Homeಮುಖಪುಟರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಭಾಗವಹಿಸಿರುವ ರೈತರು ತಮ್ಮ ಟ್ರಾಲಿಗಳಲ್ಲಿ, ತಮ್ಮದೆ ಟೆಂಟ್‌ಗಳಲ್ಲಿ ಕಳೆದ 67 ದಿನಗಳಿಂದ ವಾಸಿಸುತ್ತಿದ್ದಾರೆ. ಆದರೆ ಪ್ರತಿಭಟನೆಗೆ ಬೆಂಬಲಿಸಿ ಬರುತ್ತಿರುವ ಜನಸಾಗರಕ್ಕೆ, ಹೊರ ರಾಜ್ಯಗಳಿಂದ ಬರುವ ರೈತರಿಗೆ ಉಳಿಯಲು ವ್ಯವಸ್ಥೆಯಾಗುತ್ತಿರುವುದು ಟೆಂಟ್ ಸಿಟಿ ಎಂಬ ಅದ್ಭುತ ಸ್ಥಳದಲ್ಲಿ.

ಹೌದು, ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ 67 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೆಂಬಲಕ್ಕೆ ಬರುವವರಿಗೆ ಈ ಟೆಂಟ್ ಸಿಟಿಗಳು ಆಶ್ರಯತಾಣಗಳಾಗಿವೆ.

ಹೋರಾಟಕ್ಕೆ ಬೆಂಬಲ ನೀಡಲು ಬರುವ ಜನರಿಗೆ ರೈತರು ಉಳಿಯಲು ವ್ಯವಸ್ಥೆ ಮಾಡುತ್ತಿದ್ದಾರೆ. ತಮ್ಮ ಟ್ರ್ಯಾಲಿ, ಟೆಂಟ್, ಟ್ರ್ಯಾಕ್ಟರ್‌ಗಳಲ್ಲೂ ಜಾಗ ನೀಡಿದ್ದಾರೆ. ಆದರೆ ಇಷ್ಟೊಂದು ಸಂಖ್ಯೆಯಲ್ಲಿ ತುಂಬುತ್ತಿರುವ ಜನರಿಗಾಗಿ ಈ ಟೆಂಟ್ ಸಿಟಿಗಳ ಅವಶ್ಯಕತೆ ಹೆಚ್ಚಾಗಿದೆ. ಇವುಗಳ ಸೇವೆ ಈ ರೈತ ಹೋರಾಟದಲ್ಲಿ ವಿಭಿನ್ನವಾಗಿ ನಿಲ್ಲುತ್ತಿದೆ.

ಹೇಮಕುಂತ್ ಫೌಂಡೇಶನ್ ಎಂಬ ಸಾರ್ವಜನಿಕ ಸೇವಾ ಸಂಸ್ಥೆ ಪ್ರತಿಭಟನೆ ಬೆಂಬಲಿಸಿ ಬರುವವರಿಗೆ ಉಳಿಯಲು ಸಿಂಘು, ಚಿಲ್ಲಾ, ಗಾಝಿಪುರ್ ಮತ್ತು ಟಿಕ್ರಿ ಗಡಿಗಳಲ್ಲಿ ಟೆಂಟ್ ಸಿಟಿಗಳನ್ನು ನಿರ್ಮಿಸಿದೆ. ಈ ಟೆಂಟ್ ಸಿಟಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಪುರುಷರಿಗೂ ಇಲ್ಲಿ ಉಳಿಯಲು ಅವಕಾಶವಿದೆ. ಆದರೆ ಅವರೆಲ್ಲಾ ಹೆಚ್ಚಾಗಿ ಟ್ರ್ಯಾಲಿಗಳಲ್ಲಿ ಉಳಿಯುವ ಕಾರಣ ಇಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ.

ಟೆಂಟ್ ಸಿಟಿಯಲ್ಲಿ ಉಳಿಯುವುದು ಉಚಿತವಾಗಿರುತ್ತದೆ. ಎಷ್ಟು ದಿನ ಬೇಕಿದ್ದರು ಇಲ್ಲಿ ಉಳಿಯಬಹುದು. ನಮಗೆ ಟೆಂಟ್ ನೀಡಿರುವ ದಾಖಲೆಗಾಗಿ ಯಾವುದಾದರೂ ಒಂದು ಗುರುತು ಪತ್ರ ನೀಡಬೇಕಾಗುತ್ತದೆ. ಒಬ್ಬಂಟಿಯಾಗಿರುವವರಿಗೆ ಸಿಂಗಲ್ ಟೆಂಟ್ ನೀಡಲಾಗುತ್ತಿದೆ. ಇಬ್ಬರಿದ್ದರೆ ಅವರಿಗೆ ಆಗುವಂತಹ ಟೆಂಟ್, ಇಡೀ ಕುಟುಂಬವಿದ್ದರೇ ಅವರಿಗೆ ಉಳಿಯಲು ಮತ್ತು 20 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದರೇ ದೊಡ್ಡ ಟೆಂಟ್ ವ್ಯವಸ್ಥೆ ಮಾಡಲಾಗುತ್ತದೆ.

ಟೆಂಟ್ ಒಳಗಡೆ ಹಾಸಿಗೆ ಮತ್ತು 2 ಬೆಡ್‌ಶೀಟ್‌ಗಳನ್ನು ವ್ಯವಸ್ಥೆ ಮಾಡುತ್ತಾರೆ. ಚಳಿ ಹೆಚ್ಚು ಎನಿಸಿದರೇ ಮತ್ತೆ ಬೆಡ್‌ಶೀಟ್‌ಗಳನ್ನು ನೀಡಲಾಗುತ್ತದೆ. ಟೆಂಟ್ ಸಿಟಿಯಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿರುವ ಕಾರಣ, ರಾತ್ರಿ ಪೂರ್ತಿ ಟೆಂಟ್ ಸಿಟಿಯಲ್ಲಿ ಯುವಕರು ಕಾವಲು ಕಾಯುತ್ತಾರೆ. ಪಾಳಿಯ ಮೇರೆಗೆ ಮೂರು ಜನರ ತಂಡ ಕಾರ್ಯ ನಿರ್ವಹಿಸುತ್ತದೆ.

ಇಲ್ಲಿನ ಸ್ವಯಂ ಸೇವಕರ ಪ್ರಕಾರ ಮೊದ ಮೊದಲು ಇಲ್ಲಿ ಉಳಿಯುವವರ ಸಂಖ್ಯೆ ಕಡಿಮೆಯಿತ್ತು. ಆದರೆ ಪ್ರತಿಭಟನೆಯ ದಿನಗಳು ಹೆಚ್ಚಾಗುತ್ತಿದ್ದಂತೆ ಬೇರೆ ರಾಜ್ಯಗಳಿಂದ ಬರುವವರ ಸಂಖ್ಯೆಯೂ ಹೆಚ್ಚಾಗಿ ಟೆಂಟ್ ಸಿಟಿ ತುಂಬುತ್ತಿದೆ. ಭದ್ರತೆ ದೃಷ್ಠಿಯಿಂದಲೂ ಇಲ್ಲಿ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ನಾವು ಆಶ್ರಯ ಪಡೆದವರ ಲಗೇಜ್ ಜವಾಬ್ದಾರಿ ಪಡೆಯುವುದಿಲ್ಲ. ಇಷ್ಟೊಂದು ಸಂಖ್ಯೆಯಲ್ಲಿ ಜನ ಬರುವುದರಿಂದ ಅವರೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೂ ನಮ್ಮ ಟೆಂಟ್ ಸಿಟಿಗೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ನಮ್ಮ ಬಳಿ ಟೆಂಟ್‌ಗಳಿವೆ ಆದರೆ ಹೋರಾಟದ ಸ್ಥಳ ಟೆಂಟ್, ಟ್ರ್ಯಾಲಿ, ಟ್ರ್ಯಾಕ್ಟರ್‌ಗಳಿಂದ ತುಂಬಿರುವುದರಿಂದ ಸ್ಥಳ ಸಿಗುತ್ತಿಲ್ಲ ಎನ್ನುತ್ತಾರೆ.

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ತಮಿಳುನಾಡಿನಿಂದ ಬಂದಿದ್ದ ರೈತ ಮಹಿಳೆಯರು, ಮಹಾರಾಷ್ಟ್ರದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತಂಡ ಸೇರಿದಂತೆ ಹೊರ ರಾಜ್ಯಗಳಿಂದ ಬಂದು ಉಳಿಯುವವರ ಸಂಖ್ಯೆ ಹೆಚ್ಚಾಗಿದೆ.

– ಮಮತ. ಎಂ


ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....