Homeಚಳವಳಿರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ.

- Advertisement -
- Advertisement -

ಇಂದು ನಡೆಯಬೇಕಿದ್ದ ರೈತ ಪ್ರತಿನಿಧಿಗಳ ಜೊತೆಗಿನ 10ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ಒಂದು ದಿನ ಮುಂದೂಡಿದೆ. ಅಂದರೆ ಸಭೆಯು ಜನವರಿ 20 ರಂದು ನಡೆಯಲಿದೆ ಎಂದು ತಿಳಿಸಿದೆ. ಇದಕ್ಕೆ ತಳ್ಳಿಹಾಕಲಾಗದ ಕಾರಣಗಳಿವೆ ಎಂದು ಕೇಂದ್ರ ಹೇಳಿದೆ.

ಇದಕ್ಕೆ ಕೇಂದ್ರ ಸರ್ಕಾರ ಕೊಟ್ಟ ಕಾರಣ “ಎರಡೂ ಕಡೆಯವರು (ಕೇಂದ್ರ ಸರ್ಕಾರ ಮತ್ತು ರೈತರು) ಒಂದು ಅಂತಿಮ ತೀರ್ಮಾನಕ್ಕೆ ಬರಲು ಸಿದ್ಧರಿದ್ದೇವೆ, ಆದರೆ ಕೆಲವು ವಿಭಿನ್ನ ಸಿದ್ಧಾಂತಗಳ ಜನ ಇದಕ್ಕೆ ಅಡ್ಡಿಯಾಗಿದ್ದಾರೆ” ಎಂಬುದಾಗಿದೆ. ಯಾರು ಈ ವಿಭಿನ್ನ ಸಿದ್ಧಾಂತದವರು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿಲ್ಲ.

ರೈತರ ಪ್ರತಿಭಟನೆಯ ಜೊತೆ ಹಲವಾರು ಸಂಘಟನೆಗಳು ಕೈ ಜೋಡಿಸಿವೆ. ಅದರಲ್ಲಿ ಕಮ್ಯುನಿಸ್ಟ್, ಸೊಷಿಯಾಲಿಸ್ಟ್ ಚಳವಳಿಯ ಬಾಗವಾಗಿರುವ ಸಂಘಟನೆಗಳೂ ಇವೆ. ‘ವಿಭಿನ್ನ ಸಿದ್ದಾಂತಗಳ ಜನ ಅಡ್ಡಿಯಾಗಿದ್ದಾರೆ’ ಎನ್ನುವ ಕೇಂದ್ರದ ಬೇಜವಾಬ್ದಾರಿ ಹೇಳಿಕೆಯ ಉದ್ದೇಶ ಇಡೀ ಹೋರಾಟವನ್ನು ಒಡೆಯುವ ಉದ್ದೇಶ ಹೊಂದಿದೆ ಎಂದು ರೈತರು ಆರೋಪಿಸಿದ್ದಾರೆ.

ಕಮ್ಯುನಿಸ್ಟ್ ಅಥವಾ ಸೋಷಿಯಾಲಿಸ್ಟ್ ಸಿದ್ದಾಂತ ಯಾವತ್ತೂ ರೈತರು ಮತ್ತು ಕೃಷಿ ಕಾರ್ಮಿಕರ ಪರವೇ ಇವೆ ಮತ್ತು ಅವು ಜಾಗತೀಕರಣ-ಖಾಸಗೀಕರಣದ ವಿರೋಧಿಗಳೇ ಆಗಿವೆ. ಹೀಗಾಗಿ ಈ ರೈತ ಪ್ರತಿಭಟನೆಯ ಹಿಂದೆ ಅವುಗಳ ಸೈದ್ದಾಂತಿಕತೆ ಇದ್ದೇ ಇದೆ. ಇದೇನೂ ಅಪರಾಧವಲ್ಲವಲ್ಲವೇ ಎಂದು ರೈತರು ಪ್ರಶ್ನಿಸಿದ್ದಾರೆ.

