Homeಮುಖಪುಟರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಭಾಗವಹಿಸಿರುವ ರೈತರು ತಮ್ಮ ಟ್ರಾಲಿಗಳಲ್ಲಿ, ತಮ್ಮದೆ ಟೆಂಟ್‌ಗಳಲ್ಲಿ ಕಳೆದ 67 ದಿನಗಳಿಂದ ವಾಸಿಸುತ್ತಿದ್ದಾರೆ. ಆದರೆ ಪ್ರತಿಭಟನೆಗೆ ಬೆಂಬಲಿಸಿ ಬರುತ್ತಿರುವ ಜನಸಾಗರಕ್ಕೆ, ಹೊರ ರಾಜ್ಯಗಳಿಂದ ಬರುವ ರೈತರಿಗೆ ಉಳಿಯಲು ವ್ಯವಸ್ಥೆಯಾಗುತ್ತಿರುವುದು ಟೆಂಟ್ ಸಿಟಿ ಎಂಬ ಅದ್ಭುತ ಸ್ಥಳದಲ್ಲಿ.

ಹೌದು, ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ 67 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೆಂಬಲಕ್ಕೆ ಬರುವವರಿಗೆ ಈ ಟೆಂಟ್ ಸಿಟಿಗಳು ಆಶ್ರಯತಾಣಗಳಾಗಿವೆ.

ಹೋರಾಟಕ್ಕೆ ಬೆಂಬಲ ನೀಡಲು ಬರುವ ಜನರಿಗೆ ರೈತರು ಉಳಿಯಲು ವ್ಯವಸ್ಥೆ ಮಾಡುತ್ತಿದ್ದಾರೆ. ತಮ್ಮ ಟ್ರ್ಯಾಲಿ, ಟೆಂಟ್, ಟ್ರ್ಯಾಕ್ಟರ್‌ಗಳಲ್ಲೂ ಜಾಗ ನೀಡಿದ್ದಾರೆ. ಆದರೆ ಇಷ್ಟೊಂದು ಸಂಖ್ಯೆಯಲ್ಲಿ ತುಂಬುತ್ತಿರುವ ಜನರಿಗಾಗಿ ಈ ಟೆಂಟ್ ಸಿಟಿಗಳ ಅವಶ್ಯಕತೆ ಹೆಚ್ಚಾಗಿದೆ. ಇವುಗಳ ಸೇವೆ ಈ ರೈತ ಹೋರಾಟದಲ್ಲಿ ವಿಭಿನ್ನವಾಗಿ ನಿಲ್ಲುತ್ತಿದೆ.

ಹೇಮಕುಂತ್ ಫೌಂಡೇಶನ್ ಎಂಬ ಸಾರ್ವಜನಿಕ ಸೇವಾ ಸಂಸ್ಥೆ ಪ್ರತಿಭಟನೆ ಬೆಂಬಲಿಸಿ ಬರುವವರಿಗೆ ಉಳಿಯಲು ಸಿಂಘು, ಚಿಲ್ಲಾ, ಗಾಝಿಪುರ್ ಮತ್ತು ಟಿಕ್ರಿ ಗಡಿಗಳಲ್ಲಿ ಟೆಂಟ್ ಸಿಟಿಗಳನ್ನು ನಿರ್ಮಿಸಿದೆ. ಈ ಟೆಂಟ್ ಸಿಟಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಪುರುಷರಿಗೂ ಇಲ್ಲಿ ಉಳಿಯಲು ಅವಕಾಶವಿದೆ. ಆದರೆ ಅವರೆಲ್ಲಾ ಹೆಚ್ಚಾಗಿ ಟ್ರ್ಯಾಲಿಗಳಲ್ಲಿ ಉಳಿಯುವ ಕಾರಣ ಇಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ.

