Homeಮುಖಪುಟರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಭಾಗವಹಿಸಿರುವ ರೈತರು ತಮ್ಮ ಟ್ರಾಲಿಗಳಲ್ಲಿ, ತಮ್ಮದೆ ಟೆಂಟ್‌ಗಳಲ್ಲಿ ಕಳೆದ 67 ದಿನಗಳಿಂದ ವಾಸಿಸುತ್ತಿದ್ದಾರೆ. ಆದರೆ ಪ್ರತಿಭಟನೆಗೆ ಬೆಂಬಲಿಸಿ ಬರುತ್ತಿರುವ ಜನಸಾಗರಕ್ಕೆ, ಹೊರ ರಾಜ್ಯಗಳಿಂದ ಬರುವ ರೈತರಿಗೆ ಉಳಿಯಲು ವ್ಯವಸ್ಥೆಯಾಗುತ್ತಿರುವುದು ಟೆಂಟ್ ಸಿಟಿ ಎಂಬ ಅದ್ಭುತ ಸ್ಥಳದಲ್ಲಿ.

ಹೌದು, ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ 67 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೆಂಬಲಕ್ಕೆ ಬರುವವರಿಗೆ ಈ ಟೆಂಟ್ ಸಿಟಿಗಳು ಆಶ್ರಯತಾಣಗಳಾಗಿವೆ.

ಹೋರಾಟಕ್ಕೆ ಬೆಂಬಲ ನೀಡಲು ಬರುವ ಜನರಿಗೆ ರೈತರು ಉಳಿಯಲು ವ್ಯವಸ್ಥೆ ಮಾಡುತ್ತಿದ್ದಾರೆ. ತಮ್ಮ ಟ್ರ್ಯಾಲಿ, ಟೆಂಟ್, ಟ್ರ್ಯಾಕ್ಟರ್‌ಗಳಲ್ಲೂ ಜಾಗ ನೀಡಿದ್ದಾರೆ. ಆದರೆ ಇಷ್ಟೊಂದು ಸಂಖ್ಯೆಯಲ್ಲಿ ತುಂಬುತ್ತಿರುವ ಜನರಿಗಾಗಿ ಈ ಟೆಂಟ್ ಸಿಟಿಗಳ ಅವಶ್ಯಕತೆ ಹೆಚ್ಚಾಗಿದೆ. ಇವುಗಳ ಸೇವೆ ಈ ರೈತ ಹೋರಾಟದಲ್ಲಿ ವಿಭಿನ್ನವಾಗಿ ನಿಲ್ಲುತ್ತಿದೆ.

ಹೇಮಕುಂತ್ ಫೌಂಡೇಶನ್ ಎಂಬ ಸಾರ್ವಜನಿಕ ಸೇವಾ ಸಂಸ್ಥೆ ಪ್ರತಿಭಟನೆ ಬೆಂಬಲಿಸಿ ಬರುವವರಿಗೆ ಉಳಿಯಲು ಸಿಂಘು, ಚಿಲ್ಲಾ, ಗಾಝಿಪುರ್ ಮತ್ತು ಟಿಕ್ರಿ ಗಡಿಗಳಲ್ಲಿ ಟೆಂಟ್ ಸಿಟಿಗಳನ್ನು ನಿರ್ಮಿಸಿದೆ. ಈ ಟೆಂಟ್ ಸಿಟಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಪುರುಷರಿಗೂ ಇಲ್ಲಿ ಉಳಿಯಲು ಅವಕಾಶವಿದೆ. ಆದರೆ ಅವರೆಲ್ಲಾ ಹೆಚ್ಚಾಗಿ ಟ್ರ್ಯಾಲಿಗಳಲ್ಲಿ ಉಳಿಯುವ ಕಾರಣ ಇಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ.

ಟೆಂಟ್ ಸಿಟಿಯಲ್ಲಿ ಉಳಿಯುವುದು ಉಚಿತವಾಗಿರುತ್ತದೆ. ಎಷ್ಟು ದಿನ ಬೇಕಿದ್ದರು ಇಲ್ಲಿ ಉಳಿಯಬಹುದು. ನಮಗೆ ಟೆಂಟ್ ನೀಡಿರುವ ದಾಖಲೆಗಾಗಿ ಯಾವುದಾದರೂ ಒಂದು ಗುರುತು ಪತ್ರ ನೀಡಬೇಕಾಗುತ್ತದೆ. ಒಬ್ಬಂಟಿಯಾಗಿರುವವರಿಗೆ ಸಿಂಗಲ್ ಟೆಂಟ್ ನೀಡಲಾಗುತ್ತಿದೆ. ಇಬ್ಬರಿದ್ದರೆ ಅವರಿಗೆ ಆಗುವಂತಹ ಟೆಂಟ್, ಇಡೀ ಕುಟುಂಬವಿದ್ದರೇ ಅವರಿಗೆ ಉಳಿಯಲು ಮತ್ತು 20 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದರೇ ದೊಡ್ಡ ಟೆಂಟ್ ವ್ಯವಸ್ಥೆ ಮಾಡಲಾಗುತ್ತದೆ.

ಟೆಂಟ್ ಒಳಗಡೆ ಹಾಸಿಗೆ ಮತ್ತು 2 ಬೆಡ್‌ಶೀಟ್‌ಗಳನ್ನು ವ್ಯವಸ್ಥೆ ಮಾಡುತ್ತಾರೆ. ಚಳಿ ಹೆಚ್ಚು ಎನಿಸಿದರೇ ಮತ್ತೆ ಬೆಡ್‌ಶೀಟ್‌ಗಳನ್ನು ನೀಡಲಾಗುತ್ತದೆ. ಟೆಂಟ್ ಸಿಟಿಯಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿರುವ ಕಾರಣ, ರಾತ್ರಿ ಪೂರ್ತಿ ಟೆಂಟ್ ಸಿಟಿಯಲ್ಲಿ ಯುವಕರು ಕಾವಲು ಕಾಯುತ್ತಾರೆ. ಪಾಳಿಯ ಮೇರೆಗೆ ಮೂರು ಜನರ ತಂಡ ಕಾರ್ಯ ನಿರ್ವಹಿಸುತ್ತದೆ.

ಇಲ್ಲಿನ ಸ್ವಯಂ ಸೇವಕರ ಪ್ರಕಾರ ಮೊದ ಮೊದಲು ಇಲ್ಲಿ ಉಳಿಯುವವರ ಸಂಖ್ಯೆ ಕಡಿಮೆಯಿತ್ತು. ಆದರೆ ಪ್ರತಿಭಟನೆಯ ದಿನಗಳು ಹೆಚ್ಚಾಗುತ್ತಿದ್ದಂತೆ ಬೇರೆ ರಾಜ್ಯಗಳಿಂದ ಬರುವವರ ಸಂಖ್ಯೆಯೂ ಹೆಚ್ಚಾಗಿ ಟೆಂಟ್ ಸಿಟಿ ತುಂಬುತ್ತಿದೆ. ಭದ್ರತೆ ದೃಷ್ಠಿಯಿಂದಲೂ ಇಲ್ಲಿ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ನಾವು ಆಶ್ರಯ ಪಡೆದವರ ಲಗೇಜ್ ಜವಾಬ್ದಾರಿ ಪಡೆಯುವುದಿಲ್ಲ. ಇಷ್ಟೊಂದು ಸಂಖ್ಯೆಯಲ್ಲಿ ಜನ ಬರುವುದರಿಂದ ಅವರೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೂ ನಮ್ಮ ಟೆಂಟ್ ಸಿಟಿಗೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ನಮ್ಮ ಬಳಿ ಟೆಂಟ್‌ಗಳಿವೆ ಆದರೆ ಹೋರಾಟದ ಸ್ಥಳ ಟೆಂಟ್, ಟ್ರ್ಯಾಲಿ, ಟ್ರ್ಯಾಕ್ಟರ್‌ಗಳಿಂದ ತುಂಬಿರುವುದರಿಂದ ಸ್ಥಳ ಸಿಗುತ್ತಿಲ್ಲ ಎನ್ನುತ್ತಾರೆ.

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ತಮಿಳುನಾಡಿನಿಂದ ಬಂದಿದ್ದ ರೈತ ಮಹಿಳೆಯರು, ಮಹಾರಾಷ್ಟ್ರದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತಂಡ ಸೇರಿದಂತೆ ಹೊರ ರಾಜ್ಯಗಳಿಂದ ಬಂದು ಉಳಿಯುವವರ ಸಂಖ್ಯೆ ಹೆಚ್ಚಾಗಿದೆ.

– ಮಮತ. ಎಂ


ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...