Homeಚಳವಳಿರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ರೈತ ಮುಖಂಡರೊಂದಿಗಿನ ಹತ್ತನೆ ಸುತ್ತಿನ ಮಾತುಕತೆ ಮುಂದೂಡಿದ ಕೇಂದ್ರ: ಕಾರಣವೇನು?

ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ.

- Advertisement -
- Advertisement -

ಇಂದು ನಡೆಯಬೇಕಿದ್ದ ರೈತ ಪ್ರತಿನಿಧಿಗಳ ಜೊತೆಗಿನ 10ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ಒಂದು ದಿನ ಮುಂದೂಡಿದೆ. ಅಂದರೆ ಸಭೆಯು ಜನವರಿ 20 ರಂದು ನಡೆಯಲಿದೆ ಎಂದು ತಿಳಿಸಿದೆ. ಇದಕ್ಕೆ ತಳ್ಳಿಹಾಕಲಾಗದ ಕಾರಣಗಳಿವೆ ಎಂದು ಕೇಂದ್ರ ಹೇಳಿದೆ.

ಇದಕ್ಕೆ ಕೇಂದ್ರ ಸರ್ಕಾರ ಕೊಟ್ಟ ಕಾರಣ “ಎರಡೂ ಕಡೆಯವರು (ಕೇಂದ್ರ ಸರ್ಕಾರ ಮತ್ತು ರೈತರು) ಒಂದು ಅಂತಿಮ ತೀರ್ಮಾನಕ್ಕೆ ಬರಲು ಸಿದ್ಧರಿದ್ದೇವೆ, ಆದರೆ ಕೆಲವು ವಿಭಿನ್ನ ಸಿದ್ಧಾಂತಗಳ ಜನ ಇದಕ್ಕೆ ಅಡ್ಡಿಯಾಗಿದ್ದಾರೆ” ಎಂಬುದಾಗಿದೆ. ಯಾರು ಈ ವಿಭಿನ್ನ ಸಿದ್ಧಾಂತದವರು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿಲ್ಲ.

ರೈತರ ಪ್ರತಿಭಟನೆಯ ಜೊತೆ ಹಲವಾರು ಸಂಘಟನೆಗಳು ಕೈ ಜೋಡಿಸಿವೆ. ಅದರಲ್ಲಿ ಕಮ್ಯುನಿಸ್ಟ್, ಸೊಷಿಯಾಲಿಸ್ಟ್ ಚಳವಳಿಯ ಬಾಗವಾಗಿರುವ ಸಂಘಟನೆಗಳೂ ಇವೆ. ‘ವಿಭಿನ್ನ ಸಿದ್ದಾಂತಗಳ ಜನ ಅಡ್ಡಿಯಾಗಿದ್ದಾರೆ’ ಎನ್ನುವ ಕೇಂದ್ರದ ಬೇಜವಾಬ್ದಾರಿ ಹೇಳಿಕೆಯ ಉದ್ದೇಶ ಇಡೀ ಹೋರಾಟವನ್ನು ಒಡೆಯುವ ಉದ್ದೇಶ ಹೊಂದಿದೆ ಎಂದು ರೈತರು ಆರೋಪಿಸಿದ್ದಾರೆ.

ಕಮ್ಯುನಿಸ್ಟ್ ಅಥವಾ ಸೋಷಿಯಾಲಿಸ್ಟ್ ಸಿದ್ದಾಂತ ಯಾವತ್ತೂ ರೈತರು ಮತ್ತು ಕೃಷಿ ಕಾರ್ಮಿಕರ ಪರವೇ ಇವೆ ಮತ್ತು ಅವು ಜಾಗತೀಕರಣ-ಖಾಸಗೀಕರಣದ ವಿರೋಧಿಗಳೇ ಆಗಿವೆ. ಹೀಗಾಗಿ ಈ ರೈತ ಪ್ರತಿಭಟನೆಯ ಹಿಂದೆ ಅವುಗಳ ಸೈದ್ದಾಂತಿಕತೆ ಇದ್ದೇ ಇದೆ. ಇದೇನೂ ಅಪರಾಧವಲ್ಲವಲ್ಲವೇ ಎಂದು ರೈತರು ಪ್ರಶ್ನಿಸಿದ್ದಾರೆ.