ಖಲಿಸ್ತಾನಿ ಇತ್ಯಾದಿ ಆಧಾರರಹಿತ ಆರೋಪ ಮಾಡುತ್ತಿರುವ ‘ಪ್ರಭುತ್ವ ಸ್ನೇಹಿ’ ಶಕ್ತಿಗಳು, ಹೋರಾಟದಲ್ಲಿ ಅಂಥವರಿದ್ದರೆ, ಅವರು ಪ್ರತಿಭಟಿಸುವುದೆ ತಪ್ಪು ಎಂದು ಇಂದೆಲ್ಲಾ ಆರೋಪ ಮಾಡಿದ್ದವು. ಆದರೆ ಆನಂತರ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದರು.

ಜನವರಿ 26ರ ರೈತರ ಟ್ಯ್ರಾಕ್ಟರ್ ರ‍್ಯಾಲಿಗೆ ಬೆದರಿ ಕೇಂದ್ರ ಸರ್ಕಾರ ಹೋರಾಟವಮ್ಮು ತುಳಿಯುವ ಹಾದಿ ಹಿಡಿದಂತಿದೆ. ಅದಕ್ಕೆ ಅದು ಪ್ರತಿಭಟನಾನಿರತ ಕೆಲವು ರೈತ ನಾಯಕರ ಮೇಲೆ ಎನ್‌ಎಸ್‌ಎ ಕಾಯ್ದೆ ಅಡಿ ಕೇಸು ದಾಖಲಿಸುತ್ತಿದೆ. ಕೆಲವರನ್ನು ಖಲಿಸ್ತಾನಿ ಎಂದು ಕರೆಯುತ್ತಿದೆ. ದೆಹಲಿಯಲ್ಲಿ ಉಗ್ರರಿದ್ದಾರೆ ಎಂದು ಅಂಟಿಸಲಾಗಿರುವ ಪೋಸ್ಟರ್‌ಗಳು ಕೇಂದ್ರದ ಕುತಂತ್ರದ ಭಾಗವೇ ಆಗಿವೆ ಎಂದು ರೈತರು ಆರೋಪಿಸಿದ್ದಾರೆ.

ಮಾತುಕತೆಯನ್ನು ಒಂದು ದಿನ ಮುಂದೂಡಿದ್ದೇನೂ ಚರ್ಚೆಯ ವಿಷಯವಲ್ಲ, ಆದರೆ ಅದಕ್ಕೆ ಕೇಂದ್ರ ಕೊಟ್ಟ ಕಾರಣ ನೋಡಿದರೆ, ಈ ವಾರದಲ್ಲಿ ಅಹಿತಕರ ಘಟನೆಗಳು ಸಂಭವಿಸಬಹುದು ಮತ್ತು ಅದು ಪ್ರಭುತ್ವದ ಕಡೆಯಿಂದಲೇ ನಡೆಯಲಿದೆ ಎಂಬ ಸಂಶಯ ಕಾಡತೊಡಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಅಲ್ಲದೇ ರೈತರ ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ. ಹಾಗಾಗಿ ಆ ತೀರ್ಪು ನೋಡಿಕೊಂಡು ರೈತರ ಜೊತೆ ಮಾತುಕತೆಯನ್ನು ಯಾವ ರೀತಿ ಮುಂದುವರೆಸಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿದಂತಿದೆ.

ಸರ್ಕಾರದೊಂದಿಗಿನ ಇಂದಿನ ಸಭೆ ಈಗ ನಾಳೆಗೆ ಮುಂದೂಡಲ್ಪಟ್ಟಿದೆ. 9 ಸಭೆಗಳು ಈಗಾಗಲೇ ಮುಗಿದಿವೆ ಆದರೆ ಯಾವುದೇ ಫಲಿತಾಂಶವಿಲ್ಲ. ನ್ಯಾಯ ಕೊಡಿ, ದಿನಾಂಕಗಳನ್ನಲ್ಲ #GiveJusticeNotDates ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...