Homeಮುಖಪುಟರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಭಾಗವಹಿಸಿರುವ ರೈತರು ತಮ್ಮ ಟ್ರಾಲಿಗಳಲ್ಲಿ, ತಮ್ಮದೆ ಟೆಂಟ್‌ಗಳಲ್ಲಿ ಕಳೆದ 67 ದಿನಗಳಿಂದ ವಾಸಿಸುತ್ತಿದ್ದಾರೆ. ಆದರೆ ಪ್ರತಿಭಟನೆಗೆ ಬೆಂಬಲಿಸಿ ಬರುತ್ತಿರುವ ಜನಸಾಗರಕ್ಕೆ, ಹೊರ ರಾಜ್ಯಗಳಿಂದ ಬರುವ ರೈತರಿಗೆ ಉಳಿಯಲು ವ್ಯವಸ್ಥೆಯಾಗುತ್ತಿರುವುದು ಟೆಂಟ್ ಸಿಟಿ ಎಂಬ ಅದ್ಭುತ ಸ್ಥಳದಲ್ಲಿ.

ಹೌದು, ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ 67 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೆಂಬಲಕ್ಕೆ ಬರುವವರಿಗೆ ಈ ಟೆಂಟ್ ಸಿಟಿಗಳು ಆಶ್ರಯತಾಣಗಳಾಗಿವೆ.

ಹೋರಾಟಕ್ಕೆ ಬೆಂಬಲ ನೀಡಲು ಬರುವ ಜನರಿಗೆ ರೈತರು ಉಳಿಯಲು ವ್ಯವಸ್ಥೆ ಮಾಡುತ್ತಿದ್ದಾರೆ. ತಮ್ಮ ಟ್ರ್ಯಾಲಿ, ಟೆಂಟ್, ಟ್ರ್ಯಾಕ್ಟರ್‌ಗಳಲ್ಲೂ ಜಾಗ ನೀಡಿದ್ದಾರೆ. ಆದರೆ ಇಷ್ಟೊಂದು ಸಂಖ್ಯೆಯಲ್ಲಿ ತುಂಬುತ್ತಿರುವ ಜನರಿಗಾಗಿ ಈ ಟೆಂಟ್ ಸಿಟಿಗಳ ಅವಶ್ಯಕತೆ ಹೆಚ್ಚಾಗಿದೆ. ಇವುಗಳ ಸೇವೆ ಈ ರೈತ ಹೋರಾಟದಲ್ಲಿ ವಿಭಿನ್ನವಾಗಿ ನಿಲ್ಲುತ್ತಿದೆ.

ಹೇಮಕುಂತ್ ಫೌಂಡೇಶನ್ ಎಂಬ ಸಾರ್ವಜನಿಕ ಸೇವಾ ಸಂಸ್ಥೆ ಪ್ರತಿಭಟನೆ ಬೆಂಬಲಿಸಿ ಬರುವವರಿಗೆ ಉಳಿಯಲು ಸಿಂಘು, ಚಿಲ್ಲಾ, ಗಾಝಿಪುರ್ ಮತ್ತು ಟಿಕ್ರಿ ಗಡಿಗಳಲ್ಲಿ ಟೆಂಟ್ ಸಿಟಿಗಳನ್ನು ನಿರ್ಮಿಸಿದೆ. ಈ ಟೆಂಟ್ ಸಿಟಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಪುರುಷರಿಗೂ ಇಲ್ಲಿ ಉಳಿಯಲು ಅವಕಾಶವಿದೆ. ಆದರೆ ಅವರೆಲ್ಲಾ ಹೆಚ್ಚಾಗಿ ಟ್ರ್ಯಾಲಿಗಳಲ್ಲಿ ಉಳಿಯುವ ಕಾರಣ ಇಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ.

ಟೆಂಟ್ ಸಿಟಿಯಲ್ಲಿ ಉಳಿಯುವುದು ಉಚಿತವಾಗಿರುತ್ತದೆ. ಎಷ್ಟು ದಿನ ಬೇಕಿದ್ದರು ಇಲ್ಲಿ ಉಳಿಯಬಹುದು. ನಮಗೆ ಟೆಂಟ್ ನೀಡಿರುವ ದಾಖಲೆಗಾಗಿ ಯಾವುದಾದರೂ ಒಂದು ಗುರುತು ಪತ್ರ ನೀಡಬೇಕಾಗುತ್ತದೆ. ಒಬ್ಬಂಟಿಯಾಗಿರುವವರಿಗೆ ಸಿಂಗಲ್ ಟೆಂಟ್ ನೀಡಲಾಗುತ್ತಿದೆ. ಇಬ್ಬರಿದ್ದರೆ ಅವರಿಗೆ ಆಗುವಂತಹ ಟೆಂಟ್, ಇಡೀ ಕುಟುಂಬವಿದ್ದರೇ ಅವರಿಗೆ ಉಳಿಯಲು ಮತ್ತು 20 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದರೇ ದೊಡ್ಡ ಟೆಂಟ್ ವ್ಯವಸ್ಥೆ ಮಾಡಲಾಗುತ್ತದೆ.

ಟೆಂಟ್ ಒಳಗಡೆ ಹಾಸಿಗೆ ಮತ್ತು 2 ಬೆಡ್‌ಶೀಟ್‌ಗಳನ್ನು ವ್ಯವಸ್ಥೆ ಮಾಡುತ್ತಾರೆ. ಚಳಿ ಹೆಚ್ಚು ಎನಿಸಿದರೇ ಮತ್ತೆ ಬೆಡ್‌ಶೀಟ್‌ಗಳನ್ನು ನೀಡಲಾಗುತ್ತದೆ. ಟೆಂಟ್ ಸಿಟಿಯಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿರುವ ಕಾರಣ, ರಾತ್ರಿ ಪೂರ್ತಿ ಟೆಂಟ್ ಸಿಟಿಯಲ್ಲಿ ಯುವಕರು ಕಾವಲು ಕಾಯುತ್ತಾರೆ. ಪಾಳಿಯ ಮೇರೆಗೆ ಮೂರು ಜನರ ತಂಡ ಕಾರ್ಯ ನಿರ್ವಹಿಸುತ್ತದೆ.

ಇಲ್ಲಿನ ಸ್ವಯಂ ಸೇವಕರ ಪ್ರಕಾರ ಮೊದ ಮೊದಲು ಇಲ್ಲಿ ಉಳಿಯುವವರ ಸಂಖ್ಯೆ ಕಡಿಮೆಯಿತ್ತು. ಆದರೆ ಪ್ರತಿಭಟನೆಯ ದಿನಗಳು ಹೆಚ್ಚಾಗುತ್ತಿದ್ದಂತೆ ಬೇರೆ ರಾಜ್ಯಗಳಿಂದ ಬರುವವರ ಸಂಖ್ಯೆಯೂ ಹೆಚ್ಚಾಗಿ ಟೆಂಟ್ ಸಿಟಿ ತುಂಬುತ್ತಿದೆ. ಭದ್ರತೆ ದೃಷ್ಠಿಯಿಂದಲೂ ಇಲ್ಲಿ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ನಾವು ಆಶ್ರಯ ಪಡೆದವರ ಲಗೇಜ್ ಜವಾಬ್ದಾರಿ ಪಡೆಯುವುದಿಲ್ಲ. ಇಷ್ಟೊಂದು ಸಂಖ್ಯೆಯಲ್ಲಿ ಜನ ಬರುವುದರಿಂದ ಅವರೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೂ ನಮ್ಮ ಟೆಂಟ್ ಸಿಟಿಗೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ನಮ್ಮ ಬಳಿ ಟೆಂಟ್‌ಗಳಿವೆ ಆದರೆ ಹೋರಾಟದ ಸ್ಥಳ ಟೆಂಟ್, ಟ್ರ್ಯಾಲಿ, ಟ್ರ್ಯಾಕ್ಟರ್‌ಗಳಿಂದ ತುಂಬಿರುವುದರಿಂದ ಸ್ಥಳ ಸಿಗುತ್ತಿಲ್ಲ ಎನ್ನುತ್ತಾರೆ.

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ತಮಿಳುನಾಡಿನಿಂದ ಬಂದಿದ್ದ ರೈತ ಮಹಿಳೆಯರು, ಮಹಾರಾಷ್ಟ್ರದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತಂಡ ಸೇರಿದಂತೆ ಹೊರ ರಾಜ್ಯಗಳಿಂದ ಬಂದು ಉಳಿಯುವವರ ಸಂಖ್ಯೆ ಹೆಚ್ಚಾಗಿದೆ.

– ಮಮತ. ಎಂ


ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...