Homeಚಳವಳಿರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ.

- Advertisement -
- Advertisement -

ಇಂದು ನಡೆಯಬೇಕಿದ್ದ ರೈತ ಪ್ರತಿನಿಧಿಗಳ ಜೊತೆಗಿನ 10ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ಒಂದು ದಿನ ಮುಂದೂಡಿದೆ. ಅಂದರೆ ಸಭೆಯು ಜನವರಿ 20 ರಂದು ನಡೆಯಲಿದೆ ಎಂದು ತಿಳಿಸಿದೆ. ಇದಕ್ಕೆ ತಳ್ಳಿಹಾಕಲಾಗದ ಕಾರಣಗಳಿವೆ ಎಂದು ಕೇಂದ್ರ ಹೇಳಿದೆ.

ಇದಕ್ಕೆ ಕೇಂದ್ರ ಸರ್ಕಾರ ಕೊಟ್ಟ ಕಾರಣ “ಎರಡೂ ಕಡೆಯವರು (ಕೇಂದ್ರ ಸರ್ಕಾರ ಮತ್ತು ರೈತರು) ಒಂದು ಅಂತಿಮ ತೀರ್ಮಾನಕ್ಕೆ ಬರಲು ಸಿದ್ಧರಿದ್ದೇವೆ, ಆದರೆ ಕೆಲವು ವಿಭಿನ್ನ ಸಿದ್ಧಾಂತಗಳ ಜನ ಇದಕ್ಕೆ ಅಡ್ಡಿಯಾಗಿದ್ದಾರೆ” ಎಂಬುದಾಗಿದೆ. ಯಾರು ಈ ವಿಭಿನ್ನ ಸಿದ್ಧಾಂತದವರು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿಲ್ಲ.

ರೈತರ ಪ್ರತಿಭಟನೆಯ ಜೊತೆ ಹಲವಾರು ಸಂಘಟನೆಗಳು ಕೈ ಜೋಡಿಸಿವೆ. ಅದರಲ್ಲಿ ಕಮ್ಯುನಿಸ್ಟ್, ಸೊಷಿಯಾಲಿಸ್ಟ್ ಚಳವಳಿಯ ಬಾಗವಾಗಿರುವ ಸಂಘಟನೆಗಳೂ ಇವೆ. ‘ವಿಭಿನ್ನ ಸಿದ್ದಾಂತಗಳ ಜನ ಅಡ್ಡಿಯಾಗಿದ್ದಾರೆ’ ಎನ್ನುವ ಕೇಂದ್ರದ ಬೇಜವಾಬ್ದಾರಿ ಹೇಳಿಕೆಯ ಉದ್ದೇಶ ಇಡೀ ಹೋರಾಟವನ್ನು ಒಡೆಯುವ ಉದ್ದೇಶ ಹೊಂದಿದೆ ಎಂದು ರೈತರು ಆರೋಪಿಸಿದ್ದಾರೆ.

ಕಮ್ಯುನಿಸ್ಟ್ ಅಥವಾ ಸೋಷಿಯಾಲಿಸ್ಟ್ ಸಿದ್ದಾಂತ ಯಾವತ್ತೂ ರೈತರು ಮತ್ತು ಕೃಷಿ ಕಾರ್ಮಿಕರ ಪರವೇ ಇವೆ ಮತ್ತು ಅವು ಜಾಗತೀಕರಣ-ಖಾಸಗೀಕರಣದ ವಿರೋಧಿಗಳೇ ಆಗಿವೆ. ಹೀಗಾಗಿ ಈ ರೈತ ಪ್ರತಿಭಟನೆಯ ಹಿಂದೆ ಅವುಗಳ ಸೈದ್ದಾಂತಿಕತೆ ಇದ್ದೇ ಇದೆ. ಇದೇನೂ ಅಪರಾಧವಲ್ಲವಲ್ಲವೇ ಎಂದು ರೈತರು ಪ್ರಶ್ನಿಸಿದ್ದಾರೆ.

ಖಲಿಸ್ತಾನಿ ಇತ್ಯಾದಿ ಆಧಾರರಹಿತ ಆರೋಪ ಮಾಡುತ್ತಿರುವ ‘ಪ್ರಭುತ್ವ ಸ್ನೇಹಿ’ ಶಕ್ತಿಗಳು, ಹೋರಾಟದಲ್ಲಿ ಅಂಥವರಿದ್ದರೆ, ಅವರು ಪ್ರತಿಭಟಿಸುವುದೆ ತಪ್ಪು ಎಂದು ಇಂದೆಲ್ಲಾ ಆರೋಪ ಮಾಡಿದ್ದವು. ಆದರೆ ಆನಂತರ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದರು.

ಜನವರಿ 26ರ ರೈತರ ಟ್ಯ್ರಾಕ್ಟರ್ ರ‍್ಯಾಲಿಗೆ ಬೆದರಿ ಕೇಂದ್ರ ಸರ್ಕಾರ ಹೋರಾಟವಮ್ಮು ತುಳಿಯುವ ಹಾದಿ ಹಿಡಿದಂತಿದೆ. ಅದಕ್ಕೆ ಅದು ಪ್ರತಿಭಟನಾನಿರತ ಕೆಲವು ರೈತ ನಾಯಕರ ಮೇಲೆ ಎನ್‌ಎಸ್‌ಎ ಕಾಯ್ದೆ ಅಡಿ ಕೇಸು ದಾಖಲಿಸುತ್ತಿದೆ. ಕೆಲವರನ್ನು ಖಲಿಸ್ತಾನಿ ಎಂದು ಕರೆಯುತ್ತಿದೆ. ದೆಹಲಿಯಲ್ಲಿ ಉಗ್ರರಿದ್ದಾರೆ ಎಂದು ಅಂಟಿಸಲಾಗಿರುವ ಪೋಸ್ಟರ್‌ಗಳು ಕೇಂದ್ರದ ಕುತಂತ್ರದ ಭಾಗವೇ ಆಗಿವೆ ಎಂದು ರೈತರು ಆರೋಪಿಸಿದ್ದಾರೆ.

ಮಾತುಕತೆಯನ್ನು ಒಂದು ದಿನ ಮುಂದೂಡಿದ್ದೇನೂ ಚರ್ಚೆಯ ವಿಷಯವಲ್ಲ, ಆದರೆ ಅದಕ್ಕೆ ಕೇಂದ್ರ ಕೊಟ್ಟ ಕಾರಣ ನೋಡಿದರೆ, ಈ ವಾರದಲ್ಲಿ ಅಹಿತಕರ ಘಟನೆಗಳು ಸಂಭವಿಸಬಹುದು ಮತ್ತು ಅದು ಪ್ರಭುತ್ವದ ಕಡೆಯಿಂದಲೇ ನಡೆಯಲಿದೆ ಎಂಬ ಸಂಶಯ ಕಾಡತೊಡಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಅಲ್ಲದೇ ರೈತರ ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ. ಹಾಗಾಗಿ ಆ ತೀರ್ಪು ನೋಡಿಕೊಂಡು ರೈತರ ಜೊತೆ ಮಾತುಕತೆಯನ್ನು ಯಾವ ರೀತಿ ಮುಂದುವರೆಸಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿದಂತಿದೆ.

ಸರ್ಕಾರದೊಂದಿಗಿನ ಇಂದಿನ ಸಭೆ ಈಗ ನಾಳೆಗೆ ಮುಂದೂಡಲ್ಪಟ್ಟಿದೆ. 9 ಸಭೆಗಳು ಈಗಾಗಲೇ ಮುಗಿದಿವೆ ಆದರೆ ಯಾವುದೇ ಫಲಿತಾಂಶವಿಲ್ಲ. ನ್ಯಾಯ ಕೊಡಿ, ದಿನಾಂಕಗಳನ್ನಲ್ಲ #GiveJusticeNotDates ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...