ಟೆಂಟ್ ಸಿಟಿಯಲ್ಲಿ ಉಳಿಯುವುದು ಉಚಿತವಾಗಿರುತ್ತದೆ. ಎಷ್ಟು ದಿನ ಬೇಕಿದ್ದರು ಇಲ್ಲಿ ಉಳಿಯಬಹುದು. ನಮಗೆ ಟೆಂಟ್ ನೀಡಿರುವ ದಾಖಲೆಗಾಗಿ ಯಾವುದಾದರೂ ಒಂದು ಗುರುತು ಪತ್ರ ನೀಡಬೇಕಾಗುತ್ತದೆ. ಒಬ್ಬಂಟಿಯಾಗಿರುವವರಿಗೆ ಸಿಂಗಲ್ ಟೆಂಟ್ ನೀಡಲಾಗುತ್ತಿದೆ. ಇಬ್ಬರಿದ್ದರೆ ಅವರಿಗೆ ಆಗುವಂತಹ ಟೆಂಟ್, ಇಡೀ ಕುಟುಂಬವಿದ್ದರೇ ಅವರಿಗೆ ಉಳಿಯಲು ಮತ್ತು 20 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದರೇ ದೊಡ್ಡ ಟೆಂಟ್ ವ್ಯವಸ್ಥೆ ಮಾಡಲಾಗುತ್ತದೆ.

ಟೆಂಟ್ ಒಳಗಡೆ ಹಾಸಿಗೆ ಮತ್ತು 2 ಬೆಡ್‌ಶೀಟ್‌ಗಳನ್ನು ವ್ಯವಸ್ಥೆ ಮಾಡುತ್ತಾರೆ. ಚಳಿ ಹೆಚ್ಚು ಎನಿಸಿದರೇ ಮತ್ತೆ ಬೆಡ್‌ಶೀಟ್‌ಗಳನ್ನು ನೀಡಲಾಗುತ್ತದೆ. ಟೆಂಟ್ ಸಿಟಿಯಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿರುವ ಕಾರಣ, ರಾತ್ರಿ ಪೂರ್ತಿ ಟೆಂಟ್ ಸಿಟಿಯಲ್ಲಿ ಯುವಕರು ಕಾವಲು ಕಾಯುತ್ತಾರೆ. ಪಾಳಿಯ ಮೇರೆಗೆ ಮೂರು ಜನರ ತಂಡ ಕಾರ್ಯ ನಿರ್ವಹಿಸುತ್ತದೆ.

ಇಲ್ಲಿನ ಸ್ವಯಂ ಸೇವಕರ ಪ್ರಕಾರ ಮೊದ ಮೊದಲು ಇಲ್ಲಿ ಉಳಿಯುವವರ ಸಂಖ್ಯೆ ಕಡಿಮೆಯಿತ್ತು. ಆದರೆ ಪ್ರತಿಭಟನೆಯ ದಿನಗಳು ಹೆಚ್ಚಾಗುತ್ತಿದ್ದಂತೆ ಬೇರೆ ರಾಜ್ಯಗಳಿಂದ ಬರುವವರ ಸಂಖ್ಯೆಯೂ ಹೆಚ್ಚಾಗಿ ಟೆಂಟ್ ಸಿಟಿ ತುಂಬುತ್ತಿದೆ. ಭದ್ರತೆ ದೃಷ್ಠಿಯಿಂದಲೂ ಇಲ್ಲಿ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ನಾವು ಆಶ್ರಯ ಪಡೆದವರ ಲಗೇಜ್ ಜವಾಬ್ದಾರಿ ಪಡೆಯುವುದಿಲ್ಲ. ಇಷ್ಟೊಂದು ಸಂಖ್ಯೆಯಲ್ಲಿ ಜನ ಬರುವುದರಿಂದ ಅವರೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೂ ನಮ್ಮ ಟೆಂಟ್ ಸಿಟಿಗೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ನಮ್ಮ ಬಳಿ ಟೆಂಟ್‌ಗಳಿವೆ ಆದರೆ ಹೋರಾಟದ ಸ್ಥಳ ಟೆಂಟ್, ಟ್ರ್ಯಾಲಿ, ಟ್ರ್ಯಾಕ್ಟರ್‌ಗಳಿಂದ ತುಂಬಿರುವುದರಿಂದ ಸ್ಥಳ ಸಿಗುತ್ತಿಲ್ಲ ಎನ್ನುತ್ತಾರೆ.

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ತಮಿಳುನಾಡಿನಿಂದ ಬಂದಿದ್ದ ರೈತ ಮಹಿಳೆಯರು, ಮಹಾರಾಷ್ಟ್ರದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತಂಡ ಸೇರಿದಂತೆ ಹೊರ ರಾಜ್ಯಗಳಿಂದ ಬಂದು ಉಳಿಯುವವರ ಸಂಖ್ಯೆ ಹೆಚ್ಚಾಗಿದೆ.

– ಮಮತ. ಎಂ


ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...