Homeಚಳವಳಿರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ.

- Advertisement -
- Advertisement -

ಇಂದು ನಡೆಯಬೇಕಿದ್ದ ರೈತ ಪ್ರತಿನಿಧಿಗಳ ಜೊತೆಗಿನ 10ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ಒಂದು ದಿನ ಮುಂದೂಡಿದೆ. ಅಂದರೆ ಸಭೆಯು ಜನವರಿ 20 ರಂದು ನಡೆಯಲಿದೆ ಎಂದು ತಿಳಿಸಿದೆ. ಇದಕ್ಕೆ ತಳ್ಳಿಹಾಕಲಾಗದ ಕಾರಣಗಳಿವೆ ಎಂದು ಕೇಂದ್ರ ಹೇಳಿದೆ.

ಇದಕ್ಕೆ ಕೇಂದ್ರ ಸರ್ಕಾರ ಕೊಟ್ಟ ಕಾರಣ “ಎರಡೂ ಕಡೆಯವರು (ಕೇಂದ್ರ ಸರ್ಕಾರ ಮತ್ತು ರೈತರು) ಒಂದು ಅಂತಿಮ ತೀರ್ಮಾನಕ್ಕೆ ಬರಲು ಸಿದ್ಧರಿದ್ದೇವೆ, ಆದರೆ ಕೆಲವು ವಿಭಿನ್ನ ಸಿದ್ಧಾಂತಗಳ ಜನ ಇದಕ್ಕೆ ಅಡ್ಡಿಯಾಗಿದ್ದಾರೆ” ಎಂಬುದಾಗಿದೆ. ಯಾರು ಈ ವಿಭಿನ್ನ ಸಿದ್ಧಾಂತದವರು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿಲ್ಲ.

ರೈತರ ಪ್ರತಿಭಟನೆಯ ಜೊತೆ ಹಲವಾರು ಸಂಘಟನೆಗಳು ಕೈ ಜೋಡಿಸಿವೆ. ಅದರಲ್ಲಿ ಕಮ್ಯುನಿಸ್ಟ್, ಸೊಷಿಯಾಲಿಸ್ಟ್ ಚಳವಳಿಯ ಬಾಗವಾಗಿರುವ ಸಂಘಟನೆಗಳೂ ಇವೆ. ‘ವಿಭಿನ್ನ ಸಿದ್ದಾಂತಗಳ ಜನ ಅಡ್ಡಿಯಾಗಿದ್ದಾರೆ’ ಎನ್ನುವ ಕೇಂದ್ರದ ಬೇಜವಾಬ್ದಾರಿ ಹೇಳಿಕೆಯ ಉದ್ದೇಶ ಇಡೀ ಹೋರಾಟವನ್ನು ಒಡೆಯುವ ಉದ್ದೇಶ ಹೊಂದಿದೆ ಎಂದು ರೈತರು ಆರೋಪಿಸಿದ್ದಾರೆ.

ಕಮ್ಯುನಿಸ್ಟ್ ಅಥವಾ ಸೋಷಿಯಾಲಿಸ್ಟ್ ಸಿದ್ದಾಂತ ಯಾವತ್ತೂ ರೈತರು ಮತ್ತು ಕೃಷಿ ಕಾರ್ಮಿಕರ ಪರವೇ ಇವೆ ಮತ್ತು ಅವು ಜಾಗತೀಕರಣ-ಖಾಸಗೀಕರಣದ ವಿರೋಧಿಗಳೇ ಆಗಿವೆ. ಹೀಗಾಗಿ ಈ ರೈತ ಪ್ರತಿಭಟನೆಯ ಹಿಂದೆ ಅವುಗಳ ಸೈದ್ದಾಂತಿಕತೆ ಇದ್ದೇ ಇದೆ. ಇದೇನೂ ಅಪರಾಧವಲ್ಲವಲ್ಲವೇ ಎಂದು ರೈತರು ಪ್ರಶ್ನಿಸಿದ್ದಾರೆ.

