Homeಚಳವಳಿರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ.

- Advertisement -
- Advertisement -

ಇಂದು ನಡೆಯಬೇಕಿದ್ದ ರೈತ ಪ್ರತಿನಿಧಿಗಳ ಜೊತೆಗಿನ 10ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ಒಂದು ದಿನ ಮುಂದೂಡಿದೆ. ಅಂದರೆ ಸಭೆಯು ಜನವರಿ 20 ರಂದು ನಡೆಯಲಿದೆ ಎಂದು ತಿಳಿಸಿದೆ. ಇದಕ್ಕೆ ತಳ್ಳಿಹಾಕಲಾಗದ ಕಾರಣಗಳಿವೆ ಎಂದು ಕೇಂದ್ರ ಹೇಳಿದೆ.

ಇದಕ್ಕೆ ಕೇಂದ್ರ ಸರ್ಕಾರ ಕೊಟ್ಟ ಕಾರಣ “ಎರಡೂ ಕಡೆಯವರು (ಕೇಂದ್ರ ಸರ್ಕಾರ ಮತ್ತು ರೈತರು) ಒಂದು ಅಂತಿಮ ತೀರ್ಮಾನಕ್ಕೆ ಬರಲು ಸಿದ್ಧರಿದ್ದೇವೆ, ಆದರೆ ಕೆಲವು ವಿಭಿನ್ನ ಸಿದ್ಧಾಂತಗಳ ಜನ ಇದಕ್ಕೆ ಅಡ್ಡಿಯಾಗಿದ್ದಾರೆ” ಎಂಬುದಾಗಿದೆ. ಯಾರು ಈ ವಿಭಿನ್ನ ಸಿದ್ಧಾಂತದವರು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿಲ್ಲ.

ರೈತರ ಪ್ರತಿಭಟನೆಯ ಜೊತೆ ಹಲವಾರು ಸಂಘಟನೆಗಳು ಕೈ ಜೋಡಿಸಿವೆ. ಅದರಲ್ಲಿ ಕಮ್ಯುನಿಸ್ಟ್, ಸೊಷಿಯಾಲಿಸ್ಟ್ ಚಳವಳಿಯ ಬಾಗವಾಗಿರುವ ಸಂಘಟನೆಗಳೂ ಇವೆ. ‘ವಿಭಿನ್ನ ಸಿದ್ದಾಂತಗಳ ಜನ ಅಡ್ಡಿಯಾಗಿದ್ದಾರೆ’ ಎನ್ನುವ ಕೇಂದ್ರದ ಬೇಜವಾಬ್ದಾರಿ ಹೇಳಿಕೆಯ ಉದ್ದೇಶ ಇಡೀ ಹೋರಾಟವನ್ನು ಒಡೆಯುವ ಉದ್ದೇಶ ಹೊಂದಿದೆ ಎಂದು ರೈತರು ಆರೋಪಿಸಿದ್ದಾರೆ.

ಕಮ್ಯುನಿಸ್ಟ್ ಅಥವಾ ಸೋಷಿಯಾಲಿಸ್ಟ್ ಸಿದ್ದಾಂತ ಯಾವತ್ತೂ ರೈತರು ಮತ್ತು ಕೃಷಿ ಕಾರ್ಮಿಕರ ಪರವೇ ಇವೆ ಮತ್ತು ಅವು ಜಾಗತೀಕರಣ-ಖಾಸಗೀಕರಣದ ವಿರೋಧಿಗಳೇ ಆಗಿವೆ. ಹೀಗಾಗಿ ಈ ರೈತ ಪ್ರತಿಭಟನೆಯ ಹಿಂದೆ ಅವುಗಳ ಸೈದ್ದಾಂತಿಕತೆ ಇದ್ದೇ ಇದೆ. ಇದೇನೂ ಅಪರಾಧವಲ್ಲವಲ್ಲವೇ ಎಂದು ರೈತರು ಪ್ರಶ್ನಿಸಿದ್ದಾರೆ.