ಖಲಿಸ್ತಾನಿ ಇತ್ಯಾದಿ ಆಧಾರರಹಿತ ಆರೋಪ ಮಾಡುತ್ತಿರುವ ‘ಪ್ರಭುತ್ವ ಸ್ನೇಹಿ’ ಶಕ್ತಿಗಳು, ಹೋರಾಟದಲ್ಲಿ ಅಂಥವರಿದ್ದರೆ, ಅವರು ಪ್ರತಿಭಟಿಸುವುದೆ ತಪ್ಪು ಎಂದು ಇಂದೆಲ್ಲಾ ಆರೋಪ ಮಾಡಿದ್ದವು. ಆದರೆ ಆನಂತರ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದರು.

ಜನವರಿ 26ರ ರೈತರ ಟ್ಯ್ರಾಕ್ಟರ್ ರ‍್ಯಾಲಿಗೆ ಬೆದರಿ ಕೇಂದ್ರ ಸರ್ಕಾರ ಹೋರಾಟವಮ್ಮು ತುಳಿಯುವ ಹಾದಿ ಹಿಡಿದಂತಿದೆ. ಅದಕ್ಕೆ ಅದು ಪ್ರತಿಭಟನಾನಿರತ ಕೆಲವು ರೈತ ನಾಯಕರ ಮೇಲೆ ಎನ್‌ಎಸ್‌ಎ ಕಾಯ್ದೆ ಅಡಿ ಕೇಸು ದಾಖಲಿಸುತ್ತಿದೆ. ಕೆಲವರನ್ನು ಖಲಿಸ್ತಾನಿ ಎಂದು ಕರೆಯುತ್ತಿದೆ. ದೆಹಲಿಯಲ್ಲಿ ಉಗ್ರರಿದ್ದಾರೆ ಎಂದು ಅಂಟಿಸಲಾಗಿರುವ ಪೋಸ್ಟರ್‌ಗಳು ಕೇಂದ್ರದ ಕುತಂತ್ರದ ಭಾಗವೇ ಆಗಿವೆ ಎಂದು ರೈತರು ಆರೋಪಿಸಿದ್ದಾರೆ.

ಮಾತುಕತೆಯನ್ನು ಒಂದು ದಿನ ಮುಂದೂಡಿದ್ದೇನೂ ಚರ್ಚೆಯ ವಿಷಯವಲ್ಲ, ಆದರೆ ಅದಕ್ಕೆ ಕೇಂದ್ರ ಕೊಟ್ಟ ಕಾರಣ ನೋಡಿದರೆ, ಈ ವಾರದಲ್ಲಿ ಅಹಿತಕರ ಘಟನೆಗಳು ಸಂಭವಿಸಬಹುದು ಮತ್ತು ಅದು ಪ್ರಭುತ್ವದ ಕಡೆಯಿಂದಲೇ ನಡೆಯಲಿದೆ ಎಂಬ ಸಂಶಯ ಕಾಡತೊಡಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಅಲ್ಲದೇ ರೈತರ ಟ್ಯ್ರಾಕ್ಟರ್ ರ‍್ಯಾಲಿ ತಡೆಯಬೇಕೆಂದು ದೆಹಲಿ ಪೊಲೀಸರು ಸಲ್ಲಿಸಿರುವ ಪಿಐಎಲ್ ಕುರಿತ ತೀರ್ಪನ್ನು ಸುಪ್ರೀಂ ಜನವರಿ 20 ರಂದು ಅಂದರೆ ನಾಳೆಯೇ ನೀಡಲಿದೆ. ಹಾಗಾಗಿ ಆ ತೀರ್ಪು ನೋಡಿಕೊಂಡು ರೈತರ ಜೊತೆ ಮಾತುಕತೆಯನ್ನು ಯಾವ ರೀತಿ ಮುಂದುವರೆಸಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿದಂತಿದೆ.

ಸರ್ಕಾರದೊಂದಿಗಿನ ಇಂದಿನ ಸಭೆ ಈಗ ನಾಳೆಗೆ ಮುಂದೂಡಲ್ಪಟ್ಟಿದೆ. 9 ಸಭೆಗಳು ಈಗಾಗಲೇ ಮುಗಿದಿವೆ ಆದರೆ ಯಾವುದೇ ಫಲಿತಾಂಶವಿಲ್ಲ. ನ್ಯಾಯ ಕೊಡಿ, ದಿನಾಂಕಗಳನ್ನಲ್ಲ #GiveJusticeNotDates ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...