ಖಲಿಸ್ತಾನಿ ಇತ್ಯಾದಿ ಆಧಾರರಹಿತ ಆರೋಪ ಮಾಡುತ್ತಿರುವ ‘ಪ್ರಭುತ್ವ ಸ್ನೇಹಿ’ ಶಕ್ತಿಗಳು, ಹೋರಾಟದಲ್ಲಿ ಅಂಥವರಿದ್ದರೆ, ಅವರು ಪ್ರತಿಭಟಿಸುವುದೆ ತಪ್ಪು ಎಂದು ಇಂದೆಲ್ಲಾ ಆರೋಪ ಮಾಡಿದ್ದವು. ಆದರೆ ಆನಂತರ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದರು.

ಜನವರಿ 26ರ ರೈತರ ಟ್ಯ್ರಾಕ್ಟರ್ ರ‍್ಯಾಲಿಗೆ ಬೆದರಿ ಕೇಂದ್ರ ಸರ್ಕಾರ ಹೋರಾಟವಮ್ಮು ತುಳಿಯುವ ಹಾದಿ ಹಿಡಿದಂತಿದೆ. ಅದಕ್ಕೆ ಅದು ಪ್ರತಿಭಟನಾನಿರತ ಕೆಲವು ರೈತ ನಾಯಕರ ಮೇಲೆ ಎನ್‌ಎಸ್‌ಎ ಕಾಯ್ದೆ ಅಡಿ ಕೇಸು ದಾಖಲಿಸುತ್ತಿದೆ. ಕೆಲವರನ್ನು ಖಲಿಸ್ತಾನಿ ಎಂದು ಕರೆಯುತ್ತಿದೆ. ದೆಹಲಿಯಲ್ಲಿ ಉಗ್ರರಿದ್ದಾರೆ ಎಂದು ಅಂಟಿಸಲಾಗಿರುವ ಪೋಸ್ಟರ್‌ಗಳು ಕೇಂದ್ರದ ಕುತಂತ್ರದ ಭಾಗವೇ ಆಗಿವೆ ಎಂದು ರೈತರು ಆರೋಪಿಸಿದ್ದಾರೆ.

ಮಾತುಕತೆಯನ್ನು ಒಂದು ದಿನ ಮುಂದೂಡಿದ್ದೇನೂ ಚರ್ಚೆಯ ವಿಷಯವಲ್ಲ, ಆದರೆ ಅದಕ್ಕೆ ಕೇಂದ್ರ ಕೊಟ್ಟ ಕಾರಣ ನೋಡಿದರೆ, ಈ ವಾರದಲ್ಲಿ ಅಹಿತಕರ ಘಟನೆಗಳು ಸಂಭವಿಸಬಹುದು ಮತ್ತು ಅದು ಪ್ರಭುತ್ವದ ಕಡೆಯಿಂದಲೇ ನಡೆಯಲಿದೆ ಎಂಬ ಸಂಶಯ ಕಾಡತೊಡಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಅಲ್ಲದೇ ರೈತರ ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ. ಹಾಗಾಗಿ ಆ ತೀರ್ಪು ನೋಡಿಕೊಂಡು ರೈತರ ಜೊತೆ ಮಾತುಕತೆಯನ್ನು ಯಾವ ರೀತಿ ಮುಂದುವರೆಸಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿದಂತಿದೆ.

ಸರ್ಕಾರದೊಂದಿಗಿನ ಇಂದಿನ ಸಭೆ ಈಗ ನಾಳೆಗೆ ಮುಂದೂಡಲ್ಪಟ್ಟಿದೆ. 9 ಸಭೆಗಳು ಈಗಾಗಲೇ ಮುಗಿದಿವೆ ಆದರೆ ಯಾವುದೇ ಫಲಿತಾಂಶವಿಲ್ಲ. ನ್ಯಾಯ ಕೊಡಿ, ದಿನಾಂಕಗಳನ್ನಲ್ಲ #GiveJusticeNotDates ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...