ಖಲಿಸ್ತಾನಿ ಇತ್ಯಾದಿ ಆಧಾರರಹಿತ ಆರೋಪ ಮಾಡುತ್ತಿರುವ ‘ಪ್ರಭುತ್ವ ಸ್ನೇಹಿ’ ಶಕ್ತಿಗಳು, ಹೋರಾಟದಲ್ಲಿ ಅಂಥವರಿದ್ದರೆ, ಅವರು ಪ್ರತಿಭಟಿಸುವುದೆ ತಪ್ಪು ಎಂದು ಇಂದೆಲ್ಲಾ ಆರೋಪ ಮಾಡಿದ್ದವು. ಆದರೆ ಆನಂತರ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದರು.

ಜನವರಿ 26ರ ರೈತರ ಟ್ಯ್ರಾಕ್ಟರ್ ರ‍್ಯಾಲಿಗೆ ಬೆದರಿ ಕೇಂದ್ರ ಸರ್ಕಾರ ಹೋರಾಟವಮ್ಮು ತುಳಿಯುವ ಹಾದಿ ಹಿಡಿದಂತಿದೆ. ಅದಕ್ಕೆ ಅದು ಪ್ರತಿಭಟನಾನಿರತ ಕೆಲವು ರೈತ ನಾಯಕರ ಮೇಲೆ ಎನ್‌ಎಸ್‌ಎ ಕಾಯ್ದೆ ಅಡಿ ಕೇಸು ದಾಖಲಿಸುತ್ತಿದೆ. ಕೆಲವರನ್ನು ಖಲಿಸ್ತಾನಿ ಎಂದು ಕರೆಯುತ್ತಿದೆ. ದೆಹಲಿಯಲ್ಲಿ ಉಗ್ರರಿದ್ದಾರೆ ಎಂದು ಅಂಟಿಸಲಾಗಿರುವ ಪೋಸ್ಟರ್‌ಗಳು ಕೇಂದ್ರದ ಕುತಂತ್ರದ ಭಾಗವೇ ಆಗಿವೆ ಎಂದು ರೈತರು ಆರೋಪಿಸಿದ್ದಾರೆ.

ಮಾತುಕತೆಯನ್ನು ಒಂದು ದಿನ ಮುಂದೂಡಿದ್ದೇನೂ ಚರ್ಚೆಯ ವಿಷಯವಲ್ಲ, ಆದರೆ ಅದಕ್ಕೆ ಕೇಂದ್ರ ಕೊಟ್ಟ ಕಾರಣ ನೋಡಿದರೆ, ಈ ವಾರದಲ್ಲಿ ಅಹಿತಕರ ಘಟನೆಗಳು ಸಂಭವಿಸಬಹುದು ಮತ್ತು ಅದು ಪ್ರಭುತ್ವದ ಕಡೆಯಿಂದಲೇ ನಡೆಯಲಿದೆ ಎಂಬ ಸಂಶಯ ಕಾಡತೊಡಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಅಲ್ಲದೇ ರೈತರ ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ. ಹಾಗಾಗಿ ಆ ತೀರ್ಪು ನೋಡಿಕೊಂಡು ರೈತರ ಜೊತೆ ಮಾತುಕತೆಯನ್ನು ಯಾವ ರೀತಿ ಮುಂದುವರೆಸಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿದಂತಿದೆ.

ಸರ್ಕಾರದೊಂದಿಗಿನ ಇಂದಿನ ಸಭೆ ಈಗ ನಾಳೆಗೆ ಮುಂದೂಡಲ್ಪಟ್ಟಿದೆ. 9 ಸಭೆಗಳು ಈಗಾಗಲೇ ಮುಗಿದಿವೆ ಆದರೆ ಯಾವುದೇ ಫಲಿತಾಂಶವಿಲ್ಲ. ನ್ಯಾಯ ಕೊಡಿ, ದಿನಾಂಕಗಳನ್ನಲ್ಲ #GiveJusticeNotDates ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...