ಸಿಟಿಯಲ್ಲಿ ಉಳಿಯುವುದು ಉಚಿತವಾಗಿರುತ್ತದೆ. ಎಷ್ಟು ದಿನ ಬೇಕಿದ್ದರು ಇಲ್ಲಿ ಉಳಿಯಬಹುದು. ನಮಗೆ ಟೆಂಟ್ ನೀಡಿರುವ ದಾಖಲೆಗಾಗಿ ಯಾವುದಾದರೂ ಒಂದು ಗುರುತು ಪತ್ರ ನೀಡಬೇಕಾಗುತ್ತದೆ. ಒಬ್ಬಂಟಿಯಾಗಿರುವವರಿಗೆ ಸಿಂಗಲ್ ಟೆಂಟ್ ನೀಡಲಾಗುತ್ತಿದೆ. ಇಬ್ಬರಿದ್ದರೆ ಅವರಿಗೆ ಆಗುವಂತಹ ಟೆಂಟ್, ಇಡೀ ಕುಟುಂಬವಿದ್ದರೇ ಅವರಿಗೆ ಉಳಿಯಲು ಮತ್ತು 20 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದರೇ ದೊಡ್ಡ ಟೆಂಟ್ ವ್ಯವಸ್ಥೆ ಮಾಡಲಾಗುತ್ತದೆ.

ಟೆಂಟ್ ಒಳಗಡೆ ಹಾಸಿಗೆ ಮತ್ತು 2 ಬೆಡ್‌ಶೀಟ್‌ಗಳನ್ನು ವ್ಯವಸ್ಥೆ ಮಾಡುತ್ತಾರೆ. ಚಳಿ ಹೆಚ್ಚು ಎನಿಸಿದರೇ ಮತ್ತೆ ಬೆಡ್‌ಶೀಟ್‌ಗಳನ್ನು ನೀಡಲಾಗುತ್ತದೆ. ಟೆಂಟ್ ಸಿಟಿಯಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿರುವ ಕಾರಣ, ರಾತ್ರಿ ಪೂರ್ತಿ ಟೆಂಟ್ ಸಿಟಿಯಲ್ಲಿ ಯುವಕರು ಕಾವಲು ಕಾಯುತ್ತಾರೆ. ಪಾಳಿಯ ಮೇರೆಗೆ ಮೂರು ಜನರ ತಂಡ ಕಾರ್ಯ ನಿರ್ವಹಿಸುತ್ತದೆ.

ಇಲ್ಲಿನ ಸ್ವಯಂ ಸೇವಕರ ಪ್ರಕಾರ ಮೊದ ಮೊದಲು ಇಲ್ಲಿ ಉಳಿಯುವವರ ಸಂಖ್ಯೆ ಕಡಿಮೆಯಿತ್ತು. ಆದರೆ ಪ್ರತಿಭಟನೆಯ ದಿನಗಳು ಹೆಚ್ಚಾಗುತ್ತಿದ್ದಂತೆ ಬೇರೆ ರಾಜ್ಯಗಳಿಂದ ಬರುವವರ ಸಂಖ್ಯೆಯೂ ಹೆಚ್ಚಾಗಿ ಟೆಂಟ್ ಸಿಟಿ ತುಂಬುತ್ತಿದೆ. ಭದ್ರತೆ ದೃಷ್ಠಿಯಿಂದಲೂ ಇಲ್ಲಿ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ನಾವು ಆಶ್ರಯ ಪಡೆದವರ ಲಗೇಜ್ ಜವಾಬ್ದಾರಿ ಪಡೆಯುವುದಿಲ್ಲ. ಇಷ್ಟೊಂದು ಸಂಖ್ಯೆಯಲ್ಲಿ ಜನ ಬರುವುದರಿಂದ ಅವರೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೂ ನಮ್ಮ ಟೆಂಟ್ ಸಿಟಿಗೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ನಮ್ಮ ಬಳಿ ಟೆಂಟ್‌ಗಳಿವೆ ಆದರೆ ಹೋರಾಟದ ಸ್ಥಳ ಟೆಂಟ್, ಟ್ರ್ಯಾಲಿ, ಟ್ರ್ಯಾಕ್ಟರ್‌ಗಳಿಂದ ತುಂಬಿರುವುದರಿಂದ ಸ್ಥಳ ಸಿಗುತ್ತಿಲ್ಲ ಎನ್ನುತ್ತಾರೆ.

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ತಮಿಳುನಾಡಿನಿಂದ ಬಂದಿದ್ದ ರೈತ ಮಹಿಳೆಯರು, ಮಹಾರಾಷ್ಟ್ರದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತಂಡ ಸೇರಿದಂತೆ ಹೊರ ರಾಜ್ಯಗಳಿಂದ ಬಂದು ಉಳಿಯುವವರ ಸಂಖ್ಯೆ ಹೆಚ್ಚಾಗಿದೆ.

– ಮಮತ. ಎಂ


ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...