Homeಚಳವಳಿರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ.

- Advertisement -
- Advertisement -

ಇಂದು ನಡೆಯಬೇಕಿದ್ದ ರೈತ ಪ್ರತಿನಿಧಿಗಳ ಜೊತೆಗಿನ 10ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ಒಂದು ದಿನ ಮುಂದೂಡಿದೆ. ಅಂದರೆ ಸಭೆಯು ಜನವರಿ 20 ರಂದು ನಡೆಯಲಿದೆ ಎಂದು ತಿಳಿಸಿದೆ. ಇದಕ್ಕೆ ತಳ್ಳಿಹಾಕಲಾಗದ ಕಾರಣಗಳಿವೆ ಎಂದು ಕೇಂದ್ರ ಹೇಳಿದೆ.

ಇದಕ್ಕೆ ಕೇಂದ್ರ ಸರ್ಕಾರ ಕೊಟ್ಟ ಕಾರಣ “ಎರಡೂ ಕಡೆಯವರು (ಕೇಂದ್ರ ಸರ್ಕಾರ ಮತ್ತು ರೈತರು) ಒಂದು ಅಂತಿಮ ತೀರ್ಮಾನಕ್ಕೆ ಬರಲು ಸಿದ್ಧರಿದ್ದೇವೆ, ಆದರೆ ಕೆಲವು ವಿಭಿನ್ನ ಸಿದ್ಧಾಂತಗಳ ಜನ ಇದಕ್ಕೆ ಅಡ್ಡಿಯಾಗಿದ್ದಾರೆ” ಎಂಬುದಾಗಿದೆ. ಯಾರು ಈ ವಿಭಿನ್ನ ಸಿದ್ಧಾಂತದವರು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿಲ್ಲ.

ರೈತರ ಪ್ರತಿಭಟನೆಯ ಜೊತೆ ಹಲವಾರು ಸಂಘಟನೆಗಳು ಕೈ ಜೋಡಿಸಿವೆ. ಅದರಲ್ಲಿ ಕಮ್ಯುನಿಸ್ಟ್, ಸೊಷಿಯಾಲಿಸ್ಟ್ ಚಳವಳಿಯ ಬಾಗವಾಗಿರುವ ಸಂಘಟನೆಗಳೂ ಇವೆ. ‘ವಿಭಿನ್ನ ಸಿದ್ದಾಂತಗಳ ಜನ ಅಡ್ಡಿಯಾಗಿದ್ದಾರೆ’ ಎನ್ನುವ ಕೇಂದ್ರದ ಬೇಜವಾಬ್ದಾರಿ ಹೇಳಿಕೆಯ ಉದ್ದೇಶ ಇಡೀ ಹೋರಾಟವನ್ನು ಒಡೆಯುವ ಉದ್ದೇಶ ಹೊಂದಿದೆ ಎಂದು ರೈತರು ಆರೋಪಿಸಿದ್ದಾರೆ.

ಕಮ್ಯುನಿಸ್ಟ್ ಅಥವಾ ಸೋಷಿಯಾಲಿಸ್ಟ್ ಸಿದ್ದಾಂತ ಯಾವತ್ತೂ ರೈತರು ಮತ್ತು ಕೃಷಿ ಕಾರ್ಮಿಕರ ಪರವೇ ಇವೆ ಮತ್ತು ಅವು ಜಾಗತೀಕರಣ-ಖಾಸಗೀಕರಣದ ವಿರೋಧಿಗಳೇ ಆಗಿವೆ. ಹೀಗಾಗಿ ಈ ರೈತ ಪ್ರತಿಭಟನೆಯ ಹಿಂದೆ ಅವುಗಳ ಸೈದ್ದಾಂತಿಕತೆ ಇದ್ದೇ ಇದೆ. ಇದೇನೂ ಅಪರಾಧವಲ್ಲವಲ್ಲವೇ ಎಂದು ರೈತರು ಪ್ರಶ್ನಿಸಿದ್ದಾರೆ.

ಖಲಿಸ್ತಾನಿ ಇತ್ಯಾದಿ ಆಧಾರರಹಿತ ಆರೋಪ ಮಾಡುತ್ತಿರುವ ‘ಪ್ರಭುತ್ವ ಸ್ನೇಹಿ’ ಶಕ್ತಿಗಳು, ಹೋರಾಟದಲ್ಲಿ ಅಂಥವರಿದ್ದರೆ, ಅವರು ಪ್ರತಿಭಟಿಸುವುದೆ ತಪ್ಪು ಎಂದು ಇಂದೆಲ್ಲಾ ಆರೋಪ ಮಾಡಿದ್ದವು. ಆದರೆ ಆನಂತರ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದರು.

ಜನವರಿ 26ರ ರೈತರ ಟ್ಯ್ರಾಕ್ಟರ್ ರ‍್ಯಾಲಿಗೆ ಬೆದರಿ ಕೇಂದ್ರ ಸರ್ಕಾರ ಹೋರಾಟವಮ್ಮು ತುಳಿಯುವ ಹಾದಿ ಹಿಡಿದಂತಿದೆ. ಅದಕ್ಕೆ ಅದು ಪ್ರತಿಭಟನಾನಿರತ ಕೆಲವು ರೈತ ನಾಯಕರ ಮೇಲೆ ಎನ್‌ಎಸ್‌ಎ ಕಾಯ್ದೆ ಅಡಿ ಕೇಸು ದಾಖಲಿಸುತ್ತಿದೆ. ಕೆಲವರನ್ನು ಖಲಿಸ್ತಾನಿ ಎಂದು ಕರೆಯುತ್ತಿದೆ. ದೆಹಲಿಯಲ್ಲಿ ಉಗ್ರರಿದ್ದಾರೆ ಎಂದು ಅಂಟಿಸಲಾಗಿರುವ ಪೋಸ್ಟರ್‌ಗಳು ಕೇಂದ್ರದ ಕುತಂತ್ರದ ಭಾಗವೇ ಆಗಿವೆ ಎಂದು ರೈತರು ಆರೋಪಿಸಿದ್ದಾರೆ.

ಮಾತುಕತೆಯನ್ನು ಒಂದು ದಿನ ಮುಂದೂಡಿದ್ದೇನೂ ಚರ್ಚೆಯ ವಿಷಯವಲ್ಲ, ಆದರೆ ಅದಕ್ಕೆ ಕೇಂದ್ರ ಕೊಟ್ಟ ಕಾರಣ ನೋಡಿದರೆ, ಈ ವಾರದಲ್ಲಿ ಅಹಿತಕರ ಘಟನೆಗಳು ಸಂಭವಿಸಬಹುದು ಮತ್ತು ಅದು ಪ್ರಭುತ್ವದ ಕಡೆಯಿಂದಲೇ ನಡೆಯಲಿದೆ ಎಂಬ ಸಂಶಯ ಕಾಡತೊಡಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಅಲ್ಲದೇ ರೈತರ ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ. ಹಾಗಾಗಿ ಆ ತೀರ್ಪು ನೋಡಿಕೊಂಡು ರೈತರ ಜೊತೆ ಮಾತುಕತೆಯನ್ನು ಯಾವ ರೀತಿ ಮುಂದುವರೆಸಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿದಂತಿದೆ.

ಸರ್ಕಾರದೊಂದಿಗಿನ ಇಂದಿನ ಸಭೆ ಈಗ ನಾಳೆಗೆ ಮುಂದೂಡಲ್ಪಟ್ಟಿದೆ. 9 ಸಭೆಗಳು ಈಗಾಗಲೇ ಮುಗಿದಿವೆ ಆದರೆ ಯಾವುದೇ ಫಲಿತಾಂಶವಿಲ್ಲ. ನ್ಯಾಯ ಕೊಡಿ, ದಿನಾಂಕಗಳನ್ನಲ್ಲ #GiveJusticeNotDates ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...