Homeಮುಖಪುಟರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಭಾಗವಹಿಸಿರುವ ರೈತರು ತಮ್ಮ ಟ್ರಾಲಿಗಳಲ್ಲಿ, ತಮ್ಮದೆ ಟೆಂಟ್‌ಗಳಲ್ಲಿ ಕಳೆದ 67 ದಿನಗಳಿಂದ ವಾಸಿಸುತ್ತಿದ್ದಾರೆ. ಆದರೆ ಪ್ರತಿಭಟನೆಗೆ ಬೆಂಬಲಿಸಿ ಬರುತ್ತಿರುವ ಜನಸಾಗರಕ್ಕೆ, ಹೊರ ರಾಜ್ಯಗಳಿಂದ ಬರುವ ರೈತರಿಗೆ ಉಳಿಯಲು ವ್ಯವಸ್ಥೆಯಾಗುತ್ತಿರುವುದು ಟೆಂಟ್ ಸಿಟಿ ಎಂಬ ಅದ್ಭುತ ಸ್ಥಳದಲ್ಲಿ.

ಹೌದು, ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ 67 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೆಂಬಲಕ್ಕೆ ಬರುವವರಿಗೆ ಈ ಟೆಂಟ್ ಸಿಟಿಗಳು ಆಶ್ರಯತಾಣಗಳಾಗಿವೆ.

ಹೋರಾಟಕ್ಕೆ ಬೆಂಬಲ ನೀಡಲು ಬರುವ ಜನರಿಗೆ ರೈತರು ಉಳಿಯಲು ವ್ಯವಸ್ಥೆ ಮಾಡುತ್ತಿದ್ದಾರೆ. ತಮ್ಮ ಟ್ರ್ಯಾಲಿ, ಟೆಂಟ್, ಟ್ರ್ಯಾಕ್ಟರ್‌ಗಳಲ್ಲೂ ಜಾಗ ನೀಡಿದ್ದಾರೆ. ಆದರೆ ಇಷ್ಟೊಂದು ಸಂಖ್ಯೆಯಲ್ಲಿ ತುಂಬುತ್ತಿರುವ ಜನರಿಗಾಗಿ ಈ ಟೆಂಟ್ ಸಿಟಿಗಳ ಅವಶ್ಯಕತೆ ಹೆಚ್ಚಾಗಿದೆ. ಇವುಗಳ ಸೇವೆ ಈ ರೈತ ಹೋರಾಟದಲ್ಲಿ ವಿಭಿನ್ನವಾಗಿ ನಿಲ್ಲುತ್ತಿದೆ.

ಹೇಮಕುಂತ್ ಫೌಂಡೇಶನ್ ಎಂಬ ಸಾರ್ವಜನಿಕ ಸೇವಾ ಸಂಸ್ಥೆ ಪ್ರತಿಭಟನೆ ಬೆಂಬಲಿಸಿ ಬರುವವರಿಗೆ ಉಳಿಯಲು ಸಿಂಘು, ಚಿಲ್ಲಾ, ಗಾಝಿಪುರ್ ಮತ್ತು ಟಿಕ್ರಿ ಗಡಿಗಳಲ್ಲಿ ಟೆಂಟ್ ಸಿಟಿಗಳನ್ನು ನಿರ್ಮಿಸಿದೆ. ಈ ಟೆಂಟ್ ಸಿಟಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಪುರುಷರಿಗೂ ಇಲ್ಲಿ ಉಳಿಯಲು ಅವಕಾಶವಿದೆ. ಆದರೆ ಅವರೆಲ್ಲಾ ಹೆಚ್ಚಾಗಿ ಟ್ರ್ಯಾಲಿಗಳಲ್ಲಿ ಉಳಿಯುವ ಕಾರಣ ಇಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ.

ಟೆಂಟ್ ಸಿಟಿಯಲ್ಲಿ ಉಳಿಯುವುದು ಉಚಿತವಾಗಿರುತ್ತದೆ. ಎಷ್ಟು ದಿನ ಬೇಕಿದ್ದರು ಇಲ್ಲಿ ಉಳಿಯಬಹುದು. ನಮಗೆ ಟೆಂಟ್ ನೀಡಿರುವ ದಾಖಲೆಗಾಗಿ ಯಾವುದಾದರೂ ಒಂದು ಗುರುತು ಪತ್ರ ನೀಡಬೇಕಾಗುತ್ತದೆ. ಒಬ್ಬಂಟಿಯಾಗಿರುವವರಿಗೆ ಸಿಂಗಲ್ ಟೆಂಟ್ ನೀಡಲಾಗುತ್ತಿದೆ. ಇಬ್ಬರಿದ್ದರೆ ಅವರಿಗೆ ಆಗುವಂತಹ ಟೆಂಟ್, ಇಡೀ ಕುಟುಂಬವಿದ್ದರೇ ಅವರಿಗೆ ಉಳಿಯಲು ಮತ್ತು 20 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದರೇ ದೊಡ್ಡ ಟೆಂಟ್ ವ್ಯವಸ್ಥೆ ಮಾಡಲಾಗುತ್ತದೆ.

ಟೆಂಟ್ ಒಳಗಡೆ ಹಾಸಿಗೆ ಮತ್ತು 2 ಬೆಡ್‌ಶೀಟ್‌ಗಳನ್ನು ವ್ಯವಸ್ಥೆ ಮಾಡುತ್ತಾರೆ. ಚಳಿ ಹೆಚ್ಚು ಎನಿಸಿದರೇ ಮತ್ತೆ ಬೆಡ್‌ಶೀಟ್‌ಗಳನ್ನು ನೀಡಲಾಗುತ್ತದೆ. ಟೆಂಟ್ ಸಿಟಿಯಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿರುವ ಕಾರಣ, ರಾತ್ರಿ ಪೂರ್ತಿ ಟೆಂಟ್ ಸಿಟಿಯಲ್ಲಿ ಯುವಕರು ಕಾವಲು ಕಾಯುತ್ತಾರೆ. ಪಾಳಿಯ ಮೇರೆಗೆ ಮೂರು ಜನರ ತಂಡ ಕಾರ್ಯ ನಿರ್ವಹಿಸುತ್ತದೆ.

ಇಲ್ಲಿನ ಸ್ವಯಂ ಸೇವಕರ ಪ್ರಕಾರ ಮೊದ ಮೊದಲು ಇಲ್ಲಿ ಉಳಿಯುವವರ ಸಂಖ್ಯೆ ಕಡಿಮೆಯಿತ್ತು. ಆದರೆ ಪ್ರತಿಭಟನೆಯ ದಿನಗಳು ಹೆಚ್ಚಾಗುತ್ತಿದ್ದಂತೆ ಬೇರೆ ರಾಜ್ಯಗಳಿಂದ ಬರುವವರ ಸಂಖ್ಯೆಯೂ ಹೆಚ್ಚಾಗಿ ಟೆಂಟ್ ಸಿಟಿ ತುಂಬುತ್ತಿದೆ. ಭದ್ರತೆ ದೃಷ್ಠಿಯಿಂದಲೂ ಇಲ್ಲಿ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ನಾವು ಆಶ್ರಯ ಪಡೆದವರ ಲಗೇಜ್ ಜವಾಬ್ದಾರಿ ಪಡೆಯುವುದಿಲ್ಲ. ಇಷ್ಟೊಂದು ಸಂಖ್ಯೆಯಲ್ಲಿ ಜನ ಬರುವುದರಿಂದ ಅವರೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೂ ನಮ್ಮ ಟೆಂಟ್ ಸಿಟಿಗೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ನಮ್ಮ ಬಳಿ ಟೆಂಟ್‌ಗಳಿವೆ ಆದರೆ ಹೋರಾಟದ ಸ್ಥಳ ಟೆಂಟ್, ಟ್ರ್ಯಾಲಿ, ಟ್ರ್ಯಾಕ್ಟರ್‌ಗಳಿಂದ ತುಂಬಿರುವುದರಿಂದ ಸ್ಥಳ ಸಿಗುತ್ತಿಲ್ಲ ಎನ್ನುತ್ತಾರೆ.

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ತಮಿಳುನಾಡಿನಿಂದ ಬಂದಿದ್ದ ರೈತ ಮಹಿಳೆಯರು, ಮಹಾರಾಷ್ಟ್ರದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತಂಡ ಸೇರಿದಂತೆ ಹೊರ ರಾಜ್ಯಗಳಿಂದ ಬಂದು ಉಳಿಯುವವರ ಸಂಖ್ಯೆ ಹೆಚ್ಚಾಗಿದೆ.

– ಮಮತ. ಎಂ


ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...