Homeಚಳವಳಿರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ.

- Advertisement -
- Advertisement -

ಇಂದು ನಡೆಯಬೇಕಿದ್ದ ರೈತ ಪ್ರತಿನಿಧಿಗಳ ಜೊತೆಗಿನ 10ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ಒಂದು ದಿನ ಮುಂದೂಡಿದೆ. ಅಂದರೆ ಸಭೆಯು ಜನವರಿ 20 ರಂದು ನಡೆಯಲಿದೆ ಎಂದು ತಿಳಿಸಿದೆ. ಇದಕ್ಕೆ ತಳ್ಳಿಹಾಕಲಾಗದ ಕಾರಣಗಳಿವೆ ಎಂದು ಕೇಂದ್ರ ಹೇಳಿದೆ.

ಇದಕ್ಕೆ ಕೇಂದ್ರ ಸರ್ಕಾರ ಕೊಟ್ಟ ಕಾರಣ “ಎರಡೂ ಕಡೆಯವರು (ಕೇಂದ್ರ ಸರ್ಕಾರ ಮತ್ತು ರೈತರು) ಒಂದು ಅಂತಿಮ ತೀರ್ಮಾನಕ್ಕೆ ಬರಲು ಸಿದ್ಧರಿದ್ದೇವೆ, ಆದರೆ ಕೆಲವು ವಿಭಿನ್ನ ಸಿದ್ಧಾಂತಗಳ ಜನ ಇದಕ್ಕೆ ಅಡ್ಡಿಯಾಗಿದ್ದಾರೆ” ಎಂಬುದಾಗಿದೆ. ಯಾರು ಈ ವಿಭಿನ್ನ ಸಿದ್ಧಾಂತದವರು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿಲ್ಲ.

ರೈತರ ಪ್ರತಿಭಟನೆಯ ಜೊತೆ ಹಲವಾರು ಸಂಘಟನೆಗಳು ಕೈ ಜೋಡಿಸಿವೆ. ಅದರಲ್ಲಿ ಕಮ್ಯುನಿಸ್ಟ್, ಸೊಷಿಯಾಲಿಸ್ಟ್ ಚಳವಳಿಯ ಬಾಗವಾಗಿರುವ ಸಂಘಟನೆಗಳೂ ಇವೆ. ‘ವಿಭಿನ್ನ ಸಿದ್ದಾಂತಗಳ ಜನ ಅಡ್ಡಿಯಾಗಿದ್ದಾರೆ’ ಎನ್ನುವ ಕೇಂದ್ರದ ಬೇಜವಾಬ್ದಾರಿ ಹೇಳಿಕೆಯ ಉದ್ದೇಶ ಇಡೀ ಹೋರಾಟವನ್ನು ಒಡೆಯುವ ಉದ್ದೇಶ ಹೊಂದಿದೆ ಎಂದು ರೈತರು ಆರೋಪಿಸಿದ್ದಾರೆ.

ಕಮ್ಯುನಿಸ್ಟ್ ಅಥವಾ ಸೋಷಿಯಾಲಿಸ್ಟ್ ಸಿದ್ದಾಂತ ಯಾವತ್ತೂ ರೈತರು ಮತ್ತು ಕೃಷಿ ಕಾರ್ಮಿಕರ ಪರವೇ ಇವೆ ಮತ್ತು ಅವು ಜಾಗತೀಕರಣ-ಖಾಸಗೀಕರಣದ ವಿರೋಧಿಗಳೇ ಆಗಿವೆ. ಹೀಗಾಗಿ ಈ ರೈತ ಪ್ರತಿಭಟನೆಯ ಹಿಂದೆ ಅವುಗಳ ಸೈದ್ದಾಂತಿಕತೆ ಇದ್ದೇ ಇದೆ. ಇದೇನೂ ಅಪರಾಧವಲ್ಲವಲ್ಲವೇ ಎಂದು ರೈತರು ಪ್ರಶ್ನಿಸಿದ್ದಾರೆ.

ಖಲಿಸ್ತಾನಿ ಇತ್ಯಾದಿ ಆಧಾರರಹಿತ ಆರೋಪ ಮಾಡುತ್ತಿರುವ ‘ಪ್ರಭುತ್ವ ಸ್ನೇಹಿ’ ಶಕ್ತಿಗಳು, ಹೋರಾಟದಲ್ಲಿ ಅಂಥವರಿದ್ದರೆ, ಅವರು ಪ್ರತಿಭಟಿಸುವುದೆ ತಪ್ಪು ಎಂದು ಇಂದೆಲ್ಲಾ ಆರೋಪ ಮಾಡಿದ್ದವು. ಆದರೆ ಆನಂತರ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದರು.

ಜನವರಿ 26ರ ರೈತರ ಟ್ಯ್ರಾಕ್ಟರ್ ರ‍್ಯಾಲಿಗೆ ಬೆದರಿ ಕೇಂದ್ರ ಸರ್ಕಾರ ಹೋರಾಟವಮ್ಮು ತುಳಿಯುವ ಹಾದಿ ಹಿಡಿದಂತಿದೆ. ಅದಕ್ಕೆ ಅದು ಪ್ರತಿಭಟನಾನಿರತ ಕೆಲವು ರೈತ ನಾಯಕರ ಮೇಲೆ ಎನ್‌ಎಸ್‌ಎ ಕಾಯ್ದೆ ಅಡಿ ಕೇಸು ದಾಖಲಿಸುತ್ತಿದೆ. ಕೆಲವರನ್ನು ಖಲಿಸ್ತಾನಿ ಎಂದು ಕರೆಯುತ್ತಿದೆ. ದೆಹಲಿಯಲ್ಲಿ ಉಗ್ರರಿದ್ದಾರೆ ಎಂದು ಅಂಟಿಸಲಾಗಿರುವ ಪೋಸ್ಟರ್‌ಗಳು ಕೇಂದ್ರದ ಕುತಂತ್ರದ ಭಾಗವೇ ಆಗಿವೆ ಎಂದು ರೈತರು ಆರೋಪಿಸಿದ್ದಾರೆ.

ಮಾತುಕತೆಯನ್ನು ಒಂದು ದಿನ ಮುಂದೂಡಿದ್ದೇನೂ ಚರ್ಚೆಯ ವಿಷಯವಲ್ಲ, ಆದರೆ ಅದಕ್ಕೆ ಕೇಂದ್ರ ಕೊಟ್ಟ ಕಾರಣ ನೋಡಿದರೆ, ಈ ವಾರದಲ್ಲಿ ಅಹಿತಕರ ಘಟನೆಗಳು ಸಂಭವಿಸಬಹುದು ಮತ್ತು ಅದು ಪ್ರಭುತ್ವದ ಕಡೆಯಿಂದಲೇ ನಡೆಯಲಿದೆ ಎಂಬ ಸಂಶಯ ಕಾಡತೊಡಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಅಲ್ಲದೇ ರೈತರ ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ. ಹಾಗಾಗಿ ಆ ತೀರ್ಪು ನೋಡಿಕೊಂಡು ರೈತರ ಜೊತೆ ಮಾತುಕತೆಯನ್ನು ಯಾವ ರೀತಿ ಮುಂದುವರೆಸಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿದಂತಿದೆ.

ಸರ್ಕಾರದೊಂದಿಗಿನ ಇಂದಿನ ಸಭೆ ಈಗ ನಾಳೆಗೆ ಮುಂದೂಡಲ್ಪಟ್ಟಿದೆ. 9 ಸಭೆಗಳು ಈಗಾಗಲೇ ಮುಗಿದಿವೆ ಆದರೆ ಯಾವುದೇ ಫಲಿತಾಂಶವಿಲ್ಲ. ನ್ಯಾಯ ಕೊಡಿ, ದಿನಾಂಕಗಳನ್ನಲ್ಲ #GiveJusticeNotDates